<p><strong>ಕೋಲ್ಕತ್ತ:</strong> ದೇಶದಾದ್ಯಂತ ಬಿಜೆಪಿ ವಿರೋಧಿ ಅಲೆ ಈಗ ಟ್ರೆಂಡ್ ಇದೆ ಎಂಬುದನ್ನು ವಿಧಾನಸಭೆ ಉಪಚುನಾವಣೆ ಫಲಿತಾಂಶ ತೋರಿಸಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.</p>.<p>ಕೋಲ್ಕತ್ತದ ನೇತಾಜಿ ಸುಭಾಷ್ ಚಂದ್ರ ಬೋಸ್ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೇಶದಾದ್ಯಂತ ಬಿಜೆಪಿ ವಿರೋಧಿ ಅಲೆ ಈಗ ಟ್ರೆಂಡ್ ಇದೆ’ ಎಂದು ಹೇಳಿದರು.</p><p>ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಪೂರ್ಣಾವಧಿಯಲ್ಲಿ ಉಳಿಯುವುದಿಲ್ಲ ಎಂಬುದನ್ನು ಸೂಚಿಸುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ಟ್ರೆಂಡ್ ತುಂಬಾ ಸ್ಪಷ್ಟವಾಗಿದೆ. ಈ ಹಿಂದೆ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿಯೂ ಜನಾದೇಶ ಎನ್ಡಿಎ ಪರವಾಗಿ ಇರಲಿಲ್ಲ’ ಎಂದು ತಿಳಿಸಿದ್ದಾರೆ.</p><p>ಒಟ್ಟು 13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಪಶ್ಚಿಮ ಬಂಗಾಳದಲ್ಲಿ 4, ಹಿಮಾಚಲ ಪ್ರದೇಶ 3, ಉತ್ತರಾಖಂಡ 2, ಪಂಜಾಬ್, ಮಧ್ಯ ಪ್ರದೇಶ, ಬಿಹಾರ ಮತ್ತು ತಮಿಳುನಾಡಿನಲ್ಲಿ ತಲಾ 1 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಮೈತ್ರಿಕೂಟವು ಶೇ 51ರಷ್ಟು ಮತಗಳನ್ನು ಪಡೆದಿದೆ. ಎನ್ಡಿಎ ಶೇ 46 ರಷ್ಟು ಮತಗಳನ್ನು ಪಡೆದಿದೆ ಎಂದು ಮಮತಾ ಹೇಳಿದ್ದಾರೆ.</p><p>ಪಶ್ಚಿಮ ಬಂಗಾಳದ ನಾಲ್ಕು ಕ್ಷೇತ್ರಗಳಲ್ಲಿಯೂ ಟಿಎಂಸಿಯನ್ನು ಗೆಲ್ಲಿಸಿದ್ದಕ್ಕಾಗಿ ಜನರಿಗೆ ಧನ್ಯವಾದ ತಿಳಿಸಿದ ಬ್ಯಾನರ್ಜಿ, ರಾಜಸ್ಥಾನ ಮತ್ತು ಮಧ್ಯ ಪ್ರದೇಶ ಹೊರತುಪಡಿಸಿ ಇತರ ರಾಜ್ಯಗಳಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿಲ್ಲ ಎಂದು ತಿಳಿಸಿದ್ದಾರೆ.</p><p>7 ರಾಜ್ಯಗಳ 13 ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟ 10 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ. ಬಿಜೆಪಿ 2 ಮತ್ತು ಪಕ್ಷೇತರ ಅಭ್ಯರ್ಥಿ 1 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಜುಲೈ 10ರಂದು ಉಪಚುನಾಚಣೆ ನಡೆದಿತ್ತು. ನಿನ್ನೆ (ಶನಿವಾರ) ಎಲ್ಲ ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದೆ.</p>.ವಿಧಾನಸಭೆ ಉಪಚುನಾವಣೆ: ಇಂಡಿಯಾ ಬಣಕ್ಕೆ 10, ಬಿಜೆಪಿಗೆ 2 ಸ್ಥಾನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ದೇಶದಾದ್ಯಂತ ಬಿಜೆಪಿ ವಿರೋಧಿ ಅಲೆ ಈಗ ಟ್ರೆಂಡ್ ಇದೆ ಎಂಬುದನ್ನು ವಿಧಾನಸಭೆ ಉಪಚುನಾವಣೆ ಫಲಿತಾಂಶ ತೋರಿಸಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.</p>.<p>ಕೋಲ್ಕತ್ತದ ನೇತಾಜಿ ಸುಭಾಷ್ ಚಂದ್ರ ಬೋಸ್ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೇಶದಾದ್ಯಂತ ಬಿಜೆಪಿ ವಿರೋಧಿ ಅಲೆ ಈಗ ಟ್ರೆಂಡ್ ಇದೆ’ ಎಂದು ಹೇಳಿದರು.</p><p>ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಪೂರ್ಣಾವಧಿಯಲ್ಲಿ ಉಳಿಯುವುದಿಲ್ಲ ಎಂಬುದನ್ನು ಸೂಚಿಸುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ಟ್ರೆಂಡ್ ತುಂಬಾ ಸ್ಪಷ್ಟವಾಗಿದೆ. ಈ ಹಿಂದೆ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿಯೂ ಜನಾದೇಶ ಎನ್ಡಿಎ ಪರವಾಗಿ ಇರಲಿಲ್ಲ’ ಎಂದು ತಿಳಿಸಿದ್ದಾರೆ.</p><p>ಒಟ್ಟು 13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಪಶ್ಚಿಮ ಬಂಗಾಳದಲ್ಲಿ 4, ಹಿಮಾಚಲ ಪ್ರದೇಶ 3, ಉತ್ತರಾಖಂಡ 2, ಪಂಜಾಬ್, ಮಧ್ಯ ಪ್ರದೇಶ, ಬಿಹಾರ ಮತ್ತು ತಮಿಳುನಾಡಿನಲ್ಲಿ ತಲಾ 1 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಮೈತ್ರಿಕೂಟವು ಶೇ 51ರಷ್ಟು ಮತಗಳನ್ನು ಪಡೆದಿದೆ. ಎನ್ಡಿಎ ಶೇ 46 ರಷ್ಟು ಮತಗಳನ್ನು ಪಡೆದಿದೆ ಎಂದು ಮಮತಾ ಹೇಳಿದ್ದಾರೆ.</p><p>ಪಶ್ಚಿಮ ಬಂಗಾಳದ ನಾಲ್ಕು ಕ್ಷೇತ್ರಗಳಲ್ಲಿಯೂ ಟಿಎಂಸಿಯನ್ನು ಗೆಲ್ಲಿಸಿದ್ದಕ್ಕಾಗಿ ಜನರಿಗೆ ಧನ್ಯವಾದ ತಿಳಿಸಿದ ಬ್ಯಾನರ್ಜಿ, ರಾಜಸ್ಥಾನ ಮತ್ತು ಮಧ್ಯ ಪ್ರದೇಶ ಹೊರತುಪಡಿಸಿ ಇತರ ರಾಜ್ಯಗಳಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿಲ್ಲ ಎಂದು ತಿಳಿಸಿದ್ದಾರೆ.</p><p>7 ರಾಜ್ಯಗಳ 13 ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟ 10 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ. ಬಿಜೆಪಿ 2 ಮತ್ತು ಪಕ್ಷೇತರ ಅಭ್ಯರ್ಥಿ 1 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಜುಲೈ 10ರಂದು ಉಪಚುನಾಚಣೆ ನಡೆದಿತ್ತು. ನಿನ್ನೆ (ಶನಿವಾರ) ಎಲ್ಲ ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದೆ.</p>.ವಿಧಾನಸಭೆ ಉಪಚುನಾವಣೆ: ಇಂಡಿಯಾ ಬಣಕ್ಕೆ 10, ಬಿಜೆಪಿಗೆ 2 ಸ್ಥಾನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>