<p>ರಾಜ್ಯ, ರಾಷ್ಟ್ರೀಯ, ವಿದೇಶ, ಕ್ರೀಡೆ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p>ಅಮೆರಿಕ, ಇಸ್ರೇಲ್ ಸೇರಿ ಮಾಡಿದ ಯುದ್ಧದಿಂದಾಗಿ ಇರಾನ್ನಲ್ಲಿ ಆಡಳಿತ ಬದಲಾವಣೆಯಾಗಿದ್ದು, ಕದನ ವಿರಾಮ ಒಪ್ಪಂದ ಶೀಘ್ರವೇ ಏರ್ಪಡಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಹೇಳಿದ್ದಾರೆ.</p>.ಇರಾನ್ನಲ್ಲಿ ಆಡಳಿತ ಬದಲಾವಣೆ ಗುರಿ ಈಡೇರಿದೆ, ಶೀಘ್ರ ಕದನ ವಿರಾಮ: ಟ್ರಂಪ್.<p>ಕರ್ನಾಟಕಕ್ಕೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಪೂರೈಕೆ ಶೇ 68ರಷ್ಟು ಹೆಚ್ಚಳವಾಗಿದೆ. ಅಗತ್ಯ ಹಾಗೂ ಆದ್ಯತೆಗೆ ತಕ್ಕಂತೆ ಭಾನುವಾರದಿಂದಲೇ (ಮಾ. 29) ಈ ಹೆಚ್ಚುವರಿ ಸಿಲಿಂಡರ್ಗಳು ಲಭ್ಯವಾಗಲಿವೆ. </p><p>ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿ ಈ ವಿಷಯ ತಿಳಿಸಿದರು. ‘ರಾಜ್ಯದಾದ್ಯಂತ ಪ್ರತಿದಿನ ಸುಮಾರು 4 ಲಕ್ಷ ಗೃಹ ಬಳಕೆ ಎಲ್ಪಿಜಿ ಸಿಲಿಂಡರ್ಗಳು ಹಾಗೂ ಸುಮಾರು 18 ಸಾವಿರ ವಾಣಿಜ್ಯ ಬಳಕೆಯ ಸಿಲಿಂಡರ್ಗಳನ್ನು ಪೂರೈಕೆ ಮಾಡಲಾಗುತ್ತಿದೆ’ ಎಂದರು.</p>.ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಪೂರೈಕೆ ಶೇ 68ರಷ್ಟು ಹೆಚ್ಚಳ– ಕೆ.ಎಚ್. ಮುನಿಯಪ್ಪ.<p>ಎಡಪಂಥೀಯ ಉಗ್ರವಾದದಿಂದ ದೇಶವನ್ನು ಸಂಪೂರ್ಣವಾಗಿ ಮುಕ್ತಗೊಳಿಸುವ ಪ್ರಯತ್ನಗಳ ಕುರಿತು ಲೋಕಸಭೆಯಲ್ಲಿ ಸೋಮವಾರ ಚರ್ಚೆ ನಡೆಯಲಿದೆ. ಲೋಕಸಭೆ ಸಚಿವಾಲಯವು ಈ ವಿಷಯವನ್ನು ಚರ್ಚೆಗೆ ಪಟ್ಟಿ ಮಾಡಿದೆ. </p>.ನಕ್ಸಲ್ ಸಮಸ್ಯೆ ಬಗ್ಗೆ ಲೋಕಸಭೆಯಲ್ಲಿ ಚರ್ಚೆ ಇಂದು .<p>ಮೀನು ಸಾಕಾಣಿಕೆಯಲ್ಲಿ ಸಾಧನೆ ಮಾಡಿದ ತಾಲ್ಲೂಕಿನ ಬೋಡಕ್ಯಾನಟ್ಟಿಯ ರೈತ ಶಿವಲಿಂಗಪ್ಪ ಸಾತಪ್ಪ ಹುದ್ದಾರ ಅವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿದ್ದಾರೆ.</p>.PM ‘ಮನ್ ಕಿ ಬಾತ್’: ಬೆಳಗಾವಿ ಬೋಡಕ್ಯಾನಟ್ಟಿ ರೈತನ ಸಾಧನೆ ಪ್ರಸ್ತಾಪಿಸಿದ ಮೋದಿ.<p>‘ಜೈಲಿನ ಒಳಗೆ ಮೊಬೈಲ್, ಟಿ.ವಿ ಹಾಗೂ ನೆಟ್ಫ್ಲಿಕ್ಸ್ ವೀಕ್ಷಣೆಗೆ ಅವಕಾಶ ಸೇರಿದಂತೆ ಐಷಾರಾಮಿ ಸೌಲಭ್ಯ ಕಲ್ಪಿಸಲಾಗಿದೆ’ ಎಂದು ಬಿಂಬಿಸುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬೆನ್ನಲೇ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. </p>.ಡಿಜಿಪಿ ಅಲೋಕ್ ಕುಮಾರ್ ಹೆಸರು ಕೆಡಿಸಲು ಸಂಚು: ಮೂವರು ಜೈಲು ಸಿಬ್ಬಂದಿ ಅಮಾನತು.<p>ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ‘ಭೀಕರ ಯುದ್ಧ’ದಿಂದಾಗಿ ಉದ್ಭವಿಸಿರುವ ಸವಾಲನ್ನು ನಿಭಾಯಿಸಲು ನಾಗರಿಕರು ಕೈಜೋಡಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮನವಿ ಮಾಡಿದರು.</p>.ಪಶ್ಚಿಮ ಏಷ್ಯಾ ಯುದ್ಧ: ಸವಾಲಿನ ಸಮಯ ಎಂದ ಪ್ರಧಾನಿ ನರೇಂದ್ರ ಮೋದಿ .<p>ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕ್ರಮಗಳು ಹಾಗೂ ಇರಾನ್ನಲ್ಲಿ ನಡೆಯುತ್ತಿರುವ ಯುದ್ಧವನ್ನು ವಿರೋಧಿಸಿ ಅಮೆರಿಕ ಹಾಗೂ ಯುರೋಪ್ನಾದ್ಯಂತ ಶನಿವಾರ ‘ನೋ ಕಿಂಗ್ಸ್’ ಹೆಸರಿನಡಿ ಪ್ರತಿಭಟನಾಕಾರರು ರ್ಯಾಲಿಗಳನ್ನು ನಡೆಸಿದ್ದಾರೆ.</p><p>ಟ್ರಂಪ್ ಅವರ ವಲಸೆ ನೀತಿಗಳನ್ನು ವಿರೋಧಿಸಿ ಮಿನ್ನೆಸೋಟದಲ್ಲಿ ಬೃಹತ್ ರ್ಯಾಲಿ ನಡೆದಿದ್ದು, ಸಾವಿರಾರು ಮಂದಿ ಭಾಗಿಯಾಗಿದ್ದರು. ಅಮೆರಿಕದ ಖ್ಯಾತ ಗಾಯಕ ಬ್ರ್ಯೂಸ್ ಸ್ಪ್ರಿಂಗ್ಸ್ಟಿನ್ ಕೂಡ ರ್ಯಾಲಿಯಲ್ಲಿ ಪಾಲ್ಗೊಂಡು, ಪ್ರತಿಭಟನಕಾರರ ಪರವಾಗಿ ಬೆಂಬಲ ವ್ಯಕ್ತಪಡಿಸಿದರು. </p>.No Kings Day: ಟ್ರಂಪ್ ವಿರುದ್ಧ ಯುರೋಪ್, ಅಮೆರಿಕದಾದ್ಯಂತ ಪ್ರತಿಭಟನೆ.<p>ಪಶ್ಚಿಮ ಏಷ್ಯಾ ಸಂಘರ್ಷದಿಂದ ಇಂಧನ ಪೂರೈಕೆಯಲ್ಲಿ ಆಗಿರುವ ವ್ಯತ್ಯಯವನ್ನು ಸರಿಪಡಿಸಿಕೊಳ್ಳಲು ನೆರವಾಗಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸ್ಸನಾಯಕೆ ಭಾನುವಾರ ಧನ್ಯವಾದ ಹೇಳಿದ್ದಾರೆ.</p>.ತೈಲ ನೆರವು ನೀಡಿದ್ದಕ್ಕಾಗಿ ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ಶ್ರೀಲಂಕಾ ಅಧ್ಯಕ್ಷ.<p>ಆರ್ಸಿಬಿ ಮತ್ತು ಎಸ್ಆರ್ಎಚ್ ತಂಡಗಳ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದ ವೇಳೆ 20ಕ್ಕೂ ಹೆಚ್ಚು ಮೊಬೈಲ್ ಕಳ್ಳತನವಾಗಿದೆ. ಈ ಸಂಬಂಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಲಾಗಿದೆ.</p>.RCB vs SRH ಐಪಿಎಲ್ ಕ್ರಿಕೆಟ್ ಪಂದ್ಯದ ವೇಳೆ 20 ಮೊಬೈಲ್ ಕಳವು!.<p>ವಾಂಖೆಡೆ ಕ್ರಿಕೆಟ್ ಮೈದಾನದಲ್ಲಿ ನಡೆದ ಕೋಲ್ಕತ್ತ ನೈಟ್ ರೈಡರ್ಸ್ ತಂಡದ ವಿರುದ್ಧ ಬೃಹತ್ ಗುರಿ ಬೆನ್ನಟ್ಟಿ ಗೆಲ್ಲುವ ಮೂಲಕ ಮುಂಬೈ ಇಂಡಿಯನ್ಸ್ ತಂಡವು 13 ವರ್ಷಗಳ ಬಳಿಕ ಐಪಿಎಲ್ ಆವೃತ್ತಿಯಲ್ಲಿ ತನ್ನ ಕೋಟಾದ ಚೊಚ್ಚಲ ಪಂದ್ಯ ಗೆದ್ದ ದಾಖಲೆ ಮಾಡಿತು.</p>.ರೋಹಿತ್, ರಿಕಲ್ಟನ್ ಬ್ಯಾಟಿಂಗ್ ಅಬ್ಬರ: ದಾಖಲೆಯ ಗೆಲುವು ದಾಖಲಿಸಿದ ಮುಂಬೈ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯ, ರಾಷ್ಟ್ರೀಯ, ವಿದೇಶ, ಕ್ರೀಡೆ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p>ಅಮೆರಿಕ, ಇಸ್ರೇಲ್ ಸೇರಿ ಮಾಡಿದ ಯುದ್ಧದಿಂದಾಗಿ ಇರಾನ್ನಲ್ಲಿ ಆಡಳಿತ ಬದಲಾವಣೆಯಾಗಿದ್ದು, ಕದನ ವಿರಾಮ ಒಪ್ಪಂದ ಶೀಘ್ರವೇ ಏರ್ಪಡಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಹೇಳಿದ್ದಾರೆ.</p>.ಇರಾನ್ನಲ್ಲಿ ಆಡಳಿತ ಬದಲಾವಣೆ ಗುರಿ ಈಡೇರಿದೆ, ಶೀಘ್ರ ಕದನ ವಿರಾಮ: ಟ್ರಂಪ್.<p>ಕರ್ನಾಟಕಕ್ಕೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಪೂರೈಕೆ ಶೇ 68ರಷ್ಟು ಹೆಚ್ಚಳವಾಗಿದೆ. ಅಗತ್ಯ ಹಾಗೂ ಆದ್ಯತೆಗೆ ತಕ್ಕಂತೆ ಭಾನುವಾರದಿಂದಲೇ (ಮಾ. 29) ಈ ಹೆಚ್ಚುವರಿ ಸಿಲಿಂಡರ್ಗಳು ಲಭ್ಯವಾಗಲಿವೆ. </p><p>ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿ ಈ ವಿಷಯ ತಿಳಿಸಿದರು. ‘ರಾಜ್ಯದಾದ್ಯಂತ ಪ್ರತಿದಿನ ಸುಮಾರು 4 ಲಕ್ಷ ಗೃಹ ಬಳಕೆ ಎಲ್ಪಿಜಿ ಸಿಲಿಂಡರ್ಗಳು ಹಾಗೂ ಸುಮಾರು 18 ಸಾವಿರ ವಾಣಿಜ್ಯ ಬಳಕೆಯ ಸಿಲಿಂಡರ್ಗಳನ್ನು ಪೂರೈಕೆ ಮಾಡಲಾಗುತ್ತಿದೆ’ ಎಂದರು.</p>.ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಪೂರೈಕೆ ಶೇ 68ರಷ್ಟು ಹೆಚ್ಚಳ– ಕೆ.ಎಚ್. ಮುನಿಯಪ್ಪ.<p>ಎಡಪಂಥೀಯ ಉಗ್ರವಾದದಿಂದ ದೇಶವನ್ನು ಸಂಪೂರ್ಣವಾಗಿ ಮುಕ್ತಗೊಳಿಸುವ ಪ್ರಯತ್ನಗಳ ಕುರಿತು ಲೋಕಸಭೆಯಲ್ಲಿ ಸೋಮವಾರ ಚರ್ಚೆ ನಡೆಯಲಿದೆ. ಲೋಕಸಭೆ ಸಚಿವಾಲಯವು ಈ ವಿಷಯವನ್ನು ಚರ್ಚೆಗೆ ಪಟ್ಟಿ ಮಾಡಿದೆ. </p>.ನಕ್ಸಲ್ ಸಮಸ್ಯೆ ಬಗ್ಗೆ ಲೋಕಸಭೆಯಲ್ಲಿ ಚರ್ಚೆ ಇಂದು .<p>ಮೀನು ಸಾಕಾಣಿಕೆಯಲ್ಲಿ ಸಾಧನೆ ಮಾಡಿದ ತಾಲ್ಲೂಕಿನ ಬೋಡಕ್ಯಾನಟ್ಟಿಯ ರೈತ ಶಿವಲಿಂಗಪ್ಪ ಸಾತಪ್ಪ ಹುದ್ದಾರ ಅವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿದ್ದಾರೆ.</p>.PM ‘ಮನ್ ಕಿ ಬಾತ್’: ಬೆಳಗಾವಿ ಬೋಡಕ್ಯಾನಟ್ಟಿ ರೈತನ ಸಾಧನೆ ಪ್ರಸ್ತಾಪಿಸಿದ ಮೋದಿ.<p>‘ಜೈಲಿನ ಒಳಗೆ ಮೊಬೈಲ್, ಟಿ.ವಿ ಹಾಗೂ ನೆಟ್ಫ್ಲಿಕ್ಸ್ ವೀಕ್ಷಣೆಗೆ ಅವಕಾಶ ಸೇರಿದಂತೆ ಐಷಾರಾಮಿ ಸೌಲಭ್ಯ ಕಲ್ಪಿಸಲಾಗಿದೆ’ ಎಂದು ಬಿಂಬಿಸುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬೆನ್ನಲೇ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. </p>.ಡಿಜಿಪಿ ಅಲೋಕ್ ಕುಮಾರ್ ಹೆಸರು ಕೆಡಿಸಲು ಸಂಚು: ಮೂವರು ಜೈಲು ಸಿಬ್ಬಂದಿ ಅಮಾನತು.<p>ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ‘ಭೀಕರ ಯುದ್ಧ’ದಿಂದಾಗಿ ಉದ್ಭವಿಸಿರುವ ಸವಾಲನ್ನು ನಿಭಾಯಿಸಲು ನಾಗರಿಕರು ಕೈಜೋಡಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮನವಿ ಮಾಡಿದರು.</p>.ಪಶ್ಚಿಮ ಏಷ್ಯಾ ಯುದ್ಧ: ಸವಾಲಿನ ಸಮಯ ಎಂದ ಪ್ರಧಾನಿ ನರೇಂದ್ರ ಮೋದಿ .<p>ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕ್ರಮಗಳು ಹಾಗೂ ಇರಾನ್ನಲ್ಲಿ ನಡೆಯುತ್ತಿರುವ ಯುದ್ಧವನ್ನು ವಿರೋಧಿಸಿ ಅಮೆರಿಕ ಹಾಗೂ ಯುರೋಪ್ನಾದ್ಯಂತ ಶನಿವಾರ ‘ನೋ ಕಿಂಗ್ಸ್’ ಹೆಸರಿನಡಿ ಪ್ರತಿಭಟನಾಕಾರರು ರ್ಯಾಲಿಗಳನ್ನು ನಡೆಸಿದ್ದಾರೆ.</p><p>ಟ್ರಂಪ್ ಅವರ ವಲಸೆ ನೀತಿಗಳನ್ನು ವಿರೋಧಿಸಿ ಮಿನ್ನೆಸೋಟದಲ್ಲಿ ಬೃಹತ್ ರ್ಯಾಲಿ ನಡೆದಿದ್ದು, ಸಾವಿರಾರು ಮಂದಿ ಭಾಗಿಯಾಗಿದ್ದರು. ಅಮೆರಿಕದ ಖ್ಯಾತ ಗಾಯಕ ಬ್ರ್ಯೂಸ್ ಸ್ಪ್ರಿಂಗ್ಸ್ಟಿನ್ ಕೂಡ ರ್ಯಾಲಿಯಲ್ಲಿ ಪಾಲ್ಗೊಂಡು, ಪ್ರತಿಭಟನಕಾರರ ಪರವಾಗಿ ಬೆಂಬಲ ವ್ಯಕ್ತಪಡಿಸಿದರು. </p>.No Kings Day: ಟ್ರಂಪ್ ವಿರುದ್ಧ ಯುರೋಪ್, ಅಮೆರಿಕದಾದ್ಯಂತ ಪ್ರತಿಭಟನೆ.<p>ಪಶ್ಚಿಮ ಏಷ್ಯಾ ಸಂಘರ್ಷದಿಂದ ಇಂಧನ ಪೂರೈಕೆಯಲ್ಲಿ ಆಗಿರುವ ವ್ಯತ್ಯಯವನ್ನು ಸರಿಪಡಿಸಿಕೊಳ್ಳಲು ನೆರವಾಗಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸ್ಸನಾಯಕೆ ಭಾನುವಾರ ಧನ್ಯವಾದ ಹೇಳಿದ್ದಾರೆ.</p>.ತೈಲ ನೆರವು ನೀಡಿದ್ದಕ್ಕಾಗಿ ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ಶ್ರೀಲಂಕಾ ಅಧ್ಯಕ್ಷ.<p>ಆರ್ಸಿಬಿ ಮತ್ತು ಎಸ್ಆರ್ಎಚ್ ತಂಡಗಳ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದ ವೇಳೆ 20ಕ್ಕೂ ಹೆಚ್ಚು ಮೊಬೈಲ್ ಕಳ್ಳತನವಾಗಿದೆ. ಈ ಸಂಬಂಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಲಾಗಿದೆ.</p>.RCB vs SRH ಐಪಿಎಲ್ ಕ್ರಿಕೆಟ್ ಪಂದ್ಯದ ವೇಳೆ 20 ಮೊಬೈಲ್ ಕಳವು!.<p>ವಾಂಖೆಡೆ ಕ್ರಿಕೆಟ್ ಮೈದಾನದಲ್ಲಿ ನಡೆದ ಕೋಲ್ಕತ್ತ ನೈಟ್ ರೈಡರ್ಸ್ ತಂಡದ ವಿರುದ್ಧ ಬೃಹತ್ ಗುರಿ ಬೆನ್ನಟ್ಟಿ ಗೆಲ್ಲುವ ಮೂಲಕ ಮುಂಬೈ ಇಂಡಿಯನ್ಸ್ ತಂಡವು 13 ವರ್ಷಗಳ ಬಳಿಕ ಐಪಿಎಲ್ ಆವೃತ್ತಿಯಲ್ಲಿ ತನ್ನ ಕೋಟಾದ ಚೊಚ್ಚಲ ಪಂದ್ಯ ಗೆದ್ದ ದಾಖಲೆ ಮಾಡಿತು.</p>.ರೋಹಿತ್, ರಿಕಲ್ಟನ್ ಬ್ಯಾಟಿಂಗ್ ಅಬ್ಬರ: ದಾಖಲೆಯ ಗೆಲುವು ದಾಖಲಿಸಿದ ಮುಂಬೈ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>