ಕೇಂದ್ರ ಗೃಹ ಸಚಿವ ಅಮಿತ್ ಶಾ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಟ್ರಾಫಿಕ್ ಪೊಲೀಸ್ ಸಿದ್ದೇಶ್ವರ ಮಾಲಿ(37) ಅವರು ಭದ್ರತಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದರು. ವಾಹನಗಳ ಪರಿಶೀಲನೆಯಲ್ಲಿ ಅವರು ತೊಡಗಿದ್ದರು. ಈ ವೇಳೆ ಕಾರೊಂದನ್ನು ಸಿದ್ದೇಶ್ವರ ಅವರು ತಡೆಯಲು ಯತ್ನಿಸಿದ್ದಾರೆ. ಆದರೆ, ಕಾರು ನಿಲ್ಲಿಸದ ಕಾರಣ ಪೊಲೀಸ್ ಸಿಬ್ಬಂದಿ ಬಾನೆಟ್ ಮೇಲೆ ಬಿದ್ದಿದ್ದಾರೆ. ಅವರನ್ನು 20 ಕಿ.ಮೀ. ತನಕ ಹಾಗೆಯೇ ಹೊತ್ತೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.