<p>ನವದೆಹಲಿ: ಸಮರ್ಪಕ ವಿಚಾರಣೆ ನಡೆಯುವುದಿಲ್ಲ ಎಂಬ ಬಗ್ಗೆ ನಂಬಲರ್ಹ ಅಂಶಗಳು ಇದ್ದಾಗ ಮಾತ್ರ ಪ್ರಕರಣವೊಂದರ ವಿಚಾರಣೆಯನ್ನು ಬೇರೊಂದು ಕೋರ್ಟ್ಗೆ ವರ್ಗಾಯಿಸಲು ಸಾಧ್ಯ. ಕೇವಲ ಊಹೆ ಮತ್ತು ಅನುಮಾನಗಳ ಆಧಾರದಲ್ಲಿ ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.</p>.<p>‘ನಿಷ್ಪಕ್ಷಪಾತ ವಿಚಾರಣೆ ನಡೆಯುತ್ತದೆ ಎಂಬ ಬಗ್ಗೆ ನೀಡುವ ಭರವಸೆಯನ್ನು ಮೊದಲು ಗೌರವಿಸಬೇಕು. ಸೂಕ್ಷ್ಮಮನಸ್ಸಿನ ವ್ಯಕ್ತಿ ಆತಂಕ ವ್ಯಕ್ತಪಡಿಸುತ್ತಾನೆ ಎಂಬ ಕಾರಣಕ್ಕೆ, ವಿಚಾರಣೆಯನ್ನು ವರ್ಗಾಯಿಸುವಂತೆ ಕೋರಿ ಆತ ಸಲ್ಲಿಸುವ ಅರ್ಜಿಯನ್ನು ಪರಿಗಣಿಸಬಾರದು‘ ಎಂದು ನ್ಯಾಯಮೂರ್ತಿ ಹೃಷಿಕೇಶ್ ರಾಯ್ ಅವರಿರುವ ಏಕಸದಸ್ಯ ನ್ಯಾಯಪೀಠ ಹೇಳಿತು.</p>.<p>ತಮ್ಮ ವಿರುದ್ಧ ಉತ್ತರಾಖಂಡದ ವಿವಿಧ ಕೋರ್ಟ್ಗಳಲ್ಲಿ ಮೂರು ಪ್ರಕರಣಗಳ ವಿಚಾರಣೆ ನಡೆಯುತ್ತಿದೆ. ದೆಹಲಿ ಅಥವಾ ಇತರ ಕೋರ್ಟ್ಗಳಿಗೆ ಈ ವಿಚಾರಣೆ ವರ್ಗಾಯಿಸುವಂತೆ ಕೋರಿ ಪತ್ರಕರ್ತ ಉಮೇಶಕುಮಾರ್ ಶರ್ಮಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.</p>.<p>‘ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ಈ ಹಂತದಲ್ಲಿ ಬೇರೆ ರಾಜ್ಯದ ಕೋರ್ಟ್ಗೆ ವಿಚಾರಣೆಯನ್ನು ವರ್ಗಾಯಿಸುವುದು ಸಾಧ್ಯವಿಲ್ಲ. ಹೀಗೆ ಮಾಡಿದರೆ ಉತ್ತರಾಖಂಡ ರಾಜ್ಯದ ನ್ಯಾಯಾಂಗದ ವಿಶ್ವಾಸಾರ್ಹತೆ ಮೇಲೆ ಪರಿಣಾಮ ಬೀರುತ್ತದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.</p>.<p>‘ಉತ್ತರಾಖಂಡದ ಮುಖ್ಯಮಂತ್ರಿ ವಿರುದ್ಧ ರಹಸ್ಯ ಕಾರ್ಯಾಚರಣೆ ನಡೆಸಿದ್ದೆ. ಈ ಕಾರಣಕ್ಕಾಗಿ ಪ್ರತೀಕಾರ ತೆಗೆದುಕೊಳ್ಳುವ ಉದ್ದೇಶದಿಂದನನ್ನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಶರ್ಮಾ, ನ್ಯಾಯಪೀಠದ ಎದುರು ಆತಂಕ ವ್ಯಕ್ತಪಡಿಸಿದ್ದರು.</p>.<p>ಶರ್ಮಾ ಅವರು ‘ಸಮಾಚಾರ್ ಪ್ಲಸ್’ ಎಂಬ ಚಾನೆಲ್ನ ಪತ್ರಕರ್ತ. 2016ರಲ್ಲಿ ಹರೀಶ್ ರಾವತ್ ನೇತೃತ್ವದ ಸರ್ಕಾರವನ್ನು ಉರುಳಿಸುವ ಸಂಬಂಧ ರಹಸ್ಯ ಕಾರ್ಯಾಚರಣೆ ನಡೆಸಿದ್ದ ಆರೋಪದ ಮೇಲೆ ಶರ್ಮಾ ಅವರನ್ನು ಬಂಧಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಸಮರ್ಪಕ ವಿಚಾರಣೆ ನಡೆಯುವುದಿಲ್ಲ ಎಂಬ ಬಗ್ಗೆ ನಂಬಲರ್ಹ ಅಂಶಗಳು ಇದ್ದಾಗ ಮಾತ್ರ ಪ್ರಕರಣವೊಂದರ ವಿಚಾರಣೆಯನ್ನು ಬೇರೊಂದು ಕೋರ್ಟ್ಗೆ ವರ್ಗಾಯಿಸಲು ಸಾಧ್ಯ. ಕೇವಲ ಊಹೆ ಮತ್ತು ಅನುಮಾನಗಳ ಆಧಾರದಲ್ಲಿ ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.</p>.<p>‘ನಿಷ್ಪಕ್ಷಪಾತ ವಿಚಾರಣೆ ನಡೆಯುತ್ತದೆ ಎಂಬ ಬಗ್ಗೆ ನೀಡುವ ಭರವಸೆಯನ್ನು ಮೊದಲು ಗೌರವಿಸಬೇಕು. ಸೂಕ್ಷ್ಮಮನಸ್ಸಿನ ವ್ಯಕ್ತಿ ಆತಂಕ ವ್ಯಕ್ತಪಡಿಸುತ್ತಾನೆ ಎಂಬ ಕಾರಣಕ್ಕೆ, ವಿಚಾರಣೆಯನ್ನು ವರ್ಗಾಯಿಸುವಂತೆ ಕೋರಿ ಆತ ಸಲ್ಲಿಸುವ ಅರ್ಜಿಯನ್ನು ಪರಿಗಣಿಸಬಾರದು‘ ಎಂದು ನ್ಯಾಯಮೂರ್ತಿ ಹೃಷಿಕೇಶ್ ರಾಯ್ ಅವರಿರುವ ಏಕಸದಸ್ಯ ನ್ಯಾಯಪೀಠ ಹೇಳಿತು.</p>.<p>ತಮ್ಮ ವಿರುದ್ಧ ಉತ್ತರಾಖಂಡದ ವಿವಿಧ ಕೋರ್ಟ್ಗಳಲ್ಲಿ ಮೂರು ಪ್ರಕರಣಗಳ ವಿಚಾರಣೆ ನಡೆಯುತ್ತಿದೆ. ದೆಹಲಿ ಅಥವಾ ಇತರ ಕೋರ್ಟ್ಗಳಿಗೆ ಈ ವಿಚಾರಣೆ ವರ್ಗಾಯಿಸುವಂತೆ ಕೋರಿ ಪತ್ರಕರ್ತ ಉಮೇಶಕುಮಾರ್ ಶರ್ಮಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.</p>.<p>‘ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ಈ ಹಂತದಲ್ಲಿ ಬೇರೆ ರಾಜ್ಯದ ಕೋರ್ಟ್ಗೆ ವಿಚಾರಣೆಯನ್ನು ವರ್ಗಾಯಿಸುವುದು ಸಾಧ್ಯವಿಲ್ಲ. ಹೀಗೆ ಮಾಡಿದರೆ ಉತ್ತರಾಖಂಡ ರಾಜ್ಯದ ನ್ಯಾಯಾಂಗದ ವಿಶ್ವಾಸಾರ್ಹತೆ ಮೇಲೆ ಪರಿಣಾಮ ಬೀರುತ್ತದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.</p>.<p>‘ಉತ್ತರಾಖಂಡದ ಮುಖ್ಯಮಂತ್ರಿ ವಿರುದ್ಧ ರಹಸ್ಯ ಕಾರ್ಯಾಚರಣೆ ನಡೆಸಿದ್ದೆ. ಈ ಕಾರಣಕ್ಕಾಗಿ ಪ್ರತೀಕಾರ ತೆಗೆದುಕೊಳ್ಳುವ ಉದ್ದೇಶದಿಂದನನ್ನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಶರ್ಮಾ, ನ್ಯಾಯಪೀಠದ ಎದುರು ಆತಂಕ ವ್ಯಕ್ತಪಡಿಸಿದ್ದರು.</p>.<p>ಶರ್ಮಾ ಅವರು ‘ಸಮಾಚಾರ್ ಪ್ಲಸ್’ ಎಂಬ ಚಾನೆಲ್ನ ಪತ್ರಕರ್ತ. 2016ರಲ್ಲಿ ಹರೀಶ್ ರಾವತ್ ನೇತೃತ್ವದ ಸರ್ಕಾರವನ್ನು ಉರುಳಿಸುವ ಸಂಬಂಧ ರಹಸ್ಯ ಕಾರ್ಯಾಚರಣೆ ನಡೆಸಿದ್ದ ಆರೋಪದ ಮೇಲೆ ಶರ್ಮಾ ಅವರನ್ನು ಬಂಧಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>