<p><strong>ನವದೆಹಲಿ:</strong> ಇಲ್ಲಿನ ತುಘಲಕ್ ಪ್ರದೇಶದ ಧೋಭಿ ಘಾಟ್ ಪ್ರದೇಶದಲ್ಲಿ ಎರಡು ವರ್ಷದ ಹೆಣ್ಣು ಮಗುವೊಂದನ್ನು ಬೀದಿ ನಾಯಿಗಳ ಗುಂಪೊಂದು ಕಚ್ಚಿ ಕೊಂದು ಹಾಕಿವೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.</p><p>ಶನಿವಾರ ಸಂಜೆ ಸುಮಾರು 6 ಗಂಟೆ ವೇಳೆಗೆ ಘಟನೆ ನಡೆದಿದ್ದು, ಮನೆಯ ಹೊರಗೆ ಕುಳಿತಿದ್ದ ಮಗುವಿನ ಮೇಲೆ 4–5 ಬೀದಿ ನಾಯಿಗಳು ದಾಳಿ ನಡೆಸಿವೆ. ಆಕೆಯನ್ನು ಕೆಲವು ಮೀಟರ್ ದೂರ ಎಳೆದುಕೊಂಡುಹೋಗಿ ಕಚ್ಚಿ ಕೊಂದು ಹಾಕಿವೆ ಎಂದು ಮಾಹಿತಿ ನೀಡಿದ್ದಾರೆ.</p>.ಸಿಂಧನೂರು: ಬೀದಿ ನಾಯಿ, ಬಿಡಾಡಿ ದನಗಳ ಹಾವಳಿ ನಿಯಂತ್ರಣಕ್ಕೆ ಆಗ್ರಹ.<p>ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಹೇಳಿದ್ದಾರೆ.</p><p>‘ಈ ಘಟನೆ ದುರದೃಷ್ಟಕರ. ಪಶು ವೈದ್ಯರ ತಂಡ ಸ್ಥಳಕ್ಕೆ ಭೇಟಿ ನೀಡಿ, ಅಲ್ಲಿದ್ದ ನಾಯಿಗಳಿಗೆ ಚುಚ್ಚುಮದ್ದು ನೀಡಿರುವುದರ ಹಾಗೂ ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಿರುವುದರ ಬಗ್ಗೆ ಖಚಿತ ಪಡಿಸಿದ್ದಾರೆ. ಪೊಲೀಸ್ ತನಿಖೆಯಿಂದ ಎಲ್ಲವೂ ತಿಳಿಯಲಿದೆ’ ಎಂದು ನವದೆಹಲಿ ಮುನ್ಸಿಪಲ್ ಕೌನ್ಸಿಲ್ನ ಅಧಿಕಾರಿ ಹೇಳಿದ್ದಾರೆ.</p>.ರನ್ವೇ ನಲ್ಲಿ ಬೀದಿ ನಾಯಿ: ವಿಮಾನ ವಾಪಸ್ !. <p>ಕೆಲವು ಸ್ಥಳೀಯರು ಬೀದಿ ನಾಯಿಗಳಿಗೆ ಆಹಾರ ನೀಡುತ್ತಾರೆ. ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಮಗುವಿನ ಕುಟುಂಬಸ್ಥರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಇಲ್ಲಿನ ತುಘಲಕ್ ಪ್ರದೇಶದ ಧೋಭಿ ಘಾಟ್ ಪ್ರದೇಶದಲ್ಲಿ ಎರಡು ವರ್ಷದ ಹೆಣ್ಣು ಮಗುವೊಂದನ್ನು ಬೀದಿ ನಾಯಿಗಳ ಗುಂಪೊಂದು ಕಚ್ಚಿ ಕೊಂದು ಹಾಕಿವೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.</p><p>ಶನಿವಾರ ಸಂಜೆ ಸುಮಾರು 6 ಗಂಟೆ ವೇಳೆಗೆ ಘಟನೆ ನಡೆದಿದ್ದು, ಮನೆಯ ಹೊರಗೆ ಕುಳಿತಿದ್ದ ಮಗುವಿನ ಮೇಲೆ 4–5 ಬೀದಿ ನಾಯಿಗಳು ದಾಳಿ ನಡೆಸಿವೆ. ಆಕೆಯನ್ನು ಕೆಲವು ಮೀಟರ್ ದೂರ ಎಳೆದುಕೊಂಡುಹೋಗಿ ಕಚ್ಚಿ ಕೊಂದು ಹಾಕಿವೆ ಎಂದು ಮಾಹಿತಿ ನೀಡಿದ್ದಾರೆ.</p>.ಸಿಂಧನೂರು: ಬೀದಿ ನಾಯಿ, ಬಿಡಾಡಿ ದನಗಳ ಹಾವಳಿ ನಿಯಂತ್ರಣಕ್ಕೆ ಆಗ್ರಹ.<p>ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಹೇಳಿದ್ದಾರೆ.</p><p>‘ಈ ಘಟನೆ ದುರದೃಷ್ಟಕರ. ಪಶು ವೈದ್ಯರ ತಂಡ ಸ್ಥಳಕ್ಕೆ ಭೇಟಿ ನೀಡಿ, ಅಲ್ಲಿದ್ದ ನಾಯಿಗಳಿಗೆ ಚುಚ್ಚುಮದ್ದು ನೀಡಿರುವುದರ ಹಾಗೂ ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಿರುವುದರ ಬಗ್ಗೆ ಖಚಿತ ಪಡಿಸಿದ್ದಾರೆ. ಪೊಲೀಸ್ ತನಿಖೆಯಿಂದ ಎಲ್ಲವೂ ತಿಳಿಯಲಿದೆ’ ಎಂದು ನವದೆಹಲಿ ಮುನ್ಸಿಪಲ್ ಕೌನ್ಸಿಲ್ನ ಅಧಿಕಾರಿ ಹೇಳಿದ್ದಾರೆ.</p>.ರನ್ವೇ ನಲ್ಲಿ ಬೀದಿ ನಾಯಿ: ವಿಮಾನ ವಾಪಸ್ !. <p>ಕೆಲವು ಸ್ಥಳೀಯರು ಬೀದಿ ನಾಯಿಗಳಿಗೆ ಆಹಾರ ನೀಡುತ್ತಾರೆ. ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಮಗುವಿನ ಕುಟುಂಬಸ್ಥರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>