<p><strong>ಚೆನ್ನೈ:</strong> ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆಗೆ ಆಮ್ಲಜನಕ ಸಂಗ್ರಹಿಸಲು ಮತ್ತು ಸಂಭವನೀಯ ಕೋವಿಡ್ ಮೂರನೇ ಅಲೆ ನಿಭಾಯಿಸಲು ಮುನ್ನೆಚ್ಚರಿಕೆ ದೃಷ್ಟಿಯಿಂದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮಂಗಳವಾರ ‘ಮುಖ್ಯಮಂತ್ರಿ ಸಾರ್ವಜನಿಕ ಪರಿಹಾರ ನಿಧಿ’ಯಿಂದ (ಸಿಎಂಪಿಆರ್ಎಫ್) ₹100 ಕೋಟಿ ಮಂಜೂರು ಮಾಡಿದ್ದಾರೆ.</p>.<p>ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಕಾರ್ಯಕ್ಕೆ ದಾನಿಗಳಿಂದ ಸರ್ಕಾರವು ಇಲ್ಲಿಯವರೆಗೆ ₹353 ಕೋಟಿ ಸಂಗ್ರಹಿಸಿದೆ. ಸರ್ಕಾರಕ್ಕೆ ದೇಣಿಗೆ ನೀಡುವಂತೆ ಸ್ಟಾಲಿನ್ ಜನರಲ್ಲಿ ಮನವಿ ಮಾಡಿಕೊಂಡಿದ್ದರು.</p>.<p>ಈ ಮೊತ್ತದಿಂದ ವಿದೇಶಗಳಿಂದ ಆಮ್ಲಜನಕ ಸಿಲಿಂಡರ್ಗಳು, ಕನ್ಸನ್ಟ್ರೇಟರ್ಗಳು ಮತ್ತು ಇತರ ವೈದ್ಯಕೀಯ ಉಪಕರಣಗಳನ್ನು ಖರೀದಿಸಲು ಸರ್ಕಾರ ಈಗಾಗಲೇ ₹41.40 ಕೋಟಿ ಬಿಡುಗಡೆ ಮಾಡಿದೆ.</p>.<p>ಕಪ್ಪು ಶಿಲೀಂಧ್ರ ರೋಗದ ಚಿಕಿತ್ಸೆಗಾಗಿ ಆಂಫೊಟೆರಿಸಿನ್ ಔಷಧ ಸೇರಿದಂತೆ ಜೀವ ರಕ್ಷಕ ಔಷಧಿಗಳನ್ನು ಖರೀದಿಸಲು ಈಗಾಗಲೇ ₹25 ಕೋಟಿ ಅಧಿಕ ಹಣ ಬಿಡುಗಡೆ ಮಾಡಲಾಗಿದೆ.</p>.<p>"ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯವಾದ ಆಮ್ಲಜನಕವನ್ನು ಖರೀದಿಸಲು ₹100 ಕೋಟಿ ಮೀಸಲಿಡಲು ಮತ್ತು ಮೂರನೇ ಅಲೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಆರಂಭಿಸಲು ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ,‘ ಎಂದು ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆಗೆ ಆಮ್ಲಜನಕ ಸಂಗ್ರಹಿಸಲು ಮತ್ತು ಸಂಭವನೀಯ ಕೋವಿಡ್ ಮೂರನೇ ಅಲೆ ನಿಭಾಯಿಸಲು ಮುನ್ನೆಚ್ಚರಿಕೆ ದೃಷ್ಟಿಯಿಂದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮಂಗಳವಾರ ‘ಮುಖ್ಯಮಂತ್ರಿ ಸಾರ್ವಜನಿಕ ಪರಿಹಾರ ನಿಧಿ’ಯಿಂದ (ಸಿಎಂಪಿಆರ್ಎಫ್) ₹100 ಕೋಟಿ ಮಂಜೂರು ಮಾಡಿದ್ದಾರೆ.</p>.<p>ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಕಾರ್ಯಕ್ಕೆ ದಾನಿಗಳಿಂದ ಸರ್ಕಾರವು ಇಲ್ಲಿಯವರೆಗೆ ₹353 ಕೋಟಿ ಸಂಗ್ರಹಿಸಿದೆ. ಸರ್ಕಾರಕ್ಕೆ ದೇಣಿಗೆ ನೀಡುವಂತೆ ಸ್ಟಾಲಿನ್ ಜನರಲ್ಲಿ ಮನವಿ ಮಾಡಿಕೊಂಡಿದ್ದರು.</p>.<p>ಈ ಮೊತ್ತದಿಂದ ವಿದೇಶಗಳಿಂದ ಆಮ್ಲಜನಕ ಸಿಲಿಂಡರ್ಗಳು, ಕನ್ಸನ್ಟ್ರೇಟರ್ಗಳು ಮತ್ತು ಇತರ ವೈದ್ಯಕೀಯ ಉಪಕರಣಗಳನ್ನು ಖರೀದಿಸಲು ಸರ್ಕಾರ ಈಗಾಗಲೇ ₹41.40 ಕೋಟಿ ಬಿಡುಗಡೆ ಮಾಡಿದೆ.</p>.<p>ಕಪ್ಪು ಶಿಲೀಂಧ್ರ ರೋಗದ ಚಿಕಿತ್ಸೆಗಾಗಿ ಆಂಫೊಟೆರಿಸಿನ್ ಔಷಧ ಸೇರಿದಂತೆ ಜೀವ ರಕ್ಷಕ ಔಷಧಿಗಳನ್ನು ಖರೀದಿಸಲು ಈಗಾಗಲೇ ₹25 ಕೋಟಿ ಅಧಿಕ ಹಣ ಬಿಡುಗಡೆ ಮಾಡಲಾಗಿದೆ.</p>.<p>"ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯವಾದ ಆಮ್ಲಜನಕವನ್ನು ಖರೀದಿಸಲು ₹100 ಕೋಟಿ ಮೀಸಲಿಡಲು ಮತ್ತು ಮೂರನೇ ಅಲೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಆರಂಭಿಸಲು ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ,‘ ಎಂದು ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>