ನವದೆಹಲಿ: ಬಂಡೀಪುರ ರಾಷ್ಟ್ರೀಯ ಉದ್ಯಾನದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿದಿನ 9 ಗಂಟೆ ಸಂಚಾರ ನಿರ್ಬಂಧಿಸುವುದರಿಂದ ಕರ್ನಾಟಕ ಹಾಗೂ ಕೇರಳದ ಲಕ್ಷಾಂತರ ಜನರಿಗೆ ತೊಂದರೆ ಆಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ.
ಪರಿಸರ ಸಂರಕ್ಷಣೆ ಉದ್ದೇಶದ ಜತೆಗೆ ಆ ಭಾಗದ ಸ್ಥಳೀಯ ಜನಸಮುದಾಯಗಳ ಹಿತಾಸಕ್ತಿಯನ್ನೂ ರಕ್ಷಿಸಬೇಕು ಎಂದು ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ.
ರಕ್ಷಿತಾರಣ್ಯದ ವನ್ಯಜೀವಿಗಳಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ರಾತ್ರಿ 9ರಿಂದ ಬೆಳಿಗ್ಗೆ 6 ಗಂಟೆವರೆಗೆ ಈ ಹೆದ್ದಾರಿಯಲ್ಲಿ (ಎನ್ಎಚ್ 766) ಸಂಚಾರ ನಿರ್ಬಂಧವಿದೆ. ಸಂಚಾರ ನಿರ್ಬಂಧ ವಿರೋಧಿಸಿ ಸೆಪ್ಟೆಂಬರ್ 25ರಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಯುವ ಜನಾಂಗಕ್ಕೆ ಬೆಂಬಲ ಸೂಚಿಸಿ ವಯನಾಡ್ ಕ್ಷೇತ್ರದ ಸಂಸದರೂ ಆಗಿರುವ ರಾಹುಲ್ ಟ್ವೀಟ್ ಮಾಡಿದ್ದಾರೆ.
I stand in solidarity with the youth on an indefinite hunger strike since September 25th protesting against the daily 9 hour traffic ban on NH-766 that has caused immense hardship to lakhs of people in Kerala and Karnataka.
ಅಭಯರಣ್ಯದ ರಾಷ್ಟ್ರೀಯ ಹೆದ್ದಾರಿ ಮಾರ್ಗದಲ್ಲಿ ಎತ್ತರಿಸಿದ ರಸ್ತೆ ನಿರ್ಮಿಸಬೇಕು ಎಂಬ ಪ್ರಸ್ತಾವಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಮ್ಮ ಬೆಂಬಲ ಸೂಚಸಿದ್ದರು. ಸಂಚಾರ ನಿರ್ಬಂಧದಿಂದ ವಯನಾಡ್, ಕೋಯಿಕ್ಕೋಡ್ ಮತ್ತು ಮಲಪ್ಪುರ ಜಿಲ್ಲೆಗಳ ಜನರಿಗೆ ತೊಂದರೆಯಾಗಿದೆ.
I urge the Central and State Governments to safeguard the interests of local communities, while upholding our collective responsibility to protect our environment.