<p><strong>ಚೆನ್ನೈ:</strong> ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿ ಸಂಕಷ್ಟ ಅನುಭವಿಸುತ್ತಿರುವ ಶ್ರೀಲಂಕಾದ ಜನರ ನೆರವಿಗೆ ತಮಿಳುನಾಡು ಸರ್ಕಾರ ಧಾವಿಸಿದೆ. ಅಕ್ಕಿ, ಹಾಲಿನ ಪುಡಿ ಮತ್ತು ಜೀವರಕ್ಷಕ ಔಷಧಿಯನ್ನು ಮೊದಲ ಹಂತದಲ್ಲಿ ದ್ವೀಪ ರಾಷ್ಟ್ರಕ್ಕೆ ಕಳುಹಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಮಂಗಳವಾರ ಹೇಳಿದ್ದಾರೆ.</p>.<p>ತಮಿಳುನಾಡು ಸರ್ಕಾರದ ಈ ಉದ್ದೇಶಕ್ಕೆ ನಾಗರಿಕರೂ ದೇಣಿಗೆ ನೀಡುವ ಮೂಲಕ ನೆರವಾಗಬಹುದು ಎಂದು ಸ್ಟಾಲಿನ್ ಹೇಳಿದ್ದಾರೆ. ಅಗತ್ಯ ವಸ್ತುಗಳನ್ನು ಖರೀದಿಸಿ ಶ್ರೀಲಂಕಾಕ್ಕೆ ತಲುಪಿಸುವುದಾಗಿ ಅವರು ತಿಳಿಸಿದ್ದಾರೆ.</p>.<p>ಕೇಂದ್ರ ಸರ್ಕಾರದ ಅನುಮತಿಯೊಂದಿಗೆ ತಮಿಳುನಾಡು ಶೀಘ್ರದಲ್ಲಿಯೇ ಶ್ರೀಲಂಕಾಕ್ಕೆ 40,000 ಟನ್ ಅಕ್ಕಿ, 500 ಟನ್ ಹಾಲಿನ ಪುಡಿ ಮತ್ತು ಜೀವರಕ್ಷಕ ಔಷಧಿಯನ್ನು ಕಳುಹಿಸಲಿದೆ ಎಂದು ಸ್ಟಾಲಿನ್ ಹೇಳಿದರು.</p>.<p>ಕೊಲಂಬೊದ ಉತ್ತರ ಮತ್ತು ಪೂರ್ವ ಭಾಗಗಳಲ್ಲಿ ವಾಸಿಸುತ್ತಿರುವ ತಮಿಳರಿಗೆ ಆಹಾರ ಧಾನ್ಯ, ತರಕಾರಿ ಮತ್ತು ಔಷಧಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ರವಾನಿಸಲು ರಾಜ್ಯಕ್ಕೆ ಅನುಮತಿ ನೀಡುವಂತೆ ತಮಿಳುನಾಡು ಸರ್ಕಾರ ಕೇಂದ್ರಕ್ಕೆ ಇತ್ತೀಚೆಗೆ ಮನವಿ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿ ಸಂಕಷ್ಟ ಅನುಭವಿಸುತ್ತಿರುವ ಶ್ರೀಲಂಕಾದ ಜನರ ನೆರವಿಗೆ ತಮಿಳುನಾಡು ಸರ್ಕಾರ ಧಾವಿಸಿದೆ. ಅಕ್ಕಿ, ಹಾಲಿನ ಪುಡಿ ಮತ್ತು ಜೀವರಕ್ಷಕ ಔಷಧಿಯನ್ನು ಮೊದಲ ಹಂತದಲ್ಲಿ ದ್ವೀಪ ರಾಷ್ಟ್ರಕ್ಕೆ ಕಳುಹಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಮಂಗಳವಾರ ಹೇಳಿದ್ದಾರೆ.</p>.<p>ತಮಿಳುನಾಡು ಸರ್ಕಾರದ ಈ ಉದ್ದೇಶಕ್ಕೆ ನಾಗರಿಕರೂ ದೇಣಿಗೆ ನೀಡುವ ಮೂಲಕ ನೆರವಾಗಬಹುದು ಎಂದು ಸ್ಟಾಲಿನ್ ಹೇಳಿದ್ದಾರೆ. ಅಗತ್ಯ ವಸ್ತುಗಳನ್ನು ಖರೀದಿಸಿ ಶ್ರೀಲಂಕಾಕ್ಕೆ ತಲುಪಿಸುವುದಾಗಿ ಅವರು ತಿಳಿಸಿದ್ದಾರೆ.</p>.<p>ಕೇಂದ್ರ ಸರ್ಕಾರದ ಅನುಮತಿಯೊಂದಿಗೆ ತಮಿಳುನಾಡು ಶೀಘ್ರದಲ್ಲಿಯೇ ಶ್ರೀಲಂಕಾಕ್ಕೆ 40,000 ಟನ್ ಅಕ್ಕಿ, 500 ಟನ್ ಹಾಲಿನ ಪುಡಿ ಮತ್ತು ಜೀವರಕ್ಷಕ ಔಷಧಿಯನ್ನು ಕಳುಹಿಸಲಿದೆ ಎಂದು ಸ್ಟಾಲಿನ್ ಹೇಳಿದರು.</p>.<p>ಕೊಲಂಬೊದ ಉತ್ತರ ಮತ್ತು ಪೂರ್ವ ಭಾಗಗಳಲ್ಲಿ ವಾಸಿಸುತ್ತಿರುವ ತಮಿಳರಿಗೆ ಆಹಾರ ಧಾನ್ಯ, ತರಕಾರಿ ಮತ್ತು ಔಷಧಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ರವಾನಿಸಲು ರಾಜ್ಯಕ್ಕೆ ಅನುಮತಿ ನೀಡುವಂತೆ ತಮಿಳುನಾಡು ಸರ್ಕಾರ ಕೇಂದ್ರಕ್ಕೆ ಇತ್ತೀಚೆಗೆ ಮನವಿ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>