<p><strong>ಚೆನ್ನೈ</strong>: ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರು ಕಾಲೇಜೊಂದರ ವಿದ್ಯಾರ್ಥಿಗಳಿಗೆ ‘ಜೈ ಶ್ರೀರಾಂ’ ಎಂಬ ಘೋಷಣೆ ಕೂಗುವಂತೆ ಹೇಳಿದ್ದಾರೆ ಎಂಬ ವರದಿಯು ತಮಿಳುನಾಡಿನಲ್ಲಿ ವಿವಾದ ಸೃಷ್ಟಿಸಿದೆ.</p>.<p>ರವಿ ಅವರು ಪ್ರತಿಜ್ಞಾವಿಧಿಗೆ, ಧರ್ಮನಿರಪೇಕ್ಷ ತತ್ವಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಶಿಕ್ಷಣ ತಜ್ಞರ ಸಂಘಟನೆಯಾದ ಎಸ್ಪಿಸಿಎಸ್ಎಸ್–ಟಿಎನ್ ಆರೋಪಿಸಿದೆ. ರವಿ ಅವರನ್ನು ರಾಜ್ಯಪಾಲ ಹುದ್ದೆಯಿಂದ ತೆಗೆಯಬೇಕು ಎಂದು ಸಂಘಟನೆಯು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಒತ್ತಾಯಿಸಿದೆ.</p>.<p>ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ರವಿ ಅವರು ನಡೆದುಕೊಂಡಿಲ್ಲ ಎಂದು ಕೂಡ ಸಂಘಟನೆ ದೂರಿದೆ. ಸಾಹಿತ್ಯ ಸ್ಪರ್ಧೆಯೊಂದರ ವಿಜೇತರಿಗೆ ಬಹುಮಾನ ವಿತರಣೆ ಮಾಡಲು ರವಿ ಅವರನ್ನು ಮದುರೈನ ಸರ್ಕಾರಿ ಅನುದಾನಿತ ಕಾಲೇಜೊಂದಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು.</p>.<p>ಶನಿವಾರ ನಡೆದ ಈ ಕಾರ್ಯಕ್ರಮದಲ್ಲಿ ರವಿ ಅವರು, ಜೈ ಶ್ರೀರಾಂ ಎಂದು ಮೂರು ಬಾರಿ ಹೇಳುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿದ್ದರು.</p>.<p>ನಿರ್ದಿಷ್ಟ ಧರ್ಮವೊಂದರ ದೇವರ ಹೆಸರನ್ನು ಪಠಿಸುವ ಮೂಲಕ, ಅದನ್ನು ಮೂರು ಬಾರಿ ಹೇಳುವಂತೆ ವಿದ್ಯಾರ್ಥಿಗಳಿಗೆ ಸೂಚಿಸುವ ಮೂಲಕ ರವಿ ಅವರು ಸಂವಿಧಾನವನ್ನು ರಕ್ಷಿಸುವಲ್ಲಿ ವಿಫಲರಾಗಿದ್ದಾರೆ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಪಿ.ಬಿ. ಪ್ರಿನ್ಸ್ ಗಜೇಂದ್ರ ಬಾಬು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರು ಕಾಲೇಜೊಂದರ ವಿದ್ಯಾರ್ಥಿಗಳಿಗೆ ‘ಜೈ ಶ್ರೀರಾಂ’ ಎಂಬ ಘೋಷಣೆ ಕೂಗುವಂತೆ ಹೇಳಿದ್ದಾರೆ ಎಂಬ ವರದಿಯು ತಮಿಳುನಾಡಿನಲ್ಲಿ ವಿವಾದ ಸೃಷ್ಟಿಸಿದೆ.</p>.<p>ರವಿ ಅವರು ಪ್ರತಿಜ್ಞಾವಿಧಿಗೆ, ಧರ್ಮನಿರಪೇಕ್ಷ ತತ್ವಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಶಿಕ್ಷಣ ತಜ್ಞರ ಸಂಘಟನೆಯಾದ ಎಸ್ಪಿಸಿಎಸ್ಎಸ್–ಟಿಎನ್ ಆರೋಪಿಸಿದೆ. ರವಿ ಅವರನ್ನು ರಾಜ್ಯಪಾಲ ಹುದ್ದೆಯಿಂದ ತೆಗೆಯಬೇಕು ಎಂದು ಸಂಘಟನೆಯು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಒತ್ತಾಯಿಸಿದೆ.</p>.<p>ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ರವಿ ಅವರು ನಡೆದುಕೊಂಡಿಲ್ಲ ಎಂದು ಕೂಡ ಸಂಘಟನೆ ದೂರಿದೆ. ಸಾಹಿತ್ಯ ಸ್ಪರ್ಧೆಯೊಂದರ ವಿಜೇತರಿಗೆ ಬಹುಮಾನ ವಿತರಣೆ ಮಾಡಲು ರವಿ ಅವರನ್ನು ಮದುರೈನ ಸರ್ಕಾರಿ ಅನುದಾನಿತ ಕಾಲೇಜೊಂದಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು.</p>.<p>ಶನಿವಾರ ನಡೆದ ಈ ಕಾರ್ಯಕ್ರಮದಲ್ಲಿ ರವಿ ಅವರು, ಜೈ ಶ್ರೀರಾಂ ಎಂದು ಮೂರು ಬಾರಿ ಹೇಳುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿದ್ದರು.</p>.<p>ನಿರ್ದಿಷ್ಟ ಧರ್ಮವೊಂದರ ದೇವರ ಹೆಸರನ್ನು ಪಠಿಸುವ ಮೂಲಕ, ಅದನ್ನು ಮೂರು ಬಾರಿ ಹೇಳುವಂತೆ ವಿದ್ಯಾರ್ಥಿಗಳಿಗೆ ಸೂಚಿಸುವ ಮೂಲಕ ರವಿ ಅವರು ಸಂವಿಧಾನವನ್ನು ರಕ್ಷಿಸುವಲ್ಲಿ ವಿಫಲರಾಗಿದ್ದಾರೆ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಪಿ.ಬಿ. ಪ್ರಿನ್ಸ್ ಗಜೇಂದ್ರ ಬಾಬು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>