<p>ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯ ವಿದ್ಯಮಾನಗಳಿಗೆ ಸಂಬಂಧಿಸಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ.</p>.<p><strong>ವಾಷಿಂಗ್ಟನ್:</strong> ಪಶ್ಚಿಮ ಏಷ್ಯಾದಲ್ಲಿ ಯುದ್ದವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಅಮೆರಿಕ ಹಾಗೂ ಇರಾನ್ ನಡುವೆ ಸಕರಾತ್ಮಕ ಮಾತುಕತೆಗಳು ನಡೆದಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇದರಿಂದಾಗಿ ಇರಾನ್ ವಿದ್ಯುತ್ ಸ್ಥಾವರಗಳ ಮೇಲಿನ ದಾಳಿಯನ್ನು ಅಮೆರಿಕ ಐದು ದಿನಗಳ ಕಾಲ ಮುಂದೂಡಿದೆ ಎಂದು ಹೇಳಿದ್ದಾರೆ.</p>.ಐದು ದಿನಗಳ ಕಾಲ ಇರಾನ್ ವಿದ್ಯುತ್ ಸ್ಥಾವರಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್.<p>ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ಸೋಮವಾರ ಮಾತನಾಡಿದ್ದಾರೆ. ಈ ಜಾಗತಿಕ ಸಂಘರ್ಷದಿಂದಾಗಿ ಅನಿರೀಕ್ಷಿತ ಸವಾಲುಗಳನ್ನು ಎದುರಿಸಬೇಕಾಗಬಹುದು. ಕೋವಿಡ್-19 ಪರಿಸ್ಥಿತಿ ಎದುರಿಸಿದಂತೆ, ಈ ಸಂಕಷ್ಟದ ಸಮಯದಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಇರಬೇಕು ಎಂದು ಅವರು ಕರೆ ನೀಡಿದ್ದಾರೆ.</p>.ಕೊಲ್ಲಿ ಯುದ್ಧ: ಕೋವಿಡ್ನಂತ ಪರಿಸ್ಥಿತಿ..ಸವಾಲು ಎದುರಿಸಲು ಸಿದ್ಧರಾಗಿ–ಪಿಎಂ ಮೋದಿ.<p><strong>ದಾವಣಗೆರೆ</strong>: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿರುವುದರಿಂದ ಅಸಮಾಧಾನಗೊಂಡಿರುವ ಸಾದಿಕ್ ಪೈಲ್ವಾನ್, ಬಂಡಾಯ ಅಭ್ಯರ್ಥಿಯಾಗಿ ಸೋಮವಾರ ಉಮೇದುವಾರಿಕೆ ಸಲ್ಲಿಸಿದರು.</p>.ದಾವಣಗೆರೆ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸಾದಿಕ್ ನಾಮಪತ್ರ ಸಲ್ಲಿಕೆ.<p><strong>ದಾವಣಗೆರೆ</strong>: ದಕ್ಷಿಣ ವಿಧಾನಸಭಾ ಕ್ಷೇತ್ರ ಗೆಲ್ಲುವ ಮಾನದಂಡ ಆಧರಿಸಿ ಸಮರ್ಥ ಶಾಮನೂರು ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಮುಸ್ಲಿಂ ಸಮುದಾಯದ ಮುಖಂಡರಿಗೆ ವಿಧಾನಪರಿಷತ್ ಹಾಗೂ ನಿಗಮ, ಮಂಡಳಿ ನೇಮಕಾತಿಯಲ್ಲಿ ಒತ್ತು ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಶ್ವಾಸನೆ ನೀಡಿದರು.</p>.ಎಂಎಲ್ಸಿ, ನಿಗಮದಲ್ಲಿ ಮುಸ್ಲಿಂ ನಾಯಕರಿಗೆ ಆದ್ಯತೆ: ಡಿ.ಕೆ.ಶಿವಕುಮಾರ್ ಭರವಸೆ.<p><strong>ಗುವಾಹಟಿ:</strong> ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ, ಉದ್ಯಮಿ ರಿನಿಕಿ ಭುಯಾನ್ ಶರ್ಮಾ ಆಸ್ತಿ ಕಳೆದ ಐದು ವರ್ಷಗಳಲ್ಲಿ ದ್ವಿಗುಣವಾಗಿದೆ.</p>.Assam Election: 5 ವರ್ಷಗಳಲ್ಲಿ ಸಿಎಂ ಹಿಮಂತ ಶರ್ಮಾ, ಪತ್ನಿ ಆಸ್ತಿ ದ್ವಿಗುಣ.<p><strong>ಬಾಗಲಕೋಟೆ</strong>: ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಸೋಮವಾರ ನಾಮಪತ್ರ ಸಲ್ಲಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ, ಮಾಜಿ ಸಚಿವ ಅಜಯಕುಮಾರ ಸರನಾಯಕ ಮತ್ತಿತರರು ಪಾಲ್ಗೊಂಡಿದ್ದರು.</p>.ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಉಮೇಶ ಮೇಟಿ.<p><strong>ನ್ಯೂಯಾರ್ಕ್</strong>: ಏರ್ ಕೆನಡಾ ಎಕ್ಸ್ಪ್ರೆಸ್ನ ಪ್ರಯಾಣಿಕ ವಿಮಾನವೊಂದು ಲ್ಯಾಂಡಿಂಗ್ ವೇಳೆ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದಿರುವ ಘಟನೆ ನ್ಯೂಯಾರ್ಕ್ನ LaGuardia ವಿಮಾನ ನಿಲ್ದಾಣದಲ್ಲಿ ನಡೆದಿದೆ.</p>.New York: ಲ್ಯಾಂಡಿಂಗ್ ವೇಳೆ ವಾಹನಕ್ಕೆ ಡಿಕ್ಕಿ ಹೊಡೆದ ವಿಮಾನ, ಇಬ್ಬರ ಸಾವು!.<p>ಬೆಂಗಳೂರು: ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಆರೋಪವು ಮೂಡುಬಿದರೆ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ.ಸಂದೇಶ್ ಅವರ ಮೇಲಿದ್ದು, ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.</p>.ಮೂಡುಬಿದರೆ ಇನ್ಸ್ಪೆಕ್ಟರ್ರಿಂದ ದೌರ್ಜನ್ಯ: ಸಿಐಡಿ ತನಿಖೆ– ಜಿ.ಪರಮೇಶ್ವರ.<p>ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆಯಿಂದ ಅಸಮಾಧಾನಗೊಂಡ ಮುಸ್ಲಿಂ ಸಮುದಾಯದ ಮುಖಂಡರ ಮನವೊಲಿಸುತ್ತೇವೆ. ಅವರಿಗೆ ಪರ್ಯಾಯ ಅವಕಾಶಗಳನ್ನು ಮಾಡಿಕೊಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.</p>.ಮುಸ್ಲಿಂ ಸಮುದಾಯದ ಮುಖಂಡರ ಮನವೊಲಿಸುತ್ತೇವೆ: ಸಿದ್ದರಾಮಯ್ಯ.<p>ಕೆಲವು ವಿದೇಶಿ ಆಟಗಾರರಿಗೆ ಟೂರ್ನಿಯಲ್ಲಿ ಪಾಲ್ಗೊಳ್ಳದಂತೆ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಬೆದರಿಕೆ ಒಡ್ಡಿರುವುದಾಗಿ ವರದಿಯಾಗಿದೆ.</p>.PSLನಿಂದ ತಕ್ಷಣ ಹಿಂದೆ ಸರಿಯಿರಿ: ವಾರ್ನರ್, ಸ್ಟೀವ್ ಸ್ಮಿತ್ಗೆ ಎಚ್ಚರಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯ ವಿದ್ಯಮಾನಗಳಿಗೆ ಸಂಬಂಧಿಸಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ.</p>.<p><strong>ವಾಷಿಂಗ್ಟನ್:</strong> ಪಶ್ಚಿಮ ಏಷ್ಯಾದಲ್ಲಿ ಯುದ್ದವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಅಮೆರಿಕ ಹಾಗೂ ಇರಾನ್ ನಡುವೆ ಸಕರಾತ್ಮಕ ಮಾತುಕತೆಗಳು ನಡೆದಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇದರಿಂದಾಗಿ ಇರಾನ್ ವಿದ್ಯುತ್ ಸ್ಥಾವರಗಳ ಮೇಲಿನ ದಾಳಿಯನ್ನು ಅಮೆರಿಕ ಐದು ದಿನಗಳ ಕಾಲ ಮುಂದೂಡಿದೆ ಎಂದು ಹೇಳಿದ್ದಾರೆ.</p>.ಐದು ದಿನಗಳ ಕಾಲ ಇರಾನ್ ವಿದ್ಯುತ್ ಸ್ಥಾವರಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್.<p>ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ಸೋಮವಾರ ಮಾತನಾಡಿದ್ದಾರೆ. ಈ ಜಾಗತಿಕ ಸಂಘರ್ಷದಿಂದಾಗಿ ಅನಿರೀಕ್ಷಿತ ಸವಾಲುಗಳನ್ನು ಎದುರಿಸಬೇಕಾಗಬಹುದು. ಕೋವಿಡ್-19 ಪರಿಸ್ಥಿತಿ ಎದುರಿಸಿದಂತೆ, ಈ ಸಂಕಷ್ಟದ ಸಮಯದಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಇರಬೇಕು ಎಂದು ಅವರು ಕರೆ ನೀಡಿದ್ದಾರೆ.</p>.ಕೊಲ್ಲಿ ಯುದ್ಧ: ಕೋವಿಡ್ನಂತ ಪರಿಸ್ಥಿತಿ..ಸವಾಲು ಎದುರಿಸಲು ಸಿದ್ಧರಾಗಿ–ಪಿಎಂ ಮೋದಿ.<p><strong>ದಾವಣಗೆರೆ</strong>: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿರುವುದರಿಂದ ಅಸಮಾಧಾನಗೊಂಡಿರುವ ಸಾದಿಕ್ ಪೈಲ್ವಾನ್, ಬಂಡಾಯ ಅಭ್ಯರ್ಥಿಯಾಗಿ ಸೋಮವಾರ ಉಮೇದುವಾರಿಕೆ ಸಲ್ಲಿಸಿದರು.</p>.ದಾವಣಗೆರೆ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸಾದಿಕ್ ನಾಮಪತ್ರ ಸಲ್ಲಿಕೆ.<p><strong>ದಾವಣಗೆರೆ</strong>: ದಕ್ಷಿಣ ವಿಧಾನಸಭಾ ಕ್ಷೇತ್ರ ಗೆಲ್ಲುವ ಮಾನದಂಡ ಆಧರಿಸಿ ಸಮರ್ಥ ಶಾಮನೂರು ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಮುಸ್ಲಿಂ ಸಮುದಾಯದ ಮುಖಂಡರಿಗೆ ವಿಧಾನಪರಿಷತ್ ಹಾಗೂ ನಿಗಮ, ಮಂಡಳಿ ನೇಮಕಾತಿಯಲ್ಲಿ ಒತ್ತು ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಶ್ವಾಸನೆ ನೀಡಿದರು.</p>.ಎಂಎಲ್ಸಿ, ನಿಗಮದಲ್ಲಿ ಮುಸ್ಲಿಂ ನಾಯಕರಿಗೆ ಆದ್ಯತೆ: ಡಿ.ಕೆ.ಶಿವಕುಮಾರ್ ಭರವಸೆ.<p><strong>ಗುವಾಹಟಿ:</strong> ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ, ಉದ್ಯಮಿ ರಿನಿಕಿ ಭುಯಾನ್ ಶರ್ಮಾ ಆಸ್ತಿ ಕಳೆದ ಐದು ವರ್ಷಗಳಲ್ಲಿ ದ್ವಿಗುಣವಾಗಿದೆ.</p>.Assam Election: 5 ವರ್ಷಗಳಲ್ಲಿ ಸಿಎಂ ಹಿಮಂತ ಶರ್ಮಾ, ಪತ್ನಿ ಆಸ್ತಿ ದ್ವಿಗುಣ.<p><strong>ಬಾಗಲಕೋಟೆ</strong>: ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಸೋಮವಾರ ನಾಮಪತ್ರ ಸಲ್ಲಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ, ಮಾಜಿ ಸಚಿವ ಅಜಯಕುಮಾರ ಸರನಾಯಕ ಮತ್ತಿತರರು ಪಾಲ್ಗೊಂಡಿದ್ದರು.</p>.ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಉಮೇಶ ಮೇಟಿ.<p><strong>ನ್ಯೂಯಾರ್ಕ್</strong>: ಏರ್ ಕೆನಡಾ ಎಕ್ಸ್ಪ್ರೆಸ್ನ ಪ್ರಯಾಣಿಕ ವಿಮಾನವೊಂದು ಲ್ಯಾಂಡಿಂಗ್ ವೇಳೆ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದಿರುವ ಘಟನೆ ನ್ಯೂಯಾರ್ಕ್ನ LaGuardia ವಿಮಾನ ನಿಲ್ದಾಣದಲ್ಲಿ ನಡೆದಿದೆ.</p>.New York: ಲ್ಯಾಂಡಿಂಗ್ ವೇಳೆ ವಾಹನಕ್ಕೆ ಡಿಕ್ಕಿ ಹೊಡೆದ ವಿಮಾನ, ಇಬ್ಬರ ಸಾವು!.<p>ಬೆಂಗಳೂರು: ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಆರೋಪವು ಮೂಡುಬಿದರೆ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ.ಸಂದೇಶ್ ಅವರ ಮೇಲಿದ್ದು, ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.</p>.ಮೂಡುಬಿದರೆ ಇನ್ಸ್ಪೆಕ್ಟರ್ರಿಂದ ದೌರ್ಜನ್ಯ: ಸಿಐಡಿ ತನಿಖೆ– ಜಿ.ಪರಮೇಶ್ವರ.<p>ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆಯಿಂದ ಅಸಮಾಧಾನಗೊಂಡ ಮುಸ್ಲಿಂ ಸಮುದಾಯದ ಮುಖಂಡರ ಮನವೊಲಿಸುತ್ತೇವೆ. ಅವರಿಗೆ ಪರ್ಯಾಯ ಅವಕಾಶಗಳನ್ನು ಮಾಡಿಕೊಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.</p>.ಮುಸ್ಲಿಂ ಸಮುದಾಯದ ಮುಖಂಡರ ಮನವೊಲಿಸುತ್ತೇವೆ: ಸಿದ್ದರಾಮಯ್ಯ.<p>ಕೆಲವು ವಿದೇಶಿ ಆಟಗಾರರಿಗೆ ಟೂರ್ನಿಯಲ್ಲಿ ಪಾಲ್ಗೊಳ್ಳದಂತೆ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಬೆದರಿಕೆ ಒಡ್ಡಿರುವುದಾಗಿ ವರದಿಯಾಗಿದೆ.</p>.PSLನಿಂದ ತಕ್ಷಣ ಹಿಂದೆ ಸರಿಯಿರಿ: ವಾರ್ನರ್, ಸ್ಟೀವ್ ಸ್ಮಿತ್ಗೆ ಎಚ್ಚರಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>