<p><strong>ಅಚ್ಯುತಪುರ(ಆಂಧ್ರಪ್ರದೇಶ):</strong> ಆಂಧ್ರಪ್ರದೇಶದ ಔಷಧ ತಯಾರಿಕಾ ಕಂಪನಿಯ ಘಟಕವೊಂದರಲ್ಲಿ ಬುಧವಾರ ರಿಯಾಕ್ಟರ್ ಸ್ಫೋಟ ಸಂಭವಿಸಿದ ಪರಿಣಾಮ 17 ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಪೈಕಿ ಏಳು ಜನರ ಸ್ಥಿತಿ ಚಿಂತಾಜನಕವಾಗಿದೆ.</p><p>ರಿಯಾಕ್ಟರ್ ಸ್ಫೋಟದಿಂದ ಭಾರಿ ಪ್ರಮಾಣದಲ್ಲಿ ಬೆಂಕಿ ಆವರಿಸಿತು. ಕನಿಷ್ಠ 12 ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾದವು.<br>ಎನ್ಡಿಆರ್ಎಫ್ನ ಮೂರೂ ತಂಡಗಳು ರಕ್ಷಣಾ ಕಾರ್ಯದಲ್ಲಿ ಭಾಗಿಯಾದವು.</p><p>ಸ್ಫೋಟದಿಂದ ಕಾರ್ಖಾನೆಯ ಕಟ್ಟಡದ ಬಹುತೇಕ ಭಾಗ ಹಾನಿಯಾಗಿದೆ. ಅವಘಡದಿಂದ ಗ್ರಾಮದ ಸುತ್ತಮುತ್ತ ದಟ್ಟ ಹೊಗೆ ಆವರಿಸಿ, ಗ್ರಾಮಸ್ಥರಲ್ಲಿ ಆತಂಕ ಮಡುಗಟ್ಟಿತ್ತು. </p><p>ಮಧ್ಯಾಹ್ನ ಊಟದ ಸಮಯದಲ್ಲಿ ಕಾರ್ಖಾನೆಯಲ್ಲಿ ಅವಘಡ ಸಂಭವಿಸಿದೆ. ಕಾರ್ಖಾನೆಯಲ್ಲಿ 381 ಜನರು ಎರಡು ಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು. ಘಟನೆಯಲ್ಲಿ ಗಾಯಗೊಂಡ ಕಾರ್ಮಿಕರಿಗೆ ಉತ್ತಮ ಆರೋಗ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅನಕಪಲ್ಲಿ ಜಿಲ್ಲಾಧಿಕಾರಿ ವಿಜಯಾ ಕೃಷ್ಣನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಚ್ಯುತಪುರ(ಆಂಧ್ರಪ್ರದೇಶ):</strong> ಆಂಧ್ರಪ್ರದೇಶದ ಔಷಧ ತಯಾರಿಕಾ ಕಂಪನಿಯ ಘಟಕವೊಂದರಲ್ಲಿ ಬುಧವಾರ ರಿಯಾಕ್ಟರ್ ಸ್ಫೋಟ ಸಂಭವಿಸಿದ ಪರಿಣಾಮ 17 ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಪೈಕಿ ಏಳು ಜನರ ಸ್ಥಿತಿ ಚಿಂತಾಜನಕವಾಗಿದೆ.</p><p>ರಿಯಾಕ್ಟರ್ ಸ್ಫೋಟದಿಂದ ಭಾರಿ ಪ್ರಮಾಣದಲ್ಲಿ ಬೆಂಕಿ ಆವರಿಸಿತು. ಕನಿಷ್ಠ 12 ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾದವು.<br>ಎನ್ಡಿಆರ್ಎಫ್ನ ಮೂರೂ ತಂಡಗಳು ರಕ್ಷಣಾ ಕಾರ್ಯದಲ್ಲಿ ಭಾಗಿಯಾದವು.</p><p>ಸ್ಫೋಟದಿಂದ ಕಾರ್ಖಾನೆಯ ಕಟ್ಟಡದ ಬಹುತೇಕ ಭಾಗ ಹಾನಿಯಾಗಿದೆ. ಅವಘಡದಿಂದ ಗ್ರಾಮದ ಸುತ್ತಮುತ್ತ ದಟ್ಟ ಹೊಗೆ ಆವರಿಸಿ, ಗ್ರಾಮಸ್ಥರಲ್ಲಿ ಆತಂಕ ಮಡುಗಟ್ಟಿತ್ತು. </p><p>ಮಧ್ಯಾಹ್ನ ಊಟದ ಸಮಯದಲ್ಲಿ ಕಾರ್ಖಾನೆಯಲ್ಲಿ ಅವಘಡ ಸಂಭವಿಸಿದೆ. ಕಾರ್ಖಾನೆಯಲ್ಲಿ 381 ಜನರು ಎರಡು ಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು. ಘಟನೆಯಲ್ಲಿ ಗಾಯಗೊಂಡ ಕಾರ್ಮಿಕರಿಗೆ ಉತ್ತಮ ಆರೋಗ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅನಕಪಲ್ಲಿ ಜಿಲ್ಲಾಧಿಕಾರಿ ವಿಜಯಾ ಕೃಷ್ಣನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>