<p>ರಾಜ್ಯ, ರಾಷ್ಟ್ರೀಯ, ವಿದೇಶ ವಿದ್ಯಮಾನಗಳಿಗೆ ಸಂಬಂಧಿಸಿದ ಈ ದಿನದ ಟಾಪ್ 10 ಸುದ್ದಿಗಳು...</p>.<p>ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (ಸಿಬಿಎಸ್ಇ) 12ನೇ ತರಗತಿ ಫಲಿತಾಂಶವನ್ನು ಇಂದು (ಬುಧವಾರ) ಪ್ರಕಟಿಸಿದ್ದು, ಬಾಲಕಿಯರು ಉತ್ತಮ ಸಾಧನೆ ದಾಖಲಿಸಿದ್ದಾರೆ. ಪರೀಕ್ಷೆಗೆ ಹಾಜರಾಗಿದ್ದವರ ಪೈಕಿ ಶೇ 85ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಮಂಡಳಿಯ ಪರೀಕ್ಷಾ ನಿಯಂತ್ರಕರಾದ ಸಂಯಮ್ ಭಾರದ್ವಾಜ್ ಹೇಳಿದ್ದಾರೆ. </p><p>ಪರೀಕ್ಷೆಯಲ್ಲಿ ಶೇ 88 ಕ್ಕೂ ಹೆಚ್ಚು ಹುಡುಗಿಯರು, ಶೇ82 ಕ್ಕೂ ಹೆಚ್ಚು ಹುಡುಗರು ತೇರ್ಗಡೆಯಾಗಿದ್ದಾರೆ ಎಂದೂ ತಿಳಿಸಿದ್ದಾರೆ.</p>.ಸಿಬಿಎಸ್ಇ 12ನೇ ತರಗತಿ ಫಲಿತಾಂಶ: ಬಾಲಕಿಯರೇ ಮೇಲುಗೈ .<p>ಕೆಲ ದಿನಗಳ ಹಿಂದೆ ಇಂಧನ ಮಿತ ಬಳಕೆ, ಚಿನ್ನ ಖರೀದಿ ನಿಲ್ಲಿಸುವಂತೆ ದೇಶದ ಜನರಿಗೆ ಮನವಿ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಇಂದು ತಮ್ಮ ಬೆಂಗಾವಲು ವಾಹನಗಳನ್ನು ಕಡಿತಗೊಳಿಸುವ ಮೂಲಕ ನಿರ್ಧಾರ ಮಾಡಿದ್ದಾರೆ. ಇದೀಗ ಪ್ರಧಾನಿ ಹಾದಿಯಲ್ಲೇ ಸಾಗಿರುವ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಇತರೆ ನಾಯಕರು ಇಂಧನ ಮಿತ ವ್ಯಯಕ್ಕೆ ಮುಂದಾಗಿದ್ದಾರೆ.</p><p>ಇತ್ತೀಚೆಗೆ ಗುಜರಾತ್ ಮತ್ತು ಅಸ್ಸಾಂಗೆ ಭೇಟಿ ನೀಡಿದ್ದ ವೇಳೆ ಮೋದಿ ಅವರು ತಮ್ಮ ಬೆಂಗಾವಲು ವಾಹನಗಳಲ್ಲಿ ಕಡಿತ ಮಾಡುತ್ತಿದ್ದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ತಮ್ಮ ಮತ್ತು ಸಚಿವರ ಬೆಂಗಾವಲಾಗಿ ಬಳಸುತ್ತಿರುವ ಶೇ 50ರಷ್ಟು ವಾಹನಗಳ ಕಡಿತಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.</p>.ಬೆಂಗಾವಲು ವಾಹನಗಳನ್ನು ತಗ್ಗಿಸಿದ ಮೋದಿ: ಬಿಜೆಪಿ ಸಿಎಂಗಳಿಂದಲೂ ಪಾಲನೆಗೆ ನಿರ್ಧಾರ.<p>ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರವು ತಮಿಳುನಾಡು ವಿಧಾನಸಭೆಯಲ್ಲಿ ಬುಧವಾರ ವಿಶ್ವಾಸಮತ ಸಾಬೀತು ಮಾಡಿತು.</p><p>234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಬಹುಮತಕ್ಕೆ ಬೇಕಾಗಿರುವ ಮ್ಯಾಜಿಕ್ ಸಂಖ್ಯೆ 118 ಆಗಿದೆ. 144 ಶಾಸಕರ ಬೆಂಬಲದೊಂದಿಗೆ ಸಿಎಂ ವಿಜಯ್ ನೇತೃತ್ವದ ಟಿವಿಕೆ ಸರ್ಕಾರವು ವಿಶ್ವಾಸವನ್ನು ಗೆದ್ದಿದೆ.</p><p>ಎಐಎಡಿಎಂಕೆಯ ಒಂದು ಬಣದ ಬಂಡಾಯ ಶಾಸಕರು ಟಿವಿಕೆ ಸರ್ಕಾರವನ್ನು ಬೆಂಬಲಿಸಿದ್ದಾರೆ. 22 ಮತಗಳು ಸರ್ಕಾರದ ವಿರುದ್ಧ ಚಲಾವಣೆಯಾದವು.</p>.ತಮಿಳುನಾಡು ವಿಧಾನಸಭೆ: 144 ಶಾಸಕರ ಬೆಂಬಲದೊಂದಿಗೆ ವಿಶ್ವಾಸಮತ ಗೆದ್ದ ಸಿಎಂ ವಿಜಯ್.<p>ಕೇರಳಂ ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಚರ್ಚಿಸಲು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಬುಧವಾರ ಸಂಜೆ ಭೇಟಿ ನೀಡಿದ್ದಾರೆ.</p><p>140 ಸದಸ್ಯ ಬಲದ ಕೇರಳಂ ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ 4ರಂದೇ ಪ್ರಕಟವಾಗಿದೆ. ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) 102 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಕಾಂಗ್ರೆಸ್ 63 ಕ್ಷೇತ್ರಗಳಲ್ಲಿ ಗೆಲುವು ಕಂಡಿದೆ.</p><p>ಹೀಗಿದ್ದರೂ, ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಕಾಂಗ್ರೆಸ್ಗೆ ಈವರೆಗೆ ಸಾಧ್ಯವಾಗಿಲ್ಲ.</p>.ಕೇರಳಂ ಮುಖ್ಯಮಂತ್ರಿ ಆಯ್ಕೆ ವಿಚಾರ: ಖರ್ಗೆ ನಿವಾಸಕ್ಕೆ ರಾಹುಲ್ ಗಾಂಧಿ ಭೇಟಿ.<p>ಮಕ್ಕಳ ಮೇಲೆ ದೌರ್ಜನ್ಯ ಹಾಗೂ ದುರ್ಬಳಕೆಯ ಆರೋಪ ಎದುರಾಗುತ್ತಿದ್ದಂತೆ ನ್ಯಾಯಾಲಯದ ಮೊರೆ ಹೋಗಿದ್ದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪದಚ್ಯುತ ಪೀಠಾಧಿಪತಿ ವಚನಾನಂದ ಸ್ವಾಮೀಜಿ ಅವರು ಮೇ 2ರಂದು ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ಇದರಿಂದ ಅವರ ಬಂಧನ ಸಾಧ್ಯತೆ ವಿರಳ ಎನ್ನಲಾಗುತ್ತಿದೆ.</p>.POCSO Case: ನಿರೀಕ್ಷಣಾ ಜಾಮೀನು ಪಡೆದ ವಚನಾನಂದ ಸ್ವಾಮೀಜಿ, ಬಂಧನ ಸಾಧ್ಯತೆ ವಿರಳ.<p>'ಇರಾನ್ ಯುದ್ಧದ ವಿಷಯದಲ್ಲಿ ಚೀನಾದ ನೆರವಿನ ಅಗತ್ಯವಿಲ್ಲ' ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.</p><p>ಚೀನಾ ಭೇಟಿಗೂ ಮುನ್ನ ವಾಷಿಂಗ್ಟನ್ನಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಟ್ರಂಪ್, 'ನಾವು ಶಾಂತಿಯುತವಾಗಿ ಅಥವಾ ಬೇರೆ ರೀತಿಯಲ್ಲಿ ಜಯಿಸಲಿದ್ದೇವೆ. ಯಾವುದೇ ಕಾರಣಕ್ಕೂ ಇರಾನ್ಗೆ ಅಣ್ವಸ್ತ್ರ ಹೊಂದಲು ಬಿಡುವುದಿಲ್ಲ' ಎಂದು ಹೇಳಿದ್ದಾರೆ.</p>.ಇರಾನ್ ವಿಚಾರದಲ್ಲಿ ಚೀನಾದ ನೆರವಿನ ಅಗತ್ಯವಿಲ್ಲ: ಡೊನಾಲ್ಡ್ ಟ್ರಂಪ್.<p>ಹಿಂದೂ ಧರ್ಮವು ಒಂದು ಜೀವನ ವಿಧಾನವಾಗಿದ್ದು, ಅದನ್ನು ಸಾಬೀತುಪಡಿಸಲು ಕಡ್ಡಾಯವಾಗಿ ದೇವಸ್ಥಾನಕ್ಕೆ ಭೇಟಿ ನೀಡುವ ಅಥವಾ ಧಾರ್ಮಿಕ ವಿಧಿವಿಧಾನಗಳನ್ನು ನೆರೆವೇರಿಸುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ಅಭಿಪ್ರಾಯಪಟ್ಟಿದೆ.</p><p>ಶಬರಿಮಲೆ ಸೇರಿದಂತೆ ದೇಶದ ವಿವಿಧೆಡೆ ಪೂಜಾ ಸ್ಥಳಗಳಲ್ಲಿ ಮಹಿಳೆಯರ ಪ್ರವೇಶಕ್ಕೆ ನಿರ್ಬಂಧ ಹಾಗೂ ತಾರತಮ್ಯಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಒಂಬತ್ತು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ನಡೆಸುತ್ತಿದೆ</p>.ಹಿಂದೂ ಎಂದು ಸಾಬೀತುಪಡಿಸಲು ದೇವಸ್ಥಾನಕ್ಕೆ ಹೋಗಲೇ ಬೇಕೆಂದಿಲ್ಲ: ಸುಪ್ರೀಂ ಕೋರ್ಟ್.<p>ಸಚಿವ ಸ್ಥಾನದ ಆಮಿಷಕ್ಕೆ ಒಳಗಾಗಿ ಕೆಲವು ಎಐಎಡಿಎಂಕೆ ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂದು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಆರೋಪಿಸಿದ್ದಾರೆ.</p><p>ವಿಶ್ವಾಸಮತಯಾಚನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಧಾನಸಭೆ ಸ್ಪೀಕರ್ ಜೆ.ಸಿ.ಡಿ. ಪ್ರಭಾಕರ್ ಅವರು ಎಐಎಡಿಎಂಕೆ ಬಂಡಾಯ ನಾಯಕ ಎಸ್.ಪಿ. ವೇಲುಮಣಿ ಅವರಿಗೆ ಮಾತನಾಡಲು ಅನುಮತಿ ನೀಡಿದ್ದು ಸರಿಯಾದ ಕ್ರಮವಲ್ಲ. ಇದು ವಿಧಾನಸಭೆ ನಿಯಮಗಳಿಗೆ ವಿರುದ್ಧವಾಗಿದೆ. ಜತೆಗೆ, ಮುಖ್ಯಮಂತ್ರಿ ವಿಜಯ್ ನೇತೃತ್ವದ ನೂತನ ಸರ್ಕಾರವು ಪ್ರಜಾಪ್ರಭುತ್ವ ವಿರೋಧಿ ನಡವಳಿಕೆ ಪ್ರದರ್ಶಿಸಿದೆ’ ಎಂದು ಟೀಕಿಸಿದ್ದಾರೆ.</p>.ಸಚಿವ ಸ್ಥಾನದ ಆಮಿಷಕ್ಕೆ ಒಳಗಾಗಿ ಕೆಲ ಶಾಸಕರಿಂದ ಅಡ್ಡ ಮತದಾನ: ಪಳನಿಸ್ವಾಮಿ ಆರೋಪ.<p>‘ಇಂಡಿಯನ್ ಪ್ರೀಮಿಯರ್ ಲೀಗ್ನ ಪ್ರಸ್ತುತ ಆವೃತ್ತಿಯಲ್ಲಿ ಅಶಿಸ್ತು ಕಂಡು ಬಂದಿರುವುದರಿಂದ ಮತ್ತಷ್ಟು ಕಠಿಣ ನಿಯಮಗಳು ಪರಿಚಯಿಸಲು ಬಿಸಿಸಿಐ ಸಜ್ಜಾಗಿದೆ. ಮಂಡಳಿಗೆ ಮುಜುಗರ ಉಂಟುಮಾಡುವ ಹಲವು ಘಟನೆಗಳು ವರದಿಯಾಗಿದ್ದು, ಮುಂದಿನ ದಿನಗಳಲ್ಲಿ ಈ ರೀತಿಯ ಯಾವುದೇ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಐಪಿಎಲ್ ಫ್ರಾಂಚೈಸಿಗಳೊಂದಿಗೆ ನಾವು ಮಾತುಕತೆ ನಡೆಸುತ್ತಿದ್ದೇವೆ’ ಎಂದು ಬಿಸಿಸಿಐ ಮೂಲವೊಂದು ತಿಳಿಸಿದೆ.</p>.IPL ನಿಯಮ ಉಲ್ಲಂಘನೆ: ಬಿಸಿಸಿಐನಿಂದ ಮತ್ತಷ್ಟು ಕಠಿಣ ನಿಯಮ.<p>ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ನಡುವಣ ಟಿ20 ಕ್ರಿಕೆಟ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ್ದು, ಟಾಸ್ ವಿಳಂವಾಗಿದೆ. ರಾಯಪುರದ ಶಹೀದ್ ವೀರನಾರಾಯಣ ಕ್ರೀಡಾಂಗಣದಲ್ಲಿ ಪಂದ್ಯ ನಿಗದಿಯಾಗಿದೆ. ಸದ್ಯ ಮಳೆ ನಿಂತಿದೆ. ಆದರೆ, ಮೈದಾನ ಒದ್ದೆಯಾಗಿರುವುದರಿಂದ 8.15ಕ್ಕೆ ಮತ್ತೊಮ್ಮೆ ಪಿಚ್ ಪರಿಶೀಲನೆಗೆ ಸಮಯ ನಿಗದಿಯಾಗಿದೆ.</p>.IPL 2026: RCB vs KKR- ವಿರಾಟ್ ಶತಕದ ಅಬ್ಬರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯ, ರಾಷ್ಟ್ರೀಯ, ವಿದೇಶ ವಿದ್ಯಮಾನಗಳಿಗೆ ಸಂಬಂಧಿಸಿದ ಈ ದಿನದ ಟಾಪ್ 10 ಸುದ್ದಿಗಳು...</p>.<p>ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (ಸಿಬಿಎಸ್ಇ) 12ನೇ ತರಗತಿ ಫಲಿತಾಂಶವನ್ನು ಇಂದು (ಬುಧವಾರ) ಪ್ರಕಟಿಸಿದ್ದು, ಬಾಲಕಿಯರು ಉತ್ತಮ ಸಾಧನೆ ದಾಖಲಿಸಿದ್ದಾರೆ. ಪರೀಕ್ಷೆಗೆ ಹಾಜರಾಗಿದ್ದವರ ಪೈಕಿ ಶೇ 85ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಮಂಡಳಿಯ ಪರೀಕ್ಷಾ ನಿಯಂತ್ರಕರಾದ ಸಂಯಮ್ ಭಾರದ್ವಾಜ್ ಹೇಳಿದ್ದಾರೆ. </p><p>ಪರೀಕ್ಷೆಯಲ್ಲಿ ಶೇ 88 ಕ್ಕೂ ಹೆಚ್ಚು ಹುಡುಗಿಯರು, ಶೇ82 ಕ್ಕೂ ಹೆಚ್ಚು ಹುಡುಗರು ತೇರ್ಗಡೆಯಾಗಿದ್ದಾರೆ ಎಂದೂ ತಿಳಿಸಿದ್ದಾರೆ.</p>.ಸಿಬಿಎಸ್ಇ 12ನೇ ತರಗತಿ ಫಲಿತಾಂಶ: ಬಾಲಕಿಯರೇ ಮೇಲುಗೈ .<p>ಕೆಲ ದಿನಗಳ ಹಿಂದೆ ಇಂಧನ ಮಿತ ಬಳಕೆ, ಚಿನ್ನ ಖರೀದಿ ನಿಲ್ಲಿಸುವಂತೆ ದೇಶದ ಜನರಿಗೆ ಮನವಿ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಇಂದು ತಮ್ಮ ಬೆಂಗಾವಲು ವಾಹನಗಳನ್ನು ಕಡಿತಗೊಳಿಸುವ ಮೂಲಕ ನಿರ್ಧಾರ ಮಾಡಿದ್ದಾರೆ. ಇದೀಗ ಪ್ರಧಾನಿ ಹಾದಿಯಲ್ಲೇ ಸಾಗಿರುವ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಇತರೆ ನಾಯಕರು ಇಂಧನ ಮಿತ ವ್ಯಯಕ್ಕೆ ಮುಂದಾಗಿದ್ದಾರೆ.</p><p>ಇತ್ತೀಚೆಗೆ ಗುಜರಾತ್ ಮತ್ತು ಅಸ್ಸಾಂಗೆ ಭೇಟಿ ನೀಡಿದ್ದ ವೇಳೆ ಮೋದಿ ಅವರು ತಮ್ಮ ಬೆಂಗಾವಲು ವಾಹನಗಳಲ್ಲಿ ಕಡಿತ ಮಾಡುತ್ತಿದ್ದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ತಮ್ಮ ಮತ್ತು ಸಚಿವರ ಬೆಂಗಾವಲಾಗಿ ಬಳಸುತ್ತಿರುವ ಶೇ 50ರಷ್ಟು ವಾಹನಗಳ ಕಡಿತಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.</p>.ಬೆಂಗಾವಲು ವಾಹನಗಳನ್ನು ತಗ್ಗಿಸಿದ ಮೋದಿ: ಬಿಜೆಪಿ ಸಿಎಂಗಳಿಂದಲೂ ಪಾಲನೆಗೆ ನಿರ್ಧಾರ.<p>ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರವು ತಮಿಳುನಾಡು ವಿಧಾನಸಭೆಯಲ್ಲಿ ಬುಧವಾರ ವಿಶ್ವಾಸಮತ ಸಾಬೀತು ಮಾಡಿತು.</p><p>234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಬಹುಮತಕ್ಕೆ ಬೇಕಾಗಿರುವ ಮ್ಯಾಜಿಕ್ ಸಂಖ್ಯೆ 118 ಆಗಿದೆ. 144 ಶಾಸಕರ ಬೆಂಬಲದೊಂದಿಗೆ ಸಿಎಂ ವಿಜಯ್ ನೇತೃತ್ವದ ಟಿವಿಕೆ ಸರ್ಕಾರವು ವಿಶ್ವಾಸವನ್ನು ಗೆದ್ದಿದೆ.</p><p>ಎಐಎಡಿಎಂಕೆಯ ಒಂದು ಬಣದ ಬಂಡಾಯ ಶಾಸಕರು ಟಿವಿಕೆ ಸರ್ಕಾರವನ್ನು ಬೆಂಬಲಿಸಿದ್ದಾರೆ. 22 ಮತಗಳು ಸರ್ಕಾರದ ವಿರುದ್ಧ ಚಲಾವಣೆಯಾದವು.</p>.ತಮಿಳುನಾಡು ವಿಧಾನಸಭೆ: 144 ಶಾಸಕರ ಬೆಂಬಲದೊಂದಿಗೆ ವಿಶ್ವಾಸಮತ ಗೆದ್ದ ಸಿಎಂ ವಿಜಯ್.<p>ಕೇರಳಂ ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಚರ್ಚಿಸಲು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಬುಧವಾರ ಸಂಜೆ ಭೇಟಿ ನೀಡಿದ್ದಾರೆ.</p><p>140 ಸದಸ್ಯ ಬಲದ ಕೇರಳಂ ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ 4ರಂದೇ ಪ್ರಕಟವಾಗಿದೆ. ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) 102 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಕಾಂಗ್ರೆಸ್ 63 ಕ್ಷೇತ್ರಗಳಲ್ಲಿ ಗೆಲುವು ಕಂಡಿದೆ.</p><p>ಹೀಗಿದ್ದರೂ, ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಕಾಂಗ್ರೆಸ್ಗೆ ಈವರೆಗೆ ಸಾಧ್ಯವಾಗಿಲ್ಲ.</p>.ಕೇರಳಂ ಮುಖ್ಯಮಂತ್ರಿ ಆಯ್ಕೆ ವಿಚಾರ: ಖರ್ಗೆ ನಿವಾಸಕ್ಕೆ ರಾಹುಲ್ ಗಾಂಧಿ ಭೇಟಿ.<p>ಮಕ್ಕಳ ಮೇಲೆ ದೌರ್ಜನ್ಯ ಹಾಗೂ ದುರ್ಬಳಕೆಯ ಆರೋಪ ಎದುರಾಗುತ್ತಿದ್ದಂತೆ ನ್ಯಾಯಾಲಯದ ಮೊರೆ ಹೋಗಿದ್ದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪದಚ್ಯುತ ಪೀಠಾಧಿಪತಿ ವಚನಾನಂದ ಸ್ವಾಮೀಜಿ ಅವರು ಮೇ 2ರಂದು ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ಇದರಿಂದ ಅವರ ಬಂಧನ ಸಾಧ್ಯತೆ ವಿರಳ ಎನ್ನಲಾಗುತ್ತಿದೆ.</p>.POCSO Case: ನಿರೀಕ್ಷಣಾ ಜಾಮೀನು ಪಡೆದ ವಚನಾನಂದ ಸ್ವಾಮೀಜಿ, ಬಂಧನ ಸಾಧ್ಯತೆ ವಿರಳ.<p>'ಇರಾನ್ ಯುದ್ಧದ ವಿಷಯದಲ್ಲಿ ಚೀನಾದ ನೆರವಿನ ಅಗತ್ಯವಿಲ್ಲ' ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.</p><p>ಚೀನಾ ಭೇಟಿಗೂ ಮುನ್ನ ವಾಷಿಂಗ್ಟನ್ನಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಟ್ರಂಪ್, 'ನಾವು ಶಾಂತಿಯುತವಾಗಿ ಅಥವಾ ಬೇರೆ ರೀತಿಯಲ್ಲಿ ಜಯಿಸಲಿದ್ದೇವೆ. ಯಾವುದೇ ಕಾರಣಕ್ಕೂ ಇರಾನ್ಗೆ ಅಣ್ವಸ್ತ್ರ ಹೊಂದಲು ಬಿಡುವುದಿಲ್ಲ' ಎಂದು ಹೇಳಿದ್ದಾರೆ.</p>.ಇರಾನ್ ವಿಚಾರದಲ್ಲಿ ಚೀನಾದ ನೆರವಿನ ಅಗತ್ಯವಿಲ್ಲ: ಡೊನಾಲ್ಡ್ ಟ್ರಂಪ್.<p>ಹಿಂದೂ ಧರ್ಮವು ಒಂದು ಜೀವನ ವಿಧಾನವಾಗಿದ್ದು, ಅದನ್ನು ಸಾಬೀತುಪಡಿಸಲು ಕಡ್ಡಾಯವಾಗಿ ದೇವಸ್ಥಾನಕ್ಕೆ ಭೇಟಿ ನೀಡುವ ಅಥವಾ ಧಾರ್ಮಿಕ ವಿಧಿವಿಧಾನಗಳನ್ನು ನೆರೆವೇರಿಸುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ಅಭಿಪ್ರಾಯಪಟ್ಟಿದೆ.</p><p>ಶಬರಿಮಲೆ ಸೇರಿದಂತೆ ದೇಶದ ವಿವಿಧೆಡೆ ಪೂಜಾ ಸ್ಥಳಗಳಲ್ಲಿ ಮಹಿಳೆಯರ ಪ್ರವೇಶಕ್ಕೆ ನಿರ್ಬಂಧ ಹಾಗೂ ತಾರತಮ್ಯಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಒಂಬತ್ತು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ನಡೆಸುತ್ತಿದೆ</p>.ಹಿಂದೂ ಎಂದು ಸಾಬೀತುಪಡಿಸಲು ದೇವಸ್ಥಾನಕ್ಕೆ ಹೋಗಲೇ ಬೇಕೆಂದಿಲ್ಲ: ಸುಪ್ರೀಂ ಕೋರ್ಟ್.<p>ಸಚಿವ ಸ್ಥಾನದ ಆಮಿಷಕ್ಕೆ ಒಳಗಾಗಿ ಕೆಲವು ಎಐಎಡಿಎಂಕೆ ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂದು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಆರೋಪಿಸಿದ್ದಾರೆ.</p><p>ವಿಶ್ವಾಸಮತಯಾಚನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಧಾನಸಭೆ ಸ್ಪೀಕರ್ ಜೆ.ಸಿ.ಡಿ. ಪ್ರಭಾಕರ್ ಅವರು ಎಐಎಡಿಎಂಕೆ ಬಂಡಾಯ ನಾಯಕ ಎಸ್.ಪಿ. ವೇಲುಮಣಿ ಅವರಿಗೆ ಮಾತನಾಡಲು ಅನುಮತಿ ನೀಡಿದ್ದು ಸರಿಯಾದ ಕ್ರಮವಲ್ಲ. ಇದು ವಿಧಾನಸಭೆ ನಿಯಮಗಳಿಗೆ ವಿರುದ್ಧವಾಗಿದೆ. ಜತೆಗೆ, ಮುಖ್ಯಮಂತ್ರಿ ವಿಜಯ್ ನೇತೃತ್ವದ ನೂತನ ಸರ್ಕಾರವು ಪ್ರಜಾಪ್ರಭುತ್ವ ವಿರೋಧಿ ನಡವಳಿಕೆ ಪ್ರದರ್ಶಿಸಿದೆ’ ಎಂದು ಟೀಕಿಸಿದ್ದಾರೆ.</p>.ಸಚಿವ ಸ್ಥಾನದ ಆಮಿಷಕ್ಕೆ ಒಳಗಾಗಿ ಕೆಲ ಶಾಸಕರಿಂದ ಅಡ್ಡ ಮತದಾನ: ಪಳನಿಸ್ವಾಮಿ ಆರೋಪ.<p>‘ಇಂಡಿಯನ್ ಪ್ರೀಮಿಯರ್ ಲೀಗ್ನ ಪ್ರಸ್ತುತ ಆವೃತ್ತಿಯಲ್ಲಿ ಅಶಿಸ್ತು ಕಂಡು ಬಂದಿರುವುದರಿಂದ ಮತ್ತಷ್ಟು ಕಠಿಣ ನಿಯಮಗಳು ಪರಿಚಯಿಸಲು ಬಿಸಿಸಿಐ ಸಜ್ಜಾಗಿದೆ. ಮಂಡಳಿಗೆ ಮುಜುಗರ ಉಂಟುಮಾಡುವ ಹಲವು ಘಟನೆಗಳು ವರದಿಯಾಗಿದ್ದು, ಮುಂದಿನ ದಿನಗಳಲ್ಲಿ ಈ ರೀತಿಯ ಯಾವುದೇ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಐಪಿಎಲ್ ಫ್ರಾಂಚೈಸಿಗಳೊಂದಿಗೆ ನಾವು ಮಾತುಕತೆ ನಡೆಸುತ್ತಿದ್ದೇವೆ’ ಎಂದು ಬಿಸಿಸಿಐ ಮೂಲವೊಂದು ತಿಳಿಸಿದೆ.</p>.IPL ನಿಯಮ ಉಲ್ಲಂಘನೆ: ಬಿಸಿಸಿಐನಿಂದ ಮತ್ತಷ್ಟು ಕಠಿಣ ನಿಯಮ.<p>ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ನಡುವಣ ಟಿ20 ಕ್ರಿಕೆಟ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ್ದು, ಟಾಸ್ ವಿಳಂವಾಗಿದೆ. ರಾಯಪುರದ ಶಹೀದ್ ವೀರನಾರಾಯಣ ಕ್ರೀಡಾಂಗಣದಲ್ಲಿ ಪಂದ್ಯ ನಿಗದಿಯಾಗಿದೆ. ಸದ್ಯ ಮಳೆ ನಿಂತಿದೆ. ಆದರೆ, ಮೈದಾನ ಒದ್ದೆಯಾಗಿರುವುದರಿಂದ 8.15ಕ್ಕೆ ಮತ್ತೊಮ್ಮೆ ಪಿಚ್ ಪರಿಶೀಲನೆಗೆ ಸಮಯ ನಿಗದಿಯಾಗಿದೆ.</p>.IPL 2026: RCB vs KKR- ವಿರಾಟ್ ಶತಕದ ಅಬ್ಬರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>