<p><strong>ನವದೆಹಲಿ:</strong> ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವ್ಯಾಪಾರ ಒಪ್ಪಂದವನ್ನು ಬಳಸಿಕೊಂಡು ಭಾರತ–ಪಾಕಿಸ್ತಾನ ಸಂಘರ್ಷ ನಿಲ್ಲಿಸಿದೆ ಎಂದು ಪದೇ ಪದೇ ಹೇಳುತ್ತಿರುವ ವಿಚಾರವಾಗಿ ಕಾಂಗ್ರೆಸ್ ಪಕ್ಷವು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿದೆ.</p>.<p>‘ಅಮೆರಿಕದೊಂದಿಗಿನ ಸಂಭಾವ್ಯ ವ್ಯಾಪಾರ ಒಪ್ಪಂದವು ಭಾರತಕ್ಕೆ ಅಗ್ನಿಪರೀಕ್ಷೆಯಾಗಲಿದೆ’ ಎಂದು ಅದು ಹೇಳಿದೆ.</p>.<p>ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಅವರು, ‘ಭಾರತವು 2025ರ ನವೆಂಬರ್ನಲ್ಲಿ ಕ್ವಾಡ್ ಶೃಂಗಸಭೆಯ (ಅಮೆರಿಕ, ಜಪಾನ್, ಆಸ್ಟ್ರೇಲಿಯಾ ಮತ್ತು ಭಾರತ) ಆತಿಥ್ಯ ವಹಿಸಲಿದೆ ಎಂದು ಹೇಳಿದ್ದೆವು. ಅದು ಈಗ ಸಾಕಾರವಾಗುತ್ತಿದೆ’ ಎಂದು ಹೇಳಿದರು.</p>.<p class="title">‘ಈ ಮಧ್ಯೆ ಡೊನಾಲ್ಡ್ ಟ್ರಂಪ್ ಅವರು 57ನೇ ಬಾರಿ, ಆಪರೇಷನ್ ಸಿಂಧೂರ ಹೇಗೆ ಮತ್ತು ಯಾಕೆ ಹಠಾತ್ ನಿಂತಿತು ಎಂದು ಹೇಳಿದ್ದಾರೆ’ ಎಂದರು. ಟ್ರಂಪ್ ಅವರು ತಾವು ‘ವ್ಯಾಪಾರ ಒಪ್ಪಂದವನ್ನು ಬಳಸಿಕೊಂಡು ಭಾರತ–ಪಾಕಿಸ್ತಾನ ಸಂಘರ್ಷ ನಿಲ್ಲಿಸಿದೆ’ ಎಂದು ಹೇಳಿರುವ ವಿಡಿಯೊವನ್ನು ಹಂಚಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವ್ಯಾಪಾರ ಒಪ್ಪಂದವನ್ನು ಬಳಸಿಕೊಂಡು ಭಾರತ–ಪಾಕಿಸ್ತಾನ ಸಂಘರ್ಷ ನಿಲ್ಲಿಸಿದೆ ಎಂದು ಪದೇ ಪದೇ ಹೇಳುತ್ತಿರುವ ವಿಚಾರವಾಗಿ ಕಾಂಗ್ರೆಸ್ ಪಕ್ಷವು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿದೆ.</p>.<p>‘ಅಮೆರಿಕದೊಂದಿಗಿನ ಸಂಭಾವ್ಯ ವ್ಯಾಪಾರ ಒಪ್ಪಂದವು ಭಾರತಕ್ಕೆ ಅಗ್ನಿಪರೀಕ್ಷೆಯಾಗಲಿದೆ’ ಎಂದು ಅದು ಹೇಳಿದೆ.</p>.<p>ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಅವರು, ‘ಭಾರತವು 2025ರ ನವೆಂಬರ್ನಲ್ಲಿ ಕ್ವಾಡ್ ಶೃಂಗಸಭೆಯ (ಅಮೆರಿಕ, ಜಪಾನ್, ಆಸ್ಟ್ರೇಲಿಯಾ ಮತ್ತು ಭಾರತ) ಆತಿಥ್ಯ ವಹಿಸಲಿದೆ ಎಂದು ಹೇಳಿದ್ದೆವು. ಅದು ಈಗ ಸಾಕಾರವಾಗುತ್ತಿದೆ’ ಎಂದು ಹೇಳಿದರು.</p>.<p class="title">‘ಈ ಮಧ್ಯೆ ಡೊನಾಲ್ಡ್ ಟ್ರಂಪ್ ಅವರು 57ನೇ ಬಾರಿ, ಆಪರೇಷನ್ ಸಿಂಧೂರ ಹೇಗೆ ಮತ್ತು ಯಾಕೆ ಹಠಾತ್ ನಿಂತಿತು ಎಂದು ಹೇಳಿದ್ದಾರೆ’ ಎಂದರು. ಟ್ರಂಪ್ ಅವರು ತಾವು ‘ವ್ಯಾಪಾರ ಒಪ್ಪಂದವನ್ನು ಬಳಸಿಕೊಂಡು ಭಾರತ–ಪಾಕಿಸ್ತಾನ ಸಂಘರ್ಷ ನಿಲ್ಲಿಸಿದೆ’ ಎಂದು ಹೇಳಿರುವ ವಿಡಿಯೊವನ್ನು ಹಂಚಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>