<p><strong>ಶಿಲ್ಲಾಂಗ್(ಮೇಘಾಲಯ):</strong> ದೇಶವನ್ನೇ ಬೆಚ್ಚಿಬೀಳಿಸಿದ್ದ ಮೇಘಾಲಯ ಹನಿಮೂನ್ ಹತ್ಯೆ ಪ್ರಕರಣ ದೊಡ್ಡ ತಿರುವು ಪಡೆದುಕೊಂಡಿದ್ದು, ಪತ್ನಿಯೇ ಪತಿಯ ಕೊಲೆಗೆ ಸುಪಾರಿ ನೀಡಿರುವುದಾದಾಗಿ ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.</p><p>‘ಹತ್ಯೆಯಾದ ರಾಜ ರಘುವಂಶಿ ಅವರ ಪತ್ನಿ ಸೋನಮ್ ಪೊಲೀಸರ ಮುಂದೆ ಶರಣಾಗಿದ್ದಾರೆ’ ಎಂದು ಮೇಘಾಲಯ ಡಿಜಿಪಿಐ ನೊಂಗ್ರಾಂಗ್ ತಿಳಿಸಿದ್ದಾರೆ. </p><p>‘ಪ್ರಕರಣದಲ್ಲಿ ಇನ್ನೂ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದವರಿಗಾಗಿ ಮಧ್ಯಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರೆದಿದೆ’ ಎಂದಿದ್ದಾರೆ.</p><p>‘ಉತ್ತರ ಪ್ರದೇಶದ ಗಾಜಿಪುರದ ನಂದಗಂಜ್ ಪೊಲೀಸ್ ಠಾಣೆಯಲ್ಲಿ ಸೋನಮ್ ಶರಣಾಗಿದ್ದು, ನಂತರ ಅವರನ್ನು ಬಂಧಿಸಲಾಯಿತು. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದ ಎಸ್ಐಟಿ, ಒಬ್ಬ ಆರೋಪಿಯನ್ನು ಉತ್ತರ ಪ್ರದೇಶದಲ್ಲಿ, ಇನ್ನಿಬ್ಬರು ಆರೋಪಿಗಳನ್ನು ಇಂದೋರ್ನಲ್ಲಿ ಬಂಧಿಸಿದೆ’ ಎಂದು ಮಾಹಿತಿ ನೀಡಿದ್ದಾರೆ.</p>.ಮೇಘಾಲಯ ಹನಿಮೂನ್ ದುರಂತ | ಕಮರಿಯಲ್ಲಿ ಸಿಕ್ಕ ಪತಿ ಶವ, ಪತ್ನಿ ನಿಗೂಢ ನಾಪತ್ತೆ!.<p>ರಘುವಂಶಿ ಅವರನ್ನು ಕೊಲ್ಲುವಂತೆ ಅವರ ಪತ್ನಿಯೇ ತಮಗೆ ಸುಪಾರಿ ನೀಡಿರುವುದಾಗಿ ಬಂಧಿತ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.</p><p>ಮೇ 11ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ರಾಜ ರಘುವಂಶಿ ಮತ್ತು ಸೋನಮ್, ಹನಿಮೂನ್ಗೆಂದು ಮೇಘಾಲಯಕ್ಕೆ ತೆರಳಿದ್ದರು. ಮೇ 23ರಂದು ದಂಪತಿ ಕಾಣೆಯಾಗಿದ್ದು, ಜೂನ್ 2ರಂದು ರಘುವಂಶಿ ಅವರ ಶವ ಜಲಪಾತದ ಕಮರಿಯಲ್ಲಿ ಸಿಕ್ಕಿತ್ತು. ಸೋನಮ್ಗಾಗಿ ಪೊಲೀಸರು ಶೋಧ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಲ್ಲಾಂಗ್(ಮೇಘಾಲಯ):</strong> ದೇಶವನ್ನೇ ಬೆಚ್ಚಿಬೀಳಿಸಿದ್ದ ಮೇಘಾಲಯ ಹನಿಮೂನ್ ಹತ್ಯೆ ಪ್ರಕರಣ ದೊಡ್ಡ ತಿರುವು ಪಡೆದುಕೊಂಡಿದ್ದು, ಪತ್ನಿಯೇ ಪತಿಯ ಕೊಲೆಗೆ ಸುಪಾರಿ ನೀಡಿರುವುದಾದಾಗಿ ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.</p><p>‘ಹತ್ಯೆಯಾದ ರಾಜ ರಘುವಂಶಿ ಅವರ ಪತ್ನಿ ಸೋನಮ್ ಪೊಲೀಸರ ಮುಂದೆ ಶರಣಾಗಿದ್ದಾರೆ’ ಎಂದು ಮೇಘಾಲಯ ಡಿಜಿಪಿಐ ನೊಂಗ್ರಾಂಗ್ ತಿಳಿಸಿದ್ದಾರೆ. </p><p>‘ಪ್ರಕರಣದಲ್ಲಿ ಇನ್ನೂ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದವರಿಗಾಗಿ ಮಧ್ಯಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರೆದಿದೆ’ ಎಂದಿದ್ದಾರೆ.</p><p>‘ಉತ್ತರ ಪ್ರದೇಶದ ಗಾಜಿಪುರದ ನಂದಗಂಜ್ ಪೊಲೀಸ್ ಠಾಣೆಯಲ್ಲಿ ಸೋನಮ್ ಶರಣಾಗಿದ್ದು, ನಂತರ ಅವರನ್ನು ಬಂಧಿಸಲಾಯಿತು. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದ ಎಸ್ಐಟಿ, ಒಬ್ಬ ಆರೋಪಿಯನ್ನು ಉತ್ತರ ಪ್ರದೇಶದಲ್ಲಿ, ಇನ್ನಿಬ್ಬರು ಆರೋಪಿಗಳನ್ನು ಇಂದೋರ್ನಲ್ಲಿ ಬಂಧಿಸಿದೆ’ ಎಂದು ಮಾಹಿತಿ ನೀಡಿದ್ದಾರೆ.</p>.ಮೇಘಾಲಯ ಹನಿಮೂನ್ ದುರಂತ | ಕಮರಿಯಲ್ಲಿ ಸಿಕ್ಕ ಪತಿ ಶವ, ಪತ್ನಿ ನಿಗೂಢ ನಾಪತ್ತೆ!.<p>ರಘುವಂಶಿ ಅವರನ್ನು ಕೊಲ್ಲುವಂತೆ ಅವರ ಪತ್ನಿಯೇ ತಮಗೆ ಸುಪಾರಿ ನೀಡಿರುವುದಾಗಿ ಬಂಧಿತ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.</p><p>ಮೇ 11ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ರಾಜ ರಘುವಂಶಿ ಮತ್ತು ಸೋನಮ್, ಹನಿಮೂನ್ಗೆಂದು ಮೇಘಾಲಯಕ್ಕೆ ತೆರಳಿದ್ದರು. ಮೇ 23ರಂದು ದಂಪತಿ ಕಾಣೆಯಾಗಿದ್ದು, ಜೂನ್ 2ರಂದು ರಘುವಂಶಿ ಅವರ ಶವ ಜಲಪಾತದ ಕಮರಿಯಲ್ಲಿ ಸಿಕ್ಕಿತ್ತು. ಸೋನಮ್ಗಾಗಿ ಪೊಲೀಸರು ಶೋಧ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>