ಆರೋಪಿಗಳನ್ನು ಬಂಧಿಸಲು ಆರು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಉಮೇಶ್ ಮಿಶ್ರಾ ಹೇಳಿದ್ದಾರೆ.
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಗೆಹಲೋತ್ ‘ಇಂತಹ ಘಟನೆಗಳಿಗೆ ಸುಸಂಸ್ಕೃತ ಸಮಾಜದಲ್ಲಿ ಸ್ಥಾನವಿಲ್ಲ’ ಶೀಘ್ರವೇ ಆರೋಪಿಯನ್ನು ಬಂಧಿಸಿ ನ್ಯಾಯಾಲಯ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಹೇಳಿದ್ದಾರೆ.
ಜನರ ಮುಂದೆ ಗರ್ಭಿಣಿ ಮಹಿಳೆಯನ್ನು ವಿವಸ್ತ್ರಗೊಳಿಸಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಆದರೆ, ಆಡಳಿತ ಮಂಡಳಿಗೆ ಇದರ ಅರಿವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಆರೋಪಿಸಿದ್ದಾರೆ.
ಈ ಘಟನೆಯು ರಾಜಸ್ಥಾನಕ್ಕೆ ನಾಚಿಕೆಗೇಡಾಗಿದ್ದು, ವಿಡಿಯೊವನ್ನು ಹಂಚಿಕೊಳ್ಳದಂತೆ ಬಿಜೆಪಿ ನಾಯಕರು ಜನರಿಗೆ ಮನವಿ ಮಾಡಿದ್ದಾರೆ.