ಬುಧವಾರ, 4 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Top 10 | ಈ ದಿನದ ಪ್ರಮುಖ 10 ಸುದ್ದಿಗಳು, 19 ಸೆಪ್ಟೆಂಬರ್ 2023

Published 19 ಸೆಪ್ಟೆಂಬರ್ 2023, 13:22 IST
Last Updated 19 ಸೆಪ್ಟೆಂಬರ್ 2023, 13:22 IST
ಅಕ್ಷರ ಗಾತ್ರ
Introduction

ಲೋಕಸಭೆ, ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ: ಮಸೂದೆ ಮಂಡಿಸಿದ ಕೇಂದ್ರ

<div class="paragraphs"><p>ನರೇಂದ್ರ ಮೋದಿ</p></div>

ನರೇಂದ್ರ ಮೋದಿ

(ಪಿಟಿಐ ಚಿತ್ರ)

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದರಷ್ಟು ಸ್ಥಾನಗಳನ್ನು ಮೀಸಲಿಡುವ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ.

ಸಂಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ...

1

ಸರ್ವಾನುಮತದಿಂದ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ ಸಂಸದರಿಗೆ ಮೋದಿ ಮನವಿ

<div class="paragraphs"><p>ಮೋದಿ</p></div>

ಮೋದಿ

ಸಂಸತ್ತಿನ ಉಭಯ ಸದನಗಳಲ್ಲೂ ಮಹಿಳಾ ಮೀಸಲಾತಿ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರು ಸಂಸದರನ್ನು ಒತ್ತಾಯಿಸಿದ್ದಾರೆ.

ಸಂಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ...

2

ಹೊಸ ಸಂಸತ್‌ ಭವನ ವಿಶ್ವದಲ್ಲೇ ಶ್ರೇಷ್ಠ ವಿನ್ಯಾಸ ಎಂದು ಭಾಸವಾಯಿತು: ನಟ ಜಗ್ಗೇಶ್‌

Top 10 | ಈ ದಿನದ ಪ್ರಮುಖ 10 ಸುದ್ದಿಗಳು, 19 ಸೆಪ್ಟೆಂಬರ್ 2023

‘ಹೊಸ ರಾಜ್ಯಸಭೆ ಸದನದಲ್ಲಿ ನಾನು ಕೂರುವ ಜಾಗ. ಸಂಸತ್ ಭವನ ವಿಶ್ವದಲ್ಲೇ ಶ್ರೇಷ್ಠ ವಿನ್ಯಾಸ ಎಂದು ಭಾಸವಾಯಿತು..ಇಂಥ ಕೊಡುಗೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಸಲ್ಲಿಸುವೆ’ ಎಂದು ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್‌ ಬಣ್ಣಿಸಿದ್ದಾರೆ.

ಸಂಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ...

3

ಲೋಕಸಭೆ ಚುನಾವಣೆಗೂ ಮುನ್ನ ಮಹಿಳೆಯರನ್ನು ಮೂರ್ಖರನ್ನಾಗಿಸುವ ಮಸೂದೆ: ಅತಿಶಿ

ಅತಿಶಿ
ಅತಿಶಿ

ಇದು ಮಹಿಳಾ ಮೀಸಲಾತಿ ಮಸೂದೆಯಲ್ಲ, 2024ರ ಲೋಕಸಭೆ ಚುನಾವಣೆಗೂ ಮುನ್ನ ಮಹಿಳೆಯರನ್ನು ಮೂರ್ಖರನ್ನಾಗಿಸುವ ಮಸೂದೆ ಎಂದು ಆಮ್ ಆದ್ಮಿ ಪಕ್ಷದ ಹಿರಿಯ ನಾಯಕಿ ಅತಿಶಿ ಟೀಕಿಸಿದ್ದಾರೆ.

ಸಂಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ...

4

ಬಿಜೆಪಿ ಟಿಕೆಟ್ ವಂಚನೆ: ಒಡಿಶಾದಲ್ಲಿ ಸಿಕ್ಕಿಬಿದ್ದ ಹಾಲಶ್ರೀ ಸ್ವಾಮೀಜಿ

<div class="paragraphs"><p>ಹಾಲಶ್ರೀ ಸ್ವಾಮೀಜಿ</p></div>

ಹಾಲಶ್ರೀ ಸ್ವಾಮೀಜಿ

ಬಿಜೆಪಿ ಟಿಕೆಟ್ ವಂಚನೆ ಪ್ರಕರಣದ ಆರೋಪಿಯಾಗಿರುವ ಹೊಸಪೇಟೆಯ ಹಿರೇಹಡಗಲಿಯ ಅಭಿನವ ಹಾಲಶ್ರೀ ಮಠದ ಹಾಲವೀರಪ್ಪ ಸ್ವಾಮೀಜಿ ಒಡಿಶಾದಲ್ಲಿ ಸಿಕ್ಕಿಬಿದ್ದಿದ್ದು, ಅವರನ್ನು ವಶಕ್ಕೆ ಪಡೆದಿರುವ ಸಿಸಿಬಿ ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದಾರೆ.

ಸಂಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ...

5

ಹುಕ್ಕಾ ಬಾರ್ ನಿಷೇಧಕ್ಕೆ ಕಾಯ್ದೆ: ದಿನೇಶ್ ಗುಂಡೂರಾವ್

ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್

'ಹುಕ್ಕಾ ಬಾರ್ ಗಳ ನಿಷೇಧ ಅಗತ್ಯವಿದೆ ಎಂಬ ತೀರ್ಮಾನಕ್ಕೆ ಬಂದಿದ್ದೇವೆ. ಆದರೆ, ಪ್ರತ್ಯೇಕ ಕಾಯ್ದೆಯ ಬಲವಿಲ್ಲದೆ ನಿಷೇಧಿಸಿದರೆ ನ್ಯಾಯಾಲಯದಲ್ಲಿ ಸರ್ಕಾರಕ್ಕೆ ಹಿನ್ನಡೆ ಆಗುತ್ತದೆ. ಆದ್ದರಿಂದ ಹುಕ್ಕಾ ಬಾರ್ ನಿಷೇಧಿಸುವುದಕ್ಕಾಗಿ ಪ್ರತ್ಯೇಕ ಕಾಯ್ದೆ ರೂಪಿಸಿ, ಜಾರಿಗೊಳಿಸಲು ನಿರ್ಧರಿಸಲಾಗಿದೆ' ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಸಂಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ...

6

ಅ.1ರಿಂದ ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಜಾರಿ; ಆಸ್ತಿ ನೋಂದಣಿ ದುಬಾರಿ

ಕೃಷ್ಣ ಬೈರೇಗೌಡ
ಕೃಷ್ಣ ಬೈರೇಗೌಡ

ರಾಜ್ಯದಾದ್ಯಂತ ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರಗಳು ಅಕ್ಟೋಬರ್ 1ರಿಂದ ಜಾರಿಗೆ ಬರಲಿವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. 'ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಪರಿಷ್ಕೃತ ಮಾರ್ಗಸೂಚಿ ದರಗಳ ಕರಡು ಪಟ್ಟಿ ಪ್ರಕಟಿಸಲಾಗಿದೆ. ಆಕ್ಷೇಪಣೆ, ಸಲಹೆಗಳನ್ನು ವಿಲೇವಾರಿ ಮಾಡಿದ ಬಳಿಕ ಅಂತಿಮ ಅಧಿಸೂಚನೆ ಪ್ರಕಟಿಸಲಾಗುವುದು' ಎಂದರು.

ಸಂಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ...

7

ಮಹಿಳಾ ಮೀಸಲಾತಿ ಮಸೂದೆ: ದೇವೇಗೌಡರ ಕನಸು ನನಸಾಗುತ್ತಿದೆ ಎಂದ ಎಚ್‌ಡಿಕೆ

<div class="paragraphs"><p>ಎಚ್‌.ಡಿ. ಕುಮಾರಸ್ವಾಮಿ</p></div>

ಎಚ್‌.ಡಿ. ಕುಮಾರಸ್ವಾಮಿ

ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆ ಲೋಕಸಭೆಯಲ್ಲಿ ಮಂಡನೆ ಆಗುತ್ತಿದೆ. 27 ವರ್ಷಗಳ ನಂತರ ಎಚ್‌.ಡಿ ದೇವೇಗೌಡರ ಕನಸಿಗೆ ಮರುಜೀವ ಬಂದಿರುವುದು ಸಂತಸ ತಂದಿದೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಸಂಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ...

8

ಬೊಮ್ಮಾಯಿ ಇಕ್ಕಟ್ಟಿಗೆ ಸಿಲುಕಿಸುವ ಸಲಹೆ ನೀಡುತ್ತಿದ್ದಾರೆ: ಡಿ.ಕೆ. ಶಿವಕುಮಾರ್

ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ ನೀರು ಹರಿಸದೇ ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸಬೇಕು ಎಂಬ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಅವರ ಸಲಹೆ ಪಾಲಿಸಿದರೆ ಸರ್ಕಾರ ಇಕ್ಕಟ್ಟಿಗೆ ಸಿಲುಕಬೇಕಾಗುತ್ತದೆ ಎಂದು ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಸಂಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ...

9

ತಮಿಳುನಾಡಿಗೆ ನೀರು: ಚಾಮರಾಜನಗರದಲ್ಲಿ ಖಾಲಿ ಕೊಡ ಪ್ರದರ್ಶನ

Top 10 | ಈ ದಿನದ ಪ್ರಮುಖ 10 ಸುದ್ದಿಗಳು, 19 ಸೆಪ್ಟೆಂಬರ್ 2023

ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಚಾಮರಾಜನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಸಂಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ...

10

ಹಳೆಯ ಭವನದ ಆವರಣದಲ್ಲಿ ಗುಂಪು ಫೋಟೊ ಕ್ಲಿಕ್ಕಿಸಿಕೊಂಡ ಸಂಸದರು

<div class="paragraphs"><p>ಹಳೆಯ ಸಂಸತ್‌ ಭವನದ ಆವರಣದಲ್ಲಿ ನಡೆದ ಗುಂಪು ಫೋಟೊ ಸೆಷನ್‌ನಲ್ಲಿ ಪಾಲ್ಗೊಂಡಿದ್ದ ಉಭಯ ಸದನದ ಸದಸ್ಯರು </p></div>

ಹಳೆಯ ಸಂಸತ್‌ ಭವನದ ಆವರಣದಲ್ಲಿ ನಡೆದ ಗುಂಪು ಫೋಟೊ ಸೆಷನ್‌ನಲ್ಲಿ ಪಾಲ್ಗೊಂಡಿದ್ದ ಉಭಯ ಸದನದ ಸದಸ್ಯರು

–ಪಿಟಿಐ ಚಿತ್ರ

ಹೊಸ ಸಂಸತ್‌ ಭವನದಲ್ಲಿ ಎರಡನೇ ದಿನದ ಕಲಾಪ ಶುರುವಾಗುವುದಕ್ಕೆ ಕೆಲವೇ ಗಂಟೆಗಳಿಗೂ ಮೊದಲು ಹಳೆಯ ಸಂಸತ್‌ ಭವನವು ರಂಗುರಂಗಿನ ಉಡುಪು ತೊಟ್ಟಿದ್ದ ಉಭಯ ಸದನಗಳ ಸದಸ್ಯರಿಂದ ತುಂಬಿ ತುಳುಕುತ್ತಿತ್ತು. ವಾಗ್ವಾದ, ಆರೋಪ–ಪ್ರತ್ಯಾರೋಪ ಸೇರಿದಂತೆ ಹಲವು ಘಟನೆಗಳಿಗೆ ಸಾಕ್ಷಿಯಾಗಿದ್ದ ಹಳೆಯ ಭವನಕ್ಕೆ ವಿದಾಯ ಹೇಳುವ ಭಾಗವಾಗಿ ಸಂಸದರು ಗುಂಪು ಫೋಟೊ ಕ್ಲಿಕ್ಕಿಸಿಕೊಂಡರು.

ಸಂಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ...