<p><strong>ತ್ರಿಪುರಾ</strong>: ತ್ರಿಪುರಾ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಆಡಳಿತಾರೂಢ ಬಿಜೆಪಿ 27 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಮತ್ತೆ ಅಧಿಕಾರದ ಗದ್ದುಗೆ ಏರುವ ಸೂಚನೆ ಸಿಕ್ಕಿದೆ. ಕಾಂಗ್ರೆಸ್ ಮತ್ತು ಎಡಪಕ್ಷಗಳು 17 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡಿವೆ.</p>.<p>ತಿಪ್ರಾ ಮೋಥಾ 12 ಕ್ಷೇತ್ರಗಳಲ್ಲಿ, ಬಿಜೆಪಿ ಮಿತ್ರಪಕ್ಷ ಐಪಿಎಫ್ಟಿ ಒಂದು ಕ್ಷೇತ್ರದಲ್ಲಿ ಮುನ್ನಡೆದ ಪಡೆದಿವೆ. ಒಬ್ಬ ಪಕ್ಷೇತರ ಅಭ್ಯರ್ಥಿ ಸಹ ಮುನ್ನಡೆ ಪಡೆದಿದ್ದರು.</p>.<p>ಸಿಪಿಎಂ 12 ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್ 5 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡಿವೆ.</p>.<p>ಮುಖ್ಯಮಂತ್ರಿ ಮಾಣಿಕ್ ಸಹಾ ಟೌನ್ ಬರಡ್ಓವಾಲಿ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.</p>.<p>ಅಗರ್ತಲಾ ಕ್ಷೇತ್ರದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಸುದೀಪ್ ರಾಯ್ ಬರ್ಮನ್ ಅವರು ಬಿಜೆಪಿಯ ಪಪಿಯಾ ದತ್ತಾ ಅವರನ್ನು ಹಿಂದಿಕ್ಕಿದ್ದಾರೆ.</p>.<p>ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ರಾಜೀವ್ ಭಟ್ಟಾಚಾರ್ಯ ಬನಮಾಲಿಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೋಪಾಲ್ ರಾಯ್ ಎದುರು ಹಿನ್ನಡೆ ಅನುಭವಿಸಿದ್ದಾರೆ.</p>.<p>ಕೇಂದ್ರ ಸಚಿವೆ ಪ್ರತಿಮಾ ಭೌಮಿಕ್ ಅವರು ಧನಪುರ್ ಕ್ಷೇತ್ರದಲ್ಲಿ ಸಿಪಿಎಂನ ಕೌಶಿಕ್ ಚಂಡಾ ಅವರನ್ನು ಹಿಂದಿಕ್ಕಿದ್ದಾರೆ.</p>.<p>ಖಯೇರ್ಪುರ್ ಕ್ಷೇತ್ರದಲ್ಲಿ ವಿಧಾನಸಭೆಯ ಸ್ಪೀಕರ್ ರತನ್ ಚಕ್ರವರ್ತಿ ಮುನ್ನಡೆಯಲ್ಲಿದ್ದಾರೆ. ಕೈಲಾಶಹರ್ ಕ್ಷೇತ್ರದಲ್ಲಿ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಬಿರಜಿತ್ ಸಿಂಗ್ ಅವರು ಮುನ್ನಡೆ ಪಡೆದಿದ್ದಾರೆ.</p>.<p>(ಬೆಳಿಗ್ಗೆ 11.30ರವರೆಗಿನ ಅಪ್ಡೇಟ್ಸ್)</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತ್ರಿಪುರಾ</strong>: ತ್ರಿಪುರಾ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಆಡಳಿತಾರೂಢ ಬಿಜೆಪಿ 27 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಮತ್ತೆ ಅಧಿಕಾರದ ಗದ್ದುಗೆ ಏರುವ ಸೂಚನೆ ಸಿಕ್ಕಿದೆ. ಕಾಂಗ್ರೆಸ್ ಮತ್ತು ಎಡಪಕ್ಷಗಳು 17 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡಿವೆ.</p>.<p>ತಿಪ್ರಾ ಮೋಥಾ 12 ಕ್ಷೇತ್ರಗಳಲ್ಲಿ, ಬಿಜೆಪಿ ಮಿತ್ರಪಕ್ಷ ಐಪಿಎಫ್ಟಿ ಒಂದು ಕ್ಷೇತ್ರದಲ್ಲಿ ಮುನ್ನಡೆದ ಪಡೆದಿವೆ. ಒಬ್ಬ ಪಕ್ಷೇತರ ಅಭ್ಯರ್ಥಿ ಸಹ ಮುನ್ನಡೆ ಪಡೆದಿದ್ದರು.</p>.<p>ಸಿಪಿಎಂ 12 ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್ 5 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡಿವೆ.</p>.<p>ಮುಖ್ಯಮಂತ್ರಿ ಮಾಣಿಕ್ ಸಹಾ ಟೌನ್ ಬರಡ್ಓವಾಲಿ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.</p>.<p>ಅಗರ್ತಲಾ ಕ್ಷೇತ್ರದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಸುದೀಪ್ ರಾಯ್ ಬರ್ಮನ್ ಅವರು ಬಿಜೆಪಿಯ ಪಪಿಯಾ ದತ್ತಾ ಅವರನ್ನು ಹಿಂದಿಕ್ಕಿದ್ದಾರೆ.</p>.<p>ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ರಾಜೀವ್ ಭಟ್ಟಾಚಾರ್ಯ ಬನಮಾಲಿಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೋಪಾಲ್ ರಾಯ್ ಎದುರು ಹಿನ್ನಡೆ ಅನುಭವಿಸಿದ್ದಾರೆ.</p>.<p>ಕೇಂದ್ರ ಸಚಿವೆ ಪ್ರತಿಮಾ ಭೌಮಿಕ್ ಅವರು ಧನಪುರ್ ಕ್ಷೇತ್ರದಲ್ಲಿ ಸಿಪಿಎಂನ ಕೌಶಿಕ್ ಚಂಡಾ ಅವರನ್ನು ಹಿಂದಿಕ್ಕಿದ್ದಾರೆ.</p>.<p>ಖಯೇರ್ಪುರ್ ಕ್ಷೇತ್ರದಲ್ಲಿ ವಿಧಾನಸಭೆಯ ಸ್ಪೀಕರ್ ರತನ್ ಚಕ್ರವರ್ತಿ ಮುನ್ನಡೆಯಲ್ಲಿದ್ದಾರೆ. ಕೈಲಾಶಹರ್ ಕ್ಷೇತ್ರದಲ್ಲಿ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಬಿರಜಿತ್ ಸಿಂಗ್ ಅವರು ಮುನ್ನಡೆ ಪಡೆದಿದ್ದಾರೆ.</p>.<p>(ಬೆಳಿಗ್ಗೆ 11.30ರವರೆಗಿನ ಅಪ್ಡೇಟ್ಸ್)</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>