<p><strong>ನವದೆಹಲಿ</strong>: ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಸಂವಿಧಾನ ಮತ್ತು ಕಾನೂನುನನ್ನು ಜಾರಿಗೊಳಿಸುವ ಜವಾಬ್ದಾರಿ ಹೊಂದಿರುವವರೇ, ಅವುಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ರಾಹುಲ್, ಉತ್ತರ ಪ್ರದೇಶದ ಸುಲ್ತಾನ್ಪುರದ ದರೋಡೆ ಪ್ರಕರಣದಲ್ಲಿ ಭಾಗಿಯಾದ ಆರೋಪದಡಿ ವ್ಯಕ್ತಿಯೊಬ್ಬನನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ. ಮೃತ ವ್ಯಕ್ತಿಯ ಕುಟುಂಬಸ್ಥರ ಕಣ್ಣೀರು ನಮ್ಮನ್ನು ಪ್ರಶ್ನೆ ಮಾಡುವಂತಿದೆ ಎಂದು ಕಿಡಿಕಾರಿದ್ದಾರೆ.</p>.Paralympics 2024: ಜಾವೆಲಿನ್ ಥ್ರೋನಲ್ಲಿ ಚಿನ್ನ ಗೆದ್ದ ನವದೀಪ್ ಸಿಂಗ್.ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಸಿದ್ದ: ಡಿಸಿಎಂ ಡಿ.ಕೆ ಶಿವಕುಮಾರ್. <p>'ಆರೋಪ ಸಾಬೀತಾದರೆ ಅಪರಾಧಿಗೆ ಯಾವ ಶಿಕ್ಷೆ ನೀಡಬೇಕೆಂಬುವುದನ್ನು ನ್ಯಾಯಾಲಯ ನಿರ್ಧರಿಸುತ್ತದೆ. ದರೋಡೆ ಆರೋಪದಡಿ ಮಂಗೇಶ್ ಯಾದವ್ನನ್ನು ಎನ್ಕೌಂಟರ್ ಮಾಡಿದ್ದು ಸರಿಯಾದ ಕ್ರಮವಲ್ಲ. ಈ ಮೂಲಕ ಬಿಜೆಪಿಗೆ ಕಾನೂನು ಸುವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತಾಗಿದೆ' ಎಂದು ರಾಹುಲ್ ಹೇಳಿದ್ದಾರೆ. </p><p>ಉತ್ತರ ಪ್ರದೇಶದಲ್ಲಿ ನಡೆದ ಎಲ್ಲಾ ಅನುಮಾನಾಸ್ಪದ ಎನ್ಕೌಂಟರ್ಗಳ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಬೇಕು ಎಂದು ಗಾಂಧಿ ಆಗ್ರಹಿಸಿದ್ದಾರೆ.</p>.ಭಾರತ ಮಾತೆಯ ಧ್ವನಿ ದೇಶದೆಲ್ಲೆಡೆ ಕೇಳಿಸುವಂತೆ ಮಾಡುವುದೇ ನಮ್ಮ ಗುರಿ: ರಾಹುಲ್.ಕುಸ್ತಿಪಟುಗಳನ್ನು ಕಾಂಗ್ರೆಸ್ ದಾಳವಾಗಿ ಬಳಸಿಕೊಂಡಿದೆ: ಬ್ರಿಜ್ ಭೂಷಣ್ ಸಿಂಗ್. <p>'ಉತ್ತರ ಪ್ರದೇಶದ ಎಸ್ಟಿಎಫ್ ಪಡೆಯನ್ನು ಬಿಜೆಪಿ ಸರ್ಕಾರ 'ಕ್ರಿಮಿನಲ್ ಗ್ಯಾಂಗ್'ನಂತೆ ನಡೆಸಿಕೊಳ್ಳಲಾಗುತ್ತಿದೆ. ಎಸ್ಟಿಎಫ್ನ ಹತ್ತಾರು ಎನ್ಕೌಂಟರ್ಗಳು ಪ್ರಶ್ನಾರ್ಹವಾಗಿವೆ. ಇಂತಹ ಪ್ರಕರಣಗಳ ಬಗ್ಗೆ ಕೇಂದ್ರ ಸರ್ಕಾರ ಮೌನವಾಗಿರುವುದು ಏಕೆ?' ಎಂದು ರಾಹುಲ್ ಪ್ರಶ್ನಿಸಿದ್ದಾರೆ.</p><p>'ಬಿಜೆಪಿ ಸರ್ಕಾರಗಳು ಸಂವಿಧಾನ ಮತ್ತು ಕಾನೂನನ್ನು ಉಲ್ಲಂಘಿಸುತ್ತಿರುವುದು ಬಹಿರಂಗವಾಗಿದ್ದು, ಕ್ಯಾಮರಾಗಳ ಮುಂದೆ ಅವುಗಳನ್ನು ಪಾಲಿಸುತ್ತಿರುವಂತೆ ಬಿಂಬಿಸಲಾಗುತ್ತಿದೆ' ಎಂದು ಟೀಕಿಸಿದ್ದಾರೆ.</p><p>ಸುಲ್ತಾನ್ಪುರದ ಆಭರಣ ಮಳಿಗೆಯಲ್ಲಿ ₹1.5 ಕೋಟಿ ಮೌಲ್ಯದ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎನ್ನಲಾದ ಮಂಗೇಶ್ ಯಾದವ್ನನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.J&K Polls | 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್, ಎನ್ಸಿ ಯತ್ನ: ಅಮಿತ್ ಶಾ.ಎಸ್ಎಸ್ಎಲ್ಸಿ ಘಟಕ ಪರೀಕ್ಷೆ: ‘ವೆಬ್ಕಾಸ್ಟಿಂಗ್’ ಕಣ್ಗಾವಲು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಸಂವಿಧಾನ ಮತ್ತು ಕಾನೂನುನನ್ನು ಜಾರಿಗೊಳಿಸುವ ಜವಾಬ್ದಾರಿ ಹೊಂದಿರುವವರೇ, ಅವುಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ರಾಹುಲ್, ಉತ್ತರ ಪ್ರದೇಶದ ಸುಲ್ತಾನ್ಪುರದ ದರೋಡೆ ಪ್ರಕರಣದಲ್ಲಿ ಭಾಗಿಯಾದ ಆರೋಪದಡಿ ವ್ಯಕ್ತಿಯೊಬ್ಬನನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ. ಮೃತ ವ್ಯಕ್ತಿಯ ಕುಟುಂಬಸ್ಥರ ಕಣ್ಣೀರು ನಮ್ಮನ್ನು ಪ್ರಶ್ನೆ ಮಾಡುವಂತಿದೆ ಎಂದು ಕಿಡಿಕಾರಿದ್ದಾರೆ.</p>.Paralympics 2024: ಜಾವೆಲಿನ್ ಥ್ರೋನಲ್ಲಿ ಚಿನ್ನ ಗೆದ್ದ ನವದೀಪ್ ಸಿಂಗ್.ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಸಿದ್ದ: ಡಿಸಿಎಂ ಡಿ.ಕೆ ಶಿವಕುಮಾರ್. <p>'ಆರೋಪ ಸಾಬೀತಾದರೆ ಅಪರಾಧಿಗೆ ಯಾವ ಶಿಕ್ಷೆ ನೀಡಬೇಕೆಂಬುವುದನ್ನು ನ್ಯಾಯಾಲಯ ನಿರ್ಧರಿಸುತ್ತದೆ. ದರೋಡೆ ಆರೋಪದಡಿ ಮಂಗೇಶ್ ಯಾದವ್ನನ್ನು ಎನ್ಕೌಂಟರ್ ಮಾಡಿದ್ದು ಸರಿಯಾದ ಕ್ರಮವಲ್ಲ. ಈ ಮೂಲಕ ಬಿಜೆಪಿಗೆ ಕಾನೂನು ಸುವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತಾಗಿದೆ' ಎಂದು ರಾಹುಲ್ ಹೇಳಿದ್ದಾರೆ. </p><p>ಉತ್ತರ ಪ್ರದೇಶದಲ್ಲಿ ನಡೆದ ಎಲ್ಲಾ ಅನುಮಾನಾಸ್ಪದ ಎನ್ಕೌಂಟರ್ಗಳ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಬೇಕು ಎಂದು ಗಾಂಧಿ ಆಗ್ರಹಿಸಿದ್ದಾರೆ.</p>.ಭಾರತ ಮಾತೆಯ ಧ್ವನಿ ದೇಶದೆಲ್ಲೆಡೆ ಕೇಳಿಸುವಂತೆ ಮಾಡುವುದೇ ನಮ್ಮ ಗುರಿ: ರಾಹುಲ್.ಕುಸ್ತಿಪಟುಗಳನ್ನು ಕಾಂಗ್ರೆಸ್ ದಾಳವಾಗಿ ಬಳಸಿಕೊಂಡಿದೆ: ಬ್ರಿಜ್ ಭೂಷಣ್ ಸಿಂಗ್. <p>'ಉತ್ತರ ಪ್ರದೇಶದ ಎಸ್ಟಿಎಫ್ ಪಡೆಯನ್ನು ಬಿಜೆಪಿ ಸರ್ಕಾರ 'ಕ್ರಿಮಿನಲ್ ಗ್ಯಾಂಗ್'ನಂತೆ ನಡೆಸಿಕೊಳ್ಳಲಾಗುತ್ತಿದೆ. ಎಸ್ಟಿಎಫ್ನ ಹತ್ತಾರು ಎನ್ಕೌಂಟರ್ಗಳು ಪ್ರಶ್ನಾರ್ಹವಾಗಿವೆ. ಇಂತಹ ಪ್ರಕರಣಗಳ ಬಗ್ಗೆ ಕೇಂದ್ರ ಸರ್ಕಾರ ಮೌನವಾಗಿರುವುದು ಏಕೆ?' ಎಂದು ರಾಹುಲ್ ಪ್ರಶ್ನಿಸಿದ್ದಾರೆ.</p><p>'ಬಿಜೆಪಿ ಸರ್ಕಾರಗಳು ಸಂವಿಧಾನ ಮತ್ತು ಕಾನೂನನ್ನು ಉಲ್ಲಂಘಿಸುತ್ತಿರುವುದು ಬಹಿರಂಗವಾಗಿದ್ದು, ಕ್ಯಾಮರಾಗಳ ಮುಂದೆ ಅವುಗಳನ್ನು ಪಾಲಿಸುತ್ತಿರುವಂತೆ ಬಿಂಬಿಸಲಾಗುತ್ತಿದೆ' ಎಂದು ಟೀಕಿಸಿದ್ದಾರೆ.</p><p>ಸುಲ್ತಾನ್ಪುರದ ಆಭರಣ ಮಳಿಗೆಯಲ್ಲಿ ₹1.5 ಕೋಟಿ ಮೌಲ್ಯದ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎನ್ನಲಾದ ಮಂಗೇಶ್ ಯಾದವ್ನನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.J&K Polls | 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್, ಎನ್ಸಿ ಯತ್ನ: ಅಮಿತ್ ಶಾ.ಎಸ್ಎಸ್ಎಲ್ಸಿ ಘಟಕ ಪರೀಕ್ಷೆ: ‘ವೆಬ್ಕಾಸ್ಟಿಂಗ್’ ಕಣ್ಗಾವಲು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>