<p>ಕೇಂದ್ರ ಬಜೆಟ್, ರಾಜ್ಯ, ರಾಷ್ಟ್ರೀಯ, ವಾಣಿಜ್ಯ, ಕ್ರೀಡೆ ಸೇರಿದಂತೆ ಈ ದಿನದ ಪ್ರಮುಖ ಹತ್ತು ಸುದ್ದಿಗಳು ಇಲ್ಲಿವೆ.</p>.<p>ನಗರಾಭಿವೃದ್ಧಿಯ ವೇಗವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ, ಬೆಂಗಳೂರು, ಸೂರತ್, ವಾರಾಣಸಿ ಸೇರಿ 7 ನಗರ ಆರ್ಥಿಕ ವಲಯಗಳನ್ನು (ಸಿಇಆರ್ಎಸ್) ಸಾರ್ವಜನಿಕ–ಖಾಸಗಿ ಪಾಲುದಾರಿಕೆಯಡಿ (ಪಿಪಿಪಿ) ಅಭಿವೃದ್ಧಿ ಪಡಿಸಲಿದೆ. ಇದಕ್ಕಾಗಿ ಮುಂದಿನ 5 ವರ್ಷಗಳ ಅವಧಿಗೆ ಪ್ರತಿ ನಗರ ಪ್ರದೇಶಕ್ಕೆ ₹5 ಸಾವಿರ ಕೋಟಿಯಂತೆ ಅನುದಾನ ಮೀಸಲಿಡಲಾಗಿದೆ. </p>.Union Budget 2026: ಬೆಂಗಳೂರು ಸೇರಿ 7 ನಗರ ಆರ್ಥಿಕ ವಲಯ ಅಭಿವೃದ್ಧಿ.<p>ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.</p>.SIR ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ.<p>ರಿಯಲ್ ಎಸ್ಟೇಟ್ ಕಂಪನಿ ‘ಕಾನ್ಫಿಡೆಂಟ್ ಗ್ರೂಪ್’ನ ಮುಖ್ಯಸ್ಥ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ಚುರುಕುಗೊಳಿಸಿದೆ. ಕೊಚ್ಚಿಯಿಂದ ಬಂದಿರುವ ಐಆರ್ಎಸ್ ಅಧಿಕಾರಿ ಕೃಷ್ಣಪ್ರಸಾದ್ ನೇತೃತ್ವದ ತಂಡ ಕಾನ್ಫಿಡೆಂಟ್ ಗ್ರೂಪ್ಗೆ ಸಂಬಂಧಿಸಿದ ಕಚೇರಿಗಳ ಮೇಲೆ ದಾಳಿ ನಡೆಸಿತ್ತು. ಈ ತಂಡಕ್ಕೆ ಬೆಂಗಳೂರು ಬಿಟ್ಟು ತೆರಳದಂತೆ ಸೂಚಿಸಿರುವ ಎಸ್ಐಟಿ, ಅಗತ್ಯವಿದ್ದರೆ ಹೇಳಿಕೆ ದಾಖಲಿಸಿಕೊಳ್ಳಲಾಗುವುದು ಎಂದು ತಿಳಿಸಿದೆ.</p>.CJ ರಾಯ್ ಆತ್ಮಹತ್ಯೆ: ಬೆಂಗಳೂರು ಬಿಟ್ಟು ತೆರಳದಂತೆ ಐಟಿ ಅಧಿಕಾರಿಗಳಿಗೆ SIT ಸೂಚನೆ.<p>ಇದು ದೂರದೃಷ್ಟಿ ಇಲ್ಲದ, ನಿರಾಶಾದಾಯಕ ಬಜೆಟ್. ಕೇಂದ್ರ ಸರ್ಕಾರವು ಬಜೆಟ್ನಲ್ಲಿ ರಾಜ್ಯಕ್ಕೆ ಬರೀ ಚೊಂಬು ಕೊಟ್ಟಿದೆ. ಕೇವಲ ಕರ್ನಾಟಕವಲ್ಲ, ಇಡೀ ದಕ್ಷಿಣ ಭಾರತಕ್ಕೇ ಏನೂ ಕೊಟ್ಟಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.</p>.ರಾಜ್ಯಕ್ಕೆ ಬರೀ ಚೊಂಬು ಕೊಟ್ಟಿದೆ: ಕೇಂದ್ರ ಬಜೆಟ್ಗೆ ಸಿಎಂ ಸಿದ್ದರಾಮಯ್ಯ ಟೀಕೆ.<p>ಕರ್ನಾಟಕದಲ್ಲಿ ಹೊಸ ರೈಲು ಮಾರ್ಗಗಳ ನಿರ್ಮಾಣ, ಜೋಡಿ ಹಳಿ ಹಾಗೂ ಗೇಜ್ ಪರಿವರ್ತನೆ ಸೇರಿದಂತೆ ವಿವಿಧ ಮೂಲಸೌಕರ್ಯ ಕಾಮಗಾರಿಗಳಿಗೆ ಕೇಂದ್ರ ಬಜೆಟ್ನಲ್ಲಿ ₹7,748 ಕೋಟಿ ಹಂಚಿಕೆ ಮಾಡಲಾಗಿದೆ.</p>.Union Budget 2026 | ರಾಜ್ಯದ ರೈಲ್ವೆ ಯೋಜನೆಗಳಿಗೆ ₹7,748 ಕೋಟಿ.<p>ಕೇಂದ್ರ ಸರ್ಕಾರದ ಬಜೆಟ್ನಿಂದ ಕರ್ನಾಟಕಕ್ಕೆ ಯಾವುದೇ ಅನುಕೂಲವಾಗಿಲ್ಲ. ಬೆಂಗಳೂರಿಗೆ ಯಾವ ಹೈಸ್ಪೀಡ್ ರೈಲೂ ಬರಲ್ಲ. ರಾಜ್ಯಕ್ಕೆ ಬಜೆಟ್ನಲ್ಲಿ ಯಾವುದೇ ಕೊಡುಗೆ ನೀಡಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p>.Union Budget| ಯಾವ ಹೈಸ್ಪೀಡ್ ರೈಲೂ ಬರಲ್ಲ: ಡಿಸಿಎಂ ಡಿಕೆಶಿ ವ್ಯಂಗ್ಯ.<p>ದೇಶದ ಬಂಡವಾಳ ವೆಚ್ಚವು 2026–27ರ ಸಾಲಿನಲ್ಲಿ ದಾಖಲೆಯ ಗರಿಷ್ಠ ಮಟ್ಟ ತಲುಪಲಿದೆ. ದೇಶದ ಜಿಡಿಪಿಯ ಗಾತ್ರದ ಶೇ 4.4 ರಷ್ಟನ್ನು, ಅಂದರೆ ₹12.22 ಲಕ್ಷ ಕೋಟಿಯನ್ನು ಬಂಡವಾಳ ವೆಚ್ಚಗಳಿಗಾಗಿ ಮೀಸಲು ಇಡಲಾಗಿದೆ. ಈ ಮೂಲಕ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ. </p>.Union Budget 2026 | ಬಂಡವಾಳ ವೆಚ್ಚ: ದಾಖಲೆಯ ₹12.22 ಲಕ್ಷ ಕೋಟಿ ನಿಗದಿ.<p>ಭಾರತವು ಇರಾನ್ ಬದಲಿಗೆ ವೆನೆಜುವೆಲಾದಿಂದ ಕಚ್ಚಾತೈಲವನ್ನು ಖರೀದಿ ಮಾಡಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದರು.</p>.ಭಾರತವು ಇರಾನ್ ಬದಲಿಗೆ ವೆನೆಜುವೆಲಾದಿಂದ ತೈಲ ಖರೀದಿಸಲಿದೆ: ಡೊನಾಲ್ಡ್ ಟ್ರಂಪ್.<p>ದೇವದತ್ತ ಪಡಿಕ್ಕಲ್ ಅವರು ಭಾನುವಾರ ದಾಖಲಿಸಿದ ಶತಕವು ಕರ್ನಾಟಕದ ಕ್ರಿಕೆಟ್ ಪ್ರೇಮಿಗಳ ಮನದಲ್ಲಿ ಬಹುಕಾಲ ಸಿಹಿನೆನಪಾಗಿ ಉಳಿಯಲಿದೆ. ಏಕೆಂದರೆ; ಅವರ ಶತಕದ ಬಲದಿಂದ ಕರ್ನಾಟಕವು ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಎಂಟರ ಘಟ್ಟಕ್ಕೆ ಲಗ್ಗೆ ಇಟ್ಟಿತು. </p>.Ranji Trophy: ಪಡಿಕ್ಕಲ್ ಶತಕ; ಪಂಜಾಬ್ ಮಣಿಸಿ ಎಂಟರ ಘಟ್ಟಕ್ಕೇರಿದ ಕರ್ನಾಟಕ.<p>ಆಲ್ರೌಂಡರ್ ಕನಿಷ್ಕ್ ಚೌಹಾಣ್ ಅವರ ಅಮೋಘ ಆಟದ ಹಾಗೂ ವೇದಾಂತ್ ತ್ರಿವೇದಿ ಅರ್ಧಶತಕದ ಬಲದಿಂದ ಭಾರತ 19 ವರ್ಷದೊಳಗಿನವರ ತಂಡವು ಐಸಿಸಿ ಯೂತ್ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಎದುರು ಜಯಿಸಿತು. ಇದರೊಂದಿಗೆ ಭಾರತದ ಯುವಪಡೆ ಸೆಮಿಫೈನಲ್ಗೆ ಲಗ್ಗೆ ಇಟ್ಟಿತು. </p>.ಯೂತ್ ವಿಶ್ವಕಪ್: ಪಾಕಿಸ್ತಾನವನ್ನು ಸೋಲಿಸಿ ಸೆಮಿಫೈನಲ್ ತಲುಪಿದ ಭಾರತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೇಂದ್ರ ಬಜೆಟ್, ರಾಜ್ಯ, ರಾಷ್ಟ್ರೀಯ, ವಾಣಿಜ್ಯ, ಕ್ರೀಡೆ ಸೇರಿದಂತೆ ಈ ದಿನದ ಪ್ರಮುಖ ಹತ್ತು ಸುದ್ದಿಗಳು ಇಲ್ಲಿವೆ.</p>.<p>ನಗರಾಭಿವೃದ್ಧಿಯ ವೇಗವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ, ಬೆಂಗಳೂರು, ಸೂರತ್, ವಾರಾಣಸಿ ಸೇರಿ 7 ನಗರ ಆರ್ಥಿಕ ವಲಯಗಳನ್ನು (ಸಿಇಆರ್ಎಸ್) ಸಾರ್ವಜನಿಕ–ಖಾಸಗಿ ಪಾಲುದಾರಿಕೆಯಡಿ (ಪಿಪಿಪಿ) ಅಭಿವೃದ್ಧಿ ಪಡಿಸಲಿದೆ. ಇದಕ್ಕಾಗಿ ಮುಂದಿನ 5 ವರ್ಷಗಳ ಅವಧಿಗೆ ಪ್ರತಿ ನಗರ ಪ್ರದೇಶಕ್ಕೆ ₹5 ಸಾವಿರ ಕೋಟಿಯಂತೆ ಅನುದಾನ ಮೀಸಲಿಡಲಾಗಿದೆ. </p>.Union Budget 2026: ಬೆಂಗಳೂರು ಸೇರಿ 7 ನಗರ ಆರ್ಥಿಕ ವಲಯ ಅಭಿವೃದ್ಧಿ.<p>ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.</p>.SIR ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ.<p>ರಿಯಲ್ ಎಸ್ಟೇಟ್ ಕಂಪನಿ ‘ಕಾನ್ಫಿಡೆಂಟ್ ಗ್ರೂಪ್’ನ ಮುಖ್ಯಸ್ಥ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ಚುರುಕುಗೊಳಿಸಿದೆ. ಕೊಚ್ಚಿಯಿಂದ ಬಂದಿರುವ ಐಆರ್ಎಸ್ ಅಧಿಕಾರಿ ಕೃಷ್ಣಪ್ರಸಾದ್ ನೇತೃತ್ವದ ತಂಡ ಕಾನ್ಫಿಡೆಂಟ್ ಗ್ರೂಪ್ಗೆ ಸಂಬಂಧಿಸಿದ ಕಚೇರಿಗಳ ಮೇಲೆ ದಾಳಿ ನಡೆಸಿತ್ತು. ಈ ತಂಡಕ್ಕೆ ಬೆಂಗಳೂರು ಬಿಟ್ಟು ತೆರಳದಂತೆ ಸೂಚಿಸಿರುವ ಎಸ್ಐಟಿ, ಅಗತ್ಯವಿದ್ದರೆ ಹೇಳಿಕೆ ದಾಖಲಿಸಿಕೊಳ್ಳಲಾಗುವುದು ಎಂದು ತಿಳಿಸಿದೆ.</p>.CJ ರಾಯ್ ಆತ್ಮಹತ್ಯೆ: ಬೆಂಗಳೂರು ಬಿಟ್ಟು ತೆರಳದಂತೆ ಐಟಿ ಅಧಿಕಾರಿಗಳಿಗೆ SIT ಸೂಚನೆ.<p>ಇದು ದೂರದೃಷ್ಟಿ ಇಲ್ಲದ, ನಿರಾಶಾದಾಯಕ ಬಜೆಟ್. ಕೇಂದ್ರ ಸರ್ಕಾರವು ಬಜೆಟ್ನಲ್ಲಿ ರಾಜ್ಯಕ್ಕೆ ಬರೀ ಚೊಂಬು ಕೊಟ್ಟಿದೆ. ಕೇವಲ ಕರ್ನಾಟಕವಲ್ಲ, ಇಡೀ ದಕ್ಷಿಣ ಭಾರತಕ್ಕೇ ಏನೂ ಕೊಟ್ಟಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.</p>.ರಾಜ್ಯಕ್ಕೆ ಬರೀ ಚೊಂಬು ಕೊಟ್ಟಿದೆ: ಕೇಂದ್ರ ಬಜೆಟ್ಗೆ ಸಿಎಂ ಸಿದ್ದರಾಮಯ್ಯ ಟೀಕೆ.<p>ಕರ್ನಾಟಕದಲ್ಲಿ ಹೊಸ ರೈಲು ಮಾರ್ಗಗಳ ನಿರ್ಮಾಣ, ಜೋಡಿ ಹಳಿ ಹಾಗೂ ಗೇಜ್ ಪರಿವರ್ತನೆ ಸೇರಿದಂತೆ ವಿವಿಧ ಮೂಲಸೌಕರ್ಯ ಕಾಮಗಾರಿಗಳಿಗೆ ಕೇಂದ್ರ ಬಜೆಟ್ನಲ್ಲಿ ₹7,748 ಕೋಟಿ ಹಂಚಿಕೆ ಮಾಡಲಾಗಿದೆ.</p>.Union Budget 2026 | ರಾಜ್ಯದ ರೈಲ್ವೆ ಯೋಜನೆಗಳಿಗೆ ₹7,748 ಕೋಟಿ.<p>ಕೇಂದ್ರ ಸರ್ಕಾರದ ಬಜೆಟ್ನಿಂದ ಕರ್ನಾಟಕಕ್ಕೆ ಯಾವುದೇ ಅನುಕೂಲವಾಗಿಲ್ಲ. ಬೆಂಗಳೂರಿಗೆ ಯಾವ ಹೈಸ್ಪೀಡ್ ರೈಲೂ ಬರಲ್ಲ. ರಾಜ್ಯಕ್ಕೆ ಬಜೆಟ್ನಲ್ಲಿ ಯಾವುದೇ ಕೊಡುಗೆ ನೀಡಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p>.Union Budget| ಯಾವ ಹೈಸ್ಪೀಡ್ ರೈಲೂ ಬರಲ್ಲ: ಡಿಸಿಎಂ ಡಿಕೆಶಿ ವ್ಯಂಗ್ಯ.<p>ದೇಶದ ಬಂಡವಾಳ ವೆಚ್ಚವು 2026–27ರ ಸಾಲಿನಲ್ಲಿ ದಾಖಲೆಯ ಗರಿಷ್ಠ ಮಟ್ಟ ತಲುಪಲಿದೆ. ದೇಶದ ಜಿಡಿಪಿಯ ಗಾತ್ರದ ಶೇ 4.4 ರಷ್ಟನ್ನು, ಅಂದರೆ ₹12.22 ಲಕ್ಷ ಕೋಟಿಯನ್ನು ಬಂಡವಾಳ ವೆಚ್ಚಗಳಿಗಾಗಿ ಮೀಸಲು ಇಡಲಾಗಿದೆ. ಈ ಮೂಲಕ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ. </p>.Union Budget 2026 | ಬಂಡವಾಳ ವೆಚ್ಚ: ದಾಖಲೆಯ ₹12.22 ಲಕ್ಷ ಕೋಟಿ ನಿಗದಿ.<p>ಭಾರತವು ಇರಾನ್ ಬದಲಿಗೆ ವೆನೆಜುವೆಲಾದಿಂದ ಕಚ್ಚಾತೈಲವನ್ನು ಖರೀದಿ ಮಾಡಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದರು.</p>.ಭಾರತವು ಇರಾನ್ ಬದಲಿಗೆ ವೆನೆಜುವೆಲಾದಿಂದ ತೈಲ ಖರೀದಿಸಲಿದೆ: ಡೊನಾಲ್ಡ್ ಟ್ರಂಪ್.<p>ದೇವದತ್ತ ಪಡಿಕ್ಕಲ್ ಅವರು ಭಾನುವಾರ ದಾಖಲಿಸಿದ ಶತಕವು ಕರ್ನಾಟಕದ ಕ್ರಿಕೆಟ್ ಪ್ರೇಮಿಗಳ ಮನದಲ್ಲಿ ಬಹುಕಾಲ ಸಿಹಿನೆನಪಾಗಿ ಉಳಿಯಲಿದೆ. ಏಕೆಂದರೆ; ಅವರ ಶತಕದ ಬಲದಿಂದ ಕರ್ನಾಟಕವು ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಎಂಟರ ಘಟ್ಟಕ್ಕೆ ಲಗ್ಗೆ ಇಟ್ಟಿತು. </p>.Ranji Trophy: ಪಡಿಕ್ಕಲ್ ಶತಕ; ಪಂಜಾಬ್ ಮಣಿಸಿ ಎಂಟರ ಘಟ್ಟಕ್ಕೇರಿದ ಕರ್ನಾಟಕ.<p>ಆಲ್ರೌಂಡರ್ ಕನಿಷ್ಕ್ ಚೌಹಾಣ್ ಅವರ ಅಮೋಘ ಆಟದ ಹಾಗೂ ವೇದಾಂತ್ ತ್ರಿವೇದಿ ಅರ್ಧಶತಕದ ಬಲದಿಂದ ಭಾರತ 19 ವರ್ಷದೊಳಗಿನವರ ತಂಡವು ಐಸಿಸಿ ಯೂತ್ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಎದುರು ಜಯಿಸಿತು. ಇದರೊಂದಿಗೆ ಭಾರತದ ಯುವಪಡೆ ಸೆಮಿಫೈನಲ್ಗೆ ಲಗ್ಗೆ ಇಟ್ಟಿತು. </p>.ಯೂತ್ ವಿಶ್ವಕಪ್: ಪಾಕಿಸ್ತಾನವನ್ನು ಸೋಲಿಸಿ ಸೆಮಿಫೈನಲ್ ತಲುಪಿದ ಭಾರತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>