<p><strong>ಚೆನ್ನೈ</strong>: ಚಿತ್ರನಟ, ಟಿವಿಕೆ ಪಕ್ಷದ ಅಧ್ಯಕ್ಷ ವಿಜಯ್ ಅವರ ರ್ಯಾಲಿಯ ವೇಳೆ ನಡೆದ ಕಾಲ್ತುಳಿತ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಗೆ ಮದ್ರಾಸ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ. </p>.<p>ಕಾಲ್ತುಳಿತ ಘಟನೆಗೆ ಸಂಬಂಧಿಸಿ ಸರ್ಕಾರದ ನಿರ್ಲಕ್ಷ್ಯ ಸೇರಿದಂತೆ ಹಲವು ಅನುಮಾನಗಳು ಇವೆ ಎಂದು ಬಿಜೆಪಿ ನಾಯಕಿ ಉಮಾ ಆನಂದ್ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. </p>.<p>ಅರ್ಜಿಯ ವಿಚಾರಣೆಗೆ ನಿರಾಕರಿಸಿದ ವಿಭಾಗೀಯ ಪೀಠವು, ಹೈಕೋರ್ಟ್ನ ಮದುರೈ ಪೀಠಕ್ಕೆ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ.</p>.<p>ವಿಜಯ್ ಸೆಪ್ಟೆಂಬರ್ 27ರಂದು ಕರೂರಿನಲ್ಲಿ ರ್ಯಾಲಿ ನಡೆಸುತ್ತಿದ್ದ ವೇಳೆ ಕಾಲ್ತುಳಿತ ಸಂಭವಿಸಿ 41 ಮಂದಿ ಮೃತಪಟ್ಟಿದ್ದರು.</p>.<p>‘ಎಸ್ಐಟಿ ರಚಿಸಿ’: ಕಾಲ್ತುಳಿತ ಪ್ರಕರಣದ ತನಿಖೆ ನಡೆಸಲು ವಿಶೇಷ ತನಿಖಾ ತಂಡ( ಎಸ್ಐಟಿ) ರಚನೆ ಮಾಡುವಂತೆ ಮದ್ರಾಸ್ ಹೈಕೋರ್ಟ್ ಶುಕ್ರವಾರ ನಿರ್ದೇಶನ ನೀಡಿ ಆದೇಶ ಹೊರಡಿಸಿದೆ.</p>.<p>ಹಿರಿಯ ಐಪಿಎಸ್ ಅಧಿಕಾರಿ, ಉತ್ತರ ವಲಯದ ಐಜಿಪಿ ಅಸ್ರಾ ಗರ್ಗ್ ಅವರ ನೇತೃತ್ವದಲ್ಲಿ ತಂಡ ರಚಿಸಲು ಸೂಚಿಸಿದ್ದು, ಸೆಪ್ಟೆಂಬರ್ 27ರಂದು ಕರೂರಿನಲ್ಲಿ ನಡೆದ ದುರಂತ ಕುರಿತು ಎಸ್ಐಟಿ ತನಿಖೆ ನಡೆಸಲಿದೆ.</p>.<p>ದುರಂತಕ್ಕೆ ಸಂಬಂಧಿಸಿದಂತೆ ವಿಜಯ್ ನೇತೃತ್ವದ ಟಿವಿಕೆ ಪಕ್ಷದ ಸಂಘಟಕರನ್ನೂ ಹೈಕೋರ್ಟ್ ಏಕಸದಸ್ಯ ಪೀಠವು ತರಾಟೆಗೆ ತಗೆದುಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಚಿತ್ರನಟ, ಟಿವಿಕೆ ಪಕ್ಷದ ಅಧ್ಯಕ್ಷ ವಿಜಯ್ ಅವರ ರ್ಯಾಲಿಯ ವೇಳೆ ನಡೆದ ಕಾಲ್ತುಳಿತ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಗೆ ಮದ್ರಾಸ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ. </p>.<p>ಕಾಲ್ತುಳಿತ ಘಟನೆಗೆ ಸಂಬಂಧಿಸಿ ಸರ್ಕಾರದ ನಿರ್ಲಕ್ಷ್ಯ ಸೇರಿದಂತೆ ಹಲವು ಅನುಮಾನಗಳು ಇವೆ ಎಂದು ಬಿಜೆಪಿ ನಾಯಕಿ ಉಮಾ ಆನಂದ್ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. </p>.<p>ಅರ್ಜಿಯ ವಿಚಾರಣೆಗೆ ನಿರಾಕರಿಸಿದ ವಿಭಾಗೀಯ ಪೀಠವು, ಹೈಕೋರ್ಟ್ನ ಮದುರೈ ಪೀಠಕ್ಕೆ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ.</p>.<p>ವಿಜಯ್ ಸೆಪ್ಟೆಂಬರ್ 27ರಂದು ಕರೂರಿನಲ್ಲಿ ರ್ಯಾಲಿ ನಡೆಸುತ್ತಿದ್ದ ವೇಳೆ ಕಾಲ್ತುಳಿತ ಸಂಭವಿಸಿ 41 ಮಂದಿ ಮೃತಪಟ್ಟಿದ್ದರು.</p>.<p>‘ಎಸ್ಐಟಿ ರಚಿಸಿ’: ಕಾಲ್ತುಳಿತ ಪ್ರಕರಣದ ತನಿಖೆ ನಡೆಸಲು ವಿಶೇಷ ತನಿಖಾ ತಂಡ( ಎಸ್ಐಟಿ) ರಚನೆ ಮಾಡುವಂತೆ ಮದ್ರಾಸ್ ಹೈಕೋರ್ಟ್ ಶುಕ್ರವಾರ ನಿರ್ದೇಶನ ನೀಡಿ ಆದೇಶ ಹೊರಡಿಸಿದೆ.</p>.<p>ಹಿರಿಯ ಐಪಿಎಸ್ ಅಧಿಕಾರಿ, ಉತ್ತರ ವಲಯದ ಐಜಿಪಿ ಅಸ್ರಾ ಗರ್ಗ್ ಅವರ ನೇತೃತ್ವದಲ್ಲಿ ತಂಡ ರಚಿಸಲು ಸೂಚಿಸಿದ್ದು, ಸೆಪ್ಟೆಂಬರ್ 27ರಂದು ಕರೂರಿನಲ್ಲಿ ನಡೆದ ದುರಂತ ಕುರಿತು ಎಸ್ಐಟಿ ತನಿಖೆ ನಡೆಸಲಿದೆ.</p>.<p>ದುರಂತಕ್ಕೆ ಸಂಬಂಧಿಸಿದಂತೆ ವಿಜಯ್ ನೇತೃತ್ವದ ಟಿವಿಕೆ ಪಕ್ಷದ ಸಂಘಟಕರನ್ನೂ ಹೈಕೋರ್ಟ್ ಏಕಸದಸ್ಯ ಪೀಠವು ತರಾಟೆಗೆ ತಗೆದುಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>