<p>ರಾಷ್ಟ್ರೀಯ, ರಾಜ್ಯ, ವಿದೇಶ, ಸಿನಿಮಾ, ಕ್ರೀಡೆಗೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p>ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕೂಡಲೇ ಅಧಿಸೂಚನೆ ಪ್ರಕಟಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ನೇತೃತ್ವದಲ್ಲಿ ಮಂಗಳವಾರ ಧಾರವಾಡದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದರು.</p>.ಧಾರವಾಡ | ನೇಮಕಾತಿಗಾಗಿ ಭುಗಿಲೆದ್ದ ಆಕ್ರೋಶ: ಉದ್ಯೋಗಾಕಾಂಕ್ಷಿಗಳಿಂದ ಪ್ರತಿಭಟನೆ.<p>ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಇತರೆ ಆರೋಪಿಗಳು ವಿಡಿಯೊ ಕಾನ್ಫರೆನ್ಸ್ ಮೂಲಕ ಮಂಗಳವಾರ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು.</p>.ರೇಣುಕಸ್ವಾಮಿ ಕೊಲೆ: ವಿಡಿಯೊ ಕಾನ್ಫರೆನ್ಸ್ನಲ್ಲಿ ವಿಚಾರಣೆಗೆ ನಟ ದರ್ಶನ್ ಹಾಜರು.<p>ಮೇಕೆದಾಟು ಸಮತೋಲನ ಜಲಾಶಯ ಯೋಜನೆ ಕುರಿತು ಕೇಂದ್ರ ಜಲ ಆಯೋಗವು (ಸಿಡಬ್ಲ್ಯುಸಿ) ಕೆಲವೊಂದು ಅವಲೋಕನಗಳನ್ನು ಮಾಡಿರುವ ಹಿನ್ನೆಲೆಯಲ್ಲಿ ಹೊಸ ಅಧ್ಯಯನ ಹಾಗೂ ಸಮೀಕ್ಷೆ ನಡೆಸಲು ಕಾವೇರಿ ನೀರಾವರಿ ನಿಗಮವು ತೀರ್ಮಾನಿಸಿದೆ.</p>.ಮೇಕೆದಾಟು: ಹೊಸ ಅಧ್ಯಯನಕ್ಕೆ ಕಾವೇರಿ ನೀರಾವರಿ ನಿಗಮ ತೀರ್ಮಾನ.<p>ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.</p> .ದ್ವೇಷ ಭಾಷಣ: ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಪ್ರಕರಣ ದಾಖಲು.<p>‘ಹಿಂದಿನ ವೈಎಸ್ಆರ್ಸಿಪಿ ಅವಧಿಯಲ್ಲಿ ಸುಮಾರು 60 ಲಕ್ಷ ಕೆ.ಜಿಯಷ್ಟು ಕಲಬೆರಕೆ ತುಪ್ಪ ಬಳಸಿ 20 ಕೋಟಿಗಿಂತಲೂ ಹೆಚ್ಚಿನ ಲಡ್ಡು ಪ್ರಸಾದ ತಯಾರಿಸಲಾಗಿದ್ದು, ಇದೊಂದು ಸಂಘಟಿತ ಅಪರಾಧ’ ಎಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹೇಳಿದರು.</p> .ತಿರುಪತಿ ಲಡ್ಡಿನಲ್ಲಿ ಕಲಬೆರಕೆ ತುಪ್ಪ ಬಳಸಿರುವುದು ಸಂಘಟಿತ ಅಪರಾಧ: ನಾಯ್ಡು .<p>‘ಪ್ರಸಕ್ತ ಆರ್ಥಿಕ ವರ್ಷದಲ್ಲಿ ದೇಶದ ತಂತ್ರಜ್ಞಾನ ಉದ್ಯಮವು ₹28.64 ಲಕ್ಷ ಕೋಟಿಯಷ್ಟು ವರಮಾನ ಕಾಣುವ ನಿರೀಕ್ಷೆ ಇದೆ’ ಎಂದು ಐ.ಟಿ ಉದ್ಯಮಗಳ ಸಂಘಟನೆ ನಾಸ್ಕಾಂ ತಿಳಿಸಿದೆ. ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ತಂತ್ರಜ್ಞಾನ ಉದ್ಯಮ ವಲಯವು ₹27 ಲಕ್ಷ ಕೋಟಿಯಷ್ಟು ವರಮಾನ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಶೇ 6.1ರಷ್ಟು ಬೆಳವಣಿಗೆ ಆಗಬಹುದು ಎಂದು ನಾಸ್ಕಾಂ ಅಂದಾಜು ಮಾಡಿದೆ.</p> .ಭಾರತದ ತಂತ್ರಜ್ಞಾನ ಉದ್ಯಮ: ₹28 ಲಕ್ಷ ಕೋಟಿ ವರಮಾನ ನಿರೀಕ್ಷೆ.<p>ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜಾಗತಿಕವಾಗಿ ವಿಧಿಸಿದ್ದ ಸುಂಕ ಕಾನೂನುಬಾಹಿರ ಎಂದು ಹೇಳಿ ಸುಪ್ರೀಂ ಕೋರ್ಟ್ ಅದನ್ನು ರದ್ದುಪಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಟ್ರಂಪ್ ಹೊಸ ಬೆದರಿಕೆ ಹಾಕಿದ್ದಾರೆ.</p> .‘ಸುಪ್ರೀಂ’ ತೀರ್ಪನ್ನು ಇಟ್ಟುಕೊಂಡು ಆಟವಾಡಿದರೆ ಮತ್ತಷ್ಟು ಸುಂಕ: ಟ್ರಂಪ್ ಬೆದರಿಕೆ.<p>2008ರಲ್ಲಿ ಮುಂಬೈನಲ್ಲಿ ಸಂಭವಿಸಿದ್ದ ಭಯೋತ್ಪಾದಕ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆರೋಪ ಎದುರಿಸುತ್ತಿರುವ ತಹವ್ವುರ್ ರಾಣಾ ಹುಸೇನ್ ಪೌರತ್ವ ರದ್ದುಪಡಿಸುವುದಕ್ಕೆ ಕೆನಡಾ ಸರ್ಕಾರ ಮುಂದಾಗಿದೆ.</p> .ಉಗ್ರ ರಾಣಾ ಪೌರತ್ವ ರದ್ದು ಮಾಡಲು ಮುಂದಾದ ಕೆನಡಾ: ವರದಿ.<p>ಉಕ್ರೇನ್ –ರಷ್ಯಾ ನಡುವಿನ ಯುದ್ಧ ಆರಂಭಗೊಂಡು ನಾಲ್ಕು ವರ್ಷಗಳು ಕಳೆದ ಹಿನ್ನೆಲೆಯಲ್ಲಿ ಮಾತನಾಡಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ‘ಪುಟಿನ್ ಈ ಯುದ್ಧದಲ್ಲಿ ಗೆದ್ದಿಲ್ಲ ಮತ್ತು ಉಕ್ರೇನ್ ನಾಗರಿಕರ ಆತ್ಮವಿಶ್ವಾಸವನ್ನು ಕುಗ್ಗಿಸಿಲ್ಲ. ಯುದ್ಧ ಆರಂಭವಾದಾಗಿನಿಂದ ಈವರೆಗೆ ನಾವು ನಮ್ಮ ಸ್ವಾತಂತ್ರ್ಯವನ್ನು, ರಾಷ್ಟ್ರ ಸ್ಥಾನಮಾನವನ್ನು ಬಿಟ್ಟುಕೊಟ್ಟಿಲ್ಲ’ ಎಂದಿದ್ದಾರೆ.</p> .ರಷ್ಯಾ–ಉಕ್ರೇನ್ ಯುದ್ಧಕ್ಕೆ 4 ವರ್ಷ: ಪುಟಿನ್ ಗೆದ್ದಿಲ್ಲ ಎಂದ ಝೆಲೆನ್ಸ್ಕಿ .<p>ಆತಿಥೇಯ ಶ್ರೀಲಂಕಾ ತಂಡದ ಪಾಲಿಗೆ ಬುಧವಾರ ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಟಿ20 ವಿಶ್ವಕಪ್ ಸೂಪರ್ ಎಂಟರ ಹಂತದ ಪಂದ್ಯ ಮಾಡು– ಮಡಿ ರೀತಿಯಲ್ಲಿದೆ. ಮಳೆಯ ಸಾಧ್ಯತೆಯಿಲ್ಲದ ಕಾರಣ ಎರಡೂ ತಂಡಗಳು ಈ ಹಂತದಲ್ಲಿ ಮೊದಲ ಗೆಲುವಿನಯತ್ನದಲ್ಲಿವೆ.</p>.Sri Lanka vs New Zealand: ಲಂಕಾಕ್ಕೆ ಮಾಡು–ಮಡಿ ಪಂದ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಷ್ಟ್ರೀಯ, ರಾಜ್ಯ, ವಿದೇಶ, ಸಿನಿಮಾ, ಕ್ರೀಡೆಗೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p>ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕೂಡಲೇ ಅಧಿಸೂಚನೆ ಪ್ರಕಟಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ನೇತೃತ್ವದಲ್ಲಿ ಮಂಗಳವಾರ ಧಾರವಾಡದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದರು.</p>.ಧಾರವಾಡ | ನೇಮಕಾತಿಗಾಗಿ ಭುಗಿಲೆದ್ದ ಆಕ್ರೋಶ: ಉದ್ಯೋಗಾಕಾಂಕ್ಷಿಗಳಿಂದ ಪ್ರತಿಭಟನೆ.<p>ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಇತರೆ ಆರೋಪಿಗಳು ವಿಡಿಯೊ ಕಾನ್ಫರೆನ್ಸ್ ಮೂಲಕ ಮಂಗಳವಾರ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು.</p>.ರೇಣುಕಸ್ವಾಮಿ ಕೊಲೆ: ವಿಡಿಯೊ ಕಾನ್ಫರೆನ್ಸ್ನಲ್ಲಿ ವಿಚಾರಣೆಗೆ ನಟ ದರ್ಶನ್ ಹಾಜರು.<p>ಮೇಕೆದಾಟು ಸಮತೋಲನ ಜಲಾಶಯ ಯೋಜನೆ ಕುರಿತು ಕೇಂದ್ರ ಜಲ ಆಯೋಗವು (ಸಿಡಬ್ಲ್ಯುಸಿ) ಕೆಲವೊಂದು ಅವಲೋಕನಗಳನ್ನು ಮಾಡಿರುವ ಹಿನ್ನೆಲೆಯಲ್ಲಿ ಹೊಸ ಅಧ್ಯಯನ ಹಾಗೂ ಸಮೀಕ್ಷೆ ನಡೆಸಲು ಕಾವೇರಿ ನೀರಾವರಿ ನಿಗಮವು ತೀರ್ಮಾನಿಸಿದೆ.</p>.ಮೇಕೆದಾಟು: ಹೊಸ ಅಧ್ಯಯನಕ್ಕೆ ಕಾವೇರಿ ನೀರಾವರಿ ನಿಗಮ ತೀರ್ಮಾನ.<p>ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.</p> .ದ್ವೇಷ ಭಾಷಣ: ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಪ್ರಕರಣ ದಾಖಲು.<p>‘ಹಿಂದಿನ ವೈಎಸ್ಆರ್ಸಿಪಿ ಅವಧಿಯಲ್ಲಿ ಸುಮಾರು 60 ಲಕ್ಷ ಕೆ.ಜಿಯಷ್ಟು ಕಲಬೆರಕೆ ತುಪ್ಪ ಬಳಸಿ 20 ಕೋಟಿಗಿಂತಲೂ ಹೆಚ್ಚಿನ ಲಡ್ಡು ಪ್ರಸಾದ ತಯಾರಿಸಲಾಗಿದ್ದು, ಇದೊಂದು ಸಂಘಟಿತ ಅಪರಾಧ’ ಎಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹೇಳಿದರು.</p> .ತಿರುಪತಿ ಲಡ್ಡಿನಲ್ಲಿ ಕಲಬೆರಕೆ ತುಪ್ಪ ಬಳಸಿರುವುದು ಸಂಘಟಿತ ಅಪರಾಧ: ನಾಯ್ಡು .<p>‘ಪ್ರಸಕ್ತ ಆರ್ಥಿಕ ವರ್ಷದಲ್ಲಿ ದೇಶದ ತಂತ್ರಜ್ಞಾನ ಉದ್ಯಮವು ₹28.64 ಲಕ್ಷ ಕೋಟಿಯಷ್ಟು ವರಮಾನ ಕಾಣುವ ನಿರೀಕ್ಷೆ ಇದೆ’ ಎಂದು ಐ.ಟಿ ಉದ್ಯಮಗಳ ಸಂಘಟನೆ ನಾಸ್ಕಾಂ ತಿಳಿಸಿದೆ. ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ತಂತ್ರಜ್ಞಾನ ಉದ್ಯಮ ವಲಯವು ₹27 ಲಕ್ಷ ಕೋಟಿಯಷ್ಟು ವರಮಾನ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಶೇ 6.1ರಷ್ಟು ಬೆಳವಣಿಗೆ ಆಗಬಹುದು ಎಂದು ನಾಸ್ಕಾಂ ಅಂದಾಜು ಮಾಡಿದೆ.</p> .ಭಾರತದ ತಂತ್ರಜ್ಞಾನ ಉದ್ಯಮ: ₹28 ಲಕ್ಷ ಕೋಟಿ ವರಮಾನ ನಿರೀಕ್ಷೆ.<p>ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜಾಗತಿಕವಾಗಿ ವಿಧಿಸಿದ್ದ ಸುಂಕ ಕಾನೂನುಬಾಹಿರ ಎಂದು ಹೇಳಿ ಸುಪ್ರೀಂ ಕೋರ್ಟ್ ಅದನ್ನು ರದ್ದುಪಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಟ್ರಂಪ್ ಹೊಸ ಬೆದರಿಕೆ ಹಾಕಿದ್ದಾರೆ.</p> .‘ಸುಪ್ರೀಂ’ ತೀರ್ಪನ್ನು ಇಟ್ಟುಕೊಂಡು ಆಟವಾಡಿದರೆ ಮತ್ತಷ್ಟು ಸುಂಕ: ಟ್ರಂಪ್ ಬೆದರಿಕೆ.<p>2008ರಲ್ಲಿ ಮುಂಬೈನಲ್ಲಿ ಸಂಭವಿಸಿದ್ದ ಭಯೋತ್ಪಾದಕ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆರೋಪ ಎದುರಿಸುತ್ತಿರುವ ತಹವ್ವುರ್ ರಾಣಾ ಹುಸೇನ್ ಪೌರತ್ವ ರದ್ದುಪಡಿಸುವುದಕ್ಕೆ ಕೆನಡಾ ಸರ್ಕಾರ ಮುಂದಾಗಿದೆ.</p> .ಉಗ್ರ ರಾಣಾ ಪೌರತ್ವ ರದ್ದು ಮಾಡಲು ಮುಂದಾದ ಕೆನಡಾ: ವರದಿ.<p>ಉಕ್ರೇನ್ –ರಷ್ಯಾ ನಡುವಿನ ಯುದ್ಧ ಆರಂಭಗೊಂಡು ನಾಲ್ಕು ವರ್ಷಗಳು ಕಳೆದ ಹಿನ್ನೆಲೆಯಲ್ಲಿ ಮಾತನಾಡಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ‘ಪುಟಿನ್ ಈ ಯುದ್ಧದಲ್ಲಿ ಗೆದ್ದಿಲ್ಲ ಮತ್ತು ಉಕ್ರೇನ್ ನಾಗರಿಕರ ಆತ್ಮವಿಶ್ವಾಸವನ್ನು ಕುಗ್ಗಿಸಿಲ್ಲ. ಯುದ್ಧ ಆರಂಭವಾದಾಗಿನಿಂದ ಈವರೆಗೆ ನಾವು ನಮ್ಮ ಸ್ವಾತಂತ್ರ್ಯವನ್ನು, ರಾಷ್ಟ್ರ ಸ್ಥಾನಮಾನವನ್ನು ಬಿಟ್ಟುಕೊಟ್ಟಿಲ್ಲ’ ಎಂದಿದ್ದಾರೆ.</p> .ರಷ್ಯಾ–ಉಕ್ರೇನ್ ಯುದ್ಧಕ್ಕೆ 4 ವರ್ಷ: ಪುಟಿನ್ ಗೆದ್ದಿಲ್ಲ ಎಂದ ಝೆಲೆನ್ಸ್ಕಿ .<p>ಆತಿಥೇಯ ಶ್ರೀಲಂಕಾ ತಂಡದ ಪಾಲಿಗೆ ಬುಧವಾರ ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಟಿ20 ವಿಶ್ವಕಪ್ ಸೂಪರ್ ಎಂಟರ ಹಂತದ ಪಂದ್ಯ ಮಾಡು– ಮಡಿ ರೀತಿಯಲ್ಲಿದೆ. ಮಳೆಯ ಸಾಧ್ಯತೆಯಿಲ್ಲದ ಕಾರಣ ಎರಡೂ ತಂಡಗಳು ಈ ಹಂತದಲ್ಲಿ ಮೊದಲ ಗೆಲುವಿನಯತ್ನದಲ್ಲಿವೆ.</p>.Sri Lanka vs New Zealand: ಲಂಕಾಕ್ಕೆ ಮಾಡು–ಮಡಿ ಪಂದ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>