ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌ನಲ್ಲಿ ಕೇಶುಭಾಯ್ ಪಟೇಲ್‌ಗೆ ಅಂತಿಮ ನಮನ

Last Updated 30 ಅಕ್ಟೋಬರ್ 2020, 9:06 IST
ಅಕ್ಷರ ಗಾತ್ರ

ಅಹಮದಾಬಾದ್‌: ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ರಾಜಕೀಯ ವಲಯದ ಗಣ್ಯರು, ಕುಟುಂಬಸ್ಥರು ಹಾಗೂ ಸಂಬಂಧಿಗಳು ಗುಜರಾತ್‌ನ ಮಾಜಿ ಮುಖ್ಯಮಂತ್ರಿ ಕೇಶುಭಾಯ್ ಪಟೇಲ್‌ ಅವರಿಗೆ ಶುಕ್ರವಾರ ಅಂತಿಮ ನಮನ ಸಲ್ಲಿಸಿದರು.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕೇಶುಭಾಯ್ ಪಟೇಲ್ (92) ಅವರು ಗುರುವಾರ ನಿಧನರಾಗಿದ್ದರು.

ಕೇಶುಭಾಯ್ ಪಟೇಲ್ 1995ರಲ್ಲಿ ಮೊದಲ ಬಾರಿಗೆ ಗುಜರಾತ್‌ ಮುಖ್ಯಮಂತ್ರಿಯಾಗಿದ್ದರು. ನಂತರ 1998 –2001ರ ಅವಧಿಯಲ್ಲಿ ಎರಡನೇ ಬಾರಿಗೆ ಗುಜರಾತ್‌ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದರು.

ಪಟೇಲ್ಅವರು ಆರು ಬಾರಿ ಗುಜರಾತ್ ವಿಧಾನಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. 2012ರ ವಿಧಾನಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ತೋರಿದ ಕಾರಣ ಪಟೇಲ್ ಅವರು ಆ ವರ್ಷ ಬಿಜೆಪಿಯನ್ನು ತೊರೆದು, ಗುಜರಾತ್ ಪರಿವರ್ತನ ಪಕ್ಷವನ್ನು ಸ್ಥಾಪಿಸಿದರು. ನಂತರ 2014ರಲ್ಲಿ ಆ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನಗೊಳಿಸಿದ್ದರು.

1928 ರಲ್ಲಿ ಜುನಾಗಢ ಜಿಲ್ಲೆಯ ವಿಶಾವದಾರ್ ಪಟ್ಟಣದಲ್ಲಿ ಜನಿಸಿದ ಕೇಶುಭಾಯ್‌ ಪಟೇಲ್ ಅವರು, 1945 ರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (ಆರ್‌ಎಸ್‌ಎಸ್) ಪ್ರಚಾರಕರಾಗಿ ಸೇರಿದರು. ಅವರು ಜನ ಸಂಘದ ಕಾರ್ಯಕರ್ತರಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದ್ದರು.

ಕನೋಡಿಯಾ ಕುಟುಂಬಸ್ಥರಿಗೆ ಸಂತಾಪ: ಇತ್ತೀಚಿಗೆ ನಿಧನರಾದ ಹಿರಿಯ ರಾಜಕಾರಣಿ, ನಟ ನರೇಶ್‌ ಕನೋಡಿಯಾ (77), ಮಹೇಶ್‌ ಕನೋಡಿಯಾ (83) ಅವರ ಕುಟುಂಬಸ್ಥರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

ಇಬ್ಬರೂ ಸಹೋದರರು ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದರು. ನರೇಶ್‌ ಕನೋಡಿಯಾ ಮಾಜಿ ಶಾಸಕರಾಗಿದ್ದರೆ, ಮಹೇಶ್ ಕನೋಡಿಯಾ ಬಿಜೆಪಿ ಸಂಸದರಾಗಿ ಸೇವೆ ಸಲ್ಲಿಸಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT