<p><strong>ನವದೆಹಲಿ:</strong> ಮುಂಬೈಯಂತೆ ದೆಹಲಿಯಲ್ಲಿ ಸಹ ಸ್ಟೇಡಿಯಂ ಸೇರಿದಂತೆ ತೆರೆದ ಪ್ರದೇಶಗಳಲ್ಲಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲಹೆ ಎಂಬಂತೆ ಸ್ವೀಕರಿಸಿ, ಅದರ ಸಾಧ್ಯತೆಗಳ ಬಗ್ಗೆ ಪರಿಶೀಲಸಬೇಕು ಎಂದು ದೆಹಲಿ ಹೈಕೋರ್ಟ್ ಕೇಂದ್ರ ಮತ್ತು ದೆಹಲಿ ಸರ್ಕಾರಗಳಿಗೆ ಸೂಚಿಸಿದೆ.</p>.<p>ಮುಖ್ಯ ನ್ಯಾಯಮೂರ್ತಿ ಡಿ.ಎನ್.ಪಟೇಲ್ ಮತ್ತು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರಿದ್ದ ಪೀಠವು ‘ಈ ಅರ್ಜಿಗೆ ಅನ್ವಯಿಸುವಂತೆ ಕಾನೂನು, ನಿಯಮ ಮತ್ತು ನೀತಿಗೆ ಅನುಗುಣವಾಗಿ ಪ್ರಾತಿನಿಧ್ಯವನ್ನು ನಿರ್ಧರಿಸಿ’ ಎಂದು ಸೂಚಿಸಿತು.</p>.<p>‘ಮುಂಬೈನಲ್ಲಿ ಸ್ಟೇಡಿಯಂ, ಬೃಹತ್ ಮೈದಾನಗಳಂತಹ ಸ್ಥಳಗಳಲ್ಲಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಅದರಂತೆ ದೆಹಲಿಯಲ್ಲೂ ತೆರೆದ ಪ್ರದೇಶಗಳಲ್ಲಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಬೇಕು. ಈ ಮೂಲಕ ಜನರು ಪರಸ್ಪರ ಸಂಪರ್ಕಕ್ಕೆ ಬಾರದಂತೆ ತಡೆಯಬಹುದು ಮತ್ತು ಅಂತರವನ್ನು ಕಾಯ್ದುಕೊಳ್ಳಬಹುದು’ ಎಂದು ದೆಹಲಿ ಮೂಲದ ವ್ಯಾಪಾರಿ ಅಮನ್ದೀಪ್ ಅಗರ್ವಾಲ್ ಸಲ್ಲಿಸಿದ ಪಿಐಎಲ್ನಲ್ಲಿ ತಿಳಿಸಿದ್ದಾರೆ.</p>.<p>‘ಜನರು ಗುಂಪುಗೂಡುವುದನ್ನು ತಡೆಯಲು ಲಾಕ್ಡೌನ್, ಕರ್ಫ್ಯೂನಂತಹ ನಿಯಮಗಳು ಜಾರಿಗೆ ತರಬಹುದು. ಆದರೆ ಲಸಿಕಾ ಕೇಂದ್ರಗಳಂತಹ ಮುಚ್ಚಿದ ಸ್ಥಳಗಳಲ್ಲಿ ಜನರು ಗುಂಪುಗೂಡಿದರೆ ಲಾಕ್ಡೌನ್ ವಿಧಿಸಿಯೂ ಏನೂ ಪ್ರಯೋಜನ’ ಎಂದು ಅರ್ಜಿದಾರರ ಪರ ವಕೀಲರಾದ ಎ.ಎಸ್ ಚಾಂದಿಯೋಕ್ ಮತ್ತು ರುಶಾಬ್ ಅಗರ್ವಾಲ್ ಹೇಳಿದ್ದಾರೆ.</p>.<p>‘ತೆರೆದ ಪ್ರದೇಶಗಳಲ್ಲಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸುವುದರಿಂದ ಆರೋಗ್ಯ ಕಾರ್ಯಕರ್ತರು ಮತ್ತು ಆಸ್ಪತ್ರೆ ಮೇಲಿನ ಒತ್ತಡ ಕಡಿಮೆಯಾಗಬಹುದು’ ಎಂದು ಅರ್ಜಿಯಲ್ಲಿ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮುಂಬೈಯಂತೆ ದೆಹಲಿಯಲ್ಲಿ ಸಹ ಸ್ಟೇಡಿಯಂ ಸೇರಿದಂತೆ ತೆರೆದ ಪ್ರದೇಶಗಳಲ್ಲಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲಹೆ ಎಂಬಂತೆ ಸ್ವೀಕರಿಸಿ, ಅದರ ಸಾಧ್ಯತೆಗಳ ಬಗ್ಗೆ ಪರಿಶೀಲಸಬೇಕು ಎಂದು ದೆಹಲಿ ಹೈಕೋರ್ಟ್ ಕೇಂದ್ರ ಮತ್ತು ದೆಹಲಿ ಸರ್ಕಾರಗಳಿಗೆ ಸೂಚಿಸಿದೆ.</p>.<p>ಮುಖ್ಯ ನ್ಯಾಯಮೂರ್ತಿ ಡಿ.ಎನ್.ಪಟೇಲ್ ಮತ್ತು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರಿದ್ದ ಪೀಠವು ‘ಈ ಅರ್ಜಿಗೆ ಅನ್ವಯಿಸುವಂತೆ ಕಾನೂನು, ನಿಯಮ ಮತ್ತು ನೀತಿಗೆ ಅನುಗುಣವಾಗಿ ಪ್ರಾತಿನಿಧ್ಯವನ್ನು ನಿರ್ಧರಿಸಿ’ ಎಂದು ಸೂಚಿಸಿತು.</p>.<p>‘ಮುಂಬೈನಲ್ಲಿ ಸ್ಟೇಡಿಯಂ, ಬೃಹತ್ ಮೈದಾನಗಳಂತಹ ಸ್ಥಳಗಳಲ್ಲಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಅದರಂತೆ ದೆಹಲಿಯಲ್ಲೂ ತೆರೆದ ಪ್ರದೇಶಗಳಲ್ಲಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಬೇಕು. ಈ ಮೂಲಕ ಜನರು ಪರಸ್ಪರ ಸಂಪರ್ಕಕ್ಕೆ ಬಾರದಂತೆ ತಡೆಯಬಹುದು ಮತ್ತು ಅಂತರವನ್ನು ಕಾಯ್ದುಕೊಳ್ಳಬಹುದು’ ಎಂದು ದೆಹಲಿ ಮೂಲದ ವ್ಯಾಪಾರಿ ಅಮನ್ದೀಪ್ ಅಗರ್ವಾಲ್ ಸಲ್ಲಿಸಿದ ಪಿಐಎಲ್ನಲ್ಲಿ ತಿಳಿಸಿದ್ದಾರೆ.</p>.<p>‘ಜನರು ಗುಂಪುಗೂಡುವುದನ್ನು ತಡೆಯಲು ಲಾಕ್ಡೌನ್, ಕರ್ಫ್ಯೂನಂತಹ ನಿಯಮಗಳು ಜಾರಿಗೆ ತರಬಹುದು. ಆದರೆ ಲಸಿಕಾ ಕೇಂದ್ರಗಳಂತಹ ಮುಚ್ಚಿದ ಸ್ಥಳಗಳಲ್ಲಿ ಜನರು ಗುಂಪುಗೂಡಿದರೆ ಲಾಕ್ಡೌನ್ ವಿಧಿಸಿಯೂ ಏನೂ ಪ್ರಯೋಜನ’ ಎಂದು ಅರ್ಜಿದಾರರ ಪರ ವಕೀಲರಾದ ಎ.ಎಸ್ ಚಾಂದಿಯೋಕ್ ಮತ್ತು ರುಶಾಬ್ ಅಗರ್ವಾಲ್ ಹೇಳಿದ್ದಾರೆ.</p>.<p>‘ತೆರೆದ ಪ್ರದೇಶಗಳಲ್ಲಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸುವುದರಿಂದ ಆರೋಗ್ಯ ಕಾರ್ಯಕರ್ತರು ಮತ್ತು ಆಸ್ಪತ್ರೆ ಮೇಲಿನ ಒತ್ತಡ ಕಡಿಮೆಯಾಗಬಹುದು’ ಎಂದು ಅರ್ಜಿಯಲ್ಲಿ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>