ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ.8ರಂದು ‘ಭಾರತ್ ಬಂದ್‌’ಗೆ ಕರೆ

Last Updated 4 ಜನವರಿ 2020, 16:48 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ದೇಶದ 10 ಕಾರ್ಮಿಕ ಸಂಘಟನೆಗಳು ಬುಧವಾರ (ಜ.8) ‘ಭಾರತ್ ಬಂದ್‌’ ನಡೆಸಲು ಕರೆ ನೀಡಿವೆ.ಕೇಂದ್ರದ ಕಾರ್ಮಿಕ ಇಲಾಖೆಯ ಸಚಿವರ ಸಭೆ ಬಳಿಕ ಸಂಘಟನೆಗಳು ಮುಷ್ಕರ ಕೈಗೊಳ್ಳುವ ನಿರ್ಧಾರ ಪ್ರಕಟಿಸಿದವು.

ಕಾರ್ಮಿಕರನ್ನು ಜೀತದವರಂತೆ ದುಡಿಸಿಕೊಳ್ಳುವ ರೀತಿಯಲ್ಲಿ ಕಾರ್ಮಿಕ ಕಾನೂನುಗಳು ರಚನೆಯಾಗಿವೆ ಎಂದು ಎಐಟಿಯುಸಿ, ಎಚ್‌ಎಂಎಸ್, ಸಿಐಟಿಯು, ಎಐಯುಟಿಯುಸಿ, ಎಸ್‌ಇಡಬ್ಲ್ಯುಎ, ಎಐಸಿಸಿಟಿಯು, ಎಲ್‌ಪಿಎಫ್ ಮತ್ತು ಯುಟಿಯುಸಿ ಸಂಘಟನೆಗಳು ಆರೋಪಿಸಿವೆ.

ನಿರುದ್ಯೋಗ, ಕನಿಷ್ಠ ವೇತನ, 14 ಅಂಶಗಳ ಬೇಡಿಕೆ ಮತ್ತು ಸಾಮಾಜಿಕ ಭದ್ರತೆಯ ಬಗ್ಗೆ ಪದೇ ಪದೇ ಸಂಘಟನೆಗಳು ದನಿ ಎತ್ತಿದ್ದರೂ, ಸಚಿವರು ಸಮಸ್ಯೆ ಪರಿಹರಿಸಲು ಮುಂದಾಗಿಲ್ಲ ಎಂದು ಆರೋಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT