<p>ರಾಜ್ಯ, ರಾಷ್ಟ್ರೀಯ, ವಿದೇಶ, ಕ್ರೀಡೆಗೆ ಸಂಬಂಧಿಸಿದ ಈ ದಿನದ ಪ್ರಮುಖ ಸುದ್ದಿಗಳು ಇಲ್ಲಿವೆ..</p>.<p>ಸುವೇಂದು ಅಧಿಕಾರಿ ಅವರನ್ನು ಪಶ್ಚಿಮ ಬಂಗಾಳದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.</p>.ಪಶ್ಚಿಮ ಬಂಗಾಳ: ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ.<p>2026ರ ಪುದುಚೇರಿ ವಿಧಾನಸಭಾ ಚುನಾವಣೆಯಲ್ಲಿ ಎಐಎನ್ಆರ್ಸಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಗೆಲುವು ಸಾಧಿಸಿದ್ದು, ಎಐಎನ್ಆರ್ಸಿ ಮುಖ್ಯಸ್ಥ ಎನ್.ರಂಗಸಾಮಿ ಅವರು ಐದನೇ ಬಾರಿಗೆ ಪುದುಚೆರಿಯನ್ನು ಮುನ್ನಡೆಸಲು ಸಜ್ಜಾಗಿದ್ದಾರೆ.</p>.ಪುದುಚೆರಿ: ಎನ್ಡಿಎ ಶಾಸಕಾಂಗ ಪಕ್ಷದ ನಾಯಕನಾಗಿ ಎನ್.ರಂಗಸಾಮಿ ಮರು ಆಯ್ಕೆ.<p>'ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವಾಗ ನುಸುಳುವಿಕೆ, ಗೋವು ಕಳ್ಳಸಾಗಣೆ ಅಸಾಧ್ಯ' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.</p>.ಬಿಜೆಪಿ ಅಧಿಕಾರದಲ್ಲಿರುವಾಗ ಬಂಗಾಳದಲ್ಲಿ ನುಸುಳುವಿಕೆ ಅಸಾಧ್ಯ: ಅಮಿತ್ ಶಾ.<p>’ರಾಜ್ಯದ ಬಿಜೆಪಿಯಲ್ಲಿ ಮೊದಲಿನ ಹಾಗೆ ಯಾವ ಸಿದ್ಧಾಂತಗಳು ಉಳಿದುಕೊಂಡಿಲ್ಲ. ಹಿಂದೂತ್ವದ ಬಗ್ಗೆ ಚಿಂತನೆ ಹೊಂದಿರುವವರೇ ಪಕ್ಷದ ರಾಜ್ಯಾಧ್ಯಕ್ಷರಾಗಬೇಕು’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.</p>.ಹಿಂದೂತ್ವದ ಚಿಂತನೆ ಇರುವವರು ರಾಜ್ಯಾಧ್ಯಕ್ಷರಾಗಬೇಕು: ಯತ್ನಾಳ.<p>ತಮಿಳಗ ವೆಟ್ರಿ ಕಳಗಂ(ಟಿವಿಕೆ) ಜೊತೆ ಮೈತ್ರಿ ಮಾಡಿಕೊಳ್ಳುವ ತಮ್ಮ ಪಕ್ಷದ ನಿರ್ಧಾರವನ್ನು ‘ಭೀಕರ’ ಎಂದು ಕರೆದಿರುವ ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್, ಇದು ಕೀಳುಮಟ್ಟದ ರಾಜಕೀಯ ಎಂದು ಟೀಕಿಸಿದ್ದಾರೆ.</p>.ಕೀಳುಮಟ್ಟದ ರಾಜಕೀಯ: ಟಿವಿಕೆ–ಕಾಂಗ್ರೆಸ್ ಮೈತ್ರಿಗೆ ಮಣಿಶಂಕರ್ ಅಯ್ಯರ್ ವಿರೋಧ.<p>ಒಂದು ವಾರದಲ್ಲಿ ಜೆಬಿಎ ವ್ಯಾಪ್ತಿ ಯ ಐದು ನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜಿ.ಎಸ್. ಸಂಗ್ರೇಶಿ ತಿಳಿಸಿದ್ದಾರೆ.</p><p>ಈ ಕುರಿತು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 14 ರಿಂದ 24 ರ ಒಳಗೆ ಚುನಾವಣೆ ದಿನಾಂಕ ನಿಗದಿ ಮಾಡಲಾಗುವುದು ಎಂದು ವಿವರಿಸಿದರು.</p>.ಕುಂಟು ನೆಪಕ್ಕೆ ಅವಕಾಶವಿಲ್ಲ.. ಒಂದು ವಾರದಲ್ಲಿ ಜಿಬಿಎ ಚುನಾವಣೆ: ಚುನಾವಣಾ ಆಯುಕ್ತ.<p>ರಾಜ್ಯದಲ್ಲಿ ಬದಲಾವಣೆಗೆ ಕಾಲ ಕೂಡಿಬಂದಿದೆ. ಪಕ್ಷವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಪ್ರಯತ್ನ ಶುರುವಾಗಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.</p>.ರಾಜ್ಯದಲ್ಲಿ ಬದಲಾವಣೆಗೆ ಕಾಲ ಕೂಡಿಬಂದಿದೆ: ಬಿ.ಎಸ್. ಯಡಿಯೂರಪ್ಪ.<p>‘ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬದಲಾವಣೆ ಆಗಬಹುದು ಎಂಬ ಚರ್ಚೆ ಜನಸಾಮಾನ್ಯರಲ್ಲಿದೆ. ಆದರೆ ಇಲ್ಲಿ ಪ್ರಾದೇಶಿಕ ಪಕ್ಷಗಳು ಸ್ವತಂತ್ರವಾಗಿ ಅಧಿಕಾರಕ್ಕೆ ಬರುವ ವಾತಾವರಣ ಇಲ್ಲ’ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.</p>.ಪ್ರಾದೇಶಿಕ ಪಕ್ಷಗಳು ಸ್ವತಂತ್ರವಾಗಿ ಅಧಿಕಾರಕ್ಕೆ ಬರುವ ವಾತಾವರಣ ಇಲ್ಲಿಲ್ಲ: HDK.<p>ಹೊರ್ಮುಜ್ ಜಲಸಂಧಿಯ ಬಳಿ ಇರಾನ್ನ ಸರಕು ಸಾಗಣೆ ಹಡಗಿನ ಮೇಲೆ ಗುರುವಾರ ಮಧ್ಯರಾತ್ರಿ ಅಮೆರಿಕ ದಾಳಿ ಮಾಡಿದೆ. ಘಟನೆಯಲ್ಲಿ 10 ನಾವಿಕರು ಗಾಯಗೊಂಡಿದ್ದು, 5 ಜನರು ಕಣ್ಮರೆಯಾಗಿದ್ದಾರೆ ಎಂದು ಇರಾನ್ ಅಧಿಕಾರಿಗಳು ಹೇಳಿದ್ದಾರೆ.</p>.ಹೊರ್ಮುಜ್ ಬಳಿ ಅಮೆರಿಕ ದಾಳಿಯಲ್ಲಿ 10 ನಾವಿಕರಿಗೆ ಗಾಯ, 5 ಜನ ಕಣ್ಮರೆ: ಇರಾನ್ .<p>ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟೂರ್ನಿಯ 51ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಗೆದ್ದಿರುವ ಕೆಕೆಆರ್ ತಂಡವು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.</p>.IPL 2026| ಸ್ಪಿನ್ ದಾಳಿಗೆ ಕುಸಿದ ಡೆಲ್ಲಿ: ಕೆಕೆಆರ್ಗೆ ಸುಲಭ ಜಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯ, ರಾಷ್ಟ್ರೀಯ, ವಿದೇಶ, ಕ್ರೀಡೆಗೆ ಸಂಬಂಧಿಸಿದ ಈ ದಿನದ ಪ್ರಮುಖ ಸುದ್ದಿಗಳು ಇಲ್ಲಿವೆ..</p>.<p>ಸುವೇಂದು ಅಧಿಕಾರಿ ಅವರನ್ನು ಪಶ್ಚಿಮ ಬಂಗಾಳದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.</p>.ಪಶ್ಚಿಮ ಬಂಗಾಳ: ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ.<p>2026ರ ಪುದುಚೇರಿ ವಿಧಾನಸಭಾ ಚುನಾವಣೆಯಲ್ಲಿ ಎಐಎನ್ಆರ್ಸಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಗೆಲುವು ಸಾಧಿಸಿದ್ದು, ಎಐಎನ್ಆರ್ಸಿ ಮುಖ್ಯಸ್ಥ ಎನ್.ರಂಗಸಾಮಿ ಅವರು ಐದನೇ ಬಾರಿಗೆ ಪುದುಚೆರಿಯನ್ನು ಮುನ್ನಡೆಸಲು ಸಜ್ಜಾಗಿದ್ದಾರೆ.</p>.ಪುದುಚೆರಿ: ಎನ್ಡಿಎ ಶಾಸಕಾಂಗ ಪಕ್ಷದ ನಾಯಕನಾಗಿ ಎನ್.ರಂಗಸಾಮಿ ಮರು ಆಯ್ಕೆ.<p>'ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವಾಗ ನುಸುಳುವಿಕೆ, ಗೋವು ಕಳ್ಳಸಾಗಣೆ ಅಸಾಧ್ಯ' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.</p>.ಬಿಜೆಪಿ ಅಧಿಕಾರದಲ್ಲಿರುವಾಗ ಬಂಗಾಳದಲ್ಲಿ ನುಸುಳುವಿಕೆ ಅಸಾಧ್ಯ: ಅಮಿತ್ ಶಾ.<p>’ರಾಜ್ಯದ ಬಿಜೆಪಿಯಲ್ಲಿ ಮೊದಲಿನ ಹಾಗೆ ಯಾವ ಸಿದ್ಧಾಂತಗಳು ಉಳಿದುಕೊಂಡಿಲ್ಲ. ಹಿಂದೂತ್ವದ ಬಗ್ಗೆ ಚಿಂತನೆ ಹೊಂದಿರುವವರೇ ಪಕ್ಷದ ರಾಜ್ಯಾಧ್ಯಕ್ಷರಾಗಬೇಕು’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.</p>.ಹಿಂದೂತ್ವದ ಚಿಂತನೆ ಇರುವವರು ರಾಜ್ಯಾಧ್ಯಕ್ಷರಾಗಬೇಕು: ಯತ್ನಾಳ.<p>ತಮಿಳಗ ವೆಟ್ರಿ ಕಳಗಂ(ಟಿವಿಕೆ) ಜೊತೆ ಮೈತ್ರಿ ಮಾಡಿಕೊಳ್ಳುವ ತಮ್ಮ ಪಕ್ಷದ ನಿರ್ಧಾರವನ್ನು ‘ಭೀಕರ’ ಎಂದು ಕರೆದಿರುವ ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್, ಇದು ಕೀಳುಮಟ್ಟದ ರಾಜಕೀಯ ಎಂದು ಟೀಕಿಸಿದ್ದಾರೆ.</p>.ಕೀಳುಮಟ್ಟದ ರಾಜಕೀಯ: ಟಿವಿಕೆ–ಕಾಂಗ್ರೆಸ್ ಮೈತ್ರಿಗೆ ಮಣಿಶಂಕರ್ ಅಯ್ಯರ್ ವಿರೋಧ.<p>ಒಂದು ವಾರದಲ್ಲಿ ಜೆಬಿಎ ವ್ಯಾಪ್ತಿ ಯ ಐದು ನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜಿ.ಎಸ್. ಸಂಗ್ರೇಶಿ ತಿಳಿಸಿದ್ದಾರೆ.</p><p>ಈ ಕುರಿತು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 14 ರಿಂದ 24 ರ ಒಳಗೆ ಚುನಾವಣೆ ದಿನಾಂಕ ನಿಗದಿ ಮಾಡಲಾಗುವುದು ಎಂದು ವಿವರಿಸಿದರು.</p>.ಕುಂಟು ನೆಪಕ್ಕೆ ಅವಕಾಶವಿಲ್ಲ.. ಒಂದು ವಾರದಲ್ಲಿ ಜಿಬಿಎ ಚುನಾವಣೆ: ಚುನಾವಣಾ ಆಯುಕ್ತ.<p>ರಾಜ್ಯದಲ್ಲಿ ಬದಲಾವಣೆಗೆ ಕಾಲ ಕೂಡಿಬಂದಿದೆ. ಪಕ್ಷವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಪ್ರಯತ್ನ ಶುರುವಾಗಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.</p>.ರಾಜ್ಯದಲ್ಲಿ ಬದಲಾವಣೆಗೆ ಕಾಲ ಕೂಡಿಬಂದಿದೆ: ಬಿ.ಎಸ್. ಯಡಿಯೂರಪ್ಪ.<p>‘ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬದಲಾವಣೆ ಆಗಬಹುದು ಎಂಬ ಚರ್ಚೆ ಜನಸಾಮಾನ್ಯರಲ್ಲಿದೆ. ಆದರೆ ಇಲ್ಲಿ ಪ್ರಾದೇಶಿಕ ಪಕ್ಷಗಳು ಸ್ವತಂತ್ರವಾಗಿ ಅಧಿಕಾರಕ್ಕೆ ಬರುವ ವಾತಾವರಣ ಇಲ್ಲ’ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.</p>.ಪ್ರಾದೇಶಿಕ ಪಕ್ಷಗಳು ಸ್ವತಂತ್ರವಾಗಿ ಅಧಿಕಾರಕ್ಕೆ ಬರುವ ವಾತಾವರಣ ಇಲ್ಲಿಲ್ಲ: HDK.<p>ಹೊರ್ಮುಜ್ ಜಲಸಂಧಿಯ ಬಳಿ ಇರಾನ್ನ ಸರಕು ಸಾಗಣೆ ಹಡಗಿನ ಮೇಲೆ ಗುರುವಾರ ಮಧ್ಯರಾತ್ರಿ ಅಮೆರಿಕ ದಾಳಿ ಮಾಡಿದೆ. ಘಟನೆಯಲ್ಲಿ 10 ನಾವಿಕರು ಗಾಯಗೊಂಡಿದ್ದು, 5 ಜನರು ಕಣ್ಮರೆಯಾಗಿದ್ದಾರೆ ಎಂದು ಇರಾನ್ ಅಧಿಕಾರಿಗಳು ಹೇಳಿದ್ದಾರೆ.</p>.ಹೊರ್ಮುಜ್ ಬಳಿ ಅಮೆರಿಕ ದಾಳಿಯಲ್ಲಿ 10 ನಾವಿಕರಿಗೆ ಗಾಯ, 5 ಜನ ಕಣ್ಮರೆ: ಇರಾನ್ .<p>ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟೂರ್ನಿಯ 51ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಗೆದ್ದಿರುವ ಕೆಕೆಆರ್ ತಂಡವು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.</p>.IPL 2026| ಸ್ಪಿನ್ ದಾಳಿಗೆ ಕುಸಿದ ಡೆಲ್ಲಿ: ಕೆಕೆಆರ್ಗೆ ಸುಲಭ ಜಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>