ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸಚಿವ ಪ್ರಹ್ಲಾದ್‌ ಪಟೇಲ್‌ ಕೆಂಪುಕೋಟೆಗೆ ಭೇಟಿ, ಹಾನಿಯ ಬಗ್ಗೆ ಪರಿಶೀಲನೆ

Last Updated 27 ಜನವರಿ 2021, 9:11 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರದ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಹ್ಲಾದ್‌ ಪಟೇಲ್‌ ಅವರು ಬುಧವಾರ ಕೆಂಪುಕೋಟೆಗೆ ಭೇಟಿ ನೀಡಿ, ರೈತರ ಮುತ್ತಿಗೆ ವೇಳೆಯಲ್ಲಿ ಉಂಟಾದ ಹಾನಿಯ ಬಗ್ಗೆ ಮಾಹಿತಿ ಕಲೆ ಹಾಕಿದರು.

ಈ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು,‘ ಈ ಘಟನೆ ಬಗ್ಗೆ ಏನೂ ಹೇಳಲೂ ಇಷ್ಟವಿಲ್ಲ. ನಾನು ಘಟನೆ ಸಂಬಂಧ ವರದಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ಧೇನೆ’ ಎಂದು ಹೇಳಿದರು.

ಪ್ರಹ್ಲಾದ್‌ ಪಟೇಲ್‌ ಅವರ ಜತೆ ಸಂಸ್ಕೃತ ಸಚಿವಾಲಯದ ಕಾರ್ಯದರ್ಶಿ ಮತ್ತುಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆಯ (ಎಎಸ್‌ಐ) ಅಧಿಕಾರಿಗಳು ಕೆಂಪುಕೋಟೆಗೆ ಭೇಟಿ ನೀಡಿದ್ದರು. ಈ ವೇಳೆ ಕೆಂಪು ಕೋಟೆಯ ಮೆಟಲ್‌ ಡಿಟೆಕ್ಟರ್ ಗೇಟ್ ಮತ್ತು ಟಿಕೆಟ್ ಕೌಂಟರ್ ಹಾನಿಗೊಳಗಾದ್ದನ್ನು ಗಮನಿಸಿದರು. ಅಲ್ಲದೆ ಆವರಣದಲ್ಲಿ ಗಾಜಿನ ಚೂರುಗಳು ಕೂಡ ಇದ್ದವು ಎಂದು ಮೂಲಗಳು ಹೇಳಿವೆ.

ಈ ಹಿಂದೆ ಪ್ರಹ್ಲಾದ್‌ ಪಟೇಲ್ ಅವರು ಪ್ರತಿಭಟನನಿರತ ರೈತರ ನಡೆಗೆ ಖಂಡನೆ ವ್ಯಕ್ತಪಡಿಸಿದ್ದರು. ‘ಕೆಂಪುಕೋಟೆಯ ಮೇಲಿನ ಮುತ್ತಿಗೆಯು ದೇಶದ ಪ್ರಜಾಪ್ರಭುತ್ವದ ಘನತೆಗೆ ಧಕ್ಕೆ ತಂದಿದೆ’ ಎಂದು ಅವರು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT