<p><strong>ನವದೆಹಲಿ: </strong>ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಭಾರತದ ಆರ್ಥಿಕತೆಯು ತೀವ್ರವಾಗಿ ಹೊಡೆತಕ್ಕೆ ಸಿಲುಕಿದ್ದು, ಬೇಡಿಕೆ ಹೆಚ್ಚಿಸಲು ಕೆಲವು ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಸೂಚಿಸಿದ್ದಾರೆ.</p>.<p>ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕೇಂದ್ರವು ಮೊದಲು ದೇಶದ ಶೇ 50ರಷ್ಟು ಕುಟುಂಬಗಳಿಗೆ ಸ್ವಲ್ಪ ಹಣವನ್ನು ವರ್ಗಾಯಿಸಬೇಕು. ಅಗತ್ಯವಿರುವ ಎಲ್ಲ ಕುಟುಂಬಗಳಿಗೆ ಕೇಂದ್ರದಿಂದ ಉಚಿತವಾಗಿ ಆಹಾರ ಧಾನ್ಯವನ್ನು ಸಹ ಒದಗಿಸಬೇಕು ಎಂದು ಸೂಚಿಸಿದ್ದಾರೆ.</p>.<p>ಮೂಲಸೌಕರ್ಯ ಯೋಜನೆಗಳ ಖರ್ಚಿಗೆ ಸರ್ಕಾರ ಹೆಚ್ಚಿನ ಹಣವನ್ನು ಬಿಡುಗಡೆ ಮಾಡಬೇಕು. ಆರ್ಥಿಕ ಚಟುವಟಿಕೆಯನ್ನು ಹೆಚ್ಚಿಸಲು ಸರ್ಕಾರವು ಬೃಹತ್ ಲೋಕೋಪಯೋಗಿ ಕೆಲಸಗಳನ್ನು ಪ್ರಾರಂಭಿಸಬೇಕು ಮತ್ತು ಆಹಾರ ಧಾನ್ಯಗಳ ವಿಷಯದಲ್ಲಿ ವೇತನವನ್ನು ಪಾವತಿಸಬೇಕು ಎಂದಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/business/commerce-news/indian-economy-contracts-239-pc-in-april-june-quarter-757554.html" itemprop="url">ಏಪ್ರಿಲ್–ಜೂನ್ ಅವಧಿಯಲ್ಲಿ ಶೇ 23.9 ಕುಸಿತ ಕಂಡ ಜಿಡಿಪಿ </a></p>.<p>ಬ್ಯಾಂಕುಗಳ ಸಾಲ ಸಾಮರ್ಥ್ಯವನ್ನು ಹೆಚ್ಚಿಸಲು, ಕೇಂದ್ರವು ಅವುಗಳನ್ನು ಮರು ಬಂಡವಾಳ ಹೂಡಿಕೊಳ್ಳಬೇಕು, ಕೇಂದ್ರವು ಬಾಕಿ ಇರುವ ಜಿಎಸ್ಟಿ ಪರಿಹಾರವನ್ನು ರಾಜ್ಯಗಳಿಗೆ ಪಾವತಿಸಬೇಕು. 'ಮೇಲಿನ ಎಲ್ಲದಕ್ಕೂ ಹಣ ಬೇಕಾಗುತ್ತದೆ. ಎರವಲು ಪಡೆಯಿರಿ.. ಹಿಂಜರಿಯಬೇಡಿ ಎಂದಿದ್ದಾರೆ.</p>.<p>ಈ ವರ್ಷ ಹೆಚ್ಚಿನ ಸಾಲ ಪಡೆಯಲು ಸರ್ಕಾರ ಹಣಕಾಸಿನ ಜವಾಬ್ದಾರಿ ಮತ್ತು ಬಜೆಟ್ ನಿರ್ವಹಣಾ ಮಾನದಂಡಗಳನ್ನು ಸಡಿಲಿಸಬೇಕು ಎಂದು ಮಾಜಿ ಸಚಿವರು ಹೇಳಿದ್ದಾರೆ.</p>.<p>ವಿತರಣಾ ಯೋಜನೆಯನ್ನು ಸಹ ತ್ವರಿತಗೊಳಿಸಬೇಕು. ಅಂತಾರಾಷ್ಟ್ರೀಯ ಹಣಕಾಸು ನಿಧಿ, ವಿಶ್ವ ಬ್ಯಾಂಕ್ ಮತ್ತು ಏಷ್ಯನ್ ಅಭಿವೃದ್ಧಿ ಬ್ಯಾಂಕ್ನಂತಹ ಅಂತರರಾಷ್ಟ್ರೀಯ ಸಂಸ್ಥೆಗಳಿಂದ ಬರುವ ಅವಕಾಶಗಳನ್ನು ಸರ್ಕಾರ ಬಳಸಿಕೊಳ್ಳಬೇಕು. ಕೊನೆಯ ಅವಕಾಶವಾಗಿ, ಕೇಂದ್ರವು ಕೊರತೆಯ ಭಾಗವನ್ನು ವಿನಿಯೋಗಿಸಬೇಕು ಎಂದು ಅವರು ಹೇಳಿದರು.</p>.<p>ವಿಶೇಷವೆಂದರೆ, ಭಾರತದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಶೀಘ್ರಗತಿಯಲ್ಲಿ ಏರುತ್ತಿರುವುದರಿಂದ ಕೇಂದ್ರವು ಈಗಾಗಲೇ ಉಚಿತ ಪಡಿತರ ಯೋಜನೆ, ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆಯನ್ನು ನವೆಂಬರ್ವರೆಗೆ ವಿಸ್ತರಿಸಿದೆ.</p>.<p>ಆರ್ಥಿಕ ವರ್ಷದ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಶೇ 23.9 ರಷ್ಟು ಕುಗ್ಗಿದೆ ಮತ್ತು ಕೃಷಿ ಹೊರತುಪಡಿಸಿ ಎಲ್ಲಾ ಪ್ರಮುಖ ಕ್ಷೇತ್ರಗಳ ಕಾರ್ಯಕ್ಷಮತೆಯಲ್ಲಿ ಗಮನಾರ್ಹ ಕುಸಿತ ಕಂಡುಬಂದಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್ಎಸ್ಒ) ಮಾಹಿತಿ ಬಿಡುಗಡೆ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಭಾರತದ ಆರ್ಥಿಕತೆಯು ತೀವ್ರವಾಗಿ ಹೊಡೆತಕ್ಕೆ ಸಿಲುಕಿದ್ದು, ಬೇಡಿಕೆ ಹೆಚ್ಚಿಸಲು ಕೆಲವು ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಸೂಚಿಸಿದ್ದಾರೆ.</p>.<p>ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕೇಂದ್ರವು ಮೊದಲು ದೇಶದ ಶೇ 50ರಷ್ಟು ಕುಟುಂಬಗಳಿಗೆ ಸ್ವಲ್ಪ ಹಣವನ್ನು ವರ್ಗಾಯಿಸಬೇಕು. ಅಗತ್ಯವಿರುವ ಎಲ್ಲ ಕುಟುಂಬಗಳಿಗೆ ಕೇಂದ್ರದಿಂದ ಉಚಿತವಾಗಿ ಆಹಾರ ಧಾನ್ಯವನ್ನು ಸಹ ಒದಗಿಸಬೇಕು ಎಂದು ಸೂಚಿಸಿದ್ದಾರೆ.</p>.<p>ಮೂಲಸೌಕರ್ಯ ಯೋಜನೆಗಳ ಖರ್ಚಿಗೆ ಸರ್ಕಾರ ಹೆಚ್ಚಿನ ಹಣವನ್ನು ಬಿಡುಗಡೆ ಮಾಡಬೇಕು. ಆರ್ಥಿಕ ಚಟುವಟಿಕೆಯನ್ನು ಹೆಚ್ಚಿಸಲು ಸರ್ಕಾರವು ಬೃಹತ್ ಲೋಕೋಪಯೋಗಿ ಕೆಲಸಗಳನ್ನು ಪ್ರಾರಂಭಿಸಬೇಕು ಮತ್ತು ಆಹಾರ ಧಾನ್ಯಗಳ ವಿಷಯದಲ್ಲಿ ವೇತನವನ್ನು ಪಾವತಿಸಬೇಕು ಎಂದಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/business/commerce-news/indian-economy-contracts-239-pc-in-april-june-quarter-757554.html" itemprop="url">ಏಪ್ರಿಲ್–ಜೂನ್ ಅವಧಿಯಲ್ಲಿ ಶೇ 23.9 ಕುಸಿತ ಕಂಡ ಜಿಡಿಪಿ </a></p>.<p>ಬ್ಯಾಂಕುಗಳ ಸಾಲ ಸಾಮರ್ಥ್ಯವನ್ನು ಹೆಚ್ಚಿಸಲು, ಕೇಂದ್ರವು ಅವುಗಳನ್ನು ಮರು ಬಂಡವಾಳ ಹೂಡಿಕೊಳ್ಳಬೇಕು, ಕೇಂದ್ರವು ಬಾಕಿ ಇರುವ ಜಿಎಸ್ಟಿ ಪರಿಹಾರವನ್ನು ರಾಜ್ಯಗಳಿಗೆ ಪಾವತಿಸಬೇಕು. 'ಮೇಲಿನ ಎಲ್ಲದಕ್ಕೂ ಹಣ ಬೇಕಾಗುತ್ತದೆ. ಎರವಲು ಪಡೆಯಿರಿ.. ಹಿಂಜರಿಯಬೇಡಿ ಎಂದಿದ್ದಾರೆ.</p>.<p>ಈ ವರ್ಷ ಹೆಚ್ಚಿನ ಸಾಲ ಪಡೆಯಲು ಸರ್ಕಾರ ಹಣಕಾಸಿನ ಜವಾಬ್ದಾರಿ ಮತ್ತು ಬಜೆಟ್ ನಿರ್ವಹಣಾ ಮಾನದಂಡಗಳನ್ನು ಸಡಿಲಿಸಬೇಕು ಎಂದು ಮಾಜಿ ಸಚಿವರು ಹೇಳಿದ್ದಾರೆ.</p>.<p>ವಿತರಣಾ ಯೋಜನೆಯನ್ನು ಸಹ ತ್ವರಿತಗೊಳಿಸಬೇಕು. ಅಂತಾರಾಷ್ಟ್ರೀಯ ಹಣಕಾಸು ನಿಧಿ, ವಿಶ್ವ ಬ್ಯಾಂಕ್ ಮತ್ತು ಏಷ್ಯನ್ ಅಭಿವೃದ್ಧಿ ಬ್ಯಾಂಕ್ನಂತಹ ಅಂತರರಾಷ್ಟ್ರೀಯ ಸಂಸ್ಥೆಗಳಿಂದ ಬರುವ ಅವಕಾಶಗಳನ್ನು ಸರ್ಕಾರ ಬಳಸಿಕೊಳ್ಳಬೇಕು. ಕೊನೆಯ ಅವಕಾಶವಾಗಿ, ಕೇಂದ್ರವು ಕೊರತೆಯ ಭಾಗವನ್ನು ವಿನಿಯೋಗಿಸಬೇಕು ಎಂದು ಅವರು ಹೇಳಿದರು.</p>.<p>ವಿಶೇಷವೆಂದರೆ, ಭಾರತದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಶೀಘ್ರಗತಿಯಲ್ಲಿ ಏರುತ್ತಿರುವುದರಿಂದ ಕೇಂದ್ರವು ಈಗಾಗಲೇ ಉಚಿತ ಪಡಿತರ ಯೋಜನೆ, ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆಯನ್ನು ನವೆಂಬರ್ವರೆಗೆ ವಿಸ್ತರಿಸಿದೆ.</p>.<p>ಆರ್ಥಿಕ ವರ್ಷದ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಶೇ 23.9 ರಷ್ಟು ಕುಗ್ಗಿದೆ ಮತ್ತು ಕೃಷಿ ಹೊರತುಪಡಿಸಿ ಎಲ್ಲಾ ಪ್ರಮುಖ ಕ್ಷೇತ್ರಗಳ ಕಾರ್ಯಕ್ಷಮತೆಯಲ್ಲಿ ಗಮನಾರ್ಹ ಕುಸಿತ ಕಂಡುಬಂದಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್ಎಸ್ಒ) ಮಾಹಿತಿ ಬಿಡುಗಡೆ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>