<p><strong>ಲಖನೌ</strong>: ಬುಧವಾರ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ರೈಲು ಹಳಿ ದಾಟುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ರೈಲು ಡಿಕ್ಕಿ ಹೊಡೆದು ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ. ಪ್ರತ್ಯೇಕ ರೈಲಿನಿಂದ ಇಳಿದು ಪ್ರಯಾಣಿಕರು ಹಳಿ ದಾಟುತ್ತಿದ್ದರು ಎಂದು ತಿಳಿದುಬಂದಿದೆ.</p><p>ಚುನಾರ್ ಜಂಕ್ಷನ್ನಲ್ಲಿ ಪ್ಲಾಟ್ಫಾರ್ಮ್ ಎದುರು ಬದಿಯಲ್ಲಿರುವ ಚೋಪನ್-ಪ್ರಯಾಗರಾಜ್ ಎಕ್ಸ್ಪ್ರೆಸ್ನಿಂದ ಸಂತ್ರಸ್ತರು ಇಳಿದಿದ್ದರು. ಬಳಿಕ, ಹಳಿಗಳನ್ನು ದಾಟಲು ಪ್ರಯತ್ನಿಸುತ್ತಿದ್ದಾಗ, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಹೌರಾ-ಕಲ್ಕಾ ನೇತಾಜಿ ಎಕ್ಸ್ಪ್ರೆಸ್ ಎಂಬ ಮತ್ತೊಂದು ರೈಲು ಅವರಿಗೆ ಡಿಕ್ಕಿ ಹೊಡೆದಿದೆ ಎಂದು ಎನ್ಸಿಆರ್ ಪ್ರಯೋಗ್ರಾಜ್ ವಿಭಾಗದ ಪಿಆರ್ಒ ಅಮಿತ್ ಸಿಂಗ್ ತಿಳಿಸಿದ್ದಾರೆ.</p><p>ಮೃತರು ಪ್ಲಾಟ್ಫಾರ್ಮ್ ಬದಿಯಲ್ಲಿ ಇಳಿಯಬೇಕಿತ್ತು. ಆದರೆ, ಅವರು ಹಳಿಗಳನ್ನು ದಾಟಿ ಆ ಕಡೆ ತೆರಳಲು ಹಳಿ ಇರುವ ಕಡೆ ಇಳಿದಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.</p><p>ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂತ್ರಸ್ತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದು, ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ತೆರಳಿ, ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆಗಳನ್ನು ತ್ವರಿತಗೊಳಿಸಲು ನಿರ್ದೇಶಿಸಿದ್ದಾರೆ.</p><p>ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳು ಅಪಘಾತದ ಸ್ಥಳಕ್ಕೆ ತೆರಳಲು ಆದೇಶಿಸಲಾಗಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಬುಧವಾರ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ರೈಲು ಹಳಿ ದಾಟುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ರೈಲು ಡಿಕ್ಕಿ ಹೊಡೆದು ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ. ಪ್ರತ್ಯೇಕ ರೈಲಿನಿಂದ ಇಳಿದು ಪ್ರಯಾಣಿಕರು ಹಳಿ ದಾಟುತ್ತಿದ್ದರು ಎಂದು ತಿಳಿದುಬಂದಿದೆ.</p><p>ಚುನಾರ್ ಜಂಕ್ಷನ್ನಲ್ಲಿ ಪ್ಲಾಟ್ಫಾರ್ಮ್ ಎದುರು ಬದಿಯಲ್ಲಿರುವ ಚೋಪನ್-ಪ್ರಯಾಗರಾಜ್ ಎಕ್ಸ್ಪ್ರೆಸ್ನಿಂದ ಸಂತ್ರಸ್ತರು ಇಳಿದಿದ್ದರು. ಬಳಿಕ, ಹಳಿಗಳನ್ನು ದಾಟಲು ಪ್ರಯತ್ನಿಸುತ್ತಿದ್ದಾಗ, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಹೌರಾ-ಕಲ್ಕಾ ನೇತಾಜಿ ಎಕ್ಸ್ಪ್ರೆಸ್ ಎಂಬ ಮತ್ತೊಂದು ರೈಲು ಅವರಿಗೆ ಡಿಕ್ಕಿ ಹೊಡೆದಿದೆ ಎಂದು ಎನ್ಸಿಆರ್ ಪ್ರಯೋಗ್ರಾಜ್ ವಿಭಾಗದ ಪಿಆರ್ಒ ಅಮಿತ್ ಸಿಂಗ್ ತಿಳಿಸಿದ್ದಾರೆ.</p><p>ಮೃತರು ಪ್ಲಾಟ್ಫಾರ್ಮ್ ಬದಿಯಲ್ಲಿ ಇಳಿಯಬೇಕಿತ್ತು. ಆದರೆ, ಅವರು ಹಳಿಗಳನ್ನು ದಾಟಿ ಆ ಕಡೆ ತೆರಳಲು ಹಳಿ ಇರುವ ಕಡೆ ಇಳಿದಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.</p><p>ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂತ್ರಸ್ತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದು, ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ತೆರಳಿ, ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆಗಳನ್ನು ತ್ವರಿತಗೊಳಿಸಲು ನಿರ್ದೇಶಿಸಿದ್ದಾರೆ.</p><p>ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳು ಅಪಘಾತದ ಸ್ಥಳಕ್ಕೆ ತೆರಳಲು ಆದೇಶಿಸಲಾಗಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>