<p>ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p><strong>ಮುಂಬೈ/ಪುಣೆ:</strong> ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ನಾಯಕ, ದಿವಂಗತ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ನೂತನ ಉಪ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.</p>.ಸುನೇತ್ರಾ ಪ್ರಮಾಣ ಇಂದು? ಎನ್ಸಿಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಘೋಷಣೆ ಸಾಧ್ಯತೆ.<p><strong>ನವದೆಹಲಿ:</strong> ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಒಂಬತ್ತನೆಯ ಬಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ನಿರಂತರವಾಗಿ, ಅತ್ಯಂತ ಹೆಚ್ಚಿನ ಅವಧಿಗೆ ಕೇಂದ್ರದ ಹಣಕಾಸು ಸಚಿವರ ಹುದ್ದೆಯನ್ನು ನಿರ್ವಹಿಸಿದ ಹೆಗ್ಗಳಿಕೆ ನಿರ್ಮಲಾ ಅವರದ್ದು.</p>.Union Budget-2026: ಸತತ 9ನೆಯ ಬಾರಿ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್.<p><strong>ತಿರುವನಂತಪುರ:</strong> ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನಗಳವು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್ಐಟಿ) ಖ್ಯಾತ ನಟ ಜಯರಾಮ್ ಅವರನ್ನು ವಿಚಾರಣೆಗೆ ಒಳಪಡಿಸಿವೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.</p>.ಶಬರಿಮಲೆ ಚಿನ್ನ ಕಳವು: ಎಸ್ಐಟಿಯಿಂದ ನಟ ಜಯರಾಮ್ ವಿಚಾರಣೆ.<p><strong>ಬೆಂಗಳೂರು:</strong> ‘ಭಾರತದಿಂದ ಯಾವುದೇ ವಿದೇಶಿಯರನ್ನು ಹೊರಹಾಕಲು ಸೂಕ್ತ ಆದೇಶ ಹೊರಡಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇದೆ’ ಎಂದು ಪ್ರಕರಣವೊಂದರಲ್ಲಿ ಉಲ್ಲೇಖಿಸಿರುವ ಕರ್ನಾಟಕ ಹೈಕೋರ್ಟ್, ‘ಭಾರತದಲ್ಲಿರುವ ವಿದೇಶಿಯರು ತಮ್ಮ ವೀಸಾ ಅಥವಾ ವೀಸಾ ನವೀಕರಣಕ್ಕೆ ಒತ್ತಾಯ ಮಾಡುವ ಹಕ್ಕನ್ನು ಹೊಂದಿಲ್ಲ’ ಎಂದು ಸ್ಪಷ್ಟಪಡಿಸಿದೆ. </p>.ವಿದೇಶಿಯರ ಹೊರಹಾಕುವ ಅಧಿಕಾರ ಕೇಂದ್ರ ಸರ್ಕಾರಕ್ಕಿದೆ: ಕರ್ನಾಟಕ ಹೈಕೋರ್ಟ್.<p><strong>ಬೆಂಗಳೂರು</strong>: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಸರ್ಕಾರಿ ಪಾಲಿಟೆಕ್ನಿಕ್ ಸೇರಿದಂತೆ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಖಾಲಿ ಇರುವ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಅನುಮತಿ ನೀಡಿದೆ.</p>.ಉನ್ನತ ಶಿಕ್ಷಣ: 2,000 ಬೋಧಕ ಹುದ್ದೆಗಳ ಭರ್ತಿಗೆ ಸಮ್ಮತಿ.<p><strong>ನ್ಯೂಯಾರ್ಕ್:</strong> ಭಾರತದ ದೇಗುಲಗಳಿಂದ ಅಕ್ರಮವಾಗಿ ತೆರವುಗೊಂಡಿದ್ದ ಮೂರು ಪುರಾತನ ಕಂಚಿನ ವಿಗ್ರಹಗಳನ್ನು ಭಾರತಕ್ಕೆ ಮರಳಿಸಲು ಅಮೆರಿಕ ನಿರ್ಧರಿಸಿದೆ.</p><p>ಮೂರು ವಿಗ್ರಹಗಳನ್ನು ಭಾರತದ ದೇಗುಲಗಳಿಂದ ಅಕ್ರಮವಾಗಿ ತೆರವುಗೊಳಿಸಲಾಗಿತ್ತು ಎಂಬುದು ಸಂಶೋಧನೆಯ ಮೂಲಕ ಖಚಿತವಾಗಿರುವುದರಿಂದ ಅವುಗಳನ್ನು ಭಾರತ ಸರ್ಕಾರಕ್ಕೆ ನೀಡಲಾಗುತ್ತದೆ ಎಂದು ವಾಷಿಂಗ್ಟನ್ನಲ್ಲಿರುವ ನ್ಯಾಷನಲ್ ‘ಮ್ಯೂಸಿಯಂ ಆಫ್ ಏಷ್ಯನ್ ಆರ್ಟ್’ ಬುಧವಾರ ತಿಳಿಸಿದೆ.</p>.ಭಾರತಕ್ಕೆ 3 ಪುರಾತನ ವಿಗ್ರಹಗಳನ್ನು ನೀಡಲು ಮುಂದಾದ ಅಮೆರಿಕ.<p><strong>ತಿರುವನಂತಪುರ:</strong> ವಿಕೆಟ್ಕೀಪರ್–ಬ್ಯಾಟರ್ ಸಂಜು ಸ್ಯಾಮ್ಸನ್ ತಮ್ಮ ತವರಿನ ಅಂಗಳದಲ್ಲಿ ಲಯಕ್ಕೆ ಮರಳುವರೇ? ಆಲ್ರೌಂಡ್ ಅಕ್ಷರ್ ಪಟೇಲ್ ಪೂರ್ಣಪ್ರಮಾಣದಲ್ಲಿ ಫಿಟ್ ಆಗಿ ಕಣಕ್ಕಿಳಿಯುವರೇ?</p>.ಭಾರತ–ನ್ಯೂಜಿಲೆಂಡ್ ಕೊನೆಯ ಟಿ20 ಇಂದು: ತವರಿನಲ್ಲಿ ಲಯಕ್ಕೆ ಮರಳುವರೇ ಸಂಜು.<p><strong>ವಡೋದರ</strong>: ಗುಜರಾತ್ ಜೈಂಟ್ಸ್ ತಂಡವು ಶುಕ್ರವಾರ ಮಹಿಳಾ ಪ್ರೀಮಿಯರ್ ಲೀಗ್ನ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು 11 ರನ್ಗಳಿಂದ ಮಣಿಸಿ ಎಲಿಮಿನೇಟರ್ಗೆ ಅರ್ಹತೆ ಪಡೆಯಿತು.</p>.WPL: ಎಲಿಮಿನೇಟರ್ಗೆ ಗುಜರಾತ್ ಜೈಂಟ್ಸ್ ಲಗ್ಗೆ.<p><strong>ನವದೆಹಲಿ</strong>: ಗಗನಮುಖಿಯಾಗಿದ್ದ ಚಿನ್ನ ಮತ್ತು ಬೆಳ್ಳಿಯ ದರವು ಶುಕ್ರವಾರ ಇಳಿಕೆ ಕಂಡಿದೆ. ಇಲ್ಲಿನ ಚಿನಿವಾರ ಪೇಟೆಯಲ್ಲಿ ನಡೆದ ವಹಿವಾಟಿನಲ್ಲಿ ಚಿನ್ನದ ದರವು 10 ಗ್ರಾಂಗೆ ₹14 ಸಾವಿರದಷ್ಟು, ಬೆಳ್ಳಿಯ ದರವು ಕೆ.ಜಿ.ಗೆ ₹20 ಸಾವಿರದಷ್ಟು ಇಳಿಕೆ ಆಗಿದೆ.</p>.ಲಾಭ ಗಳಿಕೆ ವಹಿವಾಟು: ಚಿನ್ನದ ದರ ₹14 ಸಾವಿರ, ಬೆಳ್ಳಿಯ ದರ ₹20 ಸಾವಿರ ಇಳಿಕೆ .<p><strong>ಬೆಂಗಳೂರು</strong>: ಹೋಂವರ್ಕ್ ಮಾಡಿಲ್ಲವೆಂದು ನಾಲ್ಕನೇ ತರಗತಿಯ ವಿದ್ಯಾರ್ಥಿಗೆ ಶಿಕ್ಷಕಿಯೊಬ್ಬರು ಬಾಸುಂಡೆ ಬರುವಂತೆ ಥಳಿಸಿದ್ದು, ಈ ಸಂಬಂಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.ಹೋಂವರ್ಕ್ ಮಾಡಿಲ್ಲವೆಂದು ವಿದ್ಯಾರ್ಥಿಗೆ ಥಳಿತ: ಶಿಕ್ಷಕಿ ವಿರುದ್ಧ ಎಫ್ಐಆರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p><strong>ಮುಂಬೈ/ಪುಣೆ:</strong> ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ನಾಯಕ, ದಿವಂಗತ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ನೂತನ ಉಪ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.</p>.ಸುನೇತ್ರಾ ಪ್ರಮಾಣ ಇಂದು? ಎನ್ಸಿಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಘೋಷಣೆ ಸಾಧ್ಯತೆ.<p><strong>ನವದೆಹಲಿ:</strong> ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಒಂಬತ್ತನೆಯ ಬಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ನಿರಂತರವಾಗಿ, ಅತ್ಯಂತ ಹೆಚ್ಚಿನ ಅವಧಿಗೆ ಕೇಂದ್ರದ ಹಣಕಾಸು ಸಚಿವರ ಹುದ್ದೆಯನ್ನು ನಿರ್ವಹಿಸಿದ ಹೆಗ್ಗಳಿಕೆ ನಿರ್ಮಲಾ ಅವರದ್ದು.</p>.Union Budget-2026: ಸತತ 9ನೆಯ ಬಾರಿ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್.<p><strong>ತಿರುವನಂತಪುರ:</strong> ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನಗಳವು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್ಐಟಿ) ಖ್ಯಾತ ನಟ ಜಯರಾಮ್ ಅವರನ್ನು ವಿಚಾರಣೆಗೆ ಒಳಪಡಿಸಿವೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.</p>.ಶಬರಿಮಲೆ ಚಿನ್ನ ಕಳವು: ಎಸ್ಐಟಿಯಿಂದ ನಟ ಜಯರಾಮ್ ವಿಚಾರಣೆ.<p><strong>ಬೆಂಗಳೂರು:</strong> ‘ಭಾರತದಿಂದ ಯಾವುದೇ ವಿದೇಶಿಯರನ್ನು ಹೊರಹಾಕಲು ಸೂಕ್ತ ಆದೇಶ ಹೊರಡಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇದೆ’ ಎಂದು ಪ್ರಕರಣವೊಂದರಲ್ಲಿ ಉಲ್ಲೇಖಿಸಿರುವ ಕರ್ನಾಟಕ ಹೈಕೋರ್ಟ್, ‘ಭಾರತದಲ್ಲಿರುವ ವಿದೇಶಿಯರು ತಮ್ಮ ವೀಸಾ ಅಥವಾ ವೀಸಾ ನವೀಕರಣಕ್ಕೆ ಒತ್ತಾಯ ಮಾಡುವ ಹಕ್ಕನ್ನು ಹೊಂದಿಲ್ಲ’ ಎಂದು ಸ್ಪಷ್ಟಪಡಿಸಿದೆ. </p>.ವಿದೇಶಿಯರ ಹೊರಹಾಕುವ ಅಧಿಕಾರ ಕೇಂದ್ರ ಸರ್ಕಾರಕ್ಕಿದೆ: ಕರ್ನಾಟಕ ಹೈಕೋರ್ಟ್.<p><strong>ಬೆಂಗಳೂರು</strong>: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಸರ್ಕಾರಿ ಪಾಲಿಟೆಕ್ನಿಕ್ ಸೇರಿದಂತೆ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಖಾಲಿ ಇರುವ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಅನುಮತಿ ನೀಡಿದೆ.</p>.ಉನ್ನತ ಶಿಕ್ಷಣ: 2,000 ಬೋಧಕ ಹುದ್ದೆಗಳ ಭರ್ತಿಗೆ ಸಮ್ಮತಿ.<p><strong>ನ್ಯೂಯಾರ್ಕ್:</strong> ಭಾರತದ ದೇಗುಲಗಳಿಂದ ಅಕ್ರಮವಾಗಿ ತೆರವುಗೊಂಡಿದ್ದ ಮೂರು ಪುರಾತನ ಕಂಚಿನ ವಿಗ್ರಹಗಳನ್ನು ಭಾರತಕ್ಕೆ ಮರಳಿಸಲು ಅಮೆರಿಕ ನಿರ್ಧರಿಸಿದೆ.</p><p>ಮೂರು ವಿಗ್ರಹಗಳನ್ನು ಭಾರತದ ದೇಗುಲಗಳಿಂದ ಅಕ್ರಮವಾಗಿ ತೆರವುಗೊಳಿಸಲಾಗಿತ್ತು ಎಂಬುದು ಸಂಶೋಧನೆಯ ಮೂಲಕ ಖಚಿತವಾಗಿರುವುದರಿಂದ ಅವುಗಳನ್ನು ಭಾರತ ಸರ್ಕಾರಕ್ಕೆ ನೀಡಲಾಗುತ್ತದೆ ಎಂದು ವಾಷಿಂಗ್ಟನ್ನಲ್ಲಿರುವ ನ್ಯಾಷನಲ್ ‘ಮ್ಯೂಸಿಯಂ ಆಫ್ ಏಷ್ಯನ್ ಆರ್ಟ್’ ಬುಧವಾರ ತಿಳಿಸಿದೆ.</p>.ಭಾರತಕ್ಕೆ 3 ಪುರಾತನ ವಿಗ್ರಹಗಳನ್ನು ನೀಡಲು ಮುಂದಾದ ಅಮೆರಿಕ.<p><strong>ತಿರುವನಂತಪುರ:</strong> ವಿಕೆಟ್ಕೀಪರ್–ಬ್ಯಾಟರ್ ಸಂಜು ಸ್ಯಾಮ್ಸನ್ ತಮ್ಮ ತವರಿನ ಅಂಗಳದಲ್ಲಿ ಲಯಕ್ಕೆ ಮರಳುವರೇ? ಆಲ್ರೌಂಡ್ ಅಕ್ಷರ್ ಪಟೇಲ್ ಪೂರ್ಣಪ್ರಮಾಣದಲ್ಲಿ ಫಿಟ್ ಆಗಿ ಕಣಕ್ಕಿಳಿಯುವರೇ?</p>.ಭಾರತ–ನ್ಯೂಜಿಲೆಂಡ್ ಕೊನೆಯ ಟಿ20 ಇಂದು: ತವರಿನಲ್ಲಿ ಲಯಕ್ಕೆ ಮರಳುವರೇ ಸಂಜು.<p><strong>ವಡೋದರ</strong>: ಗುಜರಾತ್ ಜೈಂಟ್ಸ್ ತಂಡವು ಶುಕ್ರವಾರ ಮಹಿಳಾ ಪ್ರೀಮಿಯರ್ ಲೀಗ್ನ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು 11 ರನ್ಗಳಿಂದ ಮಣಿಸಿ ಎಲಿಮಿನೇಟರ್ಗೆ ಅರ್ಹತೆ ಪಡೆಯಿತು.</p>.WPL: ಎಲಿಮಿನೇಟರ್ಗೆ ಗುಜರಾತ್ ಜೈಂಟ್ಸ್ ಲಗ್ಗೆ.<p><strong>ನವದೆಹಲಿ</strong>: ಗಗನಮುಖಿಯಾಗಿದ್ದ ಚಿನ್ನ ಮತ್ತು ಬೆಳ್ಳಿಯ ದರವು ಶುಕ್ರವಾರ ಇಳಿಕೆ ಕಂಡಿದೆ. ಇಲ್ಲಿನ ಚಿನಿವಾರ ಪೇಟೆಯಲ್ಲಿ ನಡೆದ ವಹಿವಾಟಿನಲ್ಲಿ ಚಿನ್ನದ ದರವು 10 ಗ್ರಾಂಗೆ ₹14 ಸಾವಿರದಷ್ಟು, ಬೆಳ್ಳಿಯ ದರವು ಕೆ.ಜಿ.ಗೆ ₹20 ಸಾವಿರದಷ್ಟು ಇಳಿಕೆ ಆಗಿದೆ.</p>.ಲಾಭ ಗಳಿಕೆ ವಹಿವಾಟು: ಚಿನ್ನದ ದರ ₹14 ಸಾವಿರ, ಬೆಳ್ಳಿಯ ದರ ₹20 ಸಾವಿರ ಇಳಿಕೆ .<p><strong>ಬೆಂಗಳೂರು</strong>: ಹೋಂವರ್ಕ್ ಮಾಡಿಲ್ಲವೆಂದು ನಾಲ್ಕನೇ ತರಗತಿಯ ವಿದ್ಯಾರ್ಥಿಗೆ ಶಿಕ್ಷಕಿಯೊಬ್ಬರು ಬಾಸುಂಡೆ ಬರುವಂತೆ ಥಳಿಸಿದ್ದು, ಈ ಸಂಬಂಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.ಹೋಂವರ್ಕ್ ಮಾಡಿಲ್ಲವೆಂದು ವಿದ್ಯಾರ್ಥಿಗೆ ಥಳಿತ: ಶಿಕ್ಷಕಿ ವಿರುದ್ಧ ಎಫ್ಐಆರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>