ಇದರಿಂದ ನೊಂದಿರುವ ಅವರು ಸುಪ್ರಿಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಕೋರ್ಟ್ ಅವರ ಅರ್ಜಿಯನ್ನು ವಿಚಾರಣೆಗೆ ಮಾನ್ಯ ಮಾಡಿದೆ. ನಾಲ್ಕು ವಾರಗಳ ನಂತರ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಳ್ಳುವುದಾಗಿ ತಿಳಿಸಿರುವ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹಾಗೂ ಜೆ.ಬಿ. ಪರ್ದಿವಾಲ್ ಅವರ ನೇತೃತ್ವದ ಪೀಠ, ಉತ್ತರ ಪ್ರದೇಶ ಸರ್ಕಾರ, ಗುಜರಾತ್ ಸರ್ಕಾರ ಹಾಗೂ ಸಂಬಂಧಿಸಿದ ಎರಡು ಶಾಲೆಗಳಿಗೆ ನೋಟಿಸ್ ಜಾರಿ ಮಾಡಿದೆ.
ಹೈಕೋರ್ಟ್ನಲ್ಲಿ ನನ್ನ ಅರ್ಜಿಯನ್ನು ಮಾನ್ಯ ಮಾಡಿಲ್ಲ ಎಂದು ಸಂತ್ರಸ್ತ ವ್ಯಕ್ತಿ ದೂರಿದ್ದಾರೆ. ನನಗೆ ನ್ಯಾಯ ದೊರಕಿಸಿ, ನನ್ನ ಮೂಲಭೂತ ಹಕ್ಕನ್ನು ರಕ್ಷಿಸಬೇಕು ಎಂದು ಅವರು ಸುಪ್ರಿಂ ಕೋರ್ಟ್ಗೆ ಮನವಿ ಮಾಡಿಕೊಂಡಿದ್ದಾರೆ.