<p><strong>ಚೆನ್ನೈ:</strong> ತಮಿಳನಾಡಿನಲ್ಲಿ ನೂತನ ಸರ್ಕಾರ ರಚಿಸಲು ಕಸರತ್ತು ಮುಂದುವರಿದಿದ್ದು, ಗುರುವಾರವೂ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿಯಾಗಿರುವ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್, ನೂತನ ಸರ್ಕಾರ ರಚಿಸಲು ಆಹ್ವಾನಿಸುವಂತೆ ಕೋರಿದ್ದಾರೆ. </p><p>ಆದರೆ ಟಿವಿಕೆಗೆ ಸಂಖ್ಯಾಬಲದ ಕೊರತೆಯಿದ್ದು, ಸರ್ಕಾರ ರಚಿಸಲು ಬೇಕಾದ ಬಹುಮತವಿಲ್ಲ ಎಂದು ವಿಜಯ್ ಅವರಿಗೆ ಅರ್ಲೇಕರ್ ವಿವರಿಸಿದ್ದಾರೆ ಎಂದು ತಮಿಳುನಾಡಿನ ಲೋಕಭವನ ತಿಳಿಸಿದೆ. </p>. <p>ಬುಧವಾರ ರಾಜ್ಯಪಾಲ ಅರ್ಲೆಕರ್ ಅವರನ್ನು ಭೇಟಿಯಾಗಿದ್ದ ವಿಜಯ್, ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. ಆದರೆ ಸಂಖ್ಯಾಬಲದ ದಾಖಲೆಯನ್ನು ಕೇಳಿದ ರಾಜ್ಯಪಾಲರು ಗುರುವಾರ ಎರಡನೇ ಬಾರಿಗೆ ಮಾತುಕತೆಗಾಗಿ ಆಹ್ವಾನಿಸಿದರು. </p><p>ಮಾತುಕತೆಯ ಸಂದರ್ಭದಲ್ಲಿ ತಮಿಳುನಾಡು ವಿಧಾನಸಭೆಯಲ್ಲಿ ಸರ್ಕಾರ ರಚಿಸಲು ಟಿವಿಕೆಗೆ ಬಹುಮತ ಇಲ್ಲ ಎಂದು ರಾಜ್ಯಪಾಲರು ವಿವರಿಸಿದ್ದಾರೆ ಎಂದು ಲೋಕಭವನದ ಪ್ರಕಟಣೆ ತಿಳಿಸಿದೆ. </p><p>24 ತಾಸಿನ ಅವಧಿಯಲ್ಲಿ ಎರಡನೇ ಸಲ ಸರ್ಕಾರ ರಚನೆಗೆ ಸಂಬಂಧಿಸಿದಂತೆ ರಾಜ್ಯಪಾಲರನ್ನು ವಿಜಯ್ ಭೇಟಿಯಾಗಿದ್ದರು. </p><p>234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ 108 ಸ್ಥಾನಗಳಲ್ಲಿ ಗೆದ್ದಿರುವ ಟಿವಿಕೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ನ ಐವರು ಶಾಸಕರ ಬೆಂಬಲದ ಹೊರತಾಗಿಯೂ ಬಹುಮತಕ್ಕೆ ಬೇಕಾಗಿರುವ ಅಧಿಕೃತ ಸಂಖ್ಯಾಬಲದ ಕೊರತೆ ಕಾಡುತ್ತಿದೆ. </p>.ಸರ್ಕಾರ ರಚನೆ ಕಸರತ್ತು: 24 ತಾಸಿನಲ್ಲಿ 2ನೇ ಸಲ ರಾಜ್ಯಪಾಲರನ್ನು ಭೇಟಿಯಾದ ವಿಜಯ್.ಪಟ್ಟು ಬಿಡದ ನಾಯಕರು: ಕೇರಳಂನಲ್ಲಿ ಭಾನುವಾರದೊಳಗೆ ನೂತನ ಸಿಎಂ ಆಯ್ಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ತಮಿಳನಾಡಿನಲ್ಲಿ ನೂತನ ಸರ್ಕಾರ ರಚಿಸಲು ಕಸರತ್ತು ಮುಂದುವರಿದಿದ್ದು, ಗುರುವಾರವೂ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿಯಾಗಿರುವ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್, ನೂತನ ಸರ್ಕಾರ ರಚಿಸಲು ಆಹ್ವಾನಿಸುವಂತೆ ಕೋರಿದ್ದಾರೆ. </p><p>ಆದರೆ ಟಿವಿಕೆಗೆ ಸಂಖ್ಯಾಬಲದ ಕೊರತೆಯಿದ್ದು, ಸರ್ಕಾರ ರಚಿಸಲು ಬೇಕಾದ ಬಹುಮತವಿಲ್ಲ ಎಂದು ವಿಜಯ್ ಅವರಿಗೆ ಅರ್ಲೇಕರ್ ವಿವರಿಸಿದ್ದಾರೆ ಎಂದು ತಮಿಳುನಾಡಿನ ಲೋಕಭವನ ತಿಳಿಸಿದೆ. </p>. <p>ಬುಧವಾರ ರಾಜ್ಯಪಾಲ ಅರ್ಲೆಕರ್ ಅವರನ್ನು ಭೇಟಿಯಾಗಿದ್ದ ವಿಜಯ್, ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. ಆದರೆ ಸಂಖ್ಯಾಬಲದ ದಾಖಲೆಯನ್ನು ಕೇಳಿದ ರಾಜ್ಯಪಾಲರು ಗುರುವಾರ ಎರಡನೇ ಬಾರಿಗೆ ಮಾತುಕತೆಗಾಗಿ ಆಹ್ವಾನಿಸಿದರು. </p><p>ಮಾತುಕತೆಯ ಸಂದರ್ಭದಲ್ಲಿ ತಮಿಳುನಾಡು ವಿಧಾನಸಭೆಯಲ್ಲಿ ಸರ್ಕಾರ ರಚಿಸಲು ಟಿವಿಕೆಗೆ ಬಹುಮತ ಇಲ್ಲ ಎಂದು ರಾಜ್ಯಪಾಲರು ವಿವರಿಸಿದ್ದಾರೆ ಎಂದು ಲೋಕಭವನದ ಪ್ರಕಟಣೆ ತಿಳಿಸಿದೆ. </p><p>24 ತಾಸಿನ ಅವಧಿಯಲ್ಲಿ ಎರಡನೇ ಸಲ ಸರ್ಕಾರ ರಚನೆಗೆ ಸಂಬಂಧಿಸಿದಂತೆ ರಾಜ್ಯಪಾಲರನ್ನು ವಿಜಯ್ ಭೇಟಿಯಾಗಿದ್ದರು. </p><p>234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ 108 ಸ್ಥಾನಗಳಲ್ಲಿ ಗೆದ್ದಿರುವ ಟಿವಿಕೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ನ ಐವರು ಶಾಸಕರ ಬೆಂಬಲದ ಹೊರತಾಗಿಯೂ ಬಹುಮತಕ್ಕೆ ಬೇಕಾಗಿರುವ ಅಧಿಕೃತ ಸಂಖ್ಯಾಬಲದ ಕೊರತೆ ಕಾಡುತ್ತಿದೆ. </p>.ಸರ್ಕಾರ ರಚನೆ ಕಸರತ್ತು: 24 ತಾಸಿನಲ್ಲಿ 2ನೇ ಸಲ ರಾಜ್ಯಪಾಲರನ್ನು ಭೇಟಿಯಾದ ವಿಜಯ್.ಪಟ್ಟು ಬಿಡದ ನಾಯಕರು: ಕೇರಳಂನಲ್ಲಿ ಭಾನುವಾರದೊಳಗೆ ನೂತನ ಸಿಎಂ ಆಯ್ಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>