<p class="title"><strong>ಚೆನ್ನೈ:</strong> ತಮಿಳುನಾಡಿನ 27 ಜಿಲ್ಲೆಗಳಲ್ಲಿ ಜೂನ್ 14ರಿಂದ ಜಾರಿಗೆ ಬರುವಂತೆ ಲಾಕ್ಡೌಡ್ ಭಾಗಶಃ ಸಡಿಲಿಸಲಾಗಿದೆ. ಟೀ ಶಾಪ್ ತೆರೆಯಲು ಅನುಮತಿ ಸೇರಿದಂತೆ ಹಲವು ವಿನಾಯಿತಿಯನ್ನು ನೀಡಲಾಗಿದೆ. ಆದರೆ ಇತರ 11 ಜಿಲ್ಲೆಗಳಲ್ಲಿ ಕಠಿಣ ಲಾಕ್ಡೌನ್ ಮುಂದುವರಿಯಲಿದೆ.</p>.<p class="title">ಚೆನ್ನೈ ನಗರವೂ ಒಳಗೊಂಡಂತೆ ಈ 27 ಜಿಲ್ಲೆಗಳಲ್ಲಿಟೀ ಶಾಪ್ಗಳನ್ನು ಬೆಳಿಗ್ಗೆ 6 ರಿಂದ ಸಂಜೆ 5ರವರೆಗೂ ತೆರೆಯಬಹುದು. ಪಾರ್ಸಲ್ಗೆ ಅವಕಾಶವಿದೆ. ಬಿಸಿ ಪಾನೀಯ ಒಯ್ಯಲು ಪಾತ್ರೆ ಬಳಸಬೇಕು. ಆದಷ್ಟು ಪ್ಲಾಸ್ಟಿಕ್ ಬ್ಯಾಗ್ ಬಳಕೆ ತಪ್ಪಿಸಬೇಕು ಎಂದು ಕೋರಲಾಗಿದೆ.</p>.<p>ಸಿಹಿ ಮತ್ತು ಖಾರದ ತಿನಿಸು ಮಾರುವ ಅಂಗಡಿಗಳಿಗೆ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2ರವರೆಗೆ ತೆರೆಯಲು ಅನುಮತಿ ಇದೆ. ಕೇವಲ ಪಾರ್ಸಲ್ ಒಯ್ಯಬಹುದು ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ತಮಿಳುನಾಡಿನಲ್ಲಿ ಟೀ ಶಾಪ್ಗಳು ಅಧಿಕ ಸಂಖ್ಯೆಯಲ್ಲಿದ್ದು, ಲಾಕ್ಡೌನ್ ಕಾರಣ ಮೇ 10ರಿಂದ ಬಂದ್ ಆಗಿವೆ. ಉಳಿದಂತೆ, ರೆಸ್ಟೋರಂಟ್ಗಳು ಮತ್ತು ಬೇಕರಿಗಳು ಈಗಾಗಲೇ ವಹಿವಾಟು ನಡೆಸುತ್ತಿವೆ.</p>.<p>ಸರ್ಕಾರಿ ಸೇವೆ ನಿರೀಕ್ಷಿಸುತ್ತಿರುವ ಜನರಿಗೆ ನೆರವಾಗಲು, ಇ–ಸರ್ವೀಸ್ ಸೆಂಟರ್ ತೆರೆಯಲು ಅವಕಾಶ ನೀಡಲಾಗಿದೆ. 35 ದಿನಗಳ ಬಳಿಕ ಸಲೂನ್, ಪಾರ್ಕ್, ಮದ್ಯ ಮಾರಾಟ ಮಳಿಗೆಗಳು 14ರಿಂದ ಕಾರ್ಯನಿರ್ವಹಿಸಲಿವೆ.</p>.<p><strong>ಇದನ್ನೂ ಓದಿ... <a href="https://www.prajavani.net/india-news/woman-accuses-lucknow-hospital-doctors-staff-of-raping-her-mother-victim-dies-later-838530.html" target="_blank">ವೈದ್ಯರು, ಸಿಬ್ಬಂದಿಯಿಂದ ಹಲ್ಲೆ– ಅತ್ಯಾಚಾರ ಆರೋಪ: ಸಚಿವೆ ಸ್ಮೃತಿ ಇರಾನಿಗೆ ದೂರು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಚೆನ್ನೈ:</strong> ತಮಿಳುನಾಡಿನ 27 ಜಿಲ್ಲೆಗಳಲ್ಲಿ ಜೂನ್ 14ರಿಂದ ಜಾರಿಗೆ ಬರುವಂತೆ ಲಾಕ್ಡೌಡ್ ಭಾಗಶಃ ಸಡಿಲಿಸಲಾಗಿದೆ. ಟೀ ಶಾಪ್ ತೆರೆಯಲು ಅನುಮತಿ ಸೇರಿದಂತೆ ಹಲವು ವಿನಾಯಿತಿಯನ್ನು ನೀಡಲಾಗಿದೆ. ಆದರೆ ಇತರ 11 ಜಿಲ್ಲೆಗಳಲ್ಲಿ ಕಠಿಣ ಲಾಕ್ಡೌನ್ ಮುಂದುವರಿಯಲಿದೆ.</p>.<p class="title">ಚೆನ್ನೈ ನಗರವೂ ಒಳಗೊಂಡಂತೆ ಈ 27 ಜಿಲ್ಲೆಗಳಲ್ಲಿಟೀ ಶಾಪ್ಗಳನ್ನು ಬೆಳಿಗ್ಗೆ 6 ರಿಂದ ಸಂಜೆ 5ರವರೆಗೂ ತೆರೆಯಬಹುದು. ಪಾರ್ಸಲ್ಗೆ ಅವಕಾಶವಿದೆ. ಬಿಸಿ ಪಾನೀಯ ಒಯ್ಯಲು ಪಾತ್ರೆ ಬಳಸಬೇಕು. ಆದಷ್ಟು ಪ್ಲಾಸ್ಟಿಕ್ ಬ್ಯಾಗ್ ಬಳಕೆ ತಪ್ಪಿಸಬೇಕು ಎಂದು ಕೋರಲಾಗಿದೆ.</p>.<p>ಸಿಹಿ ಮತ್ತು ಖಾರದ ತಿನಿಸು ಮಾರುವ ಅಂಗಡಿಗಳಿಗೆ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2ರವರೆಗೆ ತೆರೆಯಲು ಅನುಮತಿ ಇದೆ. ಕೇವಲ ಪಾರ್ಸಲ್ ಒಯ್ಯಬಹುದು ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ತಮಿಳುನಾಡಿನಲ್ಲಿ ಟೀ ಶಾಪ್ಗಳು ಅಧಿಕ ಸಂಖ್ಯೆಯಲ್ಲಿದ್ದು, ಲಾಕ್ಡೌನ್ ಕಾರಣ ಮೇ 10ರಿಂದ ಬಂದ್ ಆಗಿವೆ. ಉಳಿದಂತೆ, ರೆಸ್ಟೋರಂಟ್ಗಳು ಮತ್ತು ಬೇಕರಿಗಳು ಈಗಾಗಲೇ ವಹಿವಾಟು ನಡೆಸುತ್ತಿವೆ.</p>.<p>ಸರ್ಕಾರಿ ಸೇವೆ ನಿರೀಕ್ಷಿಸುತ್ತಿರುವ ಜನರಿಗೆ ನೆರವಾಗಲು, ಇ–ಸರ್ವೀಸ್ ಸೆಂಟರ್ ತೆರೆಯಲು ಅವಕಾಶ ನೀಡಲಾಗಿದೆ. 35 ದಿನಗಳ ಬಳಿಕ ಸಲೂನ್, ಪಾರ್ಕ್, ಮದ್ಯ ಮಾರಾಟ ಮಳಿಗೆಗಳು 14ರಿಂದ ಕಾರ್ಯನಿರ್ವಹಿಸಲಿವೆ.</p>.<p><strong>ಇದನ್ನೂ ಓದಿ... <a href="https://www.prajavani.net/india-news/woman-accuses-lucknow-hospital-doctors-staff-of-raping-her-mother-victim-dies-later-838530.html" target="_blank">ವೈದ್ಯರು, ಸಿಬ್ಬಂದಿಯಿಂದ ಹಲ್ಲೆ– ಅತ್ಯಾಚಾರ ಆರೋಪ: ಸಚಿವೆ ಸ್ಮೃತಿ ಇರಾನಿಗೆ ದೂರು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>