<p>ರಾಜ್ಯ, ರಾಷ್ಟ್ರೀಯ, ವಿದೇಶ, ವಾಣಿಜ್ಯ ಹಾಗೂ ಕ್ರೀಡೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p>ಭಾರತ ಮತ್ತು ನೆದರ್ಲೆಂಡ್ಸ್ ನಡುವೆ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಗೊಳಿಸಲು ರಕ್ಷಣಾ, ನಿರ್ಣಾಯಕ ಖನಿಜಗಳು ಮತ್ತು ಇತರ ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ವೃದ್ಧಿಸಲು 17 ಒಪ್ಪಂದಗಳಿಗೆ ಸಹಿ ಮಾಡಿದೆ.</p><p>ಎರಡೂ ದೇಶಗಳ ನಡುವೆ ವ್ಯಾಪಾರ, ಹೂಡಿಕೆ, ಭದ್ರತೆ, ಸೆಮಿಕಂಡಕ್ಟರ್, ಬಾಹ್ಯಾಕಾಶ, ಕ್ವಾಂಟಮ್ ಕಂಪ್ಯೂಟಿಂಗ್ ಸೇರಿದಂತೆ ಉದಯೋನ್ಮುಖ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಂಬಂಧ ವೃದ್ಧಿಸುವ ಉದ್ದೇಶವನ್ನು ಈ ಒಪ್ಪಂದಗಳು ಹೊಂದಿವೆ.</p>.ಸೆಮಿಕಂಡೆಕ್ಟರ್, ಕ್ವಾಂಟಮ್ ಸೇರಿ 17 ಒಪ್ಪಂದಗಳಿಗೆ ಭಾರತ–ನೆದರ್ಲೆಂಡ್ಸ್ ಸಹಿ.<p>ಕೇರಳಂನ ನಿಯೋಜಿತ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ನೂತನ ಸಚಿವ ಸಂಪುಟದಲ್ಲಿ ಯಾರೆಲ್ಲಾ ಇರಲಿದ್ದಾರೆ ಎನ್ನುವುದನ್ನು ಭಾನುವಾರ(ಮೇ 17) ಘೋಷಿಸಿದ್ದಾರೆ. ಮೇ 18 ರಂದು ತಿರುವನಂತಪುರದಲ್ಲಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.</p>.ಕೇರಳಂ ನೂತನ ಸಚಿವ ಸಂಪುಟ ಘೋಷಿಸಿದ ಸತೀಶನ್: ಚೆನ್ನಿತ್ತಲ, ಮುರಳೀಧರನ್ಗೆ ಸ್ಥಾನ.<p>ಕೇರಳದ ರಾಜಧಾನಿ ತಿರುವನಂತಪುರದಿಂದ ನವದೆಹಲಿಯ ಹಜರತ್ ನಿಜಾಮುದ್ದೀನ್ಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್ಪ್ರೆಸ್ (12431) ರೈಲಿನ ಎ.ಸಿ. ಕೋಚ್ನಲ್ಲಿ ಭಾನುವಾರ ಬೆಳಿಗ್ಗೆ 5.15ರ ಸುಮಾರಿಗೆ ವೇಳೆ ಬೆಂಕಿ ಕಾಣಿಸಿಕೊಂಡಿದೆ. </p>.ತಿರುವನಂತಪುರ-ದೆಹಲಿ ರಾಜಧಾನಿ ಎಕ್ಸ್ಪ್ರೆಸ್ನಲ್ಲಿ ಬೆಂಕಿ: ಐದು ಮಂದಿಗೆ ಗಾಯ.<p>ವಾರಕ್ಕೆ ಎರಡು ದಿನ ಮನೆಯಿಂದ ಕೆಲಸ (ವರ್ಕ್ ಫ್ರಂ ಹೋಂ) ಮತ್ತು ಕಚೇರಿ ಸಮಯ ಬದಲಾವಣೆ ನೀತಿಯನ್ನು ಅಳವಡಿಸಿಕೊಳ್ಳುವಂತೆ ಖಾಸಗಿ ಕಂಪನಿಗಳು ಮತ್ತು ಸಂಸ್ಥೆಗಳಿಗೆ ದೆಹಲಿ ಸರ್ಕಾರ ಸಲಹೆ ನೀಡಿದೆ.</p>.ವರ್ಕ್ ಫ್ರಂ ಹೋಂ ನೀತಿ ಅಳವಡಿಕೆಗೆ ದೆಹಲಿ ಸರ್ಕಾರ ಮನವಿ.<p>ಮಾಸ್ಕೋ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳ ಮೇಲೆ ಉಕ್ರೇನ್ ನಡೆಸಿದ ಭಾರಿ ಡ್ರೋನ್ ದಾಳಿಯಲ್ಲಿ ಮೂವರು ಮೃತಪಟ್ಟಿದ್ದು, ಈ ಪೈಕಿ ಓರ್ವ ಭಾರತದ ಪ್ರಜೆ ಎಂದು ರಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ಭಾನುವಾರ ತಿಳಿಸಿದೆ.</p>.ರಷ್ಯಾ ಮೇಲೆ ಉಕ್ರೇನ್ ಡ್ರೋನ್ ದಾಳಿ: ಭಾರತ ಮೂಲದ ಕಾರ್ಮಿಕ ಸಾವು .<p>ಕಾಂಗೋದಲ್ಲಿ ಎಬೋಲಾ ವೈರಸ್ಗೆ 88 ಮಂದಿ ಸಾವಿಗೀಡಾದ ಬೆನ್ನಲ್ಲೇ, ವಿಶ್ವ ಆರೋಗ್ಯ ಸಂಸ್ಥೆ ಅಂತರರಾಷ್ಟ್ರೀಯ ಆರೋಗ್ಯ ತುರ್ತುಸ್ಥಿತಿ ಘೋಷಿಸಿದೆ.</p><p>ರವಾಂಡ ಬೆಂಬಲಿತ ಎಂ23 ಬಂಡುಕೋರ ಸಂಘನೆಯ ನಿಯಂತ್ರಣದಲ್ಲಿರುವ ಗೋಮಾದ ಡಿಆರ್ಸಿ ನಗರದಲ್ಲಿಯೂ ಪ್ರಕರಣಗಳು ಪತ್ತೆಯಾಗಿದ್ದು, ಇನ್ನಷ್ಟು ಹರಡುವ ಭೀತಿ ಹೆಚ್ಚಿದೆ.</p>.ಎಬೋಲಾ ಸೋಂಕು: ಜಾಗತಿಕ ಆರೋಗ್ಯ ತುರ್ತುಸ್ಥಿತಿ ಘೋಷಿಸಿದ ವಿಶ್ವ ಆರೋಗ್ಯ ಸಂಸ್ಥೆ.<p>ಮೇ 18 ರಂದು ತಿರುವನಂತಪುರದಲ್ಲಿ ನಡೆಯಲಿರುವ ಕೇರಳಂನ ನಿಯೋಜಿತ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.ಸತೀಶನ್ ಪ್ರಮಾಣ ವಚನ: ಖರ್ಗೆ, ರಾಹುಲ್ ಭಾಗಿ; ವಿಜಯ್, ಸಿದ್ದರಾಮಯ್ಯಗೆ ಆಹ್ವಾನ.<p>ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಮಧ್ಯದಲ್ಲೇ 20 ಸಾವಿರ ಟನ್ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್ಪಿಜಿ) ಸಂಗ್ರಹವಿದ್ದ ಹಡಗೊಂದು ಹೊರ್ಮುಜ್ ಜಲಸಂಧಿಯನ್ನು ದಾಟಿ ಗುಜರಾತ್ನ ಕಾಂಡ್ಲಾದಲ್ಲಿರುವ ದೀನ್ದಯಾಳ್ ಬಂದರಿಗೆ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಹೊರ್ಮುಜ್ ದಾಟಿ ಗುಜರಾತ್ ತಲುಪಿದ 20 ಸಾವಿರ ಟನ್ ಎಲ್ಪಿಜಿ ಸಂಗ್ರಹವಿದ್ದ ಹಡಗು.<p>ಟ್ರೋಲ್-ಡೀಸೆಲ್ ದರ ಏರಿಸಿದ್ದಕ್ಕೆ ಕೇಂದ್ರ ಸರ್ಕಾರದ ಮೇಲೆ ಮುಗಿಬೀಳುತ್ತಿರುವ ಕಾಂಗ್ರೆಸ್ ನಾಯಕರು ಗ್ಯಾರಂಟಿ ಯೋಜನೆಗಳಿಗಾಗಿ ಕಳೆದ ಮೂರು ವರ್ಷದಲ್ಲಿ ರಾಜ್ಯದಲ್ಲಿ ವಿದ್ಯುತ್, ಬಸ್ ಹಾಗೂ ಮದ್ಯದ ದರ ಎಷ್ಟು ಏರಿಸಿದ್ದೀರಿ ಎಂಬ ಪಟ್ಟಿ ಇಡಲಿ' ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಸವಾಲು ಹಾಕಿದರು.</p>.ನೀವು ಎಷ್ಟು ದರ ಏರಿಸಿದ್ದೀರಿ ಪಟ್ಟಿ ಕೊಡಿ: ಕಾಂಗ್ರೆಸ್ಗೆ ಕುಮಾರಸ್ವಾಮಿ ಪ್ರಶ್ನೆ.<p>ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 61ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರನ್ಗಳ ಗೆಲುವು ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇ–ಆಫ್ಗೆ ಲಗ್ಗೆಯಿಟ್ಟಿದೆ.</p>.ಕೊಹ್ಲಿ, ವೆಂಕಿ ಅರ್ಧಶತಕ: ಪಂಜಾಬ್ ವಿರುದ್ಧ ಗೆದ್ದು ಪ್ಲೇ–ಆಫ್ಗೇರಿದ ಆರ್ಸಿಬಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯ, ರಾಷ್ಟ್ರೀಯ, ವಿದೇಶ, ವಾಣಿಜ್ಯ ಹಾಗೂ ಕ್ರೀಡೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p>ಭಾರತ ಮತ್ತು ನೆದರ್ಲೆಂಡ್ಸ್ ನಡುವೆ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಗೊಳಿಸಲು ರಕ್ಷಣಾ, ನಿರ್ಣಾಯಕ ಖನಿಜಗಳು ಮತ್ತು ಇತರ ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ವೃದ್ಧಿಸಲು 17 ಒಪ್ಪಂದಗಳಿಗೆ ಸಹಿ ಮಾಡಿದೆ.</p><p>ಎರಡೂ ದೇಶಗಳ ನಡುವೆ ವ್ಯಾಪಾರ, ಹೂಡಿಕೆ, ಭದ್ರತೆ, ಸೆಮಿಕಂಡಕ್ಟರ್, ಬಾಹ್ಯಾಕಾಶ, ಕ್ವಾಂಟಮ್ ಕಂಪ್ಯೂಟಿಂಗ್ ಸೇರಿದಂತೆ ಉದಯೋನ್ಮುಖ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಂಬಂಧ ವೃದ್ಧಿಸುವ ಉದ್ದೇಶವನ್ನು ಈ ಒಪ್ಪಂದಗಳು ಹೊಂದಿವೆ.</p>.ಸೆಮಿಕಂಡೆಕ್ಟರ್, ಕ್ವಾಂಟಮ್ ಸೇರಿ 17 ಒಪ್ಪಂದಗಳಿಗೆ ಭಾರತ–ನೆದರ್ಲೆಂಡ್ಸ್ ಸಹಿ.<p>ಕೇರಳಂನ ನಿಯೋಜಿತ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ನೂತನ ಸಚಿವ ಸಂಪುಟದಲ್ಲಿ ಯಾರೆಲ್ಲಾ ಇರಲಿದ್ದಾರೆ ಎನ್ನುವುದನ್ನು ಭಾನುವಾರ(ಮೇ 17) ಘೋಷಿಸಿದ್ದಾರೆ. ಮೇ 18 ರಂದು ತಿರುವನಂತಪುರದಲ್ಲಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.</p>.ಕೇರಳಂ ನೂತನ ಸಚಿವ ಸಂಪುಟ ಘೋಷಿಸಿದ ಸತೀಶನ್: ಚೆನ್ನಿತ್ತಲ, ಮುರಳೀಧರನ್ಗೆ ಸ್ಥಾನ.<p>ಕೇರಳದ ರಾಜಧಾನಿ ತಿರುವನಂತಪುರದಿಂದ ನವದೆಹಲಿಯ ಹಜರತ್ ನಿಜಾಮುದ್ದೀನ್ಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್ಪ್ರೆಸ್ (12431) ರೈಲಿನ ಎ.ಸಿ. ಕೋಚ್ನಲ್ಲಿ ಭಾನುವಾರ ಬೆಳಿಗ್ಗೆ 5.15ರ ಸುಮಾರಿಗೆ ವೇಳೆ ಬೆಂಕಿ ಕಾಣಿಸಿಕೊಂಡಿದೆ. </p>.ತಿರುವನಂತಪುರ-ದೆಹಲಿ ರಾಜಧಾನಿ ಎಕ್ಸ್ಪ್ರೆಸ್ನಲ್ಲಿ ಬೆಂಕಿ: ಐದು ಮಂದಿಗೆ ಗಾಯ.<p>ವಾರಕ್ಕೆ ಎರಡು ದಿನ ಮನೆಯಿಂದ ಕೆಲಸ (ವರ್ಕ್ ಫ್ರಂ ಹೋಂ) ಮತ್ತು ಕಚೇರಿ ಸಮಯ ಬದಲಾವಣೆ ನೀತಿಯನ್ನು ಅಳವಡಿಸಿಕೊಳ್ಳುವಂತೆ ಖಾಸಗಿ ಕಂಪನಿಗಳು ಮತ್ತು ಸಂಸ್ಥೆಗಳಿಗೆ ದೆಹಲಿ ಸರ್ಕಾರ ಸಲಹೆ ನೀಡಿದೆ.</p>.ವರ್ಕ್ ಫ್ರಂ ಹೋಂ ನೀತಿ ಅಳವಡಿಕೆಗೆ ದೆಹಲಿ ಸರ್ಕಾರ ಮನವಿ.<p>ಮಾಸ್ಕೋ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳ ಮೇಲೆ ಉಕ್ರೇನ್ ನಡೆಸಿದ ಭಾರಿ ಡ್ರೋನ್ ದಾಳಿಯಲ್ಲಿ ಮೂವರು ಮೃತಪಟ್ಟಿದ್ದು, ಈ ಪೈಕಿ ಓರ್ವ ಭಾರತದ ಪ್ರಜೆ ಎಂದು ರಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ಭಾನುವಾರ ತಿಳಿಸಿದೆ.</p>.ರಷ್ಯಾ ಮೇಲೆ ಉಕ್ರೇನ್ ಡ್ರೋನ್ ದಾಳಿ: ಭಾರತ ಮೂಲದ ಕಾರ್ಮಿಕ ಸಾವು .<p>ಕಾಂಗೋದಲ್ಲಿ ಎಬೋಲಾ ವೈರಸ್ಗೆ 88 ಮಂದಿ ಸಾವಿಗೀಡಾದ ಬೆನ್ನಲ್ಲೇ, ವಿಶ್ವ ಆರೋಗ್ಯ ಸಂಸ್ಥೆ ಅಂತರರಾಷ್ಟ್ರೀಯ ಆರೋಗ್ಯ ತುರ್ತುಸ್ಥಿತಿ ಘೋಷಿಸಿದೆ.</p><p>ರವಾಂಡ ಬೆಂಬಲಿತ ಎಂ23 ಬಂಡುಕೋರ ಸಂಘನೆಯ ನಿಯಂತ್ರಣದಲ್ಲಿರುವ ಗೋಮಾದ ಡಿಆರ್ಸಿ ನಗರದಲ್ಲಿಯೂ ಪ್ರಕರಣಗಳು ಪತ್ತೆಯಾಗಿದ್ದು, ಇನ್ನಷ್ಟು ಹರಡುವ ಭೀತಿ ಹೆಚ್ಚಿದೆ.</p>.ಎಬೋಲಾ ಸೋಂಕು: ಜಾಗತಿಕ ಆರೋಗ್ಯ ತುರ್ತುಸ್ಥಿತಿ ಘೋಷಿಸಿದ ವಿಶ್ವ ಆರೋಗ್ಯ ಸಂಸ್ಥೆ.<p>ಮೇ 18 ರಂದು ತಿರುವನಂತಪುರದಲ್ಲಿ ನಡೆಯಲಿರುವ ಕೇರಳಂನ ನಿಯೋಜಿತ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.ಸತೀಶನ್ ಪ್ರಮಾಣ ವಚನ: ಖರ್ಗೆ, ರಾಹುಲ್ ಭಾಗಿ; ವಿಜಯ್, ಸಿದ್ದರಾಮಯ್ಯಗೆ ಆಹ್ವಾನ.<p>ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಮಧ್ಯದಲ್ಲೇ 20 ಸಾವಿರ ಟನ್ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್ಪಿಜಿ) ಸಂಗ್ರಹವಿದ್ದ ಹಡಗೊಂದು ಹೊರ್ಮುಜ್ ಜಲಸಂಧಿಯನ್ನು ದಾಟಿ ಗುಜರಾತ್ನ ಕಾಂಡ್ಲಾದಲ್ಲಿರುವ ದೀನ್ದಯಾಳ್ ಬಂದರಿಗೆ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಹೊರ್ಮುಜ್ ದಾಟಿ ಗುಜರಾತ್ ತಲುಪಿದ 20 ಸಾವಿರ ಟನ್ ಎಲ್ಪಿಜಿ ಸಂಗ್ರಹವಿದ್ದ ಹಡಗು.<p>ಟ್ರೋಲ್-ಡೀಸೆಲ್ ದರ ಏರಿಸಿದ್ದಕ್ಕೆ ಕೇಂದ್ರ ಸರ್ಕಾರದ ಮೇಲೆ ಮುಗಿಬೀಳುತ್ತಿರುವ ಕಾಂಗ್ರೆಸ್ ನಾಯಕರು ಗ್ಯಾರಂಟಿ ಯೋಜನೆಗಳಿಗಾಗಿ ಕಳೆದ ಮೂರು ವರ್ಷದಲ್ಲಿ ರಾಜ್ಯದಲ್ಲಿ ವಿದ್ಯುತ್, ಬಸ್ ಹಾಗೂ ಮದ್ಯದ ದರ ಎಷ್ಟು ಏರಿಸಿದ್ದೀರಿ ಎಂಬ ಪಟ್ಟಿ ಇಡಲಿ' ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಸವಾಲು ಹಾಕಿದರು.</p>.ನೀವು ಎಷ್ಟು ದರ ಏರಿಸಿದ್ದೀರಿ ಪಟ್ಟಿ ಕೊಡಿ: ಕಾಂಗ್ರೆಸ್ಗೆ ಕುಮಾರಸ್ವಾಮಿ ಪ್ರಶ್ನೆ.<p>ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 61ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರನ್ಗಳ ಗೆಲುವು ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇ–ಆಫ್ಗೆ ಲಗ್ಗೆಯಿಟ್ಟಿದೆ.</p>.ಕೊಹ್ಲಿ, ವೆಂಕಿ ಅರ್ಧಶತಕ: ಪಂಜಾಬ್ ವಿರುದ್ಧ ಗೆದ್ದು ಪ್ಲೇ–ಆಫ್ಗೇರಿದ ಆರ್ಸಿಬಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>