<p class="title">ಚೆನ್ನೈ:ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್)ಅಕ್ಟೋಬರ್ 2ರಂದು ಯೋಜಿಸಿದ್ದ ಪಥ ಸಂಚಲನಕ್ಕೆ ಹಾಗೂ ಅದೇ ದಿನ ವಿಡುದಲೈ ಚಿರುತೈಗಳ್ ಕಟ್ಚಿ (ವಿಸಿಕೆ) ಆಯೋಜಿಸಿದ್ದ ಪ್ರತಿಭಟನೆಗೆ ತಮಿಳುನಾಡು ಸರ್ಕಾರ ಅನುಮತಿ ನೀಡಲು ನಿರಾಕರಿಸಿದೆ.</p>.<p class="title">‘ಗಾಂಧಿ ಜಯಂತಿಯಂದು ಆರ್ಎಸ್ಎಸ್ ಪಥಸಂಚಲನ ನಡೆಸಿದರೆ ಬೇರೆ ಗುಂಪುಗಳು ಪ್ರತಿಭಟನೆ ನಡೆಸಬಹುದು. ಇದರಿಂದ ಕಾನೂನು ಮತ್ತು ಸುವ್ಯವಸ್ಥೆಯ ತೊಡಕುಗಳು ಎದುರಾಗಬಹುದು ಎಂಬ ಕಾರಣವೊಡ್ಡಿ ಪಥಸಂಚಲನವನ್ನು ಹಿಂತೆಗೆದುಕೊಳ್ಳುವಂತೆ ತಮಿಳುನಾಡು ಸರ್ಕಾರ ಸೂಚಿಸಿದೆ’ ಎಂದು ಆರ್ಎಸ್ಎಸ್ನ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.</p>.<p class="title">‘ನಮ್ಮದು ಶಾಂತಿಯುತ ಪಥಸಂಚಲನ. ಮದ್ರಾಸ್ನ ಹೈಕೋರ್ಟ್ ಕೂಡ ಇದಕ್ಕೆ ಅನುಮತಿ ನೀಡಿತ್ತು. ಸದ್ಯ ಎದುರಾಗಿರುವ ಈ ಸಮಸ್ಯೆಯನ್ನು ಕಾನೂನತ್ಮಕವಾಗಿಯೇ ಪರಿಹರಿಸಿಕೊಳ್ಳುತ್ತೇವೆ’ ಎಂದೂ ಅವರು ತಿಳಿಸಿದ್ದಾರೆ.</p>.<p class="title">ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಏಕೆ ಮೊಕದ್ದಮೆ ಹೂಡಬಾರದೆಂದು ಕಾರಣ ಕೇಳಿ, ತಮಿಳುನಾಡಿನ ರಾಜ್ಯ ಗೃಹ ಕಾರ್ಯದರ್ಶಿ ಫಣೀಂದ್ರ ರೆಡ್ಡಿ, ಪೊಲೀಸ್ ಮಹಾನಿರ್ದೇಶಕ ಶೈಲೇಂದ್ರ ಬಾಬು ಹಾಗೂ ತಿರುವಳ್ಳೂರ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅವರಿಗೆ ಆರ್ಎಸ್ಎಸ್ ಈಗಾಗಲೇ ನೋಟಿಸ್ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title">ಚೆನ್ನೈ:ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್)ಅಕ್ಟೋಬರ್ 2ರಂದು ಯೋಜಿಸಿದ್ದ ಪಥ ಸಂಚಲನಕ್ಕೆ ಹಾಗೂ ಅದೇ ದಿನ ವಿಡುದಲೈ ಚಿರುತೈಗಳ್ ಕಟ್ಚಿ (ವಿಸಿಕೆ) ಆಯೋಜಿಸಿದ್ದ ಪ್ರತಿಭಟನೆಗೆ ತಮಿಳುನಾಡು ಸರ್ಕಾರ ಅನುಮತಿ ನೀಡಲು ನಿರಾಕರಿಸಿದೆ.</p>.<p class="title">‘ಗಾಂಧಿ ಜಯಂತಿಯಂದು ಆರ್ಎಸ್ಎಸ್ ಪಥಸಂಚಲನ ನಡೆಸಿದರೆ ಬೇರೆ ಗುಂಪುಗಳು ಪ್ರತಿಭಟನೆ ನಡೆಸಬಹುದು. ಇದರಿಂದ ಕಾನೂನು ಮತ್ತು ಸುವ್ಯವಸ್ಥೆಯ ತೊಡಕುಗಳು ಎದುರಾಗಬಹುದು ಎಂಬ ಕಾರಣವೊಡ್ಡಿ ಪಥಸಂಚಲನವನ್ನು ಹಿಂತೆಗೆದುಕೊಳ್ಳುವಂತೆ ತಮಿಳುನಾಡು ಸರ್ಕಾರ ಸೂಚಿಸಿದೆ’ ಎಂದು ಆರ್ಎಸ್ಎಸ್ನ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.</p>.<p class="title">‘ನಮ್ಮದು ಶಾಂತಿಯುತ ಪಥಸಂಚಲನ. ಮದ್ರಾಸ್ನ ಹೈಕೋರ್ಟ್ ಕೂಡ ಇದಕ್ಕೆ ಅನುಮತಿ ನೀಡಿತ್ತು. ಸದ್ಯ ಎದುರಾಗಿರುವ ಈ ಸಮಸ್ಯೆಯನ್ನು ಕಾನೂನತ್ಮಕವಾಗಿಯೇ ಪರಿಹರಿಸಿಕೊಳ್ಳುತ್ತೇವೆ’ ಎಂದೂ ಅವರು ತಿಳಿಸಿದ್ದಾರೆ.</p>.<p class="title">ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಏಕೆ ಮೊಕದ್ದಮೆ ಹೂಡಬಾರದೆಂದು ಕಾರಣ ಕೇಳಿ, ತಮಿಳುನಾಡಿನ ರಾಜ್ಯ ಗೃಹ ಕಾರ್ಯದರ್ಶಿ ಫಣೀಂದ್ರ ರೆಡ್ಡಿ, ಪೊಲೀಸ್ ಮಹಾನಿರ್ದೇಶಕ ಶೈಲೇಂದ್ರ ಬಾಬು ಹಾಗೂ ತಿರುವಳ್ಳೂರ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅವರಿಗೆ ಆರ್ಎಸ್ಎಸ್ ಈಗಾಗಲೇ ನೋಟಿಸ್ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>