ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೆಹಮಾನ್‌ ಸಂಗೀತ ಕಛೇರಿ ಆಯೋಜಕರ ವಿರುದ್ಧ ಪ್ರಕರಣ

Published 22 ಸೆಪ್ಟೆಂಬರ್ 2023, 14:26 IST
Last Updated 22 ಸೆಪ್ಟೆಂಬರ್ 2023, 14:26 IST
ಅಕ್ಷರ ಗಾತ್ರ

 ಚೆನ್ನೈ:  ಸಂಗೀತ ಸಂಯೋಜಕ ಎ.ಆರ್‌.ರೆಹಮಾನ್‌ ಅವರ ಸಂಗೀತ ಕಛೇರಿ ‘ಮರಕ್ಕುಮ ನೆಂಜಮ್‌’ ಏರ್ಪಡಿಸಿದ್ದ ಆಯೋಜಕರ ವಿರುದ್ಧ ತಮಿಳುನಾಡು ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ.

ಸೆಪ್ಟೆಂಬರ್ 10ರಂದು ನಡೆದ ಕಾರ್ಯಕ್ರಮದಲ್ಲಿ  ಅವ್ಯವಸ್ಥೆ  ಮತ್ತು  ತೀವ್ರ ಜನದಟ್ಟಣೆ ಉಂಟಾಗಿತ್ತು. ಇದರಿಂದ ಪೂರ್ವ ಕರಾವಳಿ ರಸ್ತೆಯಲ್ಲಿ ವಿಪರೀತ ವಾಹನ ದಟ್ಟಣೆ ಉಂಟಾಗಿತ್ತು. ಈ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ.

ಎಸಿಟಿಸಿ ಈವೆಂಟ್ಸ್‌ ಸಂಸ್ಥಾಪಕ ಹೇಮಂತ್ ರಾಜ ಮತ್ತು ಇತರ ಮೂವರ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳಡಿ  ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೇವಲ 20 ಸಾವಿರ ಆಸನಗಳ ವ್ಯವಸ್ಥೆ ಇದ್ದರೂ ಆಯೋಜಕರು ಅದರ ದುಪ್ಪಟ್ಟು ಸಂಖ್ಯೆಯಲ್ಲಿ ಟಿಕೆಟ್‌ ಹಂಚಿದ್ದರು. ಕಾರ್ಯಕ್ರಮದಲ್ಲಿ ಸುಮಾರು 50,000 ಜನರು ಪಾಲ್ಗೊಂಡಿದ್ದರು ಎನ್ನಲಾಗಿದೆ. ಈ ಬಗ್ಗೆ 10 ದಿನಗಳ ಕಾಲ ತನಿಖೆ ನಡೆಸಿದ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT