<p><strong>ನವದೆಹಲಿ</strong>: ಲೈಂಗಿಕ ದೌರ್ಜನ್ಯದಿಂದಾಗಿ ಆಘಾತಕ್ಕೆ ಒಳಗಾಗಿರುವ ಮಗು, ಕಣ್ಣೀರು ಹಾಕುವುದನ್ನು ಹೊರತುಪಡಿಸಿ ಬೇರೆ ಏನೂ ಸಾಕ್ಷ್ಯ ನುಡಿಯುತ್ತಿಲ್ಲ ಎಂಬ ಅಂಶವು ಆರೋಪಿಗೆ ಶಿಕ್ಷೆ ನೀಡದೇ ಇರುವುದಕ್ಕೆ ಆಧಾರವಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.<p>‘ಇಂತಹ ಪ್ರಕರಣಗಳಲ್ಲಿ, ಲಭ್ಯವಿರುವ ವೈದ್ಯಕೀಯ ಹಾಗೂ ಸಾಂದರ್ಭಿಕ ಸಾಕ್ಷ್ಯಗಳೇ ಆರೋಪಿಯು ತಪ್ಪಿತಸ್ಥ ಎಂದು ಘೋಷಿಸಲು ಆಧಾರವಾಗುತ್ತವೆ’ ಎಂದೂ ಸುಪ್ರೀಂ ಕೋರ್ಟ್ ಹೇಳಿದೆ.</p>.<p>‘ಸಂತ್ರಸ್ತ ಮಗುವಿನ ಹೇಳಿಕೆ ಇಲ್ಲದಿರುವ ಕಾರಣ, ತಪ್ಪಿತಸ್ಥ ವ್ಯಕ್ತಿಗೆ ಶಿಕ್ಷೆ ನೀಡಬಾರದು ಎಂಬಂತಹ ಯಾವುದೇ ಕಠಿಣ ನಿಯಮ ಇಲ್ಲ’ ಎಂದು ನ್ಯಾಯಮೂರ್ತಿಗಳಾದ ವಿಕ್ರಮನಾಥ ಹಾಗೂ ಸಂಜಯ್ ಕರೋಲ್ ಅವರು ಇದ್ದ ನ್ಯಾಯಪೀಠ ಹೇಳಿದೆ.</p>.<p>ರಾಜಸ್ಥಾನದಲ್ಲಿ 1986ರ ಮಾರ್ಚ್ 3ರಂದು 1ನೇ ತರಗತಿ ಬಾಲಕಿ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ, ಚತ್ರಾ ಎಂಬ ವ್ಯಕ್ತಿ ದೋಷಿ ಎಂದು ಘೋಷಿಸಿದ್ದ ಟೊಂಕ್ನ ನ್ಯಾಯಾಲಯ, ಆತನಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.</p>.<p>ಇದನ್ನು ಪ್ರಶ್ನಿಸಿ ಚತ್ರಾ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ್ದ ರಾಜಸ್ಥಾನ ಹೈಕೋರ್ಟ್, ಆತನಿಗೆ ವಿಧಿಸಿದ್ದ ಶಿಕ್ಷೆಯನ್ನು ರದ್ದುಪಡಿಸಿ 2013ರಲ್ಲಿ ಆದೇಶಿಸಿತ್ತು.</p>.<p>ಹೈಕೋರ್ಟ್ನ ಈ ಆದೇಶ ಪ್ರಶ್ನಿಸಿ ರಾಜಸ್ಥಾನ ಸರ್ಕಾರ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿ ಪುರಸ್ಕರಿಸಿದ್ದ ಪೀಠವು, ಹೈಕೋರ್ಟ್ ಆದೇಶ ರದ್ದುಪಡಿಸಿ ಮಾರ್ಚ್ 18ರಂದು ತೀರ್ಪು ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಲೈಂಗಿಕ ದೌರ್ಜನ್ಯದಿಂದಾಗಿ ಆಘಾತಕ್ಕೆ ಒಳಗಾಗಿರುವ ಮಗು, ಕಣ್ಣೀರು ಹಾಕುವುದನ್ನು ಹೊರತುಪಡಿಸಿ ಬೇರೆ ಏನೂ ಸಾಕ್ಷ್ಯ ನುಡಿಯುತ್ತಿಲ್ಲ ಎಂಬ ಅಂಶವು ಆರೋಪಿಗೆ ಶಿಕ್ಷೆ ನೀಡದೇ ಇರುವುದಕ್ಕೆ ಆಧಾರವಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.<p>‘ಇಂತಹ ಪ್ರಕರಣಗಳಲ್ಲಿ, ಲಭ್ಯವಿರುವ ವೈದ್ಯಕೀಯ ಹಾಗೂ ಸಾಂದರ್ಭಿಕ ಸಾಕ್ಷ್ಯಗಳೇ ಆರೋಪಿಯು ತಪ್ಪಿತಸ್ಥ ಎಂದು ಘೋಷಿಸಲು ಆಧಾರವಾಗುತ್ತವೆ’ ಎಂದೂ ಸುಪ್ರೀಂ ಕೋರ್ಟ್ ಹೇಳಿದೆ.</p>.<p>‘ಸಂತ್ರಸ್ತ ಮಗುವಿನ ಹೇಳಿಕೆ ಇಲ್ಲದಿರುವ ಕಾರಣ, ತಪ್ಪಿತಸ್ಥ ವ್ಯಕ್ತಿಗೆ ಶಿಕ್ಷೆ ನೀಡಬಾರದು ಎಂಬಂತಹ ಯಾವುದೇ ಕಠಿಣ ನಿಯಮ ಇಲ್ಲ’ ಎಂದು ನ್ಯಾಯಮೂರ್ತಿಗಳಾದ ವಿಕ್ರಮನಾಥ ಹಾಗೂ ಸಂಜಯ್ ಕರೋಲ್ ಅವರು ಇದ್ದ ನ್ಯಾಯಪೀಠ ಹೇಳಿದೆ.</p>.<p>ರಾಜಸ್ಥಾನದಲ್ಲಿ 1986ರ ಮಾರ್ಚ್ 3ರಂದು 1ನೇ ತರಗತಿ ಬಾಲಕಿ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ, ಚತ್ರಾ ಎಂಬ ವ್ಯಕ್ತಿ ದೋಷಿ ಎಂದು ಘೋಷಿಸಿದ್ದ ಟೊಂಕ್ನ ನ್ಯಾಯಾಲಯ, ಆತನಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.</p>.<p>ಇದನ್ನು ಪ್ರಶ್ನಿಸಿ ಚತ್ರಾ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ್ದ ರಾಜಸ್ಥಾನ ಹೈಕೋರ್ಟ್, ಆತನಿಗೆ ವಿಧಿಸಿದ್ದ ಶಿಕ್ಷೆಯನ್ನು ರದ್ದುಪಡಿಸಿ 2013ರಲ್ಲಿ ಆದೇಶಿಸಿತ್ತು.</p>.<p>ಹೈಕೋರ್ಟ್ನ ಈ ಆದೇಶ ಪ್ರಶ್ನಿಸಿ ರಾಜಸ್ಥಾನ ಸರ್ಕಾರ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿ ಪುರಸ್ಕರಿಸಿದ್ದ ಪೀಠವು, ಹೈಕೋರ್ಟ್ ಆದೇಶ ರದ್ದುಪಡಿಸಿ ಮಾರ್ಚ್ 18ರಂದು ತೀರ್ಪು ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>