<p><strong>ಚೆನ್ನೈ:</strong> ರಾಜ್ಯದ ವಿಶ್ವವಿದ್ಯಾಲಯಗಳ ಕುಲಪತಿಗಳ ಸಭೆಯನ್ನು ವಾರಾಂತ್ಯದಲ್ಲಿ ಕರೆದಿರುವ ರಾಜ್ಯಪಾಲ ಆರ್.ಎನ್. ರವಿ ಅವರು, ಉದ್ಘಾಟನೆಗೆ ಉಪರಾಷ್ಟ್ರಪತಿಯನ್ನು ಆಹ್ವಾನಿಸಿದ್ದಾರೆ.</p>.<p>ವಿಶ್ವವಿದ್ಯಾಲಯಗಳಿಗೆ ಸಂಬಂಧಿಸಿದ ಅಧಿಕಾರವನ್ನು ರಾಜ್ಯಪಾಲರಿಂದ ವಾಪಸ್ ಪಡೆಯುವ ಮಸೂದೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಹಾಗೂ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕುಲಪತಿಗಳು, ರಿಜಿಸ್ಟ್ರಾರ್ಗಳೊಂದಿಗೆ ಸಭೆ ನಡೆಸಿದ ವಾರದ ನಂತರ ರಾಜ್ಯಪಾಲರು ಈ ಸಮಾವೇಶ ಆಯೋಜಿಸಿದ್ದಾರೆ.</p>.<p>ಈ ಸಭೆಯು ರಾಜ್ಯಪಾಲರು ಮತ್ತು ತಮಿಳುನಾಡು ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಜಟಾಪಟಿಗೆ ವೇದಿಕೆಯಾಗಲಿದೆ ಎನ್ನಲಾಗಿದೆ.</p>.<p>ನೀಲಗಿರಿ ಜಿಲ್ಲೆಯಲ್ಲಿ ಏ. 25 ಮತ್ತು 26ರಂದು ನಡೆಯಲಿರುವ ಸಭೆಯನ್ನು ಬಹಿಷ್ಕರಿಸುವಂತೆ ಎಡಪಕ್ಷಗಳು ಕುಲಪತಿಗಳಿಗೆ ಕರೆ ನೀಡಿವೆ.</p>.<p>ಕುಲಪತಿಗಳ ಸಭೆಯನ್ನು ಉದ್ಘಾಟಿಸಿ ಉಪರಾಷ್ಟ್ರಪತಿ ಮಾತನಾಡಲಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ನಂತರ ಏ. 27ರಂದು ರಾಜಧಾನಿಗೆ ಮರಳುವ ಮುನ್ನ ಕೊಯಮತ್ತೂರಿಗೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಊಟಿಯ ರಾಜಭವನದಲ್ಲಿ ಸತತ ನಾಲ್ಕನೇ ವರ್ಷ ಕುಲಪತಿಗಳ ಸಭೆ ಆಯೋಜಿಸಲಾಗಿದೆ. ವಿವಿಧ ವಿಷಯಗಳ ಅಧಿವೇಶನ ನಡೆಯಲಿದೆ. ಕೇಂದ್ರ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಪ್ರೊ. ಅಜಯ್ ಕುಮಾರ್ ಸೂದ್ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<p><strong>ಉಲ್ಲಂಘನೆ:</strong></p>.<p>‘ರಾಜ್ಯಪಾಲರ ನಡೆಯು ಸುಪ್ರೀಂ ಕೋರ್ಟ್ ತೀರ್ಪಿನ ತಿರಸ್ಕಾರವಷ್ಟೇ ಅಲ್ಲ, ಸಾಂವಿಧಾನಿಕ ನಿಯಮಗಳ ಉಲ್ಲಂಘನೆ’ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಪಿ. ಷಣ್ಮುಗಂ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಕಿಡಿಕಾರಿದ್ದಾರೆ.</p>.<p>ಸಭೆಗೆ ಹಾಜರಾಗದಂತೆ ಕುಲಪತಿಗಳಿಗೆ ನಿರ್ದೇಶನ ನೀಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<p>ಏ. 25ರಂದು ಉಪರಾಷ್ಟ್ರಪತಿ ಮತ್ತು ರಾಜ್ಯಪಾಲರು ನೀಲಗಿರಿಗೆ ಭೇಟಿ ನೀಡಿದ ಸಂದರ್ಭ ಪ್ರತಿಭಟಿಸುವುದಾಗಿ ಟಿಎನ್ಸಿಸಿ ಅಧ್ಯಕ್ಷ ಕೆ. ಸೆಲ್ವಪೆರುಂತಗೈ ತಿಳಿಸಿದ್ದಾರೆ.</p>.<p>ರವಿ ಅವರ ನಡೆಯನ್ನು ಡಿಎಂಕೆಯ ಮಿತ್ರಪಕ್ಷ ವಿಸಿಕೆ ಖಂಡಿಸಿದೆ. ಹೊಸ ಕಾನೂನಿನಂತೆ ವಿಶ್ವವಿದ್ಯಾಲಯದಲ್ಲಿ ರಾಜ್ಯಪಾಲರ ಪಾತ್ರವಿಲ್ಲ ಎಂದು ಪಕ್ಷದ ವರಿಷ್ಠ ತೊಲ್ ತಿರುಮವಲವನ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ರಾಜ್ಯದ ವಿಶ್ವವಿದ್ಯಾಲಯಗಳ ಕುಲಪತಿಗಳ ಸಭೆಯನ್ನು ವಾರಾಂತ್ಯದಲ್ಲಿ ಕರೆದಿರುವ ರಾಜ್ಯಪಾಲ ಆರ್.ಎನ್. ರವಿ ಅವರು, ಉದ್ಘಾಟನೆಗೆ ಉಪರಾಷ್ಟ್ರಪತಿಯನ್ನು ಆಹ್ವಾನಿಸಿದ್ದಾರೆ.</p>.<p>ವಿಶ್ವವಿದ್ಯಾಲಯಗಳಿಗೆ ಸಂಬಂಧಿಸಿದ ಅಧಿಕಾರವನ್ನು ರಾಜ್ಯಪಾಲರಿಂದ ವಾಪಸ್ ಪಡೆಯುವ ಮಸೂದೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಹಾಗೂ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕುಲಪತಿಗಳು, ರಿಜಿಸ್ಟ್ರಾರ್ಗಳೊಂದಿಗೆ ಸಭೆ ನಡೆಸಿದ ವಾರದ ನಂತರ ರಾಜ್ಯಪಾಲರು ಈ ಸಮಾವೇಶ ಆಯೋಜಿಸಿದ್ದಾರೆ.</p>.<p>ಈ ಸಭೆಯು ರಾಜ್ಯಪಾಲರು ಮತ್ತು ತಮಿಳುನಾಡು ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಜಟಾಪಟಿಗೆ ವೇದಿಕೆಯಾಗಲಿದೆ ಎನ್ನಲಾಗಿದೆ.</p>.<p>ನೀಲಗಿರಿ ಜಿಲ್ಲೆಯಲ್ಲಿ ಏ. 25 ಮತ್ತು 26ರಂದು ನಡೆಯಲಿರುವ ಸಭೆಯನ್ನು ಬಹಿಷ್ಕರಿಸುವಂತೆ ಎಡಪಕ್ಷಗಳು ಕುಲಪತಿಗಳಿಗೆ ಕರೆ ನೀಡಿವೆ.</p>.<p>ಕುಲಪತಿಗಳ ಸಭೆಯನ್ನು ಉದ್ಘಾಟಿಸಿ ಉಪರಾಷ್ಟ್ರಪತಿ ಮಾತನಾಡಲಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ನಂತರ ಏ. 27ರಂದು ರಾಜಧಾನಿಗೆ ಮರಳುವ ಮುನ್ನ ಕೊಯಮತ್ತೂರಿಗೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಊಟಿಯ ರಾಜಭವನದಲ್ಲಿ ಸತತ ನಾಲ್ಕನೇ ವರ್ಷ ಕುಲಪತಿಗಳ ಸಭೆ ಆಯೋಜಿಸಲಾಗಿದೆ. ವಿವಿಧ ವಿಷಯಗಳ ಅಧಿವೇಶನ ನಡೆಯಲಿದೆ. ಕೇಂದ್ರ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಪ್ರೊ. ಅಜಯ್ ಕುಮಾರ್ ಸೂದ್ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<p><strong>ಉಲ್ಲಂಘನೆ:</strong></p>.<p>‘ರಾಜ್ಯಪಾಲರ ನಡೆಯು ಸುಪ್ರೀಂ ಕೋರ್ಟ್ ತೀರ್ಪಿನ ತಿರಸ್ಕಾರವಷ್ಟೇ ಅಲ್ಲ, ಸಾಂವಿಧಾನಿಕ ನಿಯಮಗಳ ಉಲ್ಲಂಘನೆ’ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಪಿ. ಷಣ್ಮುಗಂ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಕಿಡಿಕಾರಿದ್ದಾರೆ.</p>.<p>ಸಭೆಗೆ ಹಾಜರಾಗದಂತೆ ಕುಲಪತಿಗಳಿಗೆ ನಿರ್ದೇಶನ ನೀಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<p>ಏ. 25ರಂದು ಉಪರಾಷ್ಟ್ರಪತಿ ಮತ್ತು ರಾಜ್ಯಪಾಲರು ನೀಲಗಿರಿಗೆ ಭೇಟಿ ನೀಡಿದ ಸಂದರ್ಭ ಪ್ರತಿಭಟಿಸುವುದಾಗಿ ಟಿಎನ್ಸಿಸಿ ಅಧ್ಯಕ್ಷ ಕೆ. ಸೆಲ್ವಪೆರುಂತಗೈ ತಿಳಿಸಿದ್ದಾರೆ.</p>.<p>ರವಿ ಅವರ ನಡೆಯನ್ನು ಡಿಎಂಕೆಯ ಮಿತ್ರಪಕ್ಷ ವಿಸಿಕೆ ಖಂಡಿಸಿದೆ. ಹೊಸ ಕಾನೂನಿನಂತೆ ವಿಶ್ವವಿದ್ಯಾಲಯದಲ್ಲಿ ರಾಜ್ಯಪಾಲರ ಪಾತ್ರವಿಲ್ಲ ಎಂದು ಪಕ್ಷದ ವರಿಷ್ಠ ತೊಲ್ ತಿರುಮವಲವನ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>