<p class="title">ಚೆನ್ನೈ (ಪಿಟಿ): ಕಲ್ಲಕುರಿಚ್ಚಿಯಲ್ಲಿ ನಡೆದ ವಿಷಪೂರಿತ ಮದ್ಯಸೇವನೆ ಪ್ರಕರಣವು ಸತತ ಎರಡನೇ ದಿನವಾದ ಶನಿವಾರ ತಮಿಳುನಾಡು ಅಧಿವೇಶನದಲ್ಲಿ ಪ್ರತಿಧ್ವನಿಸಿತು. ಪ್ರಮುಖ ಪ್ರತಿಪಕ್ಷ ಎಐಎಡಿಎಂಕೆ, ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಸದನ ಬಹಿಷ್ಕರಿಸಿ ಹೊರನಡೆಯಿತು. </p>.<p>ಅತ್ಯಂತ ನೋವಿನ ವಿಚಾರದಲ್ಲಿ ಡಿಎಂಕೆ ಪಕ್ಷವು ರಾಜಕೀಯ ಮಾಡುತ್ತಿದ್ದು, ತನಿಖೆ ಪಾರದರ್ಶಕವಾಗಿ ನಡೆಯುತ್ತಿದೆ. ಸಿಬಿಐ ತನಿಖೆಗೆ ಒಪ್ಪಿಸಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಬೇಡಿಕೆ ನಿರಾಕರಿಸಿತು.</p>.<p>‘ರಾಜ್ಯ ಸರ್ಕಾರ ಪಾರದರ್ಶಕವಾಗಿದೆ. ನಾವು ಯಾವುದೇ ವಿಚಾರವನ್ನು ಮಚ್ಚಿಟ್ಟಿಲ್ಲ. ಸಿಬಿಐ ತನಿಖೆ ನಡೆಸುವ ಅಗತ್ಯವಿಲ್ಲ’ ಎಂದು ಕಾನೂನು ಸಚಿವ ಎಸ್. ರಘುಪತಿ ಸದನದಲ್ಲಿ ತಿಳಿಸಿದರು.</p>.<p class="title">ಸಾವಿನ ಸಂಖ್ಯೆ 53ಕ್ಕೆ ಏರಿಕೆ: ಕಲ್ಲಕುರಿಚ್ಚಿಯಲ್ಲಿ ವಿಷಯುಕ್ತ ಮದ್ಯಸೇವನೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 53ಕ್ಕೆ ಏರಿಕೆಯಾಗಿದೆ. 140 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸ್ಥಳೀಯಾಡಳಿತವು ತಿಳಿಸಿದೆ.</p>.<p class="title">‘ಜಿಲ್ಲೆಯಲ್ಲಿ ಮಂಗಳವಾರ ವಿಷಪೂರಿತ ಮದ್ಯಸೇವಿಸಿದ್ದ 193 ಮಂದಿ ಪೈಕಿ 140 ಮಂದಿಯನ್ನು ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ದಾಖಲಾದವರಿಗೆ ಯಾವುದೇ ಅಪಾಯವಿಲ್ಲ’ ಎಂದು ಕಲ್ಲಕುರಿಚ್ಚಿ ಜಿಲ್ಲಾಧಿಕಾರಿ ಎಂ.ಎಸ್.ಪ್ರಶಾಂತ್ ತಿಳಿಸಿದರು.</p>.<p class="title">‘ಇದುವರೆಗೂ 53 ಮಂದಿ ಮೃತಪಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿಯನ್ನು ಬಂಧಿಸಲಾಗಿದೆ’ ಎಂದು ಆಸ್ಪತ್ರೆಯಲ್ಲಿ ಸಂತ್ರಸ್ತರನ್ನು ಭೇಟಿಯಾಗಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title">ಚೆನ್ನೈ (ಪಿಟಿ): ಕಲ್ಲಕುರಿಚ್ಚಿಯಲ್ಲಿ ನಡೆದ ವಿಷಪೂರಿತ ಮದ್ಯಸೇವನೆ ಪ್ರಕರಣವು ಸತತ ಎರಡನೇ ದಿನವಾದ ಶನಿವಾರ ತಮಿಳುನಾಡು ಅಧಿವೇಶನದಲ್ಲಿ ಪ್ರತಿಧ್ವನಿಸಿತು. ಪ್ರಮುಖ ಪ್ರತಿಪಕ್ಷ ಎಐಎಡಿಎಂಕೆ, ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಸದನ ಬಹಿಷ್ಕರಿಸಿ ಹೊರನಡೆಯಿತು. </p>.<p>ಅತ್ಯಂತ ನೋವಿನ ವಿಚಾರದಲ್ಲಿ ಡಿಎಂಕೆ ಪಕ್ಷವು ರಾಜಕೀಯ ಮಾಡುತ್ತಿದ್ದು, ತನಿಖೆ ಪಾರದರ್ಶಕವಾಗಿ ನಡೆಯುತ್ತಿದೆ. ಸಿಬಿಐ ತನಿಖೆಗೆ ಒಪ್ಪಿಸಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಬೇಡಿಕೆ ನಿರಾಕರಿಸಿತು.</p>.<p>‘ರಾಜ್ಯ ಸರ್ಕಾರ ಪಾರದರ್ಶಕವಾಗಿದೆ. ನಾವು ಯಾವುದೇ ವಿಚಾರವನ್ನು ಮಚ್ಚಿಟ್ಟಿಲ್ಲ. ಸಿಬಿಐ ತನಿಖೆ ನಡೆಸುವ ಅಗತ್ಯವಿಲ್ಲ’ ಎಂದು ಕಾನೂನು ಸಚಿವ ಎಸ್. ರಘುಪತಿ ಸದನದಲ್ಲಿ ತಿಳಿಸಿದರು.</p>.<p class="title">ಸಾವಿನ ಸಂಖ್ಯೆ 53ಕ್ಕೆ ಏರಿಕೆ: ಕಲ್ಲಕುರಿಚ್ಚಿಯಲ್ಲಿ ವಿಷಯುಕ್ತ ಮದ್ಯಸೇವನೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 53ಕ್ಕೆ ಏರಿಕೆಯಾಗಿದೆ. 140 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸ್ಥಳೀಯಾಡಳಿತವು ತಿಳಿಸಿದೆ.</p>.<p class="title">‘ಜಿಲ್ಲೆಯಲ್ಲಿ ಮಂಗಳವಾರ ವಿಷಪೂರಿತ ಮದ್ಯಸೇವಿಸಿದ್ದ 193 ಮಂದಿ ಪೈಕಿ 140 ಮಂದಿಯನ್ನು ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ದಾಖಲಾದವರಿಗೆ ಯಾವುದೇ ಅಪಾಯವಿಲ್ಲ’ ಎಂದು ಕಲ್ಲಕುರಿಚ್ಚಿ ಜಿಲ್ಲಾಧಿಕಾರಿ ಎಂ.ಎಸ್.ಪ್ರಶಾಂತ್ ತಿಳಿಸಿದರು.</p>.<p class="title">‘ಇದುವರೆಗೂ 53 ಮಂದಿ ಮೃತಪಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿಯನ್ನು ಬಂಧಿಸಲಾಗಿದೆ’ ಎಂದು ಆಸ್ಪತ್ರೆಯಲ್ಲಿ ಸಂತ್ರಸ್ತರನ್ನು ಭೇಟಿಯಾಗಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>