<p><strong>ರಾಯಪುರ:</strong> ‘ಕೋವಿಡ್ ಟೂಲ್ಕಿಟ್’ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆಯನ್ನು ದಾಖಲಿಸಲು ಮೇ 24ರಂದು ತಮ್ಮ ನಿವಾಸದಲ್ಲಿಯೇ ಇರುವಂತೆ ಬಿಜೆಪಿ ನಾಯಕ ರಮಣ್ ಸಿಂಗ್ ಅವರಿಗೆರಾಯಪುರ ಪೊಲೀಸರು ನೋಟಿಸ್ ನೀಡಿದ್ದಾರೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ಛತ್ತೀಸಗಡದ ಸಿವಿಲ್ ಲೈನ್ಸ್ ಠಾಣೆಯ ಅಧಿಕಾರಿ ಈ ನೋಟಿಸ್ ಜಾರಿ ಮಾಡಿದ್ದಾರೆ’ ಎಂದು ಅವರು ಹೇಳಿದರು.</p>.<p>‘ರಮಣ್ ಸಿಂಗ್ ಅವರದ್ದು ಎನ್ನಲಾದ ಟ್ವಿಟರ್ ಖಾತೆಯಿಂದ ಎಐಸಿಸಿ ರಿಸರ್ಚ್ ಪ್ರಾಜೆಕ್ಟ್ ಅಥವಾ ‘ಕಾರ್ನರಿಂಗ್ ನರೇಂದ್ರ ಮೋದಿ ಆ್ಯಂಡ್ ಬಿಜೆಪಿ ಆನ್ ಕೋವಿಡ್ ಮ್ಯಾನೇಜ್ಮೆಂಟ್’ ಎಂಬ ಶೀರ್ಷಿಕೆಯುಳ್ಳ ದಾಖಲೆಯೊಂದನ್ನು ಹಂಚಿಕೊಳ್ಳಲಾಗಿದೆ. ಒಂದು ವೇಳೆ ಈ ಖಾತೆ ರಮಣ್ ಸಿಂಗ್ ಅವರದ್ದೇ ಆಗಿದ್ದಲ್ಲಿ, ಅವರಿಗೆ ಈ ದಾಖಲೆಗಳು ಎಲ್ಲಿಂದ ಸಿಕ್ಕಿವೆ ಎಂಬುದರ ಬಗ್ಗೆ ಪೊಲೀಸರು ರಮಣ್ ಸಿಂಗ್ ಅವರನ್ನು ಪ್ರಶ್ನಿಸಲಿದ್ದಾರೆ’ ಎಂದು ಅವರು ಮಾಹಿತಿ ನೀಡಿದರು.</p>.<p>ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ, ರಮಣ್ ಸಿಂಗ್ ಸೇರಿದಂತೆ ಇತರರು ಟೂಲ್ಕಿಟ್ ಹೆಸರಿನಲ್ಲಿ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಹಾಗೂ ಜನರ ನಡುವೆ ದ್ವೇಷವನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪಿಸಿ ಎನ್ಎಸ್ಯುಐದ ಛತ್ತೀಸಗಡ ಘಟಕದ ಅಧ್ಯಕ್ಷ ಆಕಾಶ್ ಶರ್ಮಾ ಈ ಸಂಬಂಧ ದೂರು ನೀಡಿದ್ದರು.</p>.<p>ಈ ದೂರಿನ ಆಧಾರದಲ್ಲಿ ಮೇ 19ರಂದು ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಪುರ:</strong> ‘ಕೋವಿಡ್ ಟೂಲ್ಕಿಟ್’ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆಯನ್ನು ದಾಖಲಿಸಲು ಮೇ 24ರಂದು ತಮ್ಮ ನಿವಾಸದಲ್ಲಿಯೇ ಇರುವಂತೆ ಬಿಜೆಪಿ ನಾಯಕ ರಮಣ್ ಸಿಂಗ್ ಅವರಿಗೆರಾಯಪುರ ಪೊಲೀಸರು ನೋಟಿಸ್ ನೀಡಿದ್ದಾರೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ಛತ್ತೀಸಗಡದ ಸಿವಿಲ್ ಲೈನ್ಸ್ ಠಾಣೆಯ ಅಧಿಕಾರಿ ಈ ನೋಟಿಸ್ ಜಾರಿ ಮಾಡಿದ್ದಾರೆ’ ಎಂದು ಅವರು ಹೇಳಿದರು.</p>.<p>‘ರಮಣ್ ಸಿಂಗ್ ಅವರದ್ದು ಎನ್ನಲಾದ ಟ್ವಿಟರ್ ಖಾತೆಯಿಂದ ಎಐಸಿಸಿ ರಿಸರ್ಚ್ ಪ್ರಾಜೆಕ್ಟ್ ಅಥವಾ ‘ಕಾರ್ನರಿಂಗ್ ನರೇಂದ್ರ ಮೋದಿ ಆ್ಯಂಡ್ ಬಿಜೆಪಿ ಆನ್ ಕೋವಿಡ್ ಮ್ಯಾನೇಜ್ಮೆಂಟ್’ ಎಂಬ ಶೀರ್ಷಿಕೆಯುಳ್ಳ ದಾಖಲೆಯೊಂದನ್ನು ಹಂಚಿಕೊಳ್ಳಲಾಗಿದೆ. ಒಂದು ವೇಳೆ ಈ ಖಾತೆ ರಮಣ್ ಸಿಂಗ್ ಅವರದ್ದೇ ಆಗಿದ್ದಲ್ಲಿ, ಅವರಿಗೆ ಈ ದಾಖಲೆಗಳು ಎಲ್ಲಿಂದ ಸಿಕ್ಕಿವೆ ಎಂಬುದರ ಬಗ್ಗೆ ಪೊಲೀಸರು ರಮಣ್ ಸಿಂಗ್ ಅವರನ್ನು ಪ್ರಶ್ನಿಸಲಿದ್ದಾರೆ’ ಎಂದು ಅವರು ಮಾಹಿತಿ ನೀಡಿದರು.</p>.<p>ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ, ರಮಣ್ ಸಿಂಗ್ ಸೇರಿದಂತೆ ಇತರರು ಟೂಲ್ಕಿಟ್ ಹೆಸರಿನಲ್ಲಿ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಹಾಗೂ ಜನರ ನಡುವೆ ದ್ವೇಷವನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪಿಸಿ ಎನ್ಎಸ್ಯುಐದ ಛತ್ತೀಸಗಡ ಘಟಕದ ಅಧ್ಯಕ್ಷ ಆಕಾಶ್ ಶರ್ಮಾ ಈ ಸಂಬಂಧ ದೂರು ನೀಡಿದ್ದರು.</p>.<p>ಈ ದೂರಿನ ಆಧಾರದಲ್ಲಿ ಮೇ 19ರಂದು ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>