<p><strong>ನವದೆಹಲಿ</strong>: ವಿಚಾರಣಾ ನ್ಯಾಯಾಲಯವು ಒಬ್ಬ ವ್ಯಕ್ತಿಯ ಸ್ವಾಭಾವಿಕ ಜೀವಿತಾವಧಿವರೆಗೆ ಜೀವಾವಧಿ ಶಿಕ್ಷೆಯನ್ನು ವಿಧಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಅಹಸಾನುದ್ದೀನ್ ಅಮಾನುಲ್ಲಾಹ್ ಮತ್ತು ಕೆ.ವಿನೋದ್ ಚಂದ್ರನ್ ನೇತೃತ್ವದ ನ್ಯಾಯಪೀಠವು, ಜೀವಿತಾವಧಿಯವರೆಗೆ ಜೀವಾವಧಿ ಶಿಕ್ಷೆ ವಿಧಿಸುವ ಅಧಿಕಾರ ಸಾಂವಿಧಾನಿಕ ನ್ಯಾಯಾಲಯಗಳಿಗೆ ಮಾತ್ರ ಇರುತ್ತದೆ. ಸೆಷನ್ಸ್ ಕೋರ್ಟ್ಗಳಿಗೆ ಅಂಥ ಅಧಿಕಾರ ಇರುವುದಿಲ್ಲ ಎಂದು ಸ್ಪಷ್ಟಪಡಿಸಿತು.</p>.<p class="title">ಲೈಂಗಿಕವಾಗಿ ಸಹಕರಿಸದ ವಿಧವೆಯೊಬ್ಬರಿಗೆ ಬೆಂಕಿ ಇಟ್ಟ ಪ್ರಕರಣದ ಅಪರಾಧಿ ಕಿರಣ್ ಮನವಿಯನ್ನು ನ್ಯಾಯಾಲಯವು ಭಾಗಶಃ ಪರಿಗಣಿಸಿತು. ಘಟನೆ ನಡೆದ 10 ದಿನಗಳ ನಂತರ ಸಂತ್ರಸ್ತೆಯು ಮೃತಪಟ್ಟಿದ್ದರು.</p>.<p class="title">ತಪ್ಪಿತಸ್ಥನಿಗೆ ವಿಚಾರಣಾ ನ್ಯಾಯಾಲಯವು ಜೀವಿತಾವಧಿಯವರೆಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿತ್ತು ಮತ್ತು ಸೆಕ್ಷನ್ 428ರ ಅಡಿಯಲ್ಲಿ ಕ್ಷಮೆಯನ್ನೂ ಪಡೆಯುವಂತಿಲ್ಲ ಎಂದು ಸೂಚಿಸಿತ್ತು.</p>.<p class="title">ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಪೀಠವು, ತಪ್ಪಿತಸ್ಥ ಎಂಬ ತೀರ್ಪನ್ನು ಎತ್ತಿಹಿಡಿಯಿತು ಮತ್ತು 14 ವರ್ಷಗಳ ಜೀವಾವಧಿ ಶಿಕ್ಷೆಯಾಗಿ ಪರಿಷ್ಕರಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ವಿಚಾರಣಾ ನ್ಯಾಯಾಲಯವು ಒಬ್ಬ ವ್ಯಕ್ತಿಯ ಸ್ವಾಭಾವಿಕ ಜೀವಿತಾವಧಿವರೆಗೆ ಜೀವಾವಧಿ ಶಿಕ್ಷೆಯನ್ನು ವಿಧಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಅಹಸಾನುದ್ದೀನ್ ಅಮಾನುಲ್ಲಾಹ್ ಮತ್ತು ಕೆ.ವಿನೋದ್ ಚಂದ್ರನ್ ನೇತೃತ್ವದ ನ್ಯಾಯಪೀಠವು, ಜೀವಿತಾವಧಿಯವರೆಗೆ ಜೀವಾವಧಿ ಶಿಕ್ಷೆ ವಿಧಿಸುವ ಅಧಿಕಾರ ಸಾಂವಿಧಾನಿಕ ನ್ಯಾಯಾಲಯಗಳಿಗೆ ಮಾತ್ರ ಇರುತ್ತದೆ. ಸೆಷನ್ಸ್ ಕೋರ್ಟ್ಗಳಿಗೆ ಅಂಥ ಅಧಿಕಾರ ಇರುವುದಿಲ್ಲ ಎಂದು ಸ್ಪಷ್ಟಪಡಿಸಿತು.</p>.<p class="title">ಲೈಂಗಿಕವಾಗಿ ಸಹಕರಿಸದ ವಿಧವೆಯೊಬ್ಬರಿಗೆ ಬೆಂಕಿ ಇಟ್ಟ ಪ್ರಕರಣದ ಅಪರಾಧಿ ಕಿರಣ್ ಮನವಿಯನ್ನು ನ್ಯಾಯಾಲಯವು ಭಾಗಶಃ ಪರಿಗಣಿಸಿತು. ಘಟನೆ ನಡೆದ 10 ದಿನಗಳ ನಂತರ ಸಂತ್ರಸ್ತೆಯು ಮೃತಪಟ್ಟಿದ್ದರು.</p>.<p class="title">ತಪ್ಪಿತಸ್ಥನಿಗೆ ವಿಚಾರಣಾ ನ್ಯಾಯಾಲಯವು ಜೀವಿತಾವಧಿಯವರೆಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿತ್ತು ಮತ್ತು ಸೆಕ್ಷನ್ 428ರ ಅಡಿಯಲ್ಲಿ ಕ್ಷಮೆಯನ್ನೂ ಪಡೆಯುವಂತಿಲ್ಲ ಎಂದು ಸೂಚಿಸಿತ್ತು.</p>.<p class="title">ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಪೀಠವು, ತಪ್ಪಿತಸ್ಥ ಎಂಬ ತೀರ್ಪನ್ನು ಎತ್ತಿಹಿಡಿಯಿತು ಮತ್ತು 14 ವರ್ಷಗಳ ಜೀವಾವಧಿ ಶಿಕ್ಷೆಯಾಗಿ ಪರಿಷ್ಕರಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>