<p> <strong>ನಾಸಿಕ್ :</strong> ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಜನರು ಪೂಜೆಗೆಂದು ತೆರಳುತ್ತಿದ್ದ ಟ್ರ್ಯಾಕ್ಟರ್ ಕಂದಕಕ್ಕೆ ಉರುಳಿ ಇಬ್ಬರು ಮೃತಪಟ್ಟಿದ್ದಾರೆ. 14 ಮಂದಿ ತೀವ್ರವಾಗಿ ಗಾಯಗೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ. </p><p>ನಂದಗಾಂವ್ ತಾಲೂಕಿನ ಜತೇಗಾಂವ್ ಬಳಿಯ ಚಂದನಪುರಿ ಶಿವಾರ್ನಲ್ಲಿರುವ ಪಿನಾಕೇಶ್ವರ ಮಹಾದೇವ ದೇವಸ್ಥಾನದಲ್ಲಿ ಪೂಜೆಗೆಂದು ತೆರಳಿದ್ದರು. ಭಾನುವಾರ ಸಂಜೆ ಛತ್ರಪತಿ ಸಂಭಾಜಿನಗರಕ್ಕೆ ಮರಳುವಾಗ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. </p><p>ಅಫಘಾತದಲ್ಲಿ ಛತ್ರಪತಿ ಸಂಭಾಜಿನಗರದ ಕಾಂತಾಬಾಯಿ ನಾರಾಯಣ್ ಗಾಯ್ಕೆ (56) ಹಾಗೂ ಕಮಲಾಬಾಯಿ ಶ್ಯಾಮರಾವ್ ಜಗದಾಳೆ (60) ಇಬ್ಬರು ಮೃತಪಟ್ಟಿದ್ದಾರೆ. ಗಾಯಗೊಂಡ 14 ಮಂದಿಯನ್ನು ಛತ್ರಪತಿ ಸಂಭಾಜಿನಗರದ ಘಾಟಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿದಾಗ ಟ್ರ್ಯಾಕ್ಟರ್ನಲ್ಲಿ ಬ್ರೇಕ್ ಫೇಲ್ ಆಗಿರುವುದು ಬೆಳಕಿಗೆ ಬಂದಿದೆ. ಬ್ರೇಕ್ ಫೇಲ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಕಂದಕಕ್ಕೆ ಟ್ರ್ಯಾಕ್ಟರ್ ಉರುಳಿದೆ ಎಂದು ಪೊಲೀಸರು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p> <strong>ನಾಸಿಕ್ :</strong> ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಜನರು ಪೂಜೆಗೆಂದು ತೆರಳುತ್ತಿದ್ದ ಟ್ರ್ಯಾಕ್ಟರ್ ಕಂದಕಕ್ಕೆ ಉರುಳಿ ಇಬ್ಬರು ಮೃತಪಟ್ಟಿದ್ದಾರೆ. 14 ಮಂದಿ ತೀವ್ರವಾಗಿ ಗಾಯಗೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ. </p><p>ನಂದಗಾಂವ್ ತಾಲೂಕಿನ ಜತೇಗಾಂವ್ ಬಳಿಯ ಚಂದನಪುರಿ ಶಿವಾರ್ನಲ್ಲಿರುವ ಪಿನಾಕೇಶ್ವರ ಮಹಾದೇವ ದೇವಸ್ಥಾನದಲ್ಲಿ ಪೂಜೆಗೆಂದು ತೆರಳಿದ್ದರು. ಭಾನುವಾರ ಸಂಜೆ ಛತ್ರಪತಿ ಸಂಭಾಜಿನಗರಕ್ಕೆ ಮರಳುವಾಗ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. </p><p>ಅಫಘಾತದಲ್ಲಿ ಛತ್ರಪತಿ ಸಂಭಾಜಿನಗರದ ಕಾಂತಾಬಾಯಿ ನಾರಾಯಣ್ ಗಾಯ್ಕೆ (56) ಹಾಗೂ ಕಮಲಾಬಾಯಿ ಶ್ಯಾಮರಾವ್ ಜಗದಾಳೆ (60) ಇಬ್ಬರು ಮೃತಪಟ್ಟಿದ್ದಾರೆ. ಗಾಯಗೊಂಡ 14 ಮಂದಿಯನ್ನು ಛತ್ರಪತಿ ಸಂಭಾಜಿನಗರದ ಘಾಟಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿದಾಗ ಟ್ರ್ಯಾಕ್ಟರ್ನಲ್ಲಿ ಬ್ರೇಕ್ ಫೇಲ್ ಆಗಿರುವುದು ಬೆಳಕಿಗೆ ಬಂದಿದೆ. ಬ್ರೇಕ್ ಫೇಲ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಕಂದಕಕ್ಕೆ ಟ್ರ್ಯಾಕ್ಟರ್ ಉರುಳಿದೆ ಎಂದು ಪೊಲೀಸರು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>