<p><strong>ಚೆನ್ನೈ</strong>: ಡಿಎಂಕೆ ನೇತೃತ್ವದ ಸರ್ಕಾರವು ‘ಪಿಎಂ–ಶ್ರೀ’ ಯೋಜನೆಯ ಜಾರಿಗೆ ಹಿಂಜರಿಯುತ್ತಿದೆ ಎಂದು ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಗುರುವಾರ ಆರೋಪಿಸಿದ್ದಾರೆ. </p>.<p>‘ತಮಿಳುನಾಡು ಸರ್ಕಾರವು ಪಿಎಂ–ಶ್ರೀ ಯೋಜನೆಗೆ ಸೇರಲು ಆರಂಭದಲ್ಲಿ ಒಪ್ಪಿಕೊಂಡಿತ್ತಲ್ಲದೆ, ಕೇಂದ್ರ ಸರ್ಕಾರದ ಜತೆ ಒಪ್ಪಂದಕ್ಕೆ ಸಹಿ ಹಾಕಲು ನಿರ್ಧರಿಸಿತ್ತು. ಆದರೆ ಸಹಿ ಬೀಳಲಿದೆ ಎನ್ನುವಾಗ ರಾಜ್ಯ ಸರ್ಕಾರವು ಒಪ್ಪಂದದ ನಿಯಮಗಳಲ್ಲಿ ಬದಲಾವಣೆಗೆ ಮುಂದಾಯಿತು. ಆ ತಿದ್ದುಪಡಿಗಳನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ’ ಎಂದು ಹೇಳಿದರು.</p>.<p>‘ನಮ್ಮ ರಾಜ್ಯವು ಒಪ್ಪಂದವನ್ನು ಸಂಪೂರ್ಣವಾಗಿ ತಿರಸ್ಕರಿಸಿಲ್ಲ ಅಥವಾ ಒಪ್ಪಿಕೊಂಡಿಲ್ಲ. ಸಹಿ ಹಾಕಲು ಹಿಂಜರಿಕೆ ತೋರುತ್ತಿದೆ’ ಎಂದರು. ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸುವ ಗುರಿಯೊಂದಿಗೆ ಕೇಂದ್ರ ಸರ್ಕಾರವು ಪಿಎಂ–ಶ್ರೀ ಯೋಜನೆ ಜಾರಿಗೊಳಿಸಿದೆ.</p>.<p>ರಾಜ್ಯ ಪಠ್ಯಕ್ರಮವನ್ನು ಬಲವಾಗಿ ಸಮರ್ಥಿಸಿಕೊಂಡಿದ್ದ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್, ತಮಿಳುನಾಡಿನ ಪಠ್ಯಕ್ರಮ ‘ಸ್ಪರ್ಧಾತ್ಮಕವಾಗಿಲ್ಲ’ ಎಂದಿದ್ದ ರಾಜ್ಯಪಾಲರ ಹಿಂದಿನ ಹೇಳಿಕೆಯನ್ನು ತಳ್ಳಿಹಾಕಿದ್ದರು. ಅದರ ಬೆನ್ನಲ್ಲೇ ರವಿ ಅವರು ಈ ಆರೋಪ ಮಾಡಿದ್ದಾರೆ.</p>.<p>ಯಾವುದೇ ಷರತ್ತುಗಳನ್ನು ವಿಧಿಸದೆ ಪಿಎಂ–ಶ್ರೀ ಯೋಜನೆಗೆ ಸೇರ್ಪಡೆಗೊಳ್ಳುವಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮಿಳುನಾಡು ಸರ್ಕಾರವನ್ನು ಬುಧವಾರ ಒತ್ತಾಯಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಡಿಎಂಕೆ ನೇತೃತ್ವದ ಸರ್ಕಾರವು ‘ಪಿಎಂ–ಶ್ರೀ’ ಯೋಜನೆಯ ಜಾರಿಗೆ ಹಿಂಜರಿಯುತ್ತಿದೆ ಎಂದು ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಗುರುವಾರ ಆರೋಪಿಸಿದ್ದಾರೆ. </p>.<p>‘ತಮಿಳುನಾಡು ಸರ್ಕಾರವು ಪಿಎಂ–ಶ್ರೀ ಯೋಜನೆಗೆ ಸೇರಲು ಆರಂಭದಲ್ಲಿ ಒಪ್ಪಿಕೊಂಡಿತ್ತಲ್ಲದೆ, ಕೇಂದ್ರ ಸರ್ಕಾರದ ಜತೆ ಒಪ್ಪಂದಕ್ಕೆ ಸಹಿ ಹಾಕಲು ನಿರ್ಧರಿಸಿತ್ತು. ಆದರೆ ಸಹಿ ಬೀಳಲಿದೆ ಎನ್ನುವಾಗ ರಾಜ್ಯ ಸರ್ಕಾರವು ಒಪ್ಪಂದದ ನಿಯಮಗಳಲ್ಲಿ ಬದಲಾವಣೆಗೆ ಮುಂದಾಯಿತು. ಆ ತಿದ್ದುಪಡಿಗಳನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ’ ಎಂದು ಹೇಳಿದರು.</p>.<p>‘ನಮ್ಮ ರಾಜ್ಯವು ಒಪ್ಪಂದವನ್ನು ಸಂಪೂರ್ಣವಾಗಿ ತಿರಸ್ಕರಿಸಿಲ್ಲ ಅಥವಾ ಒಪ್ಪಿಕೊಂಡಿಲ್ಲ. ಸಹಿ ಹಾಕಲು ಹಿಂಜರಿಕೆ ತೋರುತ್ತಿದೆ’ ಎಂದರು. ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸುವ ಗುರಿಯೊಂದಿಗೆ ಕೇಂದ್ರ ಸರ್ಕಾರವು ಪಿಎಂ–ಶ್ರೀ ಯೋಜನೆ ಜಾರಿಗೊಳಿಸಿದೆ.</p>.<p>ರಾಜ್ಯ ಪಠ್ಯಕ್ರಮವನ್ನು ಬಲವಾಗಿ ಸಮರ್ಥಿಸಿಕೊಂಡಿದ್ದ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್, ತಮಿಳುನಾಡಿನ ಪಠ್ಯಕ್ರಮ ‘ಸ್ಪರ್ಧಾತ್ಮಕವಾಗಿಲ್ಲ’ ಎಂದಿದ್ದ ರಾಜ್ಯಪಾಲರ ಹಿಂದಿನ ಹೇಳಿಕೆಯನ್ನು ತಳ್ಳಿಹಾಕಿದ್ದರು. ಅದರ ಬೆನ್ನಲ್ಲೇ ರವಿ ಅವರು ಈ ಆರೋಪ ಮಾಡಿದ್ದಾರೆ.</p>.<p>ಯಾವುದೇ ಷರತ್ತುಗಳನ್ನು ವಿಧಿಸದೆ ಪಿಎಂ–ಶ್ರೀ ಯೋಜನೆಗೆ ಸೇರ್ಪಡೆಗೊಳ್ಳುವಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮಿಳುನಾಡು ಸರ್ಕಾರವನ್ನು ಬುಧವಾರ ಒತ್ತಾಯಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>