<p><strong>ನವದೆಹಲಿ:</strong> ‘ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್ ಪ್ಲಾಜಾಗಳಲ್ಲಿ ಒಪ್ಪಂದದ ಅನುಸಾರ ಮೂಲಸೌಲಭ್ಯ ಕಲ್ಪಿಸುತ್ತಿಲ್ಲ ಹಾಗೂ ವಾಹನಗಳ ಸರಾಗ ಚಲನೆಗೆ ಕ್ರಮ ವಹಿಸುತ್ತಿಲ್ಲ’ ಎಂದು ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ. </p> <p>ಟೋಲ್ ಪ್ಲಾಜಾಗಳ ಕಾರ್ಯನಿರ್ವಹಣೆ ಸುಧಾರಣೆಗೆ ಕೈಗೊಂಡಿರುವ ಕ್ರಮಗಳ ವಿವರ ನೀಡಿ ಎಂದೂ ಅಧಿಕಾರಿಗಳಿಗೆ ಸೂಚಿಸಿದೆ. ಸಭೆಯಲ್ಲಿ ಸಂಸದರು, ‘ಪಕ್ಷಭೇದ ಮರೆತು ಟೋಲ್ಗಳಲ್ಲಿ ಅಧಿಕ ಶುಲ್ಕ ಸಂಗ್ರಹಿಸಲಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p> <p>ಟೋಲ್ ಸಂಗ್ರಹ, ಟೋಲ್ ನಿಯಂತ್ರಣ, ದರ ನಿಗದಿ, ಬಳಕೆದಾರರ ಶುಲ್ಕ ಸಂಗ್ರಹ ಸೇರಿದಂತೆ ಟೋಲ್ಗಳಲ್ಲಿನ ವಿವಿಧ ವಿವಿಧ ಸಮಸ್ಯೆಗಳನ್ನು ಕುರಿತು ಚರ್ಚಿಸಲು ಕಾಂಗ್ರೆಸ್ನ ಮುಖಂಡ, ಸಂಸದ ಕೆ.ಸಿ.ವೇಣುಗೋಪಾಲ್ ನೇತೃತ್ವದ ಸಮಿತಿಯು ಸಭೆ ನಡೆಸಿತು.</p> <p>ಭೂಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ವಿ.ಉಮಾಶಂಕರ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್ಎಚ್ಎಐ) ಅಧ್ಯಕ್ಷ ಸಂತೋಷ್ ಕುಮಾರ್ ಯಾದವ್, ಸಚಿವಾಲಯದ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.</p><p>ಶೌಚಾಲಯ ಸೌಲಭ್ಯ, ಅಪಘಾತ ಸಹಾಯವಾಣಿ ಸೇರಿದಂತೆ ಹಲವು ಮೂಲಸೌಕರ್ಯಗಳನ್ನು ಟೋಲ್ಗಳಲ್ಲಿ ಕಲ್ಪಿಸಿಲ್ಲ. ವಾಹನ ದಟ್ಟಣೆ ನಿವಾರಣೆಗೆ ಪ್ಲಾಜಾಗಳ ನಿರ್ವಾಹಕರು ಏಕೆ ಕ್ರಮವಹಿಸುತ್ತಿಲ್ಲ ಎಂದೂ ಸದಸ್ಯರು ತೀವ್ರ ತರಾಟೆಗೆ ತೆಗೆದುಕೊಂಡರು. </p><p>ಸೌಲಭ್ಯ ಒದಗಿಸದ ನಿರ್ವಾಹಕರ ಮೇಲೆ ಕೈಗೊಂಡ ಶಿಸ್ತುಕ್ರಮಗಳ ವಿವರ ನೀಡುವಂತೆ ಆಗ್ರಹಪಡಿಸಿದರು. ‘ಕೇರಳದ ಪಲಿಯೆಕ್ಕರ ಟೋಲ್ ಪ್ಲಾಜಾದಲ್ಲಿ ₹ 1,506 ಕೋಟಿ ಟೋಲ್ ಸಂಗ್ರಹಿಸಲಾಗಿದೆ’ ಎಂಬ ಮಾಹಿತಿಯನ್ನು ಸಭೆಗೆ ತಿಳಿಸಲಾಯಿತು.</p><p>ಎನ್ಎಚ್ಎಐ ಅಧಿಕಾರಿಗಳು, ‘ದಟ್ಟಣೆ ತಪ್ಪಿಸಲು ವಾರ್ಷಿಕ ಟೋಲ್ ಪಾಸ್ ವಿತರಿಸುವ ಚಿಂತನೆ ಇದೆ. ಸದ್ಯ ದ್ವಾರಕಾ ಎಕ್ಸ್ಪ್ರೆಸ್ ವೇನಲ್ಲಿ ಪೈಲಟ್ ಯೋಜನೆಯಡಿ ನೋಂದಣಿ ಸಂಖ್ಯೆ ಗುರುತಿಸುವ ಸ್ವಯಂಚಾಲಿತ ವ್ಯವಸ್ಥೆಯನ್ನು ಅಳವಡಿಸಲಾಗಿದೆ’ ಎಂದರು.</p><p>ಟೋಲ್ ಸಂಗ್ರಹ ಕುರಿತ ಹಾಲಿ ನಿಯಮಗಳನ್ನು ಮರುಪರಿಶೀಲಿಸಬೇಕು ಎಂದು ಸಮಿತಿಯು ಅಧಿಕಾರಿಗಳಿಗೆ ಸಲಹೆ ಮಾಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್ ಪ್ಲಾಜಾಗಳಲ್ಲಿ ಒಪ್ಪಂದದ ಅನುಸಾರ ಮೂಲಸೌಲಭ್ಯ ಕಲ್ಪಿಸುತ್ತಿಲ್ಲ ಹಾಗೂ ವಾಹನಗಳ ಸರಾಗ ಚಲನೆಗೆ ಕ್ರಮ ವಹಿಸುತ್ತಿಲ್ಲ’ ಎಂದು ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ. </p> <p>ಟೋಲ್ ಪ್ಲಾಜಾಗಳ ಕಾರ್ಯನಿರ್ವಹಣೆ ಸುಧಾರಣೆಗೆ ಕೈಗೊಂಡಿರುವ ಕ್ರಮಗಳ ವಿವರ ನೀಡಿ ಎಂದೂ ಅಧಿಕಾರಿಗಳಿಗೆ ಸೂಚಿಸಿದೆ. ಸಭೆಯಲ್ಲಿ ಸಂಸದರು, ‘ಪಕ್ಷಭೇದ ಮರೆತು ಟೋಲ್ಗಳಲ್ಲಿ ಅಧಿಕ ಶುಲ್ಕ ಸಂಗ್ರಹಿಸಲಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p> <p>ಟೋಲ್ ಸಂಗ್ರಹ, ಟೋಲ್ ನಿಯಂತ್ರಣ, ದರ ನಿಗದಿ, ಬಳಕೆದಾರರ ಶುಲ್ಕ ಸಂಗ್ರಹ ಸೇರಿದಂತೆ ಟೋಲ್ಗಳಲ್ಲಿನ ವಿವಿಧ ವಿವಿಧ ಸಮಸ್ಯೆಗಳನ್ನು ಕುರಿತು ಚರ್ಚಿಸಲು ಕಾಂಗ್ರೆಸ್ನ ಮುಖಂಡ, ಸಂಸದ ಕೆ.ಸಿ.ವೇಣುಗೋಪಾಲ್ ನೇತೃತ್ವದ ಸಮಿತಿಯು ಸಭೆ ನಡೆಸಿತು.</p> <p>ಭೂಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ವಿ.ಉಮಾಶಂಕರ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್ಎಚ್ಎಐ) ಅಧ್ಯಕ್ಷ ಸಂತೋಷ್ ಕುಮಾರ್ ಯಾದವ್, ಸಚಿವಾಲಯದ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.</p><p>ಶೌಚಾಲಯ ಸೌಲಭ್ಯ, ಅಪಘಾತ ಸಹಾಯವಾಣಿ ಸೇರಿದಂತೆ ಹಲವು ಮೂಲಸೌಕರ್ಯಗಳನ್ನು ಟೋಲ್ಗಳಲ್ಲಿ ಕಲ್ಪಿಸಿಲ್ಲ. ವಾಹನ ದಟ್ಟಣೆ ನಿವಾರಣೆಗೆ ಪ್ಲಾಜಾಗಳ ನಿರ್ವಾಹಕರು ಏಕೆ ಕ್ರಮವಹಿಸುತ್ತಿಲ್ಲ ಎಂದೂ ಸದಸ್ಯರು ತೀವ್ರ ತರಾಟೆಗೆ ತೆಗೆದುಕೊಂಡರು. </p><p>ಸೌಲಭ್ಯ ಒದಗಿಸದ ನಿರ್ವಾಹಕರ ಮೇಲೆ ಕೈಗೊಂಡ ಶಿಸ್ತುಕ್ರಮಗಳ ವಿವರ ನೀಡುವಂತೆ ಆಗ್ರಹಪಡಿಸಿದರು. ‘ಕೇರಳದ ಪಲಿಯೆಕ್ಕರ ಟೋಲ್ ಪ್ಲಾಜಾದಲ್ಲಿ ₹ 1,506 ಕೋಟಿ ಟೋಲ್ ಸಂಗ್ರಹಿಸಲಾಗಿದೆ’ ಎಂಬ ಮಾಹಿತಿಯನ್ನು ಸಭೆಗೆ ತಿಳಿಸಲಾಯಿತು.</p><p>ಎನ್ಎಚ್ಎಐ ಅಧಿಕಾರಿಗಳು, ‘ದಟ್ಟಣೆ ತಪ್ಪಿಸಲು ವಾರ್ಷಿಕ ಟೋಲ್ ಪಾಸ್ ವಿತರಿಸುವ ಚಿಂತನೆ ಇದೆ. ಸದ್ಯ ದ್ವಾರಕಾ ಎಕ್ಸ್ಪ್ರೆಸ್ ವೇನಲ್ಲಿ ಪೈಲಟ್ ಯೋಜನೆಯಡಿ ನೋಂದಣಿ ಸಂಖ್ಯೆ ಗುರುತಿಸುವ ಸ್ವಯಂಚಾಲಿತ ವ್ಯವಸ್ಥೆಯನ್ನು ಅಳವಡಿಸಲಾಗಿದೆ’ ಎಂದರು.</p><p>ಟೋಲ್ ಸಂಗ್ರಹ ಕುರಿತ ಹಾಲಿ ನಿಯಮಗಳನ್ನು ಮರುಪರಿಶೀಲಿಸಬೇಕು ಎಂದು ಸಮಿತಿಯು ಅಧಿಕಾರಿಗಳಿಗೆ ಸಲಹೆ ಮಾಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>