<p><strong>ಅಗರ್ತಲಾ:</strong> ರಾಜ್ಯದಲ್ಲಿ ತೆರಿಗೆ ವಂಚಕರನ್ನು ಪತ್ತೆ ಹಚ್ಚಲು ಮತ್ತು ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಕೃತಕ ಬುದ್ಧಿಮತ್ತೆಯನ್ನು (ಎಐ) ಬಳಸಲಾಗುತ್ತಿದೆ ಎಂದು ತ್ರಿಪುರ ಮುಖ್ಯಮಂತ್ರಿ ಮಾಣಿಕ್ ಸಹಾ ಹೇಳಿದ್ದಾರೆ.</p><p>ನಗರದ ಪ್ರಜ್ಞಾ ಭವನದಲ್ಲಿ ಹಮ್ಮಿಕೊಂಡಿದ್ದ ಜಿಎಸ್ಟಿ ‘ಜಾಗ್ರತ ಅಭಿಯಾನ’ವನ್ನು ಉದ್ದೇಶಿಸಿ ಮಾತನಾಡಿದ ಅವರು, ಈಶಾನ್ಯ ರಾಜ್ಯದ ಅಭಿವೃದ್ಧಿಯನ್ನು ಹೆಚ್ಚಿಸುವಲ್ಲಿ ತೆರಿಗೆ ಸಂಗ್ರಹವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದ್ದಾರೆ. </p><p>2024-25ನೇ ಹಣಕಾಸು ವರ್ಷದಲ್ಲಿ ರಾಜ್ಯದ ವಾರ್ಷಿಕ ಬಜೆಟ್ ಗಾತ್ರ ₹27,800 ಕೋಟಿಯಷ್ಟಿದೆ. ಸರ್ಕಾರ ತನ್ನದೇ ಆದ ಆದಾಯ ಮೂಲಗಳಿಂದ ₹10,000 ಕೋಟಿ ಯೋಜನೇತರ ವೆಚ್ಚಗಳಿಗೆ ಪಾವತಿಸಬೇಕಿದೆ (ಸಂಬಳ, ಪಿಂಚಣಿ, ಸಾಲ ಮತ್ತು ಸಾಲದ ಬಡ್ಡಿ). ಉಳಿದಂತೆ ತ್ರಿಪುರ ಬುಡಕಟ್ಟು ಪ್ರದೇಶಗಳ ಸ್ವಾಯತ್ತ ಜಿಲ್ಲಾ ಮಂಡಳಿಗೆ (ಟಿಟಿಎಎಡಿಸಿ) ₹3,700 ಕೋಟಿ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ (ಯುಎಲ್ಬಿ) ಶೇ 10ರಷ್ಟು ಹಣವನ್ನು ಪಾವತಿಸಬೇಕಿದೆ ಎಂದು ಅವರು ವಿವರಿಸಿದ್ದಾರೆ. </p><p>ರಾಜ್ಯದ ಅಭಿವೃದ್ಧಿ ಮತ್ತು ಮೂಲಸೌಕರ್ಯ ನಿರ್ಮಾಣಕ್ಕೆ ಪೂರಕವಾಗಿ ಜನರು ತಪ್ಪದೆ ಜಿಎಸ್ಟಿ ಪಾವತಿಸಬೇಕು. 2047ರ ‘ವಿಕಸಿತ ಭಾರತ’ದ ಪರಿಕಲ್ಪನೆಯಡಿ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವುದು ಪ್ರತಿಯೊಬ್ಬ ಭಾರತೀಯರ ಮಹಾತ್ವಾಕಾಂಕ್ಷೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹಾಗಾಗಿ ದೇಶದ ಪ್ರತಿಯೊಬ್ಬರು ಆ ನಿಟ್ಟಿನಲ್ಲಿ ಶ್ರಮವಹಿಸಬೇಕು ಎಂದು ಮಾಣಿಕ್ ಸಹಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಗರ್ತಲಾ:</strong> ರಾಜ್ಯದಲ್ಲಿ ತೆರಿಗೆ ವಂಚಕರನ್ನು ಪತ್ತೆ ಹಚ್ಚಲು ಮತ್ತು ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಕೃತಕ ಬುದ್ಧಿಮತ್ತೆಯನ್ನು (ಎಐ) ಬಳಸಲಾಗುತ್ತಿದೆ ಎಂದು ತ್ರಿಪುರ ಮುಖ್ಯಮಂತ್ರಿ ಮಾಣಿಕ್ ಸಹಾ ಹೇಳಿದ್ದಾರೆ.</p><p>ನಗರದ ಪ್ರಜ್ಞಾ ಭವನದಲ್ಲಿ ಹಮ್ಮಿಕೊಂಡಿದ್ದ ಜಿಎಸ್ಟಿ ‘ಜಾಗ್ರತ ಅಭಿಯಾನ’ವನ್ನು ಉದ್ದೇಶಿಸಿ ಮಾತನಾಡಿದ ಅವರು, ಈಶಾನ್ಯ ರಾಜ್ಯದ ಅಭಿವೃದ್ಧಿಯನ್ನು ಹೆಚ್ಚಿಸುವಲ್ಲಿ ತೆರಿಗೆ ಸಂಗ್ರಹವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದ್ದಾರೆ. </p><p>2024-25ನೇ ಹಣಕಾಸು ವರ್ಷದಲ್ಲಿ ರಾಜ್ಯದ ವಾರ್ಷಿಕ ಬಜೆಟ್ ಗಾತ್ರ ₹27,800 ಕೋಟಿಯಷ್ಟಿದೆ. ಸರ್ಕಾರ ತನ್ನದೇ ಆದ ಆದಾಯ ಮೂಲಗಳಿಂದ ₹10,000 ಕೋಟಿ ಯೋಜನೇತರ ವೆಚ್ಚಗಳಿಗೆ ಪಾವತಿಸಬೇಕಿದೆ (ಸಂಬಳ, ಪಿಂಚಣಿ, ಸಾಲ ಮತ್ತು ಸಾಲದ ಬಡ್ಡಿ). ಉಳಿದಂತೆ ತ್ರಿಪುರ ಬುಡಕಟ್ಟು ಪ್ರದೇಶಗಳ ಸ್ವಾಯತ್ತ ಜಿಲ್ಲಾ ಮಂಡಳಿಗೆ (ಟಿಟಿಎಎಡಿಸಿ) ₹3,700 ಕೋಟಿ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ (ಯುಎಲ್ಬಿ) ಶೇ 10ರಷ್ಟು ಹಣವನ್ನು ಪಾವತಿಸಬೇಕಿದೆ ಎಂದು ಅವರು ವಿವರಿಸಿದ್ದಾರೆ. </p><p>ರಾಜ್ಯದ ಅಭಿವೃದ್ಧಿ ಮತ್ತು ಮೂಲಸೌಕರ್ಯ ನಿರ್ಮಾಣಕ್ಕೆ ಪೂರಕವಾಗಿ ಜನರು ತಪ್ಪದೆ ಜಿಎಸ್ಟಿ ಪಾವತಿಸಬೇಕು. 2047ರ ‘ವಿಕಸಿತ ಭಾರತ’ದ ಪರಿಕಲ್ಪನೆಯಡಿ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವುದು ಪ್ರತಿಯೊಬ್ಬ ಭಾರತೀಯರ ಮಹಾತ್ವಾಕಾಂಕ್ಷೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹಾಗಾಗಿ ದೇಶದ ಪ್ರತಿಯೊಬ್ಬರು ಆ ನಿಟ್ಟಿನಲ್ಲಿ ಶ್ರಮವಹಿಸಬೇಕು ಎಂದು ಮಾಣಿಕ್ ಸಹಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>