<p><strong>ಚೆನ್ನೈ</strong>: ಈಶಾನ್ಯ ಮಾರುತಗಳು ಬಿರುಸುಗೊಂಡಿದ್ದು, ತಮಿಳುನಾಡಿನ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದೆ. ಅದರಲ್ಲೂ ದಕ್ಷಿಣದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ.</p><p> ಭಾರಿ ಮಳೆ ಮತ್ತು ಪ್ರವಾಹದಿಂದಾಗಿ ಮಧುರೈ, ಥೇಣಿ, ದಿಂಡಿಗಲ್, ತಿರುನಲ್ವೇಲಿ, ತೆಂಕಶಿ, ತಿರುಪ್ಪೂರ್ ಮತ್ತು ಕೊಯಮತ್ತೂರು ಜಿಲ್ಲೆಗಳಲ್ಲದೆ ನೀಲಗಿರಿ ಜಿಲ್ಲೆಯ ನಾಲ್ಕು ತಾಲೂಕುಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.</p><p>ಇಲ್ಲಿನ ಪ್ರಾದೇಶಿಕ ಹವಾಮಾನ ಕೇಂದ್ರವು(ಆರ್ಎಂಸಿ), ರಾಜ್ಯದಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.</p><p>ನವೆಂಬರ್ 8ರಂದು ಸಂಜೆ 5.30ಕ್ಕೆ ಪೂರ್ವ ಮಧ್ಯ ಅರೇಬಿಯನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಂಡಿದೆ. ಈ ಮಾರುತಗಳು ಪಶ್ಚಿಮಕ್ಕೆ ಚಲಿಸುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.</p><p>ನೀಲಗಿರಿ ಜಿಲ್ಲೆಯ ಕೋಟಗಿರಿಯಲ್ಲಿ 228 ಮಿಮೀ ಮಳೆಯಾಗಿದ್ದು, ಅಗ್ರಸ್ಥಾನದಲ್ಲಿದೆ.</p><p>ನಿರಂತರ ಮಳೆಯಿಂದಾಗಿ ನೀಲಗಿರಿ ಮೌಂಟೇನ್ ರೈಲ್ವೆ ಮಾರ್ಗದಲ್ಲಿ ಸುಮಾರು ಐದು ಸ್ಥಳಗಳಲ್ಲಿ ಭೂಕುಸಿತ ಸಂಭವಿಸಿದ್ದು, ಪರ್ವತ ರೈಲು ಸೇವೆಯನ್ನು ರದ್ದುಗೊಳಿಸಲಾಗಿದೆ. ಕೋಟಗಿರಿಯಲ್ಲೂ ಭೂಕುಸಿತ ಸಂಭವಿಸಿದ್ದು, ರಸ್ತೆ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಕೂನೂರು ಮಾರ್ಗವಾಗಿ ಮೆಟ್ಟುಪಾಳ್ಯಂಗೆ ಸಂಚಾರವನ್ನು ಬದಲಿಸಲಾಗಿದೆ.</p><p>ಆರ್ಎಂಸಿ ಪ್ರಕಾರ, ತೆಂಕಶಿ, ಥೇಣಿ, ದಿಂಡಿಗಲ್, ಮಧುರೈ, ವಿರುಧುನಗರ, ತಿರುನಲ್ವೇಲಿ, ತೂತುಕುಡಿ, ಶಿವಗಂಗಾ, ರಾಮನಾಥಪುರಂ, ಚೆಂಗಲ್ಪಟ್ಟು, ಕಾಂಚೀಪುರಂ, ತಿರುವಣ್ಣಾಮಲೈ ಮತ್ತು ತಿರುವಳ್ಳೂರು ಜಿಲ್ಲೆಗಳಲ್ಲಿ ಸಾಧಾರಣ ಗುಡುಗು ಸಹಿತ ಮಳೆಯಾಗಿದೆ.</p><p> ಚೆನ್ನೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಮಳೆಯಾಗಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಈಶಾನ್ಯ ಮಾರುತಗಳು ಬಿರುಸುಗೊಂಡಿದ್ದು, ತಮಿಳುನಾಡಿನ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದೆ. ಅದರಲ್ಲೂ ದಕ್ಷಿಣದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ.</p><p> ಭಾರಿ ಮಳೆ ಮತ್ತು ಪ್ರವಾಹದಿಂದಾಗಿ ಮಧುರೈ, ಥೇಣಿ, ದಿಂಡಿಗಲ್, ತಿರುನಲ್ವೇಲಿ, ತೆಂಕಶಿ, ತಿರುಪ್ಪೂರ್ ಮತ್ತು ಕೊಯಮತ್ತೂರು ಜಿಲ್ಲೆಗಳಲ್ಲದೆ ನೀಲಗಿರಿ ಜಿಲ್ಲೆಯ ನಾಲ್ಕು ತಾಲೂಕುಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.</p><p>ಇಲ್ಲಿನ ಪ್ರಾದೇಶಿಕ ಹವಾಮಾನ ಕೇಂದ್ರವು(ಆರ್ಎಂಸಿ), ರಾಜ್ಯದಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.</p><p>ನವೆಂಬರ್ 8ರಂದು ಸಂಜೆ 5.30ಕ್ಕೆ ಪೂರ್ವ ಮಧ್ಯ ಅರೇಬಿಯನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಂಡಿದೆ. ಈ ಮಾರುತಗಳು ಪಶ್ಚಿಮಕ್ಕೆ ಚಲಿಸುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.</p><p>ನೀಲಗಿರಿ ಜಿಲ್ಲೆಯ ಕೋಟಗಿರಿಯಲ್ಲಿ 228 ಮಿಮೀ ಮಳೆಯಾಗಿದ್ದು, ಅಗ್ರಸ್ಥಾನದಲ್ಲಿದೆ.</p><p>ನಿರಂತರ ಮಳೆಯಿಂದಾಗಿ ನೀಲಗಿರಿ ಮೌಂಟೇನ್ ರೈಲ್ವೆ ಮಾರ್ಗದಲ್ಲಿ ಸುಮಾರು ಐದು ಸ್ಥಳಗಳಲ್ಲಿ ಭೂಕುಸಿತ ಸಂಭವಿಸಿದ್ದು, ಪರ್ವತ ರೈಲು ಸೇವೆಯನ್ನು ರದ್ದುಗೊಳಿಸಲಾಗಿದೆ. ಕೋಟಗಿರಿಯಲ್ಲೂ ಭೂಕುಸಿತ ಸಂಭವಿಸಿದ್ದು, ರಸ್ತೆ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಕೂನೂರು ಮಾರ್ಗವಾಗಿ ಮೆಟ್ಟುಪಾಳ್ಯಂಗೆ ಸಂಚಾರವನ್ನು ಬದಲಿಸಲಾಗಿದೆ.</p><p>ಆರ್ಎಂಸಿ ಪ್ರಕಾರ, ತೆಂಕಶಿ, ಥೇಣಿ, ದಿಂಡಿಗಲ್, ಮಧುರೈ, ವಿರುಧುನಗರ, ತಿರುನಲ್ವೇಲಿ, ತೂತುಕುಡಿ, ಶಿವಗಂಗಾ, ರಾಮನಾಥಪುರಂ, ಚೆಂಗಲ್ಪಟ್ಟು, ಕಾಂಚೀಪುರಂ, ತಿರುವಣ್ಣಾಮಲೈ ಮತ್ತು ತಿರುವಳ್ಳೂರು ಜಿಲ್ಲೆಗಳಲ್ಲಿ ಸಾಧಾರಣ ಗುಡುಗು ಸಹಿತ ಮಳೆಯಾಗಿದೆ.</p><p> ಚೆನ್ನೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಮಳೆಯಾಗಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>