<p>ರಾಜ್ಯ, ರಾಷ್ಟ್ರೀಯ, ವಿದೇಶ, ಕ್ರೀಡೆ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p><strong> ಮೈಸೂರು:</strong> ‘ರಾಜ್ಯದಲ್ಲಿ ದ್ವಿಭಾಷಾ ನೀತಿಯನ್ನು ಇನ್ನೂ ಮಾಡಿಲ್ಲ. ತೃತೀಯ ಭಾಷೆ ಹಿಂದಿಯನ್ನು ಕಡ್ಡಾಯ ಮಾಡಬಾರದು ಎಂದು ಹೇಳಿದ್ದೇವೆ. ಇದು ಈ ವರ್ಷದಿಂದಲೇ ಜಾರಿಯಾಗಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p><a href="https://www.prajavani.net/news/karnataka-news/siddaramaiah-hindi-not-compulsory-sslc-exam-language-policy-3864751">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p> .<p><strong>ಬೆಂಗಳೂರು:</strong> ದ್ವಿಭಾಷಾ ನೀತಿಯ ಭಾಗವಾಗಿಯೇ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಯ ಅಂಕಗಳನ್ನು ಫಲಿತಾಂಶಕ್ಕೆ ಪರಿಗಣಿಸದಿರಲು ನಿರ್ಧರಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.</p><p><a href="https://www.prajavani.net/news/karnataka-news/madhu-bangarappa-sslc-hindi-grading-policy-3865196">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a><br></p>.<p><strong>ಮಂಗಳೂರು:</strong> ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ವಿವಿಧೆಡೆ ಶನಿವಾರ ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗಿದೆ. ಕರಾವಳಿಯಲ್ಲಿ ಎರಡು ವಾರಗಳಿಂದ ಈಚೆಗೆ ಉಷ್ಣಾಂಶ ಹೆಚ್ಚಳವಾಗಿತ್ತು. ಜನರು ಸೆಖೆಯಿಂದ ಬಸವಳಿದಿದ್ದರು. ಕೆಲವೆಡೆ ಮಳೆ ಜೊತೆ ಆಲಿಕಲ್ಲುಗಳು ಬಿದ್ದಿವೆ.</p><p><a href="https://www.prajavani.net/news/karnataka-news/karnataka-rain-mangaluru-chikkamagaluru-mysuru-thunderstorm-alert-3865404">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಸಿಯೋಲ್:</strong> ಮೇಲ್ದರ್ಜೆಗೇರಿಸಲಾದ ಘನ-ಇಂಧನ ರಾಕೆಟ್ ಎಂಜಿನ್ ಅನ್ನು ಉತ್ತರ ಕೊರಿಯಾ ಶನಿವಾರ ಪರೀಕ್ಷೆ ಮಾಡಿದ್ದು, ಸರ್ವಾಧಿಕಾರಿ ಕಿಮ್ ಉನ್ ಜಾನ್ ಉಪಸ್ಥಿತರಿದ್ದರು ಎಂದು ಸರ್ಕಾರಿ ಮಾಧ್ಯಮ ವರದಿ ಮಾಡಿದೆ.</p><p><a href="https://www.prajavani.net/news/world-news/north-korea-tests-new-solid-fuel-rocket-engine-with-kim-jong-un-presence-3866332">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಬೆಂಗಳೂರು:</strong> ‘ಆರೋಗ್ಯ ಸೇವೆಯಲ್ಲಿ ಕರ್ನಾಟಕವು ದೇಶದಲ್ಲೇ ಮುಂಚೂಣಿಯಲ್ಲಿದೆ. ನಮ್ಮ ಸರ್ಕಾರವು ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗಾಗಿ 450 ಹಾಸಿಗೆಯುಳ್ಳ ಅತ್ಯಾಧುನಿಕ ಹಾಗೂ ಸುಸಜ್ಜಿತ ಆಸ್ಪತ್ರೆ ಆರಂಭಿಸಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ಹೇಳಿದರು.</p><p><a href="https://www.prajavani.net/news/karnataka-news/bangalore-new-children-hospital-inauguration-sharan-prakash-patil-3865409">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ನೊಯ್ಡಾ (ಉತ್ತರ ಪ್ರದೇಶ)</strong>: ‘ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷವು ಹಲವು ಸವಾಲುಗಳನ್ನು ಒಡ್ಡುತ್ತಿದ್ದು, ಭಾರತ ಇವುಗಳನ್ನು ತನ್ನೆಲ್ಲ ಶಕ್ತಿಯೊಂದಿಗೆ ಸಮರ್ಥವಾಗಿ ಎದುರಿಸುತ್ತಿದೆ. ದೇಶದ ಜನರ ಹಿತಾಸಕ್ತಿ ರಕ್ಷಣೆಗೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದರು.</p><p><a href="https://www.prajavani.net/news/india-news/noida-pm-modi-india-security-west-asia-conflict-3865570">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಹೈದರಾಬಾದ್:</strong> ರಾಜ್ಯದ ರಾಜಧಾನಿಯಾಗಿ ಅಮರಾವತಿ ನಗರಕ್ಕೆ ಕಾನೂನುಬದ್ಧ ಮಾನ್ಯತೆ ನೀಡುವುದಕ್ಕೆ ಆಂಧ್ರಪ್ರದೇಶ ಪುನರ್ರಚನೆ ಕಾಯ್ದೆಗೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಸರ್ವಾನುಮತದ ನಿರ್ಣಯವನ್ನು ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಶನಿವಾರ ಅಂಗೀಕರಿಸಲಾಯಿತು. </p><p><a href="https://www.prajavani.net/news/india-news/andhra-pradesh-amaravati-capital-resolution-assembly-3865211">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ನವದೆಹಲಿ:</strong> ದೇಶದಲ್ಲಿ 15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರ ಒಟ್ಟಾರೆ ನಿರುದ್ಯೋಗ ಪ್ರಮಾಣವು 2025ರಲ್ಲಿ ಶೇಕಡ 3.1ಕ್ಕೆ ಇಳಿದಿದೆ. ಇದು 2024ರಲ್ಲಿ ಶೇ 3.2ರಷ್ಟಿತ್ತು ಎಂದು ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಸಮೀಕ್ಷೆ ತಿಳಿಸಿದೆ.</p><p><a href="https://www.prajavani.net/business/commerce-news/unemployment-rate-india-decreased-to-three-point-one-percent-survey-3864976">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ವಾಷಿಂಗ್ಟನ್:</strong> ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಶನಿವಾರ ವ್ಯಾಪಕ ಆಕ್ರೋಶ ಭುಗಿಲೆದ್ದಿದೆ. ಅಮೆರಿಕದಾದ್ಯಂತ ಪ್ರತಿಭಟನಾಕಾರರು ರ್ಯಾಲಿ ನಡೆಸಿ ಟ್ರಂಪ್ ಅವರ ಸರ್ವಾಧಿಕಾರಿ ಧೋರಣೆಯ ಆಡಳಿತ ಶೈಲಿ, ವಲಸೆ ನೀತಿ ಹಾಗೂ ಇರಾನ್ ವಿರುದ್ಧದ ಯುದ್ಧದ ಕುರಿತು ತಮ್ಮ ಆಕ್ರೋಶಗಳನ್ನು ವ್ಯಕ್ತಪಡಿಸಿದ್ದಾರೆ.</p><p><a href="https://www.prajavani.net/news/world-news/no-kings-day-against-trump-protest-america-outrage-3866344">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಬೆಂಗಳೂರು:</strong> ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಉದ್ಘಾಟನಾ ಪಂದ್ಯದಲ್ಲಿ ಆರು ವಿಕೆಟ್ ಅಂತರದ ಗೆಲುವು ದಾಖಲಿಸಿರುವ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಶುಭಾರಂಭ ಮಾಡಿಕೊಂಡಿದೆ. </p> <p><a href="https://www.prajavani.net/sports/cricket/ipl-2026-rcb-vs-srh-fastest-200-plus-run-chase-virat-kohli-record-devdutt-padikkal-match-highlights-3866330">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯ, ರಾಷ್ಟ್ರೀಯ, ವಿದೇಶ, ಕ್ರೀಡೆ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p><strong> ಮೈಸೂರು:</strong> ‘ರಾಜ್ಯದಲ್ಲಿ ದ್ವಿಭಾಷಾ ನೀತಿಯನ್ನು ಇನ್ನೂ ಮಾಡಿಲ್ಲ. ತೃತೀಯ ಭಾಷೆ ಹಿಂದಿಯನ್ನು ಕಡ್ಡಾಯ ಮಾಡಬಾರದು ಎಂದು ಹೇಳಿದ್ದೇವೆ. ಇದು ಈ ವರ್ಷದಿಂದಲೇ ಜಾರಿಯಾಗಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p><a href="https://www.prajavani.net/news/karnataka-news/siddaramaiah-hindi-not-compulsory-sslc-exam-language-policy-3864751">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p> .<p><strong>ಬೆಂಗಳೂರು:</strong> ದ್ವಿಭಾಷಾ ನೀತಿಯ ಭಾಗವಾಗಿಯೇ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಯ ಅಂಕಗಳನ್ನು ಫಲಿತಾಂಶಕ್ಕೆ ಪರಿಗಣಿಸದಿರಲು ನಿರ್ಧರಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.</p><p><a href="https://www.prajavani.net/news/karnataka-news/madhu-bangarappa-sslc-hindi-grading-policy-3865196">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a><br></p>.<p><strong>ಮಂಗಳೂರು:</strong> ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ವಿವಿಧೆಡೆ ಶನಿವಾರ ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗಿದೆ. ಕರಾವಳಿಯಲ್ಲಿ ಎರಡು ವಾರಗಳಿಂದ ಈಚೆಗೆ ಉಷ್ಣಾಂಶ ಹೆಚ್ಚಳವಾಗಿತ್ತು. ಜನರು ಸೆಖೆಯಿಂದ ಬಸವಳಿದಿದ್ದರು. ಕೆಲವೆಡೆ ಮಳೆ ಜೊತೆ ಆಲಿಕಲ್ಲುಗಳು ಬಿದ್ದಿವೆ.</p><p><a href="https://www.prajavani.net/news/karnataka-news/karnataka-rain-mangaluru-chikkamagaluru-mysuru-thunderstorm-alert-3865404">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಸಿಯೋಲ್:</strong> ಮೇಲ್ದರ್ಜೆಗೇರಿಸಲಾದ ಘನ-ಇಂಧನ ರಾಕೆಟ್ ಎಂಜಿನ್ ಅನ್ನು ಉತ್ತರ ಕೊರಿಯಾ ಶನಿವಾರ ಪರೀಕ್ಷೆ ಮಾಡಿದ್ದು, ಸರ್ವಾಧಿಕಾರಿ ಕಿಮ್ ಉನ್ ಜಾನ್ ಉಪಸ್ಥಿತರಿದ್ದರು ಎಂದು ಸರ್ಕಾರಿ ಮಾಧ್ಯಮ ವರದಿ ಮಾಡಿದೆ.</p><p><a href="https://www.prajavani.net/news/world-news/north-korea-tests-new-solid-fuel-rocket-engine-with-kim-jong-un-presence-3866332">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಬೆಂಗಳೂರು:</strong> ‘ಆರೋಗ್ಯ ಸೇವೆಯಲ್ಲಿ ಕರ್ನಾಟಕವು ದೇಶದಲ್ಲೇ ಮುಂಚೂಣಿಯಲ್ಲಿದೆ. ನಮ್ಮ ಸರ್ಕಾರವು ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗಾಗಿ 450 ಹಾಸಿಗೆಯುಳ್ಳ ಅತ್ಯಾಧುನಿಕ ಹಾಗೂ ಸುಸಜ್ಜಿತ ಆಸ್ಪತ್ರೆ ಆರಂಭಿಸಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ಹೇಳಿದರು.</p><p><a href="https://www.prajavani.net/news/karnataka-news/bangalore-new-children-hospital-inauguration-sharan-prakash-patil-3865409">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ನೊಯ್ಡಾ (ಉತ್ತರ ಪ್ರದೇಶ)</strong>: ‘ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷವು ಹಲವು ಸವಾಲುಗಳನ್ನು ಒಡ್ಡುತ್ತಿದ್ದು, ಭಾರತ ಇವುಗಳನ್ನು ತನ್ನೆಲ್ಲ ಶಕ್ತಿಯೊಂದಿಗೆ ಸಮರ್ಥವಾಗಿ ಎದುರಿಸುತ್ತಿದೆ. ದೇಶದ ಜನರ ಹಿತಾಸಕ್ತಿ ರಕ್ಷಣೆಗೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದರು.</p><p><a href="https://www.prajavani.net/news/india-news/noida-pm-modi-india-security-west-asia-conflict-3865570">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಹೈದರಾಬಾದ್:</strong> ರಾಜ್ಯದ ರಾಜಧಾನಿಯಾಗಿ ಅಮರಾವತಿ ನಗರಕ್ಕೆ ಕಾನೂನುಬದ್ಧ ಮಾನ್ಯತೆ ನೀಡುವುದಕ್ಕೆ ಆಂಧ್ರಪ್ರದೇಶ ಪುನರ್ರಚನೆ ಕಾಯ್ದೆಗೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಸರ್ವಾನುಮತದ ನಿರ್ಣಯವನ್ನು ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಶನಿವಾರ ಅಂಗೀಕರಿಸಲಾಯಿತು. </p><p><a href="https://www.prajavani.net/news/india-news/andhra-pradesh-amaravati-capital-resolution-assembly-3865211">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ನವದೆಹಲಿ:</strong> ದೇಶದಲ್ಲಿ 15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರ ಒಟ್ಟಾರೆ ನಿರುದ್ಯೋಗ ಪ್ರಮಾಣವು 2025ರಲ್ಲಿ ಶೇಕಡ 3.1ಕ್ಕೆ ಇಳಿದಿದೆ. ಇದು 2024ರಲ್ಲಿ ಶೇ 3.2ರಷ್ಟಿತ್ತು ಎಂದು ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಸಮೀಕ್ಷೆ ತಿಳಿಸಿದೆ.</p><p><a href="https://www.prajavani.net/business/commerce-news/unemployment-rate-india-decreased-to-three-point-one-percent-survey-3864976">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ವಾಷಿಂಗ್ಟನ್:</strong> ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಶನಿವಾರ ವ್ಯಾಪಕ ಆಕ್ರೋಶ ಭುಗಿಲೆದ್ದಿದೆ. ಅಮೆರಿಕದಾದ್ಯಂತ ಪ್ರತಿಭಟನಾಕಾರರು ರ್ಯಾಲಿ ನಡೆಸಿ ಟ್ರಂಪ್ ಅವರ ಸರ್ವಾಧಿಕಾರಿ ಧೋರಣೆಯ ಆಡಳಿತ ಶೈಲಿ, ವಲಸೆ ನೀತಿ ಹಾಗೂ ಇರಾನ್ ವಿರುದ್ಧದ ಯುದ್ಧದ ಕುರಿತು ತಮ್ಮ ಆಕ್ರೋಶಗಳನ್ನು ವ್ಯಕ್ತಪಡಿಸಿದ್ದಾರೆ.</p><p><a href="https://www.prajavani.net/news/world-news/no-kings-day-against-trump-protest-america-outrage-3866344">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಬೆಂಗಳೂರು:</strong> ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಉದ್ಘಾಟನಾ ಪಂದ್ಯದಲ್ಲಿ ಆರು ವಿಕೆಟ್ ಅಂತರದ ಗೆಲುವು ದಾಖಲಿಸಿರುವ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಶುಭಾರಂಭ ಮಾಡಿಕೊಂಡಿದೆ. </p> <p><a href="https://www.prajavani.net/sports/cricket/ipl-2026-rcb-vs-srh-fastest-200-plus-run-chase-virat-kohli-record-devdutt-padikkal-match-highlights-3866330">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>