<p><strong>ಅಗರ್ತಲಾ:</strong> ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಮಾಣಿಕ್ ಸಹಾ, ತ್ರಿಪುರ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡಲು, ಹೆಚ್ಚಿನ ಸಾಮರ್ಥ್ಯವುಳ್ಳ ಶಿಕ್ಷಕರನ್ನು ನೇಮಿಸಿಕೊಳ್ಳಲು ಸರ್ಕಾರ ತಯಾರಿ ನಡೆಸುತ್ತಿದೆ ಎಂದು ಹೇಳಿದ್ದಾರೆ. </p><p>ತ್ರಿಪುರ ಸರ್ಕಾರವು ಕಳೆದ ಏಳು ವರ್ಷಗಳಲ್ಲಿ ವಿವಿಧ ವರ್ಗಗಳಲ್ಲಿ 19,800 ಉದ್ಯೋಗಿಗಳನ್ನು ನೇಮಕ ಮಾಡಿಕೊಂಡಿದೆ, ಅದರಲ್ಲಿ 5,215 ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.</p><p>ತ್ರಿಪುರ ಸರ್ಕಾರಿ ನೌಕರರು ಶೇ 33ರಷ್ಟು, ಕೇಂದ್ರ ಸರ್ಕಾರಿ ನೌಕರರು, ಶೇ 55ರಷ್ಟು ತುಟ್ಟಿ ಭತ್ಯೆ ಪಡೆಯುತ್ತಾರೆ ಎಂದು ತ್ರಿಪುರದ ಸಿಎಂ ಹೇಳಿದ್ದಾರೆ. </p>.Teachers Day | ತಂತ್ರಜ್ಞಾನದ ಆಧುನಿಕತೆಯಲ್ಲೂ ವಿದ್ಯಾರ್ಥಿಗಳಿಗೆ ಶಿಕ್ಷಕರ ನೆರಳು.<p>ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರರ ನಡುವಿನ ತುಟ್ಟಿ ಭತ್ಯೆ ಅಂತರವನ್ನು ಕಡಿಮೆ ಮಾಡಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತ್ರಿಪುರದ ಮುಖ್ಯಮಂತ್ರಿ ಹೇಳಿದ್ದಾರೆ.</p><p>ನಾನು ಮುಖ್ಯಮಂತ್ರಿಯಾಗಿ 29 ತಿಂಗಳಲ್ಲಿ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಶೇ 29ಕ್ಕೆ ಹೆಚ್ಚಿಸಿದ್ದೇನೆ ಎಂದು ಮಾಣಿಕ್ ಸಹಾ ಅವರು ಮಾಹಿತಿ ಹಂಚಿಕೊಂಡಿದ್ದಾರೆ. </p><p>ತ್ರಿಪುರದಲ್ಲಿ ಪ್ರಸ್ತುತ ಮೂರು ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ 400 ಎಂಬಿಬಿಎಸ್ ಸೀಟುಗಳಿದ್ದು, ಅದನ್ನು 500ಕ್ಕೆ ಹೆಚ್ಚಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯೋಜನೆ ರೂಪಿಸುತ್ತಿದೆ ಎಂದು ಮಾಣಿಕ್ ಸಹಾ ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಗರ್ತಲಾ:</strong> ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಮಾಣಿಕ್ ಸಹಾ, ತ್ರಿಪುರ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡಲು, ಹೆಚ್ಚಿನ ಸಾಮರ್ಥ್ಯವುಳ್ಳ ಶಿಕ್ಷಕರನ್ನು ನೇಮಿಸಿಕೊಳ್ಳಲು ಸರ್ಕಾರ ತಯಾರಿ ನಡೆಸುತ್ತಿದೆ ಎಂದು ಹೇಳಿದ್ದಾರೆ. </p><p>ತ್ರಿಪುರ ಸರ್ಕಾರವು ಕಳೆದ ಏಳು ವರ್ಷಗಳಲ್ಲಿ ವಿವಿಧ ವರ್ಗಗಳಲ್ಲಿ 19,800 ಉದ್ಯೋಗಿಗಳನ್ನು ನೇಮಕ ಮಾಡಿಕೊಂಡಿದೆ, ಅದರಲ್ಲಿ 5,215 ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.</p><p>ತ್ರಿಪುರ ಸರ್ಕಾರಿ ನೌಕರರು ಶೇ 33ರಷ್ಟು, ಕೇಂದ್ರ ಸರ್ಕಾರಿ ನೌಕರರು, ಶೇ 55ರಷ್ಟು ತುಟ್ಟಿ ಭತ್ಯೆ ಪಡೆಯುತ್ತಾರೆ ಎಂದು ತ್ರಿಪುರದ ಸಿಎಂ ಹೇಳಿದ್ದಾರೆ. </p>.Teachers Day | ತಂತ್ರಜ್ಞಾನದ ಆಧುನಿಕತೆಯಲ್ಲೂ ವಿದ್ಯಾರ್ಥಿಗಳಿಗೆ ಶಿಕ್ಷಕರ ನೆರಳು.<p>ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರರ ನಡುವಿನ ತುಟ್ಟಿ ಭತ್ಯೆ ಅಂತರವನ್ನು ಕಡಿಮೆ ಮಾಡಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತ್ರಿಪುರದ ಮುಖ್ಯಮಂತ್ರಿ ಹೇಳಿದ್ದಾರೆ.</p><p>ನಾನು ಮುಖ್ಯಮಂತ್ರಿಯಾಗಿ 29 ತಿಂಗಳಲ್ಲಿ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಶೇ 29ಕ್ಕೆ ಹೆಚ್ಚಿಸಿದ್ದೇನೆ ಎಂದು ಮಾಣಿಕ್ ಸಹಾ ಅವರು ಮಾಹಿತಿ ಹಂಚಿಕೊಂಡಿದ್ದಾರೆ. </p><p>ತ್ರಿಪುರದಲ್ಲಿ ಪ್ರಸ್ತುತ ಮೂರು ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ 400 ಎಂಬಿಬಿಎಸ್ ಸೀಟುಗಳಿದ್ದು, ಅದನ್ನು 500ಕ್ಕೆ ಹೆಚ್ಚಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯೋಜನೆ ರೂಪಿಸುತ್ತಿದೆ ಎಂದು ಮಾಣಿಕ್ ಸಹಾ ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>