<p>ರಾಷ್ಟ್ರೀಯ, ರಾಜ್ಯ, ವಿದೇಶ, ಸಿನಿಮಾ, ಕ್ರೀಡೆಗೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p> ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಸ್ವರೂಪ ಬದಲಿಸುವ ಮೂಲಕ ಕೇಂದ್ರ ಸರ್ಕಾರ ಆದಿವಾಸಿಗಳು, ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದವರು ಸೇರಿದಂತೆ ಅಶಕ್ತರ ಬದುಕುವ ಮತ್ತು ಉದ್ಯೋಗದ ಹಕ್ಕು ಕಿತ್ತುಕೊಂಡಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. </p>.ಮನರೇಗಾ ನಾಶ; ಕೇಂದ್ರದಿಂದ ಬಡವರ ಅನ್ನಕ್ಕೆ ಕುತ್ತು: ಸಿಎಂ ಸಿದ್ದರಾಮಯ್ಯ.<p>‘ಕೆಲವು ಸಚಿವರು ಶಾಸಕರ ಭೇಟಿಗೂ ಸಿಗುತ್ತಿಲ್ಲ. ಕೆಲಸ–ಕಾರ್ಯಗಳಿಗೂ ಸ್ಪಂದಿಸುತ್ತಿಲ್ಲ. ಸಚಿವರ ಈ ನಡೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಗಮನಕ್ಕೆ ತಂದಿದ್ದೇವೆ. ನಾಯಕತ್ವ ಬದಲಾವಣೆ ಜೊತೆಗೆ ಸ್ಪಂದಿಸದ ಸಚಿವರ ಬದಲಾವಣೆಯ ಅಗತ್ಯವಿದೆ’ ಎಂದು ಡಿಸಿಎಂ ಆಪ್ತ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಒತ್ತಾಯಿಸಿದರು.</p>.ಡಿಕೆಶಿ ಏನೇ ಹೇಳಿದರೂ ತಲೆ ಮೇಲಿಟ್ಟುಕೊಂಡು ಸ್ವೀಕರಿಸುತ್ತೇನೆ: ಇಕ್ಬಾಲ್ ಹುಸೇನ್.<p>‘ದಲಿತರು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಿದವರೇ ಸಿದ್ದರಾಮಯ್ಯ. ಕಾಂಗ್ರೆಸ್ನಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಹಾಗೂ ಪರಮೇಶ್ವರ ಅವರು ಯಾವತ್ತೋ ಮುಖ್ಯಮಂತ್ರಿ ಆಗಬೇಕಿತ್ತು. ಅವರನ್ನು ಇಲ್ಲಿಂದ ಖಾಲಿ ಮಾಡಿಸಿ ಒಳಗಡೆ ಹುತ್ತಿನಲ್ಲಿ ಸೇರಿಕೊಂಡಿದ್ದಾರೆ‘ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.</p>.ದಲಿತರು ಸಿಎಂ ಆಗುವುದನ್ನು ತಪ್ಪಿಸಿದವರೇ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ.<p>ತಮಿಳುನಾಡಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ನಡೆಸಿದ ಬಳಿಕ 70 ಲಕ್ಷಕ್ಕೂ ಅಧಿಕ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ. ಚುನಾವಣಾ ಹೊಸ್ತಿಲಲ್ಲಿರುವ ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಎಸ್ಐಆರ್ ಈಗಾಗಲೇ ವಿವಾದಕ್ಕೆ ಕಾರಣವಾಗಿದೆ.</p>.Tamil Nadu SIR: ತಮಿಳುನಾಡಿನಲ್ಲಿ 70 ಲಕ್ಷಕ್ಕೂ ಅಧಿಕ ಮತದಾರರಿಗೆ ಕೊಕ್.<p>ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸುವ ವಿಚಾರ ಚರ್ಚೆಯಲ್ಲಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.</p><p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಈ ಬಗ್ಗೆ ಪೋಷಕರಿಂದಲೂ ಒತ್ತಡವಿದೆ. ಅನೇಕ ದೇಶಗಳಲ್ಲಿ ಈಗಾಗಲೇ ಈ ಕ್ರಮ ಕೈಗೊಳ್ಳಲಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲೂ ಈ ವಿಷಯ ಚರ್ಚೆಯಾಗುತ್ತಿದೆ’ ಎಂದರು.</p>.ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸುವ ವಿಚಾರ ಚರ್ಚೆಯಲ್ಲಿದೆ: ಡಿ.ಕೆ. ಶಿವಕುಮಾರ್.<p>ರಾಷ್ಟ್ರ ರಾಜಧಾನಿಯಲ್ಲಿ ನಡೆದ ಎ.ಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ ಘಟನೆಗೆ ಸಂಬಂಧಿಸಿದಂತೆ ಈವರೆಗೆ ಐದು ಮಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತನನ್ನು (ಐವೈಸಿ) ಇಂದು ಗ್ವಾಲಿಯರ್ನಲ್ಲಿ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.</p>.ಎ.ಐ ಶೃಂಗದಲ್ಲಿ ಶರ್ಟ್ ಬಿಚ್ಚಿ ಪ್ರತಿಭಟನೆ: ಬಂಧಿತರ ಸಂಖ್ಯೆ 5ಕ್ಕೆ ಏರಿಕೆ.<p>ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ಮತ್ತು ಬಂಗಾಳದ ರಾಜಕೀಯ ‘ಚಾಣಕ್ಯ’ ಎಂದೇ ಗುರುತಿಸಿಕೊಂಡಿದ್ದ ಮಾಜಿ ಕೇಂದ್ರ ಸಚಿವ ಮುಕುಲ್ ರಾಯ್ ಅವರು ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.</p>.ಪಶ್ಚಿಮ ಬಂಗಾಳದ ರಾಜಕೀಯ ‘ಚಾಣಕ್ಯ’, ಮಾಜಿ ಕೇಂದ್ರ ಸಚಿವ ಮುಕುಲ್ ರಾಯ್ ನಿಧನ.<p>ಇರಾನ್ ಹಾಗೂ ಅಮೆರಿಕ ನಡುವೆ ಉದ್ವಿಗ್ನ ಸ್ಥಿತಿ ಹೆಚ್ಚುತ್ತಿರುವಂತೆಯೇ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯರು ಆದಷ್ಟು ಬೇಗನೇ ದೇಶ ಬಿಟ್ಟು ಹೋಗುವಂತೆ ಇರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಇಂದು (ಸೋಮವಾರ) ಸೂಚಿಸಿದೆ.</p>.Iran-US Tension: ಇರಾನ್ ಬಿಟ್ಟು ಹೋಗುವಂತೆ ಭಾರತೀಯರಿಗೆ ಸೂಚನೆ.<p>ಉತ್ತರ ಕೊರಿಯಾದ ಸರ್ವೋಚ್ಚ ನಾಯಕ ಕಿಮ್ ಜಾಂಗ್ ಉನ್ (42) ಅವರು ದೇಶದ ಆಡಳಿತಾರೂಢ ಪಕ್ಷವಾಗಿರುವ ವರ್ಕರ್ಸ್ ಪಾರ್ಟಿಯ ಅತ್ಯುನ್ನತ ಹುದ್ದೆಗೆ ಮರು ಆಯ್ಕೆಯಾಗಿದ್ದಾರೆ.</p><p>ದೇಶದ ಅಣ್ವಸ್ತ್ರ ಶಕ್ತಿಯನ್ನು ಬಲಪಡಿಸುವ ಉದ್ದೇಶದಿಂದ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಮತ್ತೆ ಕಿಮ್ ಅವರನ್ನೇ ಸದಸ್ಯರು ಆಯ್ಕೆ ಮಾಡಿದ್ದಾರೆ ಎಂದು ಇಲ್ಲಿನ ಮಾಧ್ಯಮಗಳು ವರದಿ ಮಾಡಿವೆ.</p>.ಉತ್ತರ ಕೊರಿಯಾದ 'ವರ್ಕರ್ಸ್ ಪಾರ್ಟಿ' ಮುಖ್ಯಸ್ಥರಾಗಿ ಕಿಮ್ ಜಾಂಗ್ ಉನ್ ಮರು ಆಯ್ಕೆ.<p>'ಎಲ್ ಮೆಂಚೊ' ಎಂದೇ ಕುಖ್ಯಾತನಾಗಿದ್ದ, ಅಕ್ರಮ ಮಾದಕ ವಸ್ತು ಸಾಗಣೆದಾರ ನೆಮಿಸಿಯೊ ಒಸೆಗುರಾ, ಸೇನಾ ಕಾರ್ಯಾಚರಣೆ ವೇಳೆ ಹತ್ಯೆಯಾಗಿದ್ದಾನೆ ಎಂದು ಮೆಕ್ಸಿಕೊದ ಅಧಿಕಾರಿಗಳು ತಿಳಿಸಿದ್ದಾರೆ.</p>.ಮಾದಕವಸ್ತು ದೊರೆ 'ಎಲ್ ಮೆಂಚೊ' ಹತ್ಯೆ: ಮೆಕ್ಸಿಕೊದಲ್ಲಿ ಭುಗಿಲೆದ್ದ ಹಿಂಸಾಚಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಷ್ಟ್ರೀಯ, ರಾಜ್ಯ, ವಿದೇಶ, ಸಿನಿಮಾ, ಕ್ರೀಡೆಗೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p> ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಸ್ವರೂಪ ಬದಲಿಸುವ ಮೂಲಕ ಕೇಂದ್ರ ಸರ್ಕಾರ ಆದಿವಾಸಿಗಳು, ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದವರು ಸೇರಿದಂತೆ ಅಶಕ್ತರ ಬದುಕುವ ಮತ್ತು ಉದ್ಯೋಗದ ಹಕ್ಕು ಕಿತ್ತುಕೊಂಡಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. </p>.ಮನರೇಗಾ ನಾಶ; ಕೇಂದ್ರದಿಂದ ಬಡವರ ಅನ್ನಕ್ಕೆ ಕುತ್ತು: ಸಿಎಂ ಸಿದ್ದರಾಮಯ್ಯ.<p>‘ಕೆಲವು ಸಚಿವರು ಶಾಸಕರ ಭೇಟಿಗೂ ಸಿಗುತ್ತಿಲ್ಲ. ಕೆಲಸ–ಕಾರ್ಯಗಳಿಗೂ ಸ್ಪಂದಿಸುತ್ತಿಲ್ಲ. ಸಚಿವರ ಈ ನಡೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಗಮನಕ್ಕೆ ತಂದಿದ್ದೇವೆ. ನಾಯಕತ್ವ ಬದಲಾವಣೆ ಜೊತೆಗೆ ಸ್ಪಂದಿಸದ ಸಚಿವರ ಬದಲಾವಣೆಯ ಅಗತ್ಯವಿದೆ’ ಎಂದು ಡಿಸಿಎಂ ಆಪ್ತ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಒತ್ತಾಯಿಸಿದರು.</p>.ಡಿಕೆಶಿ ಏನೇ ಹೇಳಿದರೂ ತಲೆ ಮೇಲಿಟ್ಟುಕೊಂಡು ಸ್ವೀಕರಿಸುತ್ತೇನೆ: ಇಕ್ಬಾಲ್ ಹುಸೇನ್.<p>‘ದಲಿತರು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಿದವರೇ ಸಿದ್ದರಾಮಯ್ಯ. ಕಾಂಗ್ರೆಸ್ನಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಹಾಗೂ ಪರಮೇಶ್ವರ ಅವರು ಯಾವತ್ತೋ ಮುಖ್ಯಮಂತ್ರಿ ಆಗಬೇಕಿತ್ತು. ಅವರನ್ನು ಇಲ್ಲಿಂದ ಖಾಲಿ ಮಾಡಿಸಿ ಒಳಗಡೆ ಹುತ್ತಿನಲ್ಲಿ ಸೇರಿಕೊಂಡಿದ್ದಾರೆ‘ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.</p>.ದಲಿತರು ಸಿಎಂ ಆಗುವುದನ್ನು ತಪ್ಪಿಸಿದವರೇ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ.<p>ತಮಿಳುನಾಡಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ನಡೆಸಿದ ಬಳಿಕ 70 ಲಕ್ಷಕ್ಕೂ ಅಧಿಕ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ. ಚುನಾವಣಾ ಹೊಸ್ತಿಲಲ್ಲಿರುವ ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಎಸ್ಐಆರ್ ಈಗಾಗಲೇ ವಿವಾದಕ್ಕೆ ಕಾರಣವಾಗಿದೆ.</p>.Tamil Nadu SIR: ತಮಿಳುನಾಡಿನಲ್ಲಿ 70 ಲಕ್ಷಕ್ಕೂ ಅಧಿಕ ಮತದಾರರಿಗೆ ಕೊಕ್.<p>ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸುವ ವಿಚಾರ ಚರ್ಚೆಯಲ್ಲಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.</p><p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಈ ಬಗ್ಗೆ ಪೋಷಕರಿಂದಲೂ ಒತ್ತಡವಿದೆ. ಅನೇಕ ದೇಶಗಳಲ್ಲಿ ಈಗಾಗಲೇ ಈ ಕ್ರಮ ಕೈಗೊಳ್ಳಲಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲೂ ಈ ವಿಷಯ ಚರ್ಚೆಯಾಗುತ್ತಿದೆ’ ಎಂದರು.</p>.ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸುವ ವಿಚಾರ ಚರ್ಚೆಯಲ್ಲಿದೆ: ಡಿ.ಕೆ. ಶಿವಕುಮಾರ್.<p>ರಾಷ್ಟ್ರ ರಾಜಧಾನಿಯಲ್ಲಿ ನಡೆದ ಎ.ಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ ಘಟನೆಗೆ ಸಂಬಂಧಿಸಿದಂತೆ ಈವರೆಗೆ ಐದು ಮಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತನನ್ನು (ಐವೈಸಿ) ಇಂದು ಗ್ವಾಲಿಯರ್ನಲ್ಲಿ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.</p>.ಎ.ಐ ಶೃಂಗದಲ್ಲಿ ಶರ್ಟ್ ಬಿಚ್ಚಿ ಪ್ರತಿಭಟನೆ: ಬಂಧಿತರ ಸಂಖ್ಯೆ 5ಕ್ಕೆ ಏರಿಕೆ.<p>ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ಮತ್ತು ಬಂಗಾಳದ ರಾಜಕೀಯ ‘ಚಾಣಕ್ಯ’ ಎಂದೇ ಗುರುತಿಸಿಕೊಂಡಿದ್ದ ಮಾಜಿ ಕೇಂದ್ರ ಸಚಿವ ಮುಕುಲ್ ರಾಯ್ ಅವರು ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.</p>.ಪಶ್ಚಿಮ ಬಂಗಾಳದ ರಾಜಕೀಯ ‘ಚಾಣಕ್ಯ’, ಮಾಜಿ ಕೇಂದ್ರ ಸಚಿವ ಮುಕುಲ್ ರಾಯ್ ನಿಧನ.<p>ಇರಾನ್ ಹಾಗೂ ಅಮೆರಿಕ ನಡುವೆ ಉದ್ವಿಗ್ನ ಸ್ಥಿತಿ ಹೆಚ್ಚುತ್ತಿರುವಂತೆಯೇ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯರು ಆದಷ್ಟು ಬೇಗನೇ ದೇಶ ಬಿಟ್ಟು ಹೋಗುವಂತೆ ಇರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಇಂದು (ಸೋಮವಾರ) ಸೂಚಿಸಿದೆ.</p>.Iran-US Tension: ಇರಾನ್ ಬಿಟ್ಟು ಹೋಗುವಂತೆ ಭಾರತೀಯರಿಗೆ ಸೂಚನೆ.<p>ಉತ್ತರ ಕೊರಿಯಾದ ಸರ್ವೋಚ್ಚ ನಾಯಕ ಕಿಮ್ ಜಾಂಗ್ ಉನ್ (42) ಅವರು ದೇಶದ ಆಡಳಿತಾರೂಢ ಪಕ್ಷವಾಗಿರುವ ವರ್ಕರ್ಸ್ ಪಾರ್ಟಿಯ ಅತ್ಯುನ್ನತ ಹುದ್ದೆಗೆ ಮರು ಆಯ್ಕೆಯಾಗಿದ್ದಾರೆ.</p><p>ದೇಶದ ಅಣ್ವಸ್ತ್ರ ಶಕ್ತಿಯನ್ನು ಬಲಪಡಿಸುವ ಉದ್ದೇಶದಿಂದ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಮತ್ತೆ ಕಿಮ್ ಅವರನ್ನೇ ಸದಸ್ಯರು ಆಯ್ಕೆ ಮಾಡಿದ್ದಾರೆ ಎಂದು ಇಲ್ಲಿನ ಮಾಧ್ಯಮಗಳು ವರದಿ ಮಾಡಿವೆ.</p>.ಉತ್ತರ ಕೊರಿಯಾದ 'ವರ್ಕರ್ಸ್ ಪಾರ್ಟಿ' ಮುಖ್ಯಸ್ಥರಾಗಿ ಕಿಮ್ ಜಾಂಗ್ ಉನ್ ಮರು ಆಯ್ಕೆ.<p>'ಎಲ್ ಮೆಂಚೊ' ಎಂದೇ ಕುಖ್ಯಾತನಾಗಿದ್ದ, ಅಕ್ರಮ ಮಾದಕ ವಸ್ತು ಸಾಗಣೆದಾರ ನೆಮಿಸಿಯೊ ಒಸೆಗುರಾ, ಸೇನಾ ಕಾರ್ಯಾಚರಣೆ ವೇಳೆ ಹತ್ಯೆಯಾಗಿದ್ದಾನೆ ಎಂದು ಮೆಕ್ಸಿಕೊದ ಅಧಿಕಾರಿಗಳು ತಿಳಿಸಿದ್ದಾರೆ.</p>.ಮಾದಕವಸ್ತು ದೊರೆ 'ಎಲ್ ಮೆಂಚೊ' ಹತ್ಯೆ: ಮೆಕ್ಸಿಕೊದಲ್ಲಿ ಭುಗಿಲೆದ್ದ ಹಿಂಸಾಚಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>