<p><strong>ಕಡಲೂರು</strong>: ಭಾರಿ ಮಳೆಯಿಂದಾಗಿ ಬೆಳೆ ಹಾನಿ ಸಂಭವಿಸಿರುವ ತಮಿಳುನಾಡಿನ ಕಡಲೂರು ಮತ್ತು ಮೈಲಾಡುತುರೈ ಜಿಲ್ಲೆಗಳಿಗೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>ಬೆಳೆ ಹಾನಿಯಿಂದಾಗಿರುವ ನಷ್ಟದ ಪ್ರಮಾಣವನ್ನು ಅಂದಾಜಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸ್ಟಾಲಿನ್ ಅವರು ತಿಳಿಸಿದ್ದಾರೆ.</p>.<p>ಬೆಳೆ ಹಾನಿ ಸಂಭವಿಸಿರುವ ರೈತರಿಗೆ ಎಕರೆಗೆ ₹30 ಸಾವಿರ ಪರಿಹಾರ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಕೆ.ಪಳನಿಸ್ವಾಮಿ ಭಾನುವಾರ ಆಗ್ರಹಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸ್ಟಾಲಿನ್, ವಿರೋಧ ಪಕ್ಷಗಳು ಸರ್ಕಾರವನ್ನು ಟೀಕಿಸಲು ಮತ್ತು ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿವೆ. ಅದರ ಬಗ್ಗೆ ಚಿಂತಿಸುವುದಿಲ್ಲ ಎಂದಿದ್ದಾರೆ.</p>.<p>ಕಡಲೂರು ಮತ್ತು ಮೈಲಾಡುತುರೈ ಸೇರಿದಂತೆ 24 ಜಿಲ್ಲೆಗಳ 45,826 ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬೆಳೆ ಜಲಾವೃತವಾಗಿದೆ ಎಂದು ಕಂದಾಯ ಮತ್ತು ವಿಪತ್ತು ನಿರ್ವಹಣೆ ಸಚಿವ ಕೆ.ಕೆ.ಎಸ್.ಎಸ್.ಆರ್. ರಾಮಚಂದ್ರನ್ ವಿವರಿಸಿದ್ದಾರೆ.</p>.<p>ಒಂಬತ್ತು ಜಿಲ್ಲೆಗಳ 52,751 ಮಂದಿಗೆ 99 ಪರಿಹಾರ ಶಿಬಿರಗಳಲ್ಲಿ ಆಶ್ರಯ ನೀಡಲಾಗಿದೆ ಎಂದೂ ತಿಳಿಸಿದ್ದಾರೆ.</p>.<p>ಮುಖ್ಯಮಂತ್ರಿ ಅವರು ಪ್ರವಾಹಪೀಡಿತ ಪ್ರದೇಶಗಳ ಜನರಿಗೆ ₹4,100 ಹಾಗೂ 10 ಕೆ.ಜಿ. ಅಕ್ಕಿ ವಿತರಿಸಿದರು. ಸಚಿವ ಸಂಪುಟದ ಹಿರಿಯ ಸಹೋದ್ಯೋಗಿಗಳು ಮತ್ತು ಅಧಿಕಾರಿಗಳು ಜೊತೆಗಿದ್ದರು.</p>.<p>ಈಶಾನ್ಯ ಮುಂಗಾರಿನ ಪರಿಣಾಮ ತಮಿಳುನಾಡಿನಾದ್ಯಂತ ಭಾರಿ ಮಳೆ ಸುರಿದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡಲೂರು</strong>: ಭಾರಿ ಮಳೆಯಿಂದಾಗಿ ಬೆಳೆ ಹಾನಿ ಸಂಭವಿಸಿರುವ ತಮಿಳುನಾಡಿನ ಕಡಲೂರು ಮತ್ತು ಮೈಲಾಡುತುರೈ ಜಿಲ್ಲೆಗಳಿಗೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>ಬೆಳೆ ಹಾನಿಯಿಂದಾಗಿರುವ ನಷ್ಟದ ಪ್ರಮಾಣವನ್ನು ಅಂದಾಜಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸ್ಟಾಲಿನ್ ಅವರು ತಿಳಿಸಿದ್ದಾರೆ.</p>.<p>ಬೆಳೆ ಹಾನಿ ಸಂಭವಿಸಿರುವ ರೈತರಿಗೆ ಎಕರೆಗೆ ₹30 ಸಾವಿರ ಪರಿಹಾರ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಕೆ.ಪಳನಿಸ್ವಾಮಿ ಭಾನುವಾರ ಆಗ್ರಹಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸ್ಟಾಲಿನ್, ವಿರೋಧ ಪಕ್ಷಗಳು ಸರ್ಕಾರವನ್ನು ಟೀಕಿಸಲು ಮತ್ತು ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿವೆ. ಅದರ ಬಗ್ಗೆ ಚಿಂತಿಸುವುದಿಲ್ಲ ಎಂದಿದ್ದಾರೆ.</p>.<p>ಕಡಲೂರು ಮತ್ತು ಮೈಲಾಡುತುರೈ ಸೇರಿದಂತೆ 24 ಜಿಲ್ಲೆಗಳ 45,826 ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬೆಳೆ ಜಲಾವೃತವಾಗಿದೆ ಎಂದು ಕಂದಾಯ ಮತ್ತು ವಿಪತ್ತು ನಿರ್ವಹಣೆ ಸಚಿವ ಕೆ.ಕೆ.ಎಸ್.ಎಸ್.ಆರ್. ರಾಮಚಂದ್ರನ್ ವಿವರಿಸಿದ್ದಾರೆ.</p>.<p>ಒಂಬತ್ತು ಜಿಲ್ಲೆಗಳ 52,751 ಮಂದಿಗೆ 99 ಪರಿಹಾರ ಶಿಬಿರಗಳಲ್ಲಿ ಆಶ್ರಯ ನೀಡಲಾಗಿದೆ ಎಂದೂ ತಿಳಿಸಿದ್ದಾರೆ.</p>.<p>ಮುಖ್ಯಮಂತ್ರಿ ಅವರು ಪ್ರವಾಹಪೀಡಿತ ಪ್ರದೇಶಗಳ ಜನರಿಗೆ ₹4,100 ಹಾಗೂ 10 ಕೆ.ಜಿ. ಅಕ್ಕಿ ವಿತರಿಸಿದರು. ಸಚಿವ ಸಂಪುಟದ ಹಿರಿಯ ಸಹೋದ್ಯೋಗಿಗಳು ಮತ್ತು ಅಧಿಕಾರಿಗಳು ಜೊತೆಗಿದ್ದರು.</p>.<p>ಈಶಾನ್ಯ ಮುಂಗಾರಿನ ಪರಿಣಾಮ ತಮಿಳುನಾಡಿನಾದ್ಯಂತ ಭಾರಿ ಮಳೆ ಸುರಿದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>