ಮಾನವ ಹಕ್ಕು ಮಂಡಳಿ ಸಭೆಯಲ್ಲಿ ಪಾಕಿಸ್ತಾನವು ಭಾರತಈಚೆಗೆ ತೆಗೆದುಕೊಂಡ ಹಲವು ಕ್ರಮಗಳನ್ನು ಪ್ರಸ್ತಾಪಿಸಬಹುದು ಎನ್ನಲಾಗಿದೆ. ಕಾಶ್ಮೀರಕ್ಕೆ ವಿಶೇಷ ಅಧಿಕಾರ ನೀಡುತ್ತಿದ್ದ ಸಂವಿಧಾನದ 370ನೇ ವಿಧಿ ರದ್ದತಿ, ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ನಾಗರಿಕ ನೋಂದಣಿ, ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಸೇರಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪಿಸಿ ಭಾರತದಲ್ಲಿ ಮುಸ್ಲಿಮರಿಗೆ ರಕ್ಷಣೆಯಿಲ್ಲ ಎಂದು ಪಾಕಿಸ್ತಾನ ವಿಶ್ವದ ಎದುರುಬಿಂಬಿಸುವ ಸಾಧ್ಯತೆ ಇದೆ ಎಂದು ಉನ್ನತ ಅಧಿಕಾರಿಗಳ ಅಭಿಪ್ರಾಯ ಉಲ್ಲೇಖಿಸಿ ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.